Homeಮುಖಪುಟ'ಸನಾತನ ವಿರೋಧಿ ಘೋಷಣೆ ಕೂಗಲು ಸಾಧ್ಯವಿಲ್ಲ..'; ಕಾಂಗ್ರೆಸ್ ತೊರೆದಿದ್ದಕ್ಕೆ ಕಾರಣ ಕೊಟ್ಟ ಗೌರವ್ ವಲ್ಲಭ್

‘ಸನಾತನ ವಿರೋಧಿ ಘೋಷಣೆ ಕೂಗಲು ಸಾಧ್ಯವಿಲ್ಲ..’; ಕಾಂಗ್ರೆಸ್ ತೊರೆದಿದ್ದಕ್ಕೆ ಕಾರಣ ಕೊಟ್ಟ ಗೌರವ್ ವಲ್ಲಭ್

- Advertisement -
- Advertisement -

‘ಸನಾತನ ವಿರೋಧಿ ಘೋಷಣೆ ಕೂಗಲು ಸಾಧ್ಯವಿಲ್ಲ..’ ಎಂದು ಕಾಂಗ್ರೆಸ್‌ಗೆ ರಾಜೀನಾಮೆ ನೀಡಿದ ಕೆಲವೇ ಗಂಟೆಗಳ ನಂತರ ಗೌರವ್ ವಲ್ಲಭ್ ಅವರು ಗುರುವಾರ ಭಾರತೀಯ ಜನತಾ ಪಕ್ಷಕ್ಕೆ ಸೇರಿದ್ದಾರೆ. “ಸನಾತನ ವಿರೋಧಿ ಘೋಷಣೆಗಳನ್ನು ಎತ್ತುವುದಕ್ಕೆ ಸಾಧ್ಯವಿಲ್ಲ; ಸಂಪತ್ತು ಸೃಷ್ಟಿಕರ್ತರನ್ನು ದಿನವೂ ನಿಂದಿಸಲು ಸಾಧ್ಯವಿಲ್ಲ” ಎಂದು ಹೇಳುವ ಮೂಲಕ ತಮ್ಮ ಬಿಜೆಪಿ ಮೇಲಿನ ಪ್ರೇಮವನ್ನು ರಾಜೀನಾಮೆ ಪತ್ರದಲ್ಲಿ ಬಿಚ್ಚಿಟ್ಟಿದ್ದಾರೆ.

ಸುದ್ದಿ ವಾಹಿನಿಗಳಲ್ಲಿ ಆಗಾಗ್ಗೆ ಕಂಡುಬರುತ್ತಿದ್ದ ಕಾಂಗ್ರೆಸ್ ವಕ್ತಾರ ಗೌರವ್ ವಲ್ಲಭ್ ಅವರು, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಬರೆದ ರಾಜೀನಾಮೆ ಪತ್ರವನ್ನು ಸಾಮಾಜಿಕ ಮಾಧ್ಯಮ ವೇದಿಕೆ ಎಕ್ಸ್‌ನಲ್ಲಿ ಹಂಚಿಕೊಂಡಿದ್ದಾರೆ. “ಪಕ್ಷವು ಈಗ ಚಲಿಸುತ್ತಿರುವ ದಿಕ್ಕಿನ ರೀತಿಯಲ್ಲಿ, ಅದು ಆರಾಮದಾಯಕವಾಗಿಲ್ಲ’ ಎಂದು ಅವರು ಹೇಳಿದ್ದಾರೆ.

ಬಿಜೆಪಿ ಸೇರ್ಪಡೆ ಸಮಾರಂಭದಲ್ಲಿ ಗೌರವ್ ವಲ್ಲಭ್ ಅವರು ಕಾಂಗ್ರೆಸ್ ನಾಯಲರ ನೀತಿಗಳ ಬಗ್ಗೆ ವಾಗ್ದಾಳಿ ನಡೆಸಿದರು.”ಕಾಂಗ್ರೆಸ್ ಪಕ್ಷವು ಪ್ರಸ್ತುತ ಅನುಸರಿಸುತ್ತಿರುವ ದಿಕ್ಕಿಲ್ಲದ ಹಾದಿಯು ನನಗೆ ಅನಾನುಕೂಲವಾಗಿದೆ. ನಾನು ಸನಾತನ ವಿರೋಧಿ ಘೋಷಣೆಗಳನ್ನು ಬೆಂಬಲಿಸಲು ಸಾಧ್ಯವಿಲ್ಲ ಅಥವಾ ದೇಶದ ಸಂಪತ್ತನ್ನು ಸೃಷ್ಟಿಸಿದವರನ್ನು ನಾನು ದಿನ ಬಿಟ್ಟು ದಿನ ಟೀಕಿಸಲು ಸಾಧ್ಯವಿಲ್ಲ. ಆದ್ದರಿಂದ ನಾನು ಎಲ್ಲಾ ಸ್ಥಾನಗಳಿಗೆ ಮತ್ತು ಕಾಂಗ್ರೆಸ್‌ನ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡುತ್ತಿದ್ದೇನೆ” ಎಂದಿದ್ದದಾರೆ.

ವಲ್ಲಭ ಅವರು ಎರಡು ಪುಟಗಳ ರಾಜೀನಾಮೆ ಪತ್ರವನ್ನು ಹಂಚಿಕೊಂಡಿದ್ದು, ಅದನ್ನು ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಕಳುಹಿಸಿದ್ದಾರೆ.

“ನಾನು ಭಾವುಕನಾಗಿದ್ದೇನೆ, ನನ್ನ ಹೃದಯ ಭಾರವಾಗಿದೆ. ನಾನು ಭಾವನೆ ವ್ಯಕ್ತಪಡಿಸಲು, ಬರೆಯಲು ಮತ್ತು ಹಂಚಿಕೊಳ್ಳಲು ಬಹಳಷ್ಟು ಇದೆ. ಆದರೆ, ನನ್ನ ತತ್ವಗಳು ಇತರರಿಗೆ ಹಾನಿಯನ್ನುಂಟುಮಾಡುವ ಯಾವುದನ್ನಾದರೂ ಹೇಳುವುದನ್ನು ನಿಷೇಧಿಸಿದೆ. ಅದೇನೇ ಇದ್ದರೂ, ಇಂದು ನಾನು ನನ್ನ ಆಲೋಚನೆಗಳನ್ನು ಪ್ರಸ್ತುತಪಡಿಸುತ್ತಿದ್ದೇನೆ. ನೀವು ಸತ್ಯವನ್ನು ಮರೆಮಾಚುವುದು ಸಹ ಅಪರಾಧ ಎಂದು ನಾನು ದೃಢವಾಗಿ ನಂಬಿದ್ದೇನೆ; ಅದರಲ್ಲಿ ಭಾಗಿಯಾಗಲು ನಾನು ನಿರಾಕರಿಸುತ್ತೇನೆ” ಎಂದು ಅವರು ಪತ್ರದಲ್ಲಿ ಬರೆದಿದ್ದಾರೆ.

ವಲ್ಲಭ್ ಅವರು 2023 ರಲ್ಲಿ ಉದಯಪುರ ಕ್ಷೇತ್ರದಿಂದ ರಾಜಸ್ಥಾನ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿದರು. ಬಿಜೆಪಿ ಅಭ್ಯರ್ಥಿಯು 32,000 ಮತಗಳ ಅಂತರದಿಂದ ಗೆಲುವು ಸಾಧಿಸಿದರು. ನಂತರ ಅವರು, 2019 ರಲ್ಲಿ ಜಾರ್ಖಂಡ್‌ನ ಜಮ್‌ಶೆಡ್‌ಪುರ ಪೂರ್ವದಿಂದ ತಮ್ಮ ಲೋಕಸಭಾ ಚುನಾವಣಾ ಚೊಚ್ಚಲ ಪ್ರವೇಶ ಮಾಡಿದರು. ಅಲ್ಲಿ ಅವರು 18,000 ಕ್ಕಿಂತ ಹೆಚ್ಚು ಗಳಿಸಿದರು. ಆಗಿನ ಸಿಟ್ಟಿಂಗ್ ಮುಖ್ಯಮಂತ್ರಿ ರಘುಬರ್ ದಾಸ್ ಮತ್ತು ಸರಯು ರಾಯ್ ಅವರ ನಂತರ ಮೂರನೇ ಸ್ಥಾನಕ್ಕೆ ಬಂದರು.

“ಕಾಂಗ್ರೆಸ್ ಪಕ್ಷವು ‘ಪಕ್ಷದ ಮೂಲ ತತ್ವ’ಕ್ಕೆ ವಿರುದ್ಧವಾಗಿ ತಪ್ಪು ದಿಕ್ಕಿನಲ್ಲಿ ಸಾಗುತ್ತಿದೆ” ಎಂದು ಆರೋಪಿಸಿದರು.

“ಇತ್ತೀಚಿನ ದಿನಗಳಲ್ಲಿ ಪಕ್ಷವು ತಪ್ಪು ದಾರಿಯಲ್ಲಿ ಸಾಗುತ್ತಿದೆ, ಒಂದೆಡೆ ಜಾತಿವಾರು ಜನಗಣತಿಯ ಬಗ್ಗೆ ಮಾತನಾಡುತ್ತೇವೆ, ಮತ್ತೊಂದೆಡೆ ಪಕ್ಷವು ಇಡೀ ಹಿಂದೂ ಸಮಾಜವನ್ನು ವಿರೋಧಿಸುತ್ತಿದೆ ಎಂದು ತೋರುತ್ತದೆ. ಈ ರೀತಿಯ ಕಾರ್ಯವು ಜನರಿಗೆ ದಾರಿ ತಪ್ಪಿಸುವ ಸಂದೇಶವನ್ನು ನೀಡುತ್ತದೆ. ಪಕ್ಷವು ಒಂದು ನಿರ್ದಿಷ್ಟ ಧರ್ಮದ ಬೆಂಬಲಿಗ ಎಂದು ಸಾರ್ವಜನಿಕರು ಹೇಳುತ್ತಿದ್ದಾರೆ. ಇದು ಕಾಂಗ್ರೆಸ್‌ನ ಮೂಲ ತತ್ವಗಳಿಗೆ ವಿರುದ್ಧವಾಗಿದೆ” ಎಂದು ಅವರು ಹೇಳಿದರು.

ಇದನ್ನೂ ಓದಿ; ‘ಬಿಪಿನ್ ರಾವತ್ ನಿಧನರಾದ ನಂತರ ಪಿಎಂ ನೀಲಗಿರಿಗೆ ಭೇಟಿ ಕೊಟ್ಟಿಲ್ಲ..’; ಮೋದಿ ವಿರುದ್ಧ ರಾಜಾ ವಾಗ್ದಾಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐದು ರಾಜ್ಯಗಳ ವಿಧಾನಸಭೆ ಚುನಾವಣೆ ದಿನಾಂಕ ಪ್ರಕಟ; ಬಂಗಾಳದಲ್ಲಿ ಮಾತ್ರ ಎರಡು ಹಂತದ ಮತದಾನ

ಅಸ್ಸಾಂ, ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ ಮತ್ತು ಪುದುಚೇರಿ ವಿಧಾನಸಭಾ ಚುನಾವಣೆಗಳ ವೇಳಾಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗದ (ಇಸಿಐ) ಮುಖ್ಯಸ್ಥರಾದ ಜ್ಞಾನೇಶ್ ಕುಮಾರ್ ಪ್ರಕಟಿಸಿದರು. ದೆಹಲಿಯಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯ...

ಫ್ಲಿಪ್‌ಕಾರ್ಟ್‌ನಿಂದ 1 ರೂ.ಗೆ ಹಾಲು ಮಾರಾಟ; ಪ್ರಧಾನಿ ಮೋದಿ ಮಧ್ಯಸ್ಥಿಕೆಗೆ ಬಮುಲ್‌ ಆಗ್ರಹ

ಫ್ಲಿಪ್‌ಕಾರ್ಟ್‌ ಸಂಸ್ಥೆಯು ಆನ್‌ಲೈನ್‌ ಮೂಲಕ 1 ರೂ.ಗೆ ಲೀಟರ್‌ ಹಾಲನ್ನು ಮಾರಾಟ ಮಾಡಿರುವುದು ಭಾರಿ ಜನಾಕ್ರೋಶಕ್ಕೆ ಕಾರಣವಾಗಿದೆ. ಈ ಬಗ್ಗೆ, ಬೆಂಗಳೂರು ನಗರ, ಗ್ರಾಮೀಣ ಮತ್ತು ರಾಮನಗರ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ...

“ಮಕ್ಕಳ ಹಂತಕನನ್ನು ಹುಡುಕಿ ಹತ್ಯೆ ಮಾಡುತ್ತೇವೆ” : ನೆತನ್ಯಾಹು ಸುರಕ್ಷಿತವಾಗಿದ್ದಾರೆ ಎಂಬ ಇಸ್ರೇಲ್ ಸ್ಪಷ್ಟನೆ ಬೆನ್ನಲ್ಲೆ ಐಆರ್‌ಜಿಸಿ ಹೇಳಿಕೆ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರನ್ನು ಹುಡುಕಿ ಹತ್ಯೆ ಮಾಡುತ್ತೇವೆ ಎಂದು ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ಹೇಳಿರುವುದಾಗಿ ವರದಿಯಾಗಿದೆ. ನೆತನ್ಯಾಹು ಅವರ ಹತ್ಯೆಯ ವದಂತಿಗಳನ್ನು ಇಸ್ರೇಲ್ ನಿರಾಕರಿಸಿದ ಬೆನ್ನಲ್ಲೇ, ಐಆರ್‌ಜಿಸಿ ಈ...

ಮಹಾರಾಷ್ಟ್ರ| ಇಫ್ತಾರ್ ಕೂಟಕ್ಕೆ ಸೇರಿದ್ದ ಮುಸ್ಲಿಮರ ಮೇಲೆ ಹಿಂದುತ್ವವಾದಿ ಗುಂಪಿನಿಂದ ದಾಳಿ

ರಂಜಾನ್‌ ಮಾಸದ ಉಪವಾಸ ಮುರಿಯಲು ನೆರೆದಿದ್ದ ಜನರ ಮೇಲೆ ಅಪರಿಚಿತ ವ್ಯಕ್ತಿಗಳ ಗುಂಪೊಂದು ದಾಳಿ ನಡೆಸಿರುವ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ. ಇಫ್ತಾರ್ ಕೂಟಕ್ಕೆ ಸಿದ್ಧತೆ ನಡೆಸುತ್ತಿದ್ದಾಗ, ಸುಮಾರು 100 ಕ್ಕೂ ಹೆಚ್ಚು...

ಆಸ್ಕರ್‌ ಅಂತಿಮ ಪಟ್ಟಿಗೆ ಆಯ್ಕೆಯಾದ ‘ದಿ ವಾಯ್ಸ್ ಆಫ್ ಹಿಂದ್ ರಜಬ್’

ಗಾಝಾದ ಆರು ವರ್ಷದ ಬಾಲಕಿ ಹಿಂದ್ ರಜಬ್‌ ಮತ್ತು ಆಕೆಯ ಸಂಬಂಧಿಕರನ್ನು ಇಸ್ರೇಲಿ ಸೈನಿಕರು ಭೀಕರವಾಗಿ ಹತ್ಯೆ ಮಾಡಿದ ಕಥೆಯನ್ನು ಹೇಳುವ 'ದಿ ವಾಯ್ಸ್ ಆಫ್ ಹಿಂದ್ ರಜಬ್' ಚಲನಚಿತ್ರವು 2026ರ ಆಸ್ಕರ್...

ಉತ್ತರ ಪ್ರದೇಶ| ದಲಿತ ಕುಟುಂಬದ ಮದುವೆ ಮನೆಯಲ್ಲಿ ಸವರ್ಣಿಯರಿಂದ ಹಲ್ಲೆ; ಬಂದೂಕಿನಿಂದ ಬೆದರಿಕೆ

ಮಾರ್ಚ್ 10 ರಂದು ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಟಿಕುನಿಯಾ ಪೊಲೀಸ್ ಠಾಣೆ ಪ್ರದೇಶದಲ್ಲಿ ಜಾತಿ ಆಧಾರಿತ ಹಿಂಸಾಚಾರದ ತೀವ್ರ ಆತಂಕಕಾರಿ ಘಟನೆ ಬೆಳಕಿಗೆ ಬಂದಿದೆ. 24 ಗಂಟೆಗಳ ಒಳಗೆ ಎಫ್‌ಐಆರ್...

’70 ಲಕ್ಷ ಬಂಗಾಳಿ ಮುಸ್ಲಿಮರನ್ನು ಹೊರದಬ್ಬಲು ಸಾಧ್ಯವಿಲ್ಲ..ಅವರೇ ದೇಶ ಬಿಡುವಂತಹ ಪರಿಸ್ಥಿತಿ ಸೃಷ್ಟಿಸುತ್ತೇವೆ’: ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ

ಸುಮಾರು 70 ಲಕ್ಷ 'ಬಂಗಾಳಿ ಮುಸ್ಲಿಮರ'ನ್ನು ಭಾರತದಿಂದ ಹೊರಹಾಕುವುದು 'ಮಾನವೀಯವಾಗಿ ಸಾಧ್ಯವಿಲ್ಲ'. ಹಾಗಾಗಿ, ಅವರಾಗಿಯೇ ದೇಶ ತೊರೆಯುವಂತಹ ಪರಿಸ್ಥಿತಿಯನ್ನು ನಾವು ಸೃಷ್ಟಿಸುತ್ತೇವೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ. ಈ...

ಮೋದಿಯವರ ವಿದೇಶಾಂಗ ನೀತಿ ಸಂಪೂರ್ಣವಾಗಿ ದಿಕ್ಕು ತಪ್ಪಿದೆ, ನಗೆಪಾಟಲಿಗೆ ಈಡಾಗಿದೆ, ಅನೈತಿಕತೆಯಿಂದ ಕೂಡಿದೆ. ಇದು ಜಗಜ್ಜಾಹೀರಾಗಿದೆ – ಶ್ರೀಪಾದ್‌ ಭಟ್

ತಮ್ಮ ಸ್ಥಳೀಯ ಮತಬ್ಯಾಂಕ್ ರಾಜಕಾರಣದ ಜೊತೆಗೆ ವಿದೇಶಿ ನೀತಿಯನ್ನು ತಳುಕು ಹಾಕುವುದು. ಉದಾಹರಣೆಗೆ ಅಮೆರಿಕ-ಇಸ್ರೇಲ್ ಜಂಟಿಯಾಗಿ ನಡೆಸುತ್ತಿರುವ ಇರಾನ್ ಮೇಲಿನ ಯುದ್ಧದ ಸಮಯದಲ್ಲಿ ಮೋದಿ ನೇತೃತ್ವದ ಸರ್ಕಾರವು ತಾನು ಇರಾನ್ ಪರ ನಿಲುವು ತಾಳಿದರೆ...

ದೆಹಲಿ ಪೊಲೀಸರಿಂದ 10 ಮಂದಿ ಹೋರಾಟಗಾರರ ಅಪಹರಣ ಆರೋಪ : ಹೈಕೋರ್ಟ್‌ಗೆ ಹೇಬಿಯಸ್ ಕಾರ್ಪಸ್ ಅರ್ಜಿ

ಸಿವಿಲ್ ಸೊಸೈಟಿಯ ಹತ್ತು ಮಂದಿ ಹೋರಾಟಗಾರರನ್ನು ದೆಹಲಿ ಪೊಲೀಸರು ಅಪಹರಿಸಿದ್ದಾರೆ ಅಥವಾ ಅಕ್ರಮವಾಗಿ ಬಂಧಿಸಿದ್ದಾರೆ ಎಂದು ಮಾನವ ಹಕ್ಕುಗಳ ಗುಂಪುಗಳು ಆರೋಪಿಸಿವೆ. ಹತ್ತು ಮಂದಿಯನ್ನು ದೆಹಲಿ ಪೊಲೀಸರು ಮತ್ತು ಇತರ ರಾಜ್ಯಗಳ ಏಜೆನ್ಸಿಗಳು ಅಪಹರಿಸಿವೆ...

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...