Homeಫ್ಯಾಕ್ಟ್‌ಚೆಕ್Fact Check : 'ಮೋದಿ ದೇಶದ್ರೋಹಿ' ಎಂಬ ಭಾಗ ಕೈಬಿಟ್ಟು ವೈಕೋ ಹೇಳಿಕೆ ಹಂಚಿಕೊಂಡ ANI

Fact Check : ‘ಮೋದಿ ದೇಶದ್ರೋಹಿ’ ಎಂಬ ಭಾಗ ಕೈಬಿಟ್ಟು ವೈಕೋ ಹೇಳಿಕೆ ಹಂಚಿಕೊಂಡ ANI

- Advertisement -
- Advertisement -

ತಮಿಳುನಾಡಿನ ಮರು ಮಳರ್ಚಿ ದ್ರಾವಿಡ ಮುನ್ನೇತ್ರ ಕಳಗಂ (ಎಂಡಿಎಂಕೆ) ಪ್ರಧಾನ ಕಾರ್ಯದರ್ಶಿ ವೈಯಾಪುರಿ ಗೋಪಾಲಸಾಮಿ ಅಥವಾ ವೈಕೋ ಅವರು ಏಪ್ರಿಲ್ 3ರಂದು ಶ್ರೀಲಂಕಾದ ಕಚ್ಚತೀವು ದ್ವೀಪದ ಸುತ್ತ ನಡೆಯುತ್ತಿರುವ ವಿವಾದದ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ್ದರು. ಎಂಡಿಎಂಕೆ ಪಕ್ಷವು ತಮಿಳುನಾಡಿನ ಆಡಳಿತರೂಢ ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ)ಯ ಮಿತ್ರ ಪಕ್ಷವಾಗಿದೆ. ಡಿಎಂಕೆ ಇಂಡಿಯಾ ಒಕ್ಕೂಟದ ಪ್ರಮುಖ ಪಕ್ಷಗಳಲ್ಲಿ ಒಂದಾಗಿದೆ.

ವೈಕೋ ಅವರ ಹೇಳಿಕೆಯ 10 ಸೆಕೆಂಡ್‌ನ ವಿಡಿಯೋವನ್ನು ಏಪ್ರಿಲ್ 3ರಂದು ಎಎನ್‌ಐ ಸುದ್ದಿ ಸಂಸ್ಥೆ ಎಕ್ಸ್‌ನಲ್ಲಿ ಪ್ರಕಟಿಸಿತ್ತು. ವಿಡಿಯೋದಲ್ಲಿ ” ಆ ಸಮಯದಲ್ಲಿ ಕಾಂಗ್ರೆಸ್ ಪ್ರತಿ ರಂಗದಲ್ಲೂ ತಮಿಳುನಾಡಿಗೆ ದ್ರೋಹ ಬಗೆದಿತ್ತು..” ಎಂದು ವೈಕೋ ಹೇಳಿರುವುದನ್ನು ಕಾಣಬಹುದು.

ಎಎನ್‌ಐ ಎಕ್ಸ್ ಪೋಸ್ಟನ್ನು ರೀ ಟ್ವೀಟ್ ಮಾಡಿದ್ದ ಕೇಂದ್ರ ಸಚಿವ ಪಿಯೂಷ್ ಗೋಯಲ್, “ತಮಿಳುನಾಡಿನ ಜನರು ಕಡ್ಡಾಯವಾಗಿ ಇದನ್ನು ಆಲಿಸಬೇಕು” ಎಂದು ಬರೆದುಕೊಂಡಿದ್ದರು.

ಎಎನ್‌ಐ ಎಕ್ಸ್‌ ಪೋಸ್ಟ್‌ ಆಧರಿಸಿ ಹಿಂದುಸ್ತಾನ್ ಟೈಮ್ಸ್, ನ್ಯೂಸ್ 18, ಸಿಎನ್‌ಎನ್ ಮತ್ತು ನ್ಯೂಸ್ 9 ಸೇರಿದಂತೆ ಅನೇಕ ಮುಖ್ಯ ವಾಹಿನಿ ಮಾಧ್ಯಮಳು ಸುದ್ದಿ ಪ್ರಕಟಿಸಿದ್ದವು. ಎಲ್ಲಾ ಸುದ್ದಿಗಳಲ್ಲೂ ಎಎನ್‌ಐ ಹಂಚಿಕೊಂಡ ವೈಕೋ ಅವರ 10 ಸೆಕೆಂಡ್‌ನ ವಿಡಿಯೋದ ಹೇಳಿಕೆಯನ್ನು ಶೀರ್ಷಿಕೆಯಲ್ಲಿ ಹಾಕಲಾಗಿತ್ತು.

ನ್ಯೂಸ್ 18ನ ನಿರೂಪಕ ರಾಹುಲ್ ಶಿವಶಂಕರ್ ಎಕ್ಸ್‌ ಪೋಸ್ಟ್‌ ಅನ್ನು ರೀ ಟ್ವೀಟ್ ಮಾಡಿ ” ಮತ್ತೆ ಅವರು ಯಾಕೆ ಒಟ್ಟಾಗಿ ಚುನಾವಣೆ ಎದುರಿಸುತ್ತಿದ್ದಾರೆ? ಅನುಕೂಲತೆಯ ರಾಜಕೀಯಕ್ಕೆ ಮಿತಿಯಿಲ್ಲವೇ? ಎಂದು ಪ್ರಶ್ನಿಸಿದ್ದರು.

ಬಿಜೆಪಿ ರಾಷ್ಟ್ರೀಯ ವಕ್ತಾರ ಕೆ ಕೇಶವನ್ ಸೇರಿದಂತೆ ಅನೇಕ ಬಿಜೆಪಿ ನಾಯಕರು ಎಎನ್‌ಐ ವಿಡಿಯೋವನ್ನು ಹಂಚಿಕೊಂಡಿದ್ದರು.

ಫ್ಯಾಕ್ಟ್‌ಚೆಕ್ : ಇಂಡಿಯಾ ಒಕ್ಕೂಟದ ಭಾಗವಾಗಿದ್ದರೂ ವೈಕೋ ಅವರು ಕಾಂಗ್ರೆಸ್‌ ವಿರುದ್ದವೇ ಹೇಳಿಕೆ ನೀಡಿದ್ದಾರೆ ಎಂಬರ್ಥದಲ್ಲಿ ವೈರಲ್ ಆದ ವಿಡಿಯೋದ ಸತ್ಯಾಸತ್ಯತೆಯನ್ನು ನಾನುಗೌರಿ.ಕಾಂ ಪರಿಶೀಲನೆ ನಡೆಸಿದೆ.

ನಾವು ಮೂಲ ವಿಡಿಯೋ ಹುಡುಕಾಡಿದಾಗ ತಮಿಳಿನ ಸನ್‌ ನ್ಯೂಸ್ ಎಕ್ಸ್‌ ಖಾತೆಯಲ್ಲಿ ವೈಕೋ ಅವರ ಹೇಳಿಕೆಯ 37 ಸೆಕೆಂಡ್‌ನ ಸಂಪೂರ್ಣ ವಿಡಿಯೋ ಅಪ್ಲೋಡ್ ಮಾಡಿರುವುದು ಕಂಡು ಬಂದಿದೆ. ವಿಡಿಯೋದಲ್ಲಿ “ಆ ಸಮಯದಲ್ಲಿ ಕಾಂಗ್ರೆಸ್ ಪ್ರತಿ ರಂಗದಲ್ಲೂ ತಮಿಳುನಾಡಿಗೆ ದ್ರೋಹ ಬಗೆದಿತ್ತು. ಆ ನಂತರ… ಈ ಹತ್ತು ವರ್ಷಗಳು ನರೇಂದ್ರ ಮೋದಿಯವರಿಗೆ ಪರೀಕ್ಷಾ ಸಮಯವಾಗಿತ್ತು. ಆದರೆ, ಅವರು ದೇಶದ್ರೋಹಿ, ಅವರು ತಮಿಳುನಾಡಿಗೆ ದ್ರೋಹ ಮಾಡಿದರು, ಭಾರತಕ್ಕೆ ದ್ರೋಹ ಮಾಡಿದರು, ಶ್ರೀಲಂಕಾಕ್ಕೆ ದ್ರೋಹ ಮಾಡಿದರು” ಎಂದು ಹೇಳಿದ್ದಾರೆ.

ಇದರಿಂದ ನಮಗೆ ತಿಳಿದ್ದದ್ದು ಏನೆಂದರೆ, ಎಎನ್‌ಐ ಸುದ್ದಿ ಸಂಸ್ಥೆ “ಮೋದಿ ದೇಶ ದ್ರೋಹಿ, ಕಾಂಗ್ರೆಸ್ ತಮಿಳುನಾಡಿಗೆ ದ್ರೋಹವೆಸಗಿದೆ ಎಂಬ ವೈಕೋ ಹೇಳಿಕೆಯ 37 ಸೆಕೆಂಡ್‌ನ ವಿಡಿಯೋವನ್ನು ಕಟ್ ಮಾಡಿ, “ಕಾಂಗ್ರೆಸ್‌ ತಮಿಳುನಾಡಿಗೆ ದ್ರೋಹವೆಸಗಿದೆ’ ಎಂಬ 10 ಸೆಕೆಂಡ್‌ನ ವಿಡಿಯೋವನ್ನು ಮಾತ್ರ ಪೋಸ್ಟ್ ಮಾಡಿದೆ.

ಏಪ್ರಿಲ್ 3ರಂದು ಬುಧವಾರ ಡಿಎಂಕೆ ಅಭ್ಯರ್ಥಿ ತಮಿಳಚಿ ತಂಗಪಾಂಡಿಯನ್ ಪರ ಪ್ರಚಾರ ಮಾಡುವಾಗ ವೈಕೋ ಚುನಾವಣಾ ಸಭೆಯನ್ನು ಉದ್ದೇಶಿಸಿ ಮಾತನಾಡಿದ್ದರು. ತಮ್ಮ ಭಾಷಣದ ವೇಳೆಯೂ ಅವರು ಬಿಜೆಪಿಯನ್ನು ಟೀಕಿಸಿದ್ದರು, “ಹಿಂದುತ್ವ ಶಕ್ತಿಗಳನ್ನು ಸೋಲಿಸಬೇಕಾಗಿದೆ. ಇಂಡಿಯಾ ಮೈತ್ರಿಕೂಟಕ್ಕೆ ಭಾರೀ ಬೆಂಬಲ ವ್ಯಕ್ತವಾಗುತ್ತಿದೆ. ಕೇಂದ್ರದ ಬಿಜೆಪಿ ನಾಯಕ ತಮಿಳುನಾಡಿನ ದ್ರಾವಿಡ ಸರ್ಕಾರವನ್ನು ಉರುಳಿಸುವುದಾಗಿ ಘೋಷಿಸಿದ್ದರು. ಈ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸಲು ಜನರು ಪಣ ತೊಡಬೇಕು” ಎಂದಿದ್ದರು.

ಎಎನ್‌ಐ ಕಟ್ ಮಾಡಿದ್ದ ವೈಕೋ ಹೇಳಿಕೆಯ ಉಳಿದ ವಿಡಿಯೋವನ್ನು ಕಾಂಗ್ರೆಸ್ ನಾಯಕಿ ಸುಪ್ರಿಯಾ ಶ್ರೀನಾಟೆ ಏಪ್ರಿಲ್ 3ರಂದು ಹಂಚಿಕೊಂಡಿದ್ದರು. ” ಈ 10 ವರ್ಷಗಳು ನರೇಂದ್ರ ಮೋದಿಯವರಿಗೆ ಪರೀಕ್ಷಾ ಸಮಯವಾಗಿತ್ತು. ಅವರೊಬ್ಬ ದೇಶದ್ರೋಹಿ. ಅವರು ತಮಿಳುನಾಡಿಗೆ ದ್ರೋಹ ಮಾಡಿದರು. ಭಾರತಕ್ಕೆ ದ್ರೋಹ ಮಾಡಿದರು, ಶ್ರೀಲಂಕಾಕ್ಕೆ ದ್ರೋಹ ಮಾಡಿದರು : ಎಂಡಿಎಂಕೆ ಸಂಸ್ಥಾಪಕ ವೈಕೋ” ಎಂದು ಬರೆದುಕೊಂಡಿದ್ದರು.

ಕೊನೆಯದಾಗಿ, ಈ ಫ್ಯಾಕ್ಟ್‌ಚೆಕ್ ಮೂಲಕ ನಾವು ಹೇಳುತ್ತಿರುವುದು ಎಎನ್‌ಐ ವೈಕೋ ಅವರು ಕಾಂಗ್ರೆಸ್ ಕುರಿತು ನೀಡಿರುವ ಹೇಳಿಕೆಯನ್ನು ಮಾತ್ರ ಪ್ರಕಟಿಸಿ, ಪ್ರಧಾನಿ ಮೋದಿ ಕುರಿತು ನೀಡಿರುವ ಹೇಳಿಕೆಯನ್ನು ಮರೆ ಮಾಚಿದೆ ಎಂಬುದಾಗಿದೆ.

ಇದನ್ನೂ ಓದಿ : Fact Check : ಬೆಂಗಳೂರಿನಲ್ಲಿ ಮುಸ್ಲಿಮರು ಬಸ್‌ ಮೇಲೆ ಕಲ್ಲು ತೂರಿದ್ದಾರೆ ಎಂಬುವುದು ಸುಳ್ಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...