Homeಮುಖಪುಟ'ಶೀಘ್ರದಲ್ಲೇ ಹೊರಗೆ ಭೇಟಿಯಾಗುತ್ತೇನೆ..'; ತಿಹಾರ್ ಜೈಲಿನಿಂದ ಪತ್ರ ಬರೆದ ಮನೀಶ್ ಸಿಸೋಡಿಯಾ

‘ಶೀಘ್ರದಲ್ಲೇ ಹೊರಗೆ ಭೇಟಿಯಾಗುತ್ತೇನೆ..’; ತಿಹಾರ್ ಜೈಲಿನಿಂದ ಪತ್ರ ಬರೆದ ಮನೀಶ್ ಸಿಸೋಡಿಯಾ

- Advertisement -
- Advertisement -

ದೆಹಲಿ ಅಬಕಾರಿ ನೀತಿ ಹಗರಣದಲ್ಲಿ ಬಂಧಿತರಾಗಿರುವ ಮಾಜಿ ಉಪಮುಖ್ಯಮಂತ್ರಿ ಹಾಗೂ ಆಪ್ ಹಿರಿಯ ನಾಯಕ ಮನೀಶ್ ಸಿಸೋಡಿಯಾ ಜೈಲಿನಿಂದಲೆ ಕಾರ್ಯಕರ್ತರಿಗೆ ಹೊಸ ಪತ್ರ ಬರೆದಿದ್ದು, ಶೀಘ್ರದಲ್ಲೇ ಜೈಲಿನಿಂದ ಹೊರಬರುವುದಾಗಿ ಹೇಳಿದ್ದಾರೆ.

ತಮ್ಮ ವಿಧಾನಸಭಾ ಕ್ಷೇತ್ರದ ಜನರನ್ನು ಉದ್ದೇಶಿಸಿ ಪತ್ರ ಬರೆದಿರುವ ಅವರು, ‘ಎಲ್ಲರೂ ಸ್ವಾತಂತ್ರ್ಯಕ್ಕಾಗಿ ಹೋರಾಡಿದಂತೆಯೇ, ನಮ್ಮ ಪಕ್ಷವು ಉತ್ತಮ ಶಿಕ್ಷಣ ಮತ್ತು ಶಾಲೆಗಳಿಗಾಗಿ ಹೋರಾಡುತ್ತಿದೆ’ ಎಂದು ಹೇಳಿದರು.

“ಬ್ರಿಟಿಷ್ ಸರ್ವಾಧಿಕಾರದ ನಂತರವೇ ಸ್ವಾತಂತ್ರ್ಯದ ಕನಸು ನನಸಾಯಿತು. ಅದೇ ರೀತಿ, ಮುಂದೊಂದು ದಿನ ಪ್ರತಿ ಮಗುವಿಗೆ ಸರಿಯಾದ ಮತ್ತು ಉತ್ತಮ ಶಿಕ್ಷಣ ಸಿಗುತ್ತದೆ. ಶೀಘ್ರದಲ್ಲೇ ಹೊರಗೆ ಭೇಟಿಯಾಗುತ್ತೇನೆ” ಎಂದು ಎಎಪಿ ನಾಯಕ ಹೇಳಿದ್ದಾರೆ.

ಆರೋಪಿತ ಮದ್ಯದ ನೀತಿ ಪ್ರಕರಣದಲ್ಲಿ ಕಳೆದ 13 ತಿಂಗಳಿನಿಂದ ಜೈಲಿನಲ್ಲಿರುವ ಸಿಸೋಡಿಯಾ, “ಬ್ರಿಟಿಷರು ಸಹ ತಮ್ಮ ಅಧಿಕಾರದ ಬಗ್ಗೆ ಅಹಂಕಾರಿಗಳಾಗಿದ್ದರು; ಮಹಾತ್ಮಾ ಗಾಂಧಿ ಮತ್ತು ನೆಲ್ಸನ್ ಮಂಡೇಲಾ ಅವರನ್ನು ಜೈಲಿಗೆ ತಳ್ಳಿದ್ದರು” ಎಂದು ಹೇಳಿದ್ದಾರೆ.

“ಬ್ರಿಟಿಷರು ಕೂಡ ತಮ್ಮ ಅಧಿಕಾರದ ಬಗ್ಗೆ ಅಹಂಕಾರಿಗಳಾಗಿದ್ದರು ಮತ್ತು ಸುಳ್ಳು ಆರೋಪಗಳ ಮೇಲೆ ಯಾರನ್ನಾದರೂ ಜೈಲಿಗೆ ಹಾಕುತ್ತಿದ್ದರು. ಈ ಜೈಲು ಗೋಡೆಗಳು ಸ್ವಾತಂತ್ರ್ಯಕ್ಕಾಗಿ ಹೋರಾಡುವವರನ್ನು ಒಡೆಯುತ್ತವೆ ಎಂದು ಅವರು ಭಾವಿಸುತ್ತಿದ್ದರು” ಎಂದು ಮಾರ್ಚ್ 15ರ ಪತ್ರವನ್ನು ಓದಿದರು.

ಗಾಂಧಿ ಮತ್ತು ಮಂಡೇಲಾ ನನಗೆ ಸ್ಫೂರ್ತಿ ಎಂದು ಹೇಳಿರುವ ಸಿಸೋಡಿಯಾ, ತಮ್ಮ ವಿಧಾನಸಭಾ ಕ್ಷೇತ್ರದ ನಿವಾಸಿಗಳನ್ನು ಉಲ್ಲೇಖಿಸಿ, “ನೀವೆಲ್ಲರೂ ನನ್ನ ಶಕ್ತಿ, ಜೈಲಿನಲ್ಲಿರುವಾಗ ನಿಮ್ಮ ಮೇಲಿನ ನನ್ನ ಪ್ರೀತಿ ಮತ್ತಷ್ಟು ಹೆಚ್ಚಾಯಿತು” ಎಂದು ಹೇಳಿದ್ದಾರೆ.

ಆಪಾದಿತ ಮದ್ಯ ನೀತಿ ಹಗರಣದಲ್ಲಿ ಬಂಧಿಸಲಾದ ಮೊದಲ ಕೆಲವು ಎಎಪಿ ನಾಯಕರಲ್ಲಿ ಸಿಸೋಡಿಯಾ ಕೂಡ ಒಬ್ಬರು. ಅವರ ಪಕ್ಷದ ಮುಖ್ಯಸ್ಥ, ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮತ್ತು ಬಿಆರ್‌ಎಸ್ ನಾಯಕಿ ಕೆ ಕವಿತಾ ಅವರನ್ನು ಕಳೆದ ತಿಂಗಳು ಲೋಕಸಭೆ ಚುನಾವಣೆಗೆ ಕೆಲವೇ ವಾರಗಳ ಮೊದಲು ಈ ಪ್ರಕರಣದಲ್ಲಿ ಬಂಧಿಸಲಾಯಿತು. ಈ ಪ್ರಕರಣದಲ್ಲಿ ಬಂಧಿತರಾಗಿರುವ ಮತ್ತೊಬ್ಬ ಎಎಪಿ ನಾಯಕ ಸಂಜಯ್ ಸಿಂಗ್ ಕೂಡ ಬುಧವಾರ ರಾತ್ರಿ ಬಿಡುಗಡೆಯಾಗಿದ್ದಾರೆ.

ಇದನ್ನೂ ಓದಿ; ಐದೇ ವರ್ಷದಲ್ಲಿ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಆಸ್ತಿ ಹೆಚ್ಚಳ; ₹13 ಲಕ್ಷದಿಂದ ₹4ಕೋಟಿಗೆ ಏರಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭೂಮಿ, ಆಕಾಶದ ಬಳಿಕ ಈಗ ಬಾಹ್ಯಾಕಾಶವೇ ಯುದ್ಧಭೂಮಿ: ಕಕ್ಷೆಯಲ್ಲಿ ಶಸ್ತ್ರಾಸ್ತ್ರ ನಿಯೋಜನೆ ಒಪ್ಪಿಕೊಂಡ ಅಮೆರಿಕ

ಭವಿಷ್ಯದಲ್ಲಿ ಬೃಹತ್ ಯುದ್ಧವೇನಾದರೂ ಸಂಭವಿಸಿದರೆ ಅದು ಕೇವಲ ಭೂಮಿ, ಸಮುದ್ರ ಮತ್ತು ವಾಯುಮಾರ್ಗಕ್ಕೆ ಮಾತ್ರ ಸೀಮಿತವಾಗದೆ ಬಾಹ್ಯಾಕಾಶಕ್ಕೂ ವಿಸ್ತರಿಸಲಿದೆ ಎಂಬುದನ್ನು ಸಾಬೀತುಪಡಿಸುವ ರೀತಿಯಲ್ಲಿ ಅಮೆರಿಕ ಹೇಳಿಕೊಂಡಿದೆ. ಭೂಮಿಯ ಕಕ್ಷೆಯಲ್ಲಿ ತಾನು ಮಿಲಿಟರಿ ಶಸ್ತ್ರಾಸ್ತ್ರಗಳನ್ನು...

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...