Homeಫ್ಯಾಕ್ಟ್‌ಚೆಕ್Fact Check : ಬೆಂಗಳೂರಿನಲ್ಲಿ ಮುಸ್ಲಿಮರು ಬಸ್‌ ಮೇಲೆ ಕಲ್ಲು ತೂರಿದ್ದಾರೆ ಎಂಬುವುದು ಸುಳ್ಳು

Fact Check : ಬೆಂಗಳೂರಿನಲ್ಲಿ ಮುಸ್ಲಿಮರು ಬಸ್‌ ಮೇಲೆ ಕಲ್ಲು ತೂರಿದ್ದಾರೆ ಎಂಬುವುದು ಸುಳ್ಳು

- Advertisement -
- Advertisement -

ಬೆಂಗಳೂರಿನಲ್ಲಿ ಮುಸ್ಲಿಂ ಮಹಿಳೆಯೊಬ್ಬರು ಮನೆ ಮುಂದೆ ಬಸ್‌ ನಿಲ್ಲಿಸುವಂತೆ ಹೇಳಿದ್ದರು. ಆದರೆ, ಚಾಲಕ ಬಸ್‌ ನಿಲ್ದಾಣದ ಬಳಿ ನಿಲ್ಲಿಸಿದ್ದಾನೆ. ಈ ಕಾರಣಕ್ಕೆ ಮುಸ್ಲಿಂ ಪುರುಷರು ಬಸ್‌ಗೆ ಕಲ್ಲು ತೂರಿ ಹಾನಿಗೊಳಿಸಿದ್ದಾರೆ ಎಂದು ಹೇಳಲಾದ ಸಂದೇಶವೊಂದು ವಾಟ್ಸಾಪ್‌ನಲ್ಲಿ ಹರಿದಾಡುತ್ತಿದೆ. ಸಂದೇಶದ ಜೊತೆಗೆ ಮುಸ್ಲಿಂ ಪುರುಷರ ಗುಂಪೊಂದು ಕಲ್ಲು ತೂರುವ ಮೂಲಕ ಬಸ್ಸಿನ ಗಾಜುಗಳನ್ನು ಹಾನಿಗೊಳಿಸುತ್ತಿರುವ ವಿಡಿಯೋ ಹರಿದಾಡುತ್ತಿದೆ.

“ಬೆಂಗಳೂರು ಉಚಿತ ಬಸ್… ಮುಸ್ಲಿಂ ಮಹಿಳೆ ತನ್ನ ಮನೆಯ ಎದುರು ಬಸ್ ನಿಲ್ಲಿಸಲು ಹೇಳಿದಳು ಪಾಪ ಡ್ರೈವರ್ ನೇರ ಬಸ್ ಸ್ಟಾಂಡ್ ನಲ್ಲಿ ನಿಲ್ಲಿಸಿದ… ನಂತರ ಕತೆ ನೋಡಿ. ಸರ್ಕಾರದ ಆಸ್ತಿಗಳನ್ನ ಉಗ್ರಾಗಾಮಿಗಳಂತೆ ಹಾಳು ಮಾಡುವ ಇವರಿಗೆ ಯಾವ ಶಿಕ್ಷೆಯು ಇಲ್ಲಾ..ಇದು ನಮ್ಮ ಕರುನಾಡಿನ ದುರಂತ, ಯೋಗಿ ಆದಿತ್ಯನಾಥ ಅಂತ CM ನಾಯಕ ಯಾಕೆ ಬೇಕು ಅಂತ ಈಗ ಯೋ‍ಚಿಸಿ! ಕಾಂಗ್ರೆಸ್ ನ ಶಾಂತಿ ಧೂತ ಬ್ರದರ್ಸ್.” ಎಂದು ವೈರಲ್ ಸಂದೇಶದಲ್ಲಿ ಬರೆಯಲಾಗಿದೆ.

ಫ್ಯಾಕ್ಟ್‌ಚೆಕ್ : ವೈರಲ್ ವಿಡಿಯೋದ ಸತ್ಯಾಸತ್ಯತೆಯನ್ನು ನಾನುಗೌರಿ.ಕಾಂ ಪರಿಶೀಲನೆ ನಡೆಸಿದೆ. ವೈರಲ್ ವಿಡಿಯೋದಲ್ಲಿರುವ ಬಸ್‌ನ ಬಣ್ಣ ನೀಲಿ ಆಗಿರುವುದರಿಂದ, ಅದು ಬೆಂಗಳೂರಿನ ಬಿಎಂಟಿಸಿ ವೋಲ್ವೋ ಬಸ್‌ ಎಂದು ನಾವು ಗೂಗಲ್ ಸರ್ಚ್ ಮಾಡಿದ್ದೇವೆ. ಈ ವೇಳೆ ಬೆಂಗಳೂರಿನಲ್ಲಿ ಬಿಎಂಟಿಸಿ ಬಸ್‌ಗೆ ಕಲ್ಲು ತೂರಿರುವ ಯಾವುದೇ ಮಾಧ್ಯಮ ವರದಿಗಳು ನಮಗೆ ಲಭ್ಯವಾಗಿಲ್ಲ.

ನಾವು ಮತಷ್ಟು ಕೀ ವರ್ಡ್ಸ್, ಟೂಲ್‌ಗಳನ್ನು ಬಳಸಿಕೊಂಡು ಸರ್ಚ್ ಮಾಡಿದಾಗ, ಇದು ಗುಜರಾತ್‌ನ ಸೂರತ್‌ನಲ್ಲಿ ನಡೆದ ಘಟನೆಯ ವಿಡಿಯೋ ಎಂದು ತಿಳಿದು ಬಂದಿದೆ.

ಜುಲೈ 5, 2019ರಲ್ಲಿ ಟಿವಿ9 ಗುಜರಾತಿ ಯೂಟ್ಯೂಬ್‌ನಲ್ಲಿ ಅಪ್ಲೋಡ್ ಮಾಡಿರುವ ವಿಡಿಯೋದಲ್ಲಿ ಬಸ್‌ಗೆ ಕಲ್ಲು ತೂರಾಟ ನಡೆಸಿರುವ ಸುದ್ದಿಯಿದೆ. ಸುದ್ದಿ ಗುಜರಾತಿ ಭಾಷೆಯಲ್ಲಿರುವುದರಿಂದ ಆಂಗ್ಲ ಭಾಷೆಯಲ್ಲಿ ನೀಡಿರುವ “Rally against mob lynching incidents turns violent in Surat, stones pelted on buses” ಎಂಬ ಶೀರ್ಷಿಕೆಯನ್ನು ನಾವು ಗಮನಿಸಬಹುದು.

ಯೂಟ್ಯೂಬ್ ಲಿಂಕ್ ಇಲ್ಲಿದೆ 

ಘಟನೆಯ ಕುರಿತು ಜುಲೈ 6, 2019ರಂದು ಟೈಮ್ಸ್ ಆಫ್ ಇಂಡಿಯಾ “Surat:Rally against mob lynching turns violent” ಎಂಬ ಶೀರ್ಷಿಕೆಯಲ್ಲಿ ಸುದ್ದಿ ಪ್ರಕಟಿಸಿತ್ತು.

ಸುದ್ದಿ ಲಿಂಕ್ ಇಲ್ಲಿದೆ 

ಕಳೆದ ವರ್ಷ (2023)ರಲ್ಲಿ ಕರ್ನಾಟಕದ ಕಾಂಗ್ರೆಸ್‌ ಸರ್ಕಾರ ಮಹಿಳೆಯರಿಗೆ ಸರ್ಕಾರಿ ಬಸ್‌ಗಳಲ್ಲಿ ಉಚಿತ ಪ್ರಯಾಣ ಕಲ್ಪಿಸುವ ‘ಶಕ್ತಿ’ ಯೋಜನೆ ಜಾರಿಗೊಳಿಸಿದಾಗಲೂ ಇದೇ ವಿಡಿಯೋವನ್ನು ಸುಳ್ಳು ಸಂದೇಶದೊಂದಿಗೆ ಹಂಚಿಕೊಳ್ಳಲಾಗಿತ್ತು.

ಆಗ ಏನ್‌ ಸುದ್ದಿ.ಕಾಂ ಎಂಬ ಕನ್ನಡದ ಫ್ಯಾಕ್ಟ್‌ ಚೆಕ್ಕಿಂಗ್ ವೆಬ್‌ಸೈಟ್‌ ಈ ಕುರಿತು ಸತ್ಯಾಸತ್ಯತೆ ಪರಿಶೀಲನೆ ನಡೆಸಿತ್ತು. ಅದರಲ್ಲೂ ಈ ವಿಡಿಯೋ ಗುಜರಾತ್‌ನಲ್ಲಿ ನಡೆದ ಘಟನೆಯದ್ದು ಎಂದು ಹೇಳಲಾಗಿದೆ.

ಸುದ್ದಿ ಲಿಂಕ್ ಇಲ್ಲಿದೆ 

ನಾವು ನಡೆಸಿದ ಪರಿಶೀಲನೆಯಲ್ಲಿ ವಾಟ್ಸಾಪ್‌ನಲ್ಲಿ ಹರಿದಾಡುತ್ತಿರುವ ವೈರಲ್ ವಿಡಿಯೋ ಬೆಂಗಳೂರಿನದ್ದಲ್ಲ, ಬದಲಾಗಿ ಗುಜರಾತ್‌ನ ಸೂರತ್‌ನಲ್ಲಿ ದೇಶದಾದ್ಯಂತ ನಡೆಯುತ್ತಿದ್ದ ಗುಂಪು ಹತ್ಯೆಯ ವಿರುದ್ದ ಪ್ರತಿಭಟಿಸಲು ಪೊಲೀಸರು ಅವಕಾಶ ನಿರಾಕರಿಸಿದಾಗ ಜನರು ಆಕ್ರೋಶ ವ್ಯಕ್ತಪಡಿಸಿದ್ದ ಘಟನೆಯದ್ದು ಎಂದು ತಿಳಿದು ಬಂದಿದೆ.

ಇದನ್ನೂ ಓದಿ: Fact Check: ಅರವಿಂದ್ ಕೇಜ್ರಿವಾಲ್ ಅತ್ಯಾಚಾರ ಪ್ರಕರಣದ ಆರೋಪಿಯಾಗಿದ್ದರು ಎಂಬುವುದು ಸುಳ್ಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...