Homeಫ್ಯಾಕ್ಟ್‌ಚೆಕ್Fact Check: ಅರವಿಂದ್ ಕೇಜ್ರಿವಾಲ್ ಅತ್ಯಾಚಾರ ಪ್ರಕರಣದ ಆರೋಪಿಯಾಗಿದ್ದರು ಎಂಬುವುದು ಸುಳ್ಳು

Fact Check: ಅರವಿಂದ್ ಕೇಜ್ರಿವಾಲ್ ಅತ್ಯಾಚಾರ ಪ್ರಕರಣದ ಆರೋಪಿಯಾಗಿದ್ದರು ಎಂಬುವುದು ಸುಳ್ಳು

- Advertisement -
- Advertisement -

ಆಪಾದಿತ ಅಬಕಾರಿ ನೀತಿ ಹಗರಣ ಪ್ರಕರಣದ ಹಣ ಅಕ್ರಮ ವರ್ಗಾವಣೆ ಆರೋಪದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಜಾರಿ ನಿರ್ದೇಶನಾಲಯ ಬಂಧಿಸಿದೆ. ಪ್ರಸ್ತುತ ಅವರು ಜೈಲಿನಲ್ಲಿದ್ದಾರೆ.

ಕೇಜ್ರಿವಾಲ್ ಬಂಧನದ ಬಳಿಕ ಹಳೆಯ ಪತ್ರಿಕಾ ವರದಿಯೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಆ ವರದಿಯನ್ನು ಆಧರಿಸಿ ಕೇಜ್ರಿವಾಲ್ ವಿದ್ಯಾರ್ಥಿ ಜೀವನದಲ್ಲಿ ಅತ್ಯಾಚಾರ ಪ್ರಕರಣದ ಆರೋಪಿಯಾಗಿದ್ದರು ಎಂದು ಹೇಳಲಾಗ್ತಿದೆ.

ಜೂನ್ 8, 1987ರಲ್ಲಿ ವೈರಲ್ ಪತ್ರಿಕಾ ವರದಿ ಪ್ರಕಟಗೊಂಡಿದೆ. ಅದರಲ್ಲಿ ಸ್ಥಳೀಯ ಯುವತಿಯನ್ನು ಅತ್ಯಾಚಾರಗೈದ ಆರೋಪದಲ್ಲಿ ಐಐಟಿ ಖರಗ್‌ಪುರದ 19 ವರ್ಷದ ವಿದ್ಯಾರ್ಥಿ ಅರವಿಂದ್ ಕೇಜ್ರಿವಾಲ್ ಎಂಬವರನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಬರೆಯಲಾಗಿದೆ.

ಅನೇಕ ಎಕ್ಸ್‌ ಬಳಕೆದಾರರು ವೈರಲ್ ವರದಿಯನ್ನು ಹಂಚಿಕೊಂಡಿದ್ದಾರೆ.

ಫ್ಯಾಕ್ಟ್‌ಚೆಕ್ : ವೈರಲ್ ವರದಿಗೆ ಸಂಬಂಧಪಟ್ಟಂತೆ ನಾನುಗೌರಿ.ಕಾಂ ಸತ್ಯಾಸತ್ಯತೆ ಪರಿಶೀಲನೆ ನಡೆಸಿದೆ. ಮೊದಲು ನಾವು ಕೀ ವರ್ಡ್‌ಗಳನ್ನು ಬಳಸಿ ವರದಿ ಕುರಿತು ಗೂಗಲ್ ಸರ್ಚ್ ಮಾಡಿದ್ದೇವೆ. ಈ ವೇಳೆ ಅರವಿಂದ್ ಕೇಜ್ರಿವಾಲ್ ಅವರು ಅತ್ಯಾಚಾರ ಪ್ರಕರಣದಲ್ಲಿ ಬಂಧಿತರಾಗಿದ್ದರು ಎಂಬ ಯಾವುದೇ ಮಾಧ್ಯಮ ವರದಿಗಳು ಲಭ್ಯವಾಗಿಲ್ಲ.

ವೈರಲ್ ವರದಿಯಲ್ಲಿ ಪತ್ರಿಕೆಯ ಹೆಸರು ‘ದಿ ಟೆಲಿಗ್ರಾಫ್’ ಎಂದು ಬರೆಯಲಾಗಿದೆ. ಆ ಹೆಸರು ಬಳಸಿ ನಾವು ಹುಡುಕಾಡಿದರೂ ಕೇಜ್ರಿವಾಲ್‌ ಅವರು ಅತ್ಯಾಚಾರ ಪ್ರಕರಣದ ಆರೋಪಿ ಎಂಬುವುದರ ಕುರಿತು ಯಾವುದೇ ವರದಿ ನಮಗೆ ದೊರೆತಿಲ್ಲ. ಇನ್ನು ವೈರಲ್‌ ಪತ್ರಿಕಾ ವರದಿಯನ್ನು ಗಮನಿಸಿದಾಗ ನಮಗೆ ಕೆಲವೊಂದು ವ್ಯಾತ್ಯಾಸಗಳು ಕಂಡು ಬಂದಿವೆ.

ವೈರಲ್‌ ಆಗುತ್ತಿರುವ ಪತ್ರಿಕೆಯ ಹೆಸರು ‘ದಿ ಟೆಲಿಗ್ರಾಫ್‌’ ಎಂದಿದೆ ಮತ್ತು ಅದರಲ್ಲಿನ ಶೀರ್ಷಿಕೆಯಲ್ಲಿಐಐಟಿ ವಿದ್ಯಾರ್ಥಿ ಅತ್ಯಾಚಾರದ ಆರೋಪಿ ಎಂದು ಅರ್ಧ ಸುದ್ದಿಯನ್ನು ಪ್ರಕಟಿಸಲಾಗಿದೆ. ಆದರೆ ಮೂರನೇ ಕಾಲಂನಲ್ಲಿ ಬೇರೆಯದ್ದೇ ಸುದ್ದಿ ಇದೆ. ಹಾಗಾಗಿ, ಪತ್ರಿಕಾ ವರದಿಯು fodey.com ನಂತಹ ವೆಬ್‌ಸೈಟ್‌ ಬಳಸಿ ಸೃಷ್ಠಿಸಿರುವ ನಕಲಿ ವರದಿ ಎಂಬುವುದು ಪತ್ತೆಯಾಗಿದೆ.

fodey.com ನಲ್ಲಿರುವ ಪತ್ರಿಕೆಯಾದ ‘ದಿ ಡೈಲಿ ವಾಟ್‌ಎವರ್‌’ ಎಂಬುವುದರಲ್ಲಿ 30 ಆಗಸ್ಟ್‌ 2006 ಎಂಬ ದಿನಾಂಕವಿದೆ. ಅದರ ಹೆಡ್‌ಲೈನ್‌ನಲ್ಲಿ ‘ಮಂಗಳ ಗ್ರಹದ ನಿವಾಸಿಗಳು ಭೂಮಿಯನ್ನು ಆಕ್ರಮಿಸುತ್ತಾರೆ’ ಎಂಬ ಶೀರ್ಷಿಕೆ ಇದೆ. ಅದನ್ನೇ ಟೆಲಿಗ್ರಾಫ್ ಹೆಸರಿನಲ್ಲಿ ಬದಲಾಯಿಸಿ ಸುಳ್ಳು ಸುದ್ದಿ ಹಬ್ಬಿರುವುದು ಗೊತ್ತಾಗಿದೆ.


ಹಾಗಾಗಿ, ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಐಐಟಿ ಖರಗ್‌ಪುರ ವಿದ್ಯಾರ್ಥಿಯಾಗಿದ್ದಾಗ ಅತ್ಯಾಚಾರ ಪ್ರಕರಣದಲ್ಲಿ ಬಂಧಿತರಾಗಿದ್ದರು ಎಂಬುವುದು ಸುಳ್ಳು

ಇದನ್ನೂ ಓದಿ : Fact Check: ಯೂಟ್ಯೂಬರ್ ಧ್ರುವ್ ರಾಠೀ ಪಾಕಿಸ್ತಾನದವರು ಎಂಬುವುದು ಸುಳ್ಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...

ಕರೂರ್ ಕಾಲ್ತುಳಿತ ಮೃತರ ಕುಟುಂಬಸ್ಥರಿಗೆ ನೀಡಿದ್ದ ಸರ್ಕಾರಿ ಉದ್ಯೋಗವನ್ನು ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್

ಕರೂರ್ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಿದ್ದ ತಮಿಳುನಾಡು ಸರ್ಕಾರದ ಆದೇಶವನ್ನು ಮದ್ರಾಸ್ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಈ ನೇಮಕಾತಿಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (PIL) ವಿಚಾರಣೆ...

ವಿದ್ಯಾರ್ಥಿಗಳ ಬಂಧನ: ಮತ್ತೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ‘ಕಾಕ್ರೋಚ್ ಜನತಾ ಪಾರ್ಟಿ’

ಪ್ರತಿಭಟನಾಕಾರರ ವಿರುದ್ಧ ಯಾವುದೇ ಪೋಲೀಸ್ ಕ್ರಮ ಕೈಗೊಳ್ಳುವುದಿಲ್ಲ ಎಂಬ ಒಪ್ಪಂದವನ್ನು ಸಂಪೂರ್ಣವಾಗಿ ಉಲ್ಲಂಘಿಸಲಾಗಿದೆ ಎಂದು 'ಕಾಕ್ರೋಚ್ ಜನತಾ ಪಾರ್ಟಿ' (CJP) ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ ಎಕ್ಸ್ (X) ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ...

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...