Homeಮುಖಪುಟ20 ಗಂಟೆಗಳ ಕಾರ್ಯಾಚರಣೆ ಯಶಸ್ವಿ; ಕೊಳವೆ ಬಾವಿಯಿಂದ ಮಗುವನ್ನು ರಕ್ಷಿಸಿದ ಎನ್‌ಡಿಆರ್‌ಎಫ್

20 ಗಂಟೆಗಳ ಕಾರ್ಯಾಚರಣೆ ಯಶಸ್ವಿ; ಕೊಳವೆ ಬಾವಿಯಿಂದ ಮಗುವನ್ನು ರಕ್ಷಿಸಿದ ಎನ್‌ಡಿಆರ್‌ಎಫ್

- Advertisement -
- Advertisement -

ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಲಚ್ಯಾಣ ಗ್ರಾಮದಲ್ಲಿ ಕೊಳವೆ ಬಾವಿಯಲ್ಲಿ ಸಿಲುಕಿದ್ದ ಎರಡು ವರ್ಷದ ಪುಟ್ಟ ಮಗುವನ್ನು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ ಯಶಸ್ವಿಯಾಗಿ ರಕ್ಷಿಸಿದ್ದಾರೆ. ನಿನ್ನೆ ಅಪಾಯದಲ್ಲಿ ಸಿಲುಕಿದ್ದ ಬಾಲಕನನ್ನು 20 ಗಂಟೆಗಳ ಯಶಸ್ವಿ ಕಾರ್ಯಾಚರಣೆ ನಂತರ ಬಾಲಕನನ್ನು ಸುರಕ್ಷಿತವಾಗಿ ಕರೆತರಲಾಗಿದೆ.

ರಕ್ಷಣಾ ಕಾರ್ಯಾಚರಣೆ ವೇಳೆ ಬಾಲಕ ಸಾತ್ವಿಕ್ ಸತೀಶ್ ಮುಜಗೊಂಡ್ ಅಳುವ ಶಬ್ದ ಕೇಳಿಸಿದ್ದು, ಆತನನ್ನು ತಕ್ಷಿಸಿದ ನಂತರ ಹೆಚ್ಚಿನ ಚಿಕಿತ್ಸೆಗೆ ಆಸ್ಪತ್ರೆಗೆ ರವಾನಿಸಲಾಗಿದೆ.

ಬೋರ್‌ವೆಲ್‌ನ 16 ಅಡಿ ಆಳದಲ್ಲಿ ಸಿಲುಕಿದ್ದ ಮಗುವನ್ನು ಸುರಕ್ಷಿತವಾಗಿ ಹೊರತರುತ್ತಿದ್ದಂತೆ ಸ್ಥಳದಲ್ಲಿ ಸಂಭ್ರಮಾಚರಣೆ ನಡೆಯಿತು. ಆತನನ್ನು ತಕ್ಷಣವೇ ಆಂಬ್ಯುಲೆನ್ಸ್‌ಗೆ ಸ್ಥಳಾಂತರಿಸಲಾಯಿತು, ಅಲ್ಲಿ ವೈದ್ಯಕೀಯ ತಂಡವನ್ನು ಮೊದಲೇ ಇರಿಸಲಾಗಿತ್ತು.

ಮಗುವಿನ ರಕ್ಷಣಾ ಪ್ರಯತ್ನದಲ್ಲಿ ಎಸ್‌ಡಿಆರ್‌ಎಫ್ ಮತ್ತು ಎನ್‌ಡಿಆರ್‌ಎಫ್‌ ತಂಡಗಳು ಮಗುವಿಗೆ ಉಸಿರಾಡಲು ಸಾಧ್ಯವಾಗುವಂತೆ ಪೈಪ್‌ಲೈನ್ ಮೂಲಕ ಆಮ್ಲಜನಕವನ್ನು ಪೂರೈಸಿದವು. ಇದರ ನಂತರ, ರಕ್ಷಣಾ ತಂಡವು ಬಾಲಕನನ್ನು ತಲುಪಲು ಮತ್ತು ರಕ್ಷಿಸಲು ಬೋರ್‌ವೆಲ್‌ಗೆ ಸಮಾನಾಂತರವಾಗಿ ಸರಿಸುಮಾರು 21 ಅಡಿ ಆಳದ ಗುಂಡಿ ಅಗೆಯಲು ಭಾರೀ ಗಾತ್ರದ ಯಂತ್ರಗಳನ್ನು ಬಳಸಿದರು.

ಮುಂಜಾಗ್ರತಾ ಕ್ರಮವಾಗಿ, ಚುಚ್ಚುಮದ್ದು, ಆಮ್ಲಜನಕ ಸೇರಿದಂತೆ ತುರ್ತು ಪ್ರಥಮ ಚಿಕಿತ್ಸಾ ಔಷಧಗಳನ್ನು ಹೊಂದಿದ ವೈದ್ಯಕೀಯ ತಂಡವನ್ನು ಸ್ಥಳದಲ್ಲಿ ಇರಿಸಲಾಗಿತ್ತು. ರಕ್ಷಣಾ ಕಾರ್ಯಾಚರಣೆ ಪೂರ್ಣಗೊಂಡ ತಕ್ಷಣ ಇಂಡಿಯಲ್ಲಿರುವ ಆಸ್ಪತ್ರೆಗೆ ಮಗುವನ್ನು ಸಾಗಿಸಲು ಆಂಬ್ಯುಲೆನ್ಸ್ ಅನ್ನು ಸಜ್ಜುಗೊಳಿಸಲಾಗಿತ್ತು. ಅಗತ್ಯವಿದ್ದರೆ, ಹೆಚ್ಚಿನ ಆರೈಕೆಗಾಗಿ ಮಗುವನ್ನು ಉನ್ನತ ಮಟ್ಟದ ವೈದ್ಯಕೀಯ ಸೌಲಭ್ಯಕ್ಕೆ ವರ್ಗಾಯಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪೊಲೀಸರ ಪ್ರಕಾರ, ಮಗು ತನ್ನ ಮನೆಯ ಬಳಿ ಆಟವಾಡಲು ಹೋದಾಗ ಬೋರ್‌ವೆಲ್‌ಗೆ ಬಿದ್ದಿದೆ. ಮಗುವಿನ ಅಳು ಕೇಳಿದ ಯಾರೋ ಕೂಡಲೇ ಮನೆಯವರಿಗೆ ಮಾಹಿತಿ ನೀಡಿದಾಗ ವಿಷಯ ಬೆಳಕಿಗೆ ಬಂದಿದೆ. ಸುತ್ತಮುತ್ತಲಿನ ಗ್ರಾಮಸ್ಥರು ಸೇರಿದಂತೆ ಹೆಚ್ಚಿನ ಸಂಖ್ಯೆಯಲ್ಲಿ ಸ್ಥಳದಲ್ಲಿ ಜಮಾಯಿಸಿದ್ದರು.

ಸಂತಸ ವ್ಯಕ್ತಪಡಿಸಿದ ಸಿಎಂ

ಬಾಲಕನನ್ನು ರಕ್ಷಿಸಿದ ಸುದ್ದಿ ಹೊರಬರುತ್ತಿದ್ದಾಂತೆಯೇ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂತಸ ವ್ಯಕ್ತಪಡಿಸಿದ್ದಾರೆ. ‘ವಿಜಯಪುರ ಜಿಲ್ಲೆ ಇಂಡಿ ತಾಲ್ಲೂಕಿನ ಲಚ್ಯಾಣ ಗ್ರಾಮದಲ್ಲಿ ಆಕಸ್ಮಿಕವಾಗಿ ಕೊಳವೆ ಬಾವಿಗೆ ಬಿದ್ದಿದ್ದ 2 ವರ್ಷದ ಬಾಲಕ ಸಾತ್ವಿಕ್‌ನ ರಕ್ಷಣಾ ಕಾರ್ಯಾಚರಣೆ ಯಶಸ್ವಿಯಾಗಿದೆ. ಮಗುವಿನ ರಕ್ಷಣೆಗಾಗಿ ಹಗಲಿರುಳೆನ್ನದೆ ಶ್ರಮಿಸಿದ ಸಿಬ್ಬಂದಿಗಳು ಮತ್ತು ಸಾರ್ವಜನಿಕರ ಕಾರ್ಯದಕ್ಷತೆ ಪ್ರಶಂಸನೀಯ.
ಮಗುವಿನ ಕುಟುಂಬದವರ, ನಾಡಿನ ಕೋಟ್ಯಂತರ ಜನರ ಹರಕೆ-ಹಾರೈಕೆಗಳು ಫಲಿಸಿದೆ, ಸಾವನ್ನೇ ಗೆದ್ದು ಬಂದ ಪುಟ್ಟ ಕಂದಮ್ಮ ಮತ್ತೆ ಪೋಷಕರ ಮಡಿಲು ಸೇರಿದ್ದು ಕಂಡು ಖುಷಿಯಾಯಿತು. ನೀರು ಬಾರದ ಅಥವಾ ಬತ್ತಿದ ಕೊಳವೆ ಬಾವಿಗಳನ್ನು ಮುಚ್ಚದಿದ್ದರೆ ಯಾರದೋ ಅಮಾಯಕ ಜೀವ ಬಲಿಯಾಗುತ್ತದೆ, ಇಂತಹ ಘಟನೆಗಳು ಕಾಲಕಾಲಕ್ಕೆ ಪುನರಾವರ್ತನೆಯಾಗುತ್ತಿದ್ದರೂ ಜನ ಜಾಗೃತರಾಗದೆ ನಿರ್ಲಕ್ಷ್ಯ ತೋರುವುದು ಬೇಸರದ ಸಂಗತಿ. ಸಮಾಜ ಈ ಬಗ್ಗೆ ಇನ್ನಾದರೂ ಎಚ್ಚೆತ್ತುಕೊಳ್ಳಬೇಕು’ ಎಂದು ತಮ್ಮ ಫೇಸ್‌ಬುಕ್‌ನಲ್ಲಿ ಬರೆದುಕೊಂಡಿದ್ದಾರೆ.

‘ಕೋಟ್ಯಂತರ ಕನ್ನಡಿಗರ ಪ್ರಾರ್ಥನೆ ಫಲಿಸಿದೆ! ಕೊಳವೆ ಬಾವಿಯಲ್ಲಿ ಬಿದ್ದಿದ್ದ 2 ವರ್ಷದ ಕಂದಮ್ಮ ಸಾತ್ವಿಕ್‌ ಜೀವಂತವಾಗಿ ಬರಲೆಂದು ಪ್ರಾರ್ಥಿಸಿದವರ ಪೈಕಿ ನಾನೂ ಒಬ್ಬ. ಬೆಳಗಿನಿಂದ ಮಾಧ್ಯಮಗಳಲ್ಲಿ ಈ ಸುದ್ದಿ ನೋಡಿ ಮನಸ್ಸಿನಲ್ಲಿ ಏನೋ ತಳಮಳವಾಗುತ್ತಿತ್ತು. ಸಾತ್ವಿಕ್‌ ಯಾವಾಗ ಬದುಕಿ ಬರುತ್ತಾನೋ ಎಂದು ಎದುರುನೋಡುತ್ತಿದ್ದೆ. ಯಶಸ್ವಿ ಕಾರ್ಯಾಚರಣೆ ನಡೆಸಿದ ತಂಡಕ್ಕೆ ನನ್ನ ಅನಂತ ಧನ್ಯವಾದಗಳು’ ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ತಮ್ಮ ಫೇಸ್‌ಬುಕ್‌ ಖಾತೆಯಲ್ಲಿ ಬರೆದುಕೊಂಡಿದ್ದಾರೆ.
ಇದನ್ನೂ ಓದಿ;
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭೂಮಿ, ಆಕಾಶದ ಬಳಿಕ ಈಗ ಬಾಹ್ಯಾಕಾಶವೇ ಯುದ್ಧಭೂಮಿ: ಕಕ್ಷೆಯಲ್ಲಿ ಶಸ್ತ್ರಾಸ್ತ್ರ ನಿಯೋಜನೆ ಒಪ್ಪಿಕೊಂಡ ಅಮೆರಿಕ

ಭವಿಷ್ಯದಲ್ಲಿ ಬೃಹತ್ ಯುದ್ಧವೇನಾದರೂ ಸಂಭವಿಸಿದರೆ ಅದು ಕೇವಲ ಭೂಮಿ, ಸಮುದ್ರ ಮತ್ತು ವಾಯುಮಾರ್ಗಕ್ಕೆ ಮಾತ್ರ ಸೀಮಿತವಾಗದೆ ಬಾಹ್ಯಾಕಾಶಕ್ಕೂ ವಿಸ್ತರಿಸಲಿದೆ ಎಂಬುದನ್ನು ಸಾಬೀತುಪಡಿಸುವ ರೀತಿಯಲ್ಲಿ ಅಮೆರಿಕ ಹೇಳಿಕೊಂಡಿದೆ. ಭೂಮಿಯ ಕಕ್ಷೆಯಲ್ಲಿ ತಾನು ಮಿಲಿಟರಿ ಶಸ್ತ್ರಾಸ್ತ್ರಗಳನ್ನು...

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...