Homeಮುಖಪುಟ'ಸನಾತನ ವಿರೋಧಿ ಘೋಷಣೆ ಕೂಗಲು ಸಾಧ್ಯವಿಲ್ಲ..'; ಕಾಂಗ್ರೆಸ್ ತೊರೆದಿದ್ದಕ್ಕೆ ಕಾರಣ ಕೊಟ್ಟ ಗೌರವ್ ವಲ್ಲಭ್

‘ಸನಾತನ ವಿರೋಧಿ ಘೋಷಣೆ ಕೂಗಲು ಸಾಧ್ಯವಿಲ್ಲ..’; ಕಾಂಗ್ರೆಸ್ ತೊರೆದಿದ್ದಕ್ಕೆ ಕಾರಣ ಕೊಟ್ಟ ಗೌರವ್ ವಲ್ಲಭ್

- Advertisement -
- Advertisement -

‘ಸನಾತನ ವಿರೋಧಿ ಘೋಷಣೆ ಕೂಗಲು ಸಾಧ್ಯವಿಲ್ಲ..’ ಎಂದು ಕಾಂಗ್ರೆಸ್‌ಗೆ ರಾಜೀನಾಮೆ ನೀಡಿದ ಕೆಲವೇ ಗಂಟೆಗಳ ನಂತರ ಗೌರವ್ ವಲ್ಲಭ್ ಅವರು ಗುರುವಾರ ಭಾರತೀಯ ಜನತಾ ಪಕ್ಷಕ್ಕೆ ಸೇರಿದ್ದಾರೆ. “ಸನಾತನ ವಿರೋಧಿ ಘೋಷಣೆಗಳನ್ನು ಎತ್ತುವುದಕ್ಕೆ ಸಾಧ್ಯವಿಲ್ಲ; ಸಂಪತ್ತು ಸೃಷ್ಟಿಕರ್ತರನ್ನು ದಿನವೂ ನಿಂದಿಸಲು ಸಾಧ್ಯವಿಲ್ಲ” ಎಂದು ಹೇಳುವ ಮೂಲಕ ತಮ್ಮ ಬಿಜೆಪಿ ಮೇಲಿನ ಪ್ರೇಮವನ್ನು ರಾಜೀನಾಮೆ ಪತ್ರದಲ್ಲಿ ಬಿಚ್ಚಿಟ್ಟಿದ್ದಾರೆ.

ಸುದ್ದಿ ವಾಹಿನಿಗಳಲ್ಲಿ ಆಗಾಗ್ಗೆ ಕಂಡುಬರುತ್ತಿದ್ದ ಕಾಂಗ್ರೆಸ್ ವಕ್ತಾರ ಗೌರವ್ ವಲ್ಲಭ್ ಅವರು, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಬರೆದ ರಾಜೀನಾಮೆ ಪತ್ರವನ್ನು ಸಾಮಾಜಿಕ ಮಾಧ್ಯಮ ವೇದಿಕೆ ಎಕ್ಸ್‌ನಲ್ಲಿ ಹಂಚಿಕೊಂಡಿದ್ದಾರೆ. “ಪಕ್ಷವು ಈಗ ಚಲಿಸುತ್ತಿರುವ ದಿಕ್ಕಿನ ರೀತಿಯಲ್ಲಿ, ಅದು ಆರಾಮದಾಯಕವಾಗಿಲ್ಲ’ ಎಂದು ಅವರು ಹೇಳಿದ್ದಾರೆ.

ಬಿಜೆಪಿ ಸೇರ್ಪಡೆ ಸಮಾರಂಭದಲ್ಲಿ ಗೌರವ್ ವಲ್ಲಭ್ ಅವರು ಕಾಂಗ್ರೆಸ್ ನಾಯಲರ ನೀತಿಗಳ ಬಗ್ಗೆ ವಾಗ್ದಾಳಿ ನಡೆಸಿದರು.”ಕಾಂಗ್ರೆಸ್ ಪಕ್ಷವು ಪ್ರಸ್ತುತ ಅನುಸರಿಸುತ್ತಿರುವ ದಿಕ್ಕಿಲ್ಲದ ಹಾದಿಯು ನನಗೆ ಅನಾನುಕೂಲವಾಗಿದೆ. ನಾನು ಸನಾತನ ವಿರೋಧಿ ಘೋಷಣೆಗಳನ್ನು ಬೆಂಬಲಿಸಲು ಸಾಧ್ಯವಿಲ್ಲ ಅಥವಾ ದೇಶದ ಸಂಪತ್ತನ್ನು ಸೃಷ್ಟಿಸಿದವರನ್ನು ನಾನು ದಿನ ಬಿಟ್ಟು ದಿನ ಟೀಕಿಸಲು ಸಾಧ್ಯವಿಲ್ಲ. ಆದ್ದರಿಂದ ನಾನು ಎಲ್ಲಾ ಸ್ಥಾನಗಳಿಗೆ ಮತ್ತು ಕಾಂಗ್ರೆಸ್‌ನ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡುತ್ತಿದ್ದೇನೆ” ಎಂದಿದ್ದದಾರೆ.

ವಲ್ಲಭ ಅವರು ಎರಡು ಪುಟಗಳ ರಾಜೀನಾಮೆ ಪತ್ರವನ್ನು ಹಂಚಿಕೊಂಡಿದ್ದು, ಅದನ್ನು ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಕಳುಹಿಸಿದ್ದಾರೆ.

“ನಾನು ಭಾವುಕನಾಗಿದ್ದೇನೆ, ನನ್ನ ಹೃದಯ ಭಾರವಾಗಿದೆ. ನಾನು ಭಾವನೆ ವ್ಯಕ್ತಪಡಿಸಲು, ಬರೆಯಲು ಮತ್ತು ಹಂಚಿಕೊಳ್ಳಲು ಬಹಳಷ್ಟು ಇದೆ. ಆದರೆ, ನನ್ನ ತತ್ವಗಳು ಇತರರಿಗೆ ಹಾನಿಯನ್ನುಂಟುಮಾಡುವ ಯಾವುದನ್ನಾದರೂ ಹೇಳುವುದನ್ನು ನಿಷೇಧಿಸಿದೆ. ಅದೇನೇ ಇದ್ದರೂ, ಇಂದು ನಾನು ನನ್ನ ಆಲೋಚನೆಗಳನ್ನು ಪ್ರಸ್ತುತಪಡಿಸುತ್ತಿದ್ದೇನೆ. ನೀವು ಸತ್ಯವನ್ನು ಮರೆಮಾಚುವುದು ಸಹ ಅಪರಾಧ ಎಂದು ನಾನು ದೃಢವಾಗಿ ನಂಬಿದ್ದೇನೆ; ಅದರಲ್ಲಿ ಭಾಗಿಯಾಗಲು ನಾನು ನಿರಾಕರಿಸುತ್ತೇನೆ” ಎಂದು ಅವರು ಪತ್ರದಲ್ಲಿ ಬರೆದಿದ್ದಾರೆ.

ವಲ್ಲಭ್ ಅವರು 2023 ರಲ್ಲಿ ಉದಯಪುರ ಕ್ಷೇತ್ರದಿಂದ ರಾಜಸ್ಥಾನ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿದರು. ಬಿಜೆಪಿ ಅಭ್ಯರ್ಥಿಯು 32,000 ಮತಗಳ ಅಂತರದಿಂದ ಗೆಲುವು ಸಾಧಿಸಿದರು. ನಂತರ ಅವರು, 2019 ರಲ್ಲಿ ಜಾರ್ಖಂಡ್‌ನ ಜಮ್‌ಶೆಡ್‌ಪುರ ಪೂರ್ವದಿಂದ ತಮ್ಮ ಲೋಕಸಭಾ ಚುನಾವಣಾ ಚೊಚ್ಚಲ ಪ್ರವೇಶ ಮಾಡಿದರು. ಅಲ್ಲಿ ಅವರು 18,000 ಕ್ಕಿಂತ ಹೆಚ್ಚು ಗಳಿಸಿದರು. ಆಗಿನ ಸಿಟ್ಟಿಂಗ್ ಮುಖ್ಯಮಂತ್ರಿ ರಘುಬರ್ ದಾಸ್ ಮತ್ತು ಸರಯು ರಾಯ್ ಅವರ ನಂತರ ಮೂರನೇ ಸ್ಥಾನಕ್ಕೆ ಬಂದರು.

“ಕಾಂಗ್ರೆಸ್ ಪಕ್ಷವು ‘ಪಕ್ಷದ ಮೂಲ ತತ್ವ’ಕ್ಕೆ ವಿರುದ್ಧವಾಗಿ ತಪ್ಪು ದಿಕ್ಕಿನಲ್ಲಿ ಸಾಗುತ್ತಿದೆ” ಎಂದು ಆರೋಪಿಸಿದರು.

“ಇತ್ತೀಚಿನ ದಿನಗಳಲ್ಲಿ ಪಕ್ಷವು ತಪ್ಪು ದಾರಿಯಲ್ಲಿ ಸಾಗುತ್ತಿದೆ, ಒಂದೆಡೆ ಜಾತಿವಾರು ಜನಗಣತಿಯ ಬಗ್ಗೆ ಮಾತನಾಡುತ್ತೇವೆ, ಮತ್ತೊಂದೆಡೆ ಪಕ್ಷವು ಇಡೀ ಹಿಂದೂ ಸಮಾಜವನ್ನು ವಿರೋಧಿಸುತ್ತಿದೆ ಎಂದು ತೋರುತ್ತದೆ. ಈ ರೀತಿಯ ಕಾರ್ಯವು ಜನರಿಗೆ ದಾರಿ ತಪ್ಪಿಸುವ ಸಂದೇಶವನ್ನು ನೀಡುತ್ತದೆ. ಪಕ್ಷವು ಒಂದು ನಿರ್ದಿಷ್ಟ ಧರ್ಮದ ಬೆಂಬಲಿಗ ಎಂದು ಸಾರ್ವಜನಿಕರು ಹೇಳುತ್ತಿದ್ದಾರೆ. ಇದು ಕಾಂಗ್ರೆಸ್‌ನ ಮೂಲ ತತ್ವಗಳಿಗೆ ವಿರುದ್ಧವಾಗಿದೆ” ಎಂದು ಅವರು ಹೇಳಿದರು.

ಇದನ್ನೂ ಓದಿ; ‘ಬಿಪಿನ್ ರಾವತ್ ನಿಧನರಾದ ನಂತರ ಪಿಎಂ ನೀಲಗಿರಿಗೆ ಭೇಟಿ ಕೊಟ್ಟಿಲ್ಲ..’; ಮೋದಿ ವಿರುದ್ಧ ರಾಜಾ ವಾಗ್ದಾಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...