Homeಫ್ಯಾಕ್ಟ್‌ಚೆಕ್Fact Check : 'ಮೋದಿ ದೇಶದ್ರೋಹಿ' ಎಂಬ ಭಾಗ ಕೈಬಿಟ್ಟು ವೈಕೋ ಹೇಳಿಕೆ ಹಂಚಿಕೊಂಡ ANI

Fact Check : ‘ಮೋದಿ ದೇಶದ್ರೋಹಿ’ ಎಂಬ ಭಾಗ ಕೈಬಿಟ್ಟು ವೈಕೋ ಹೇಳಿಕೆ ಹಂಚಿಕೊಂಡ ANI

- Advertisement -
- Advertisement -

ತಮಿಳುನಾಡಿನ ಮರು ಮಳರ್ಚಿ ದ್ರಾವಿಡ ಮುನ್ನೇತ್ರ ಕಳಗಂ (ಎಂಡಿಎಂಕೆ) ಪ್ರಧಾನ ಕಾರ್ಯದರ್ಶಿ ವೈಯಾಪುರಿ ಗೋಪಾಲಸಾಮಿ ಅಥವಾ ವೈಕೋ ಅವರು ಏಪ್ರಿಲ್ 3ರಂದು ಶ್ರೀಲಂಕಾದ ಕಚ್ಚತೀವು ದ್ವೀಪದ ಸುತ್ತ ನಡೆಯುತ್ತಿರುವ ವಿವಾದದ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ್ದರು. ಎಂಡಿಎಂಕೆ ಪಕ್ಷವು ತಮಿಳುನಾಡಿನ ಆಡಳಿತರೂಢ ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ)ಯ ಮಿತ್ರ ಪಕ್ಷವಾಗಿದೆ. ಡಿಎಂಕೆ ಇಂಡಿಯಾ ಒಕ್ಕೂಟದ ಪ್ರಮುಖ ಪಕ್ಷಗಳಲ್ಲಿ ಒಂದಾಗಿದೆ.

ವೈಕೋ ಅವರ ಹೇಳಿಕೆಯ 10 ಸೆಕೆಂಡ್‌ನ ವಿಡಿಯೋವನ್ನು ಏಪ್ರಿಲ್ 3ರಂದು ಎಎನ್‌ಐ ಸುದ್ದಿ ಸಂಸ್ಥೆ ಎಕ್ಸ್‌ನಲ್ಲಿ ಪ್ರಕಟಿಸಿತ್ತು. ವಿಡಿಯೋದಲ್ಲಿ ” ಆ ಸಮಯದಲ್ಲಿ ಕಾಂಗ್ರೆಸ್ ಪ್ರತಿ ರಂಗದಲ್ಲೂ ತಮಿಳುನಾಡಿಗೆ ದ್ರೋಹ ಬಗೆದಿತ್ತು..” ಎಂದು ವೈಕೋ ಹೇಳಿರುವುದನ್ನು ಕಾಣಬಹುದು.

ಎಎನ್‌ಐ ಎಕ್ಸ್ ಪೋಸ್ಟನ್ನು ರೀ ಟ್ವೀಟ್ ಮಾಡಿದ್ದ ಕೇಂದ್ರ ಸಚಿವ ಪಿಯೂಷ್ ಗೋಯಲ್, “ತಮಿಳುನಾಡಿನ ಜನರು ಕಡ್ಡಾಯವಾಗಿ ಇದನ್ನು ಆಲಿಸಬೇಕು” ಎಂದು ಬರೆದುಕೊಂಡಿದ್ದರು.

ಎಎನ್‌ಐ ಎಕ್ಸ್‌ ಪೋಸ್ಟ್‌ ಆಧರಿಸಿ ಹಿಂದುಸ್ತಾನ್ ಟೈಮ್ಸ್, ನ್ಯೂಸ್ 18, ಸಿಎನ್‌ಎನ್ ಮತ್ತು ನ್ಯೂಸ್ 9 ಸೇರಿದಂತೆ ಅನೇಕ ಮುಖ್ಯ ವಾಹಿನಿ ಮಾಧ್ಯಮಳು ಸುದ್ದಿ ಪ್ರಕಟಿಸಿದ್ದವು. ಎಲ್ಲಾ ಸುದ್ದಿಗಳಲ್ಲೂ ಎಎನ್‌ಐ ಹಂಚಿಕೊಂಡ ವೈಕೋ ಅವರ 10 ಸೆಕೆಂಡ್‌ನ ವಿಡಿಯೋದ ಹೇಳಿಕೆಯನ್ನು ಶೀರ್ಷಿಕೆಯಲ್ಲಿ ಹಾಕಲಾಗಿತ್ತು.

ನ್ಯೂಸ್ 18ನ ನಿರೂಪಕ ರಾಹುಲ್ ಶಿವಶಂಕರ್ ಎಕ್ಸ್‌ ಪೋಸ್ಟ್‌ ಅನ್ನು ರೀ ಟ್ವೀಟ್ ಮಾಡಿ ” ಮತ್ತೆ ಅವರು ಯಾಕೆ ಒಟ್ಟಾಗಿ ಚುನಾವಣೆ ಎದುರಿಸುತ್ತಿದ್ದಾರೆ? ಅನುಕೂಲತೆಯ ರಾಜಕೀಯಕ್ಕೆ ಮಿತಿಯಿಲ್ಲವೇ? ಎಂದು ಪ್ರಶ್ನಿಸಿದ್ದರು.

ಬಿಜೆಪಿ ರಾಷ್ಟ್ರೀಯ ವಕ್ತಾರ ಕೆ ಕೇಶವನ್ ಸೇರಿದಂತೆ ಅನೇಕ ಬಿಜೆಪಿ ನಾಯಕರು ಎಎನ್‌ಐ ವಿಡಿಯೋವನ್ನು ಹಂಚಿಕೊಂಡಿದ್ದರು.

ಫ್ಯಾಕ್ಟ್‌ಚೆಕ್ : ಇಂಡಿಯಾ ಒಕ್ಕೂಟದ ಭಾಗವಾಗಿದ್ದರೂ ವೈಕೋ ಅವರು ಕಾಂಗ್ರೆಸ್‌ ವಿರುದ್ದವೇ ಹೇಳಿಕೆ ನೀಡಿದ್ದಾರೆ ಎಂಬರ್ಥದಲ್ಲಿ ವೈರಲ್ ಆದ ವಿಡಿಯೋದ ಸತ್ಯಾಸತ್ಯತೆಯನ್ನು ನಾನುಗೌರಿ.ಕಾಂ ಪರಿಶೀಲನೆ ನಡೆಸಿದೆ.

ನಾವು ಮೂಲ ವಿಡಿಯೋ ಹುಡುಕಾಡಿದಾಗ ತಮಿಳಿನ ಸನ್‌ ನ್ಯೂಸ್ ಎಕ್ಸ್‌ ಖಾತೆಯಲ್ಲಿ ವೈಕೋ ಅವರ ಹೇಳಿಕೆಯ 37 ಸೆಕೆಂಡ್‌ನ ಸಂಪೂರ್ಣ ವಿಡಿಯೋ ಅಪ್ಲೋಡ್ ಮಾಡಿರುವುದು ಕಂಡು ಬಂದಿದೆ. ವಿಡಿಯೋದಲ್ಲಿ “ಆ ಸಮಯದಲ್ಲಿ ಕಾಂಗ್ರೆಸ್ ಪ್ರತಿ ರಂಗದಲ್ಲೂ ತಮಿಳುನಾಡಿಗೆ ದ್ರೋಹ ಬಗೆದಿತ್ತು. ಆ ನಂತರ… ಈ ಹತ್ತು ವರ್ಷಗಳು ನರೇಂದ್ರ ಮೋದಿಯವರಿಗೆ ಪರೀಕ್ಷಾ ಸಮಯವಾಗಿತ್ತು. ಆದರೆ, ಅವರು ದೇಶದ್ರೋಹಿ, ಅವರು ತಮಿಳುನಾಡಿಗೆ ದ್ರೋಹ ಮಾಡಿದರು, ಭಾರತಕ್ಕೆ ದ್ರೋಹ ಮಾಡಿದರು, ಶ್ರೀಲಂಕಾಕ್ಕೆ ದ್ರೋಹ ಮಾಡಿದರು” ಎಂದು ಹೇಳಿದ್ದಾರೆ.

ಇದರಿಂದ ನಮಗೆ ತಿಳಿದ್ದದ್ದು ಏನೆಂದರೆ, ಎಎನ್‌ಐ ಸುದ್ದಿ ಸಂಸ್ಥೆ “ಮೋದಿ ದೇಶ ದ್ರೋಹಿ, ಕಾಂಗ್ರೆಸ್ ತಮಿಳುನಾಡಿಗೆ ದ್ರೋಹವೆಸಗಿದೆ ಎಂಬ ವೈಕೋ ಹೇಳಿಕೆಯ 37 ಸೆಕೆಂಡ್‌ನ ವಿಡಿಯೋವನ್ನು ಕಟ್ ಮಾಡಿ, “ಕಾಂಗ್ರೆಸ್‌ ತಮಿಳುನಾಡಿಗೆ ದ್ರೋಹವೆಸಗಿದೆ’ ಎಂಬ 10 ಸೆಕೆಂಡ್‌ನ ವಿಡಿಯೋವನ್ನು ಮಾತ್ರ ಪೋಸ್ಟ್ ಮಾಡಿದೆ.

ಏಪ್ರಿಲ್ 3ರಂದು ಬುಧವಾರ ಡಿಎಂಕೆ ಅಭ್ಯರ್ಥಿ ತಮಿಳಚಿ ತಂಗಪಾಂಡಿಯನ್ ಪರ ಪ್ರಚಾರ ಮಾಡುವಾಗ ವೈಕೋ ಚುನಾವಣಾ ಸಭೆಯನ್ನು ಉದ್ದೇಶಿಸಿ ಮಾತನಾಡಿದ್ದರು. ತಮ್ಮ ಭಾಷಣದ ವೇಳೆಯೂ ಅವರು ಬಿಜೆಪಿಯನ್ನು ಟೀಕಿಸಿದ್ದರು, “ಹಿಂದುತ್ವ ಶಕ್ತಿಗಳನ್ನು ಸೋಲಿಸಬೇಕಾಗಿದೆ. ಇಂಡಿಯಾ ಮೈತ್ರಿಕೂಟಕ್ಕೆ ಭಾರೀ ಬೆಂಬಲ ವ್ಯಕ್ತವಾಗುತ್ತಿದೆ. ಕೇಂದ್ರದ ಬಿಜೆಪಿ ನಾಯಕ ತಮಿಳುನಾಡಿನ ದ್ರಾವಿಡ ಸರ್ಕಾರವನ್ನು ಉರುಳಿಸುವುದಾಗಿ ಘೋಷಿಸಿದ್ದರು. ಈ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸಲು ಜನರು ಪಣ ತೊಡಬೇಕು” ಎಂದಿದ್ದರು.

ಎಎನ್‌ಐ ಕಟ್ ಮಾಡಿದ್ದ ವೈಕೋ ಹೇಳಿಕೆಯ ಉಳಿದ ವಿಡಿಯೋವನ್ನು ಕಾಂಗ್ರೆಸ್ ನಾಯಕಿ ಸುಪ್ರಿಯಾ ಶ್ರೀನಾಟೆ ಏಪ್ರಿಲ್ 3ರಂದು ಹಂಚಿಕೊಂಡಿದ್ದರು. ” ಈ 10 ವರ್ಷಗಳು ನರೇಂದ್ರ ಮೋದಿಯವರಿಗೆ ಪರೀಕ್ಷಾ ಸಮಯವಾಗಿತ್ತು. ಅವರೊಬ್ಬ ದೇಶದ್ರೋಹಿ. ಅವರು ತಮಿಳುನಾಡಿಗೆ ದ್ರೋಹ ಮಾಡಿದರು. ಭಾರತಕ್ಕೆ ದ್ರೋಹ ಮಾಡಿದರು, ಶ್ರೀಲಂಕಾಕ್ಕೆ ದ್ರೋಹ ಮಾಡಿದರು : ಎಂಡಿಎಂಕೆ ಸಂಸ್ಥಾಪಕ ವೈಕೋ” ಎಂದು ಬರೆದುಕೊಂಡಿದ್ದರು.

ಕೊನೆಯದಾಗಿ, ಈ ಫ್ಯಾಕ್ಟ್‌ಚೆಕ್ ಮೂಲಕ ನಾವು ಹೇಳುತ್ತಿರುವುದು ಎಎನ್‌ಐ ವೈಕೋ ಅವರು ಕಾಂಗ್ರೆಸ್ ಕುರಿತು ನೀಡಿರುವ ಹೇಳಿಕೆಯನ್ನು ಮಾತ್ರ ಪ್ರಕಟಿಸಿ, ಪ್ರಧಾನಿ ಮೋದಿ ಕುರಿತು ನೀಡಿರುವ ಹೇಳಿಕೆಯನ್ನು ಮರೆ ಮಾಚಿದೆ ಎಂಬುದಾಗಿದೆ.

ಇದನ್ನೂ ಓದಿ : Fact Check : ಬೆಂಗಳೂರಿನಲ್ಲಿ ಮುಸ್ಲಿಮರು ಬಸ್‌ ಮೇಲೆ ಕಲ್ಲು ತೂರಿದ್ದಾರೆ ಎಂಬುವುದು ಸುಳ್ಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಸ್‌ಐಆರ್ ಅರ್ಜಿ ವಿಚಾರಣೆ : ಸುಪ್ರೀಂ ಕೋರ್ಟ್‌ನಲ್ಲಿ ಮಮತಾ ಬ್ಯಾನರ್ಜಿ ಸ್ವತಃ ವಾದ ಮಂಡನೆ

ಪಶ್ಚಿಮ ಬಂಗಾಳದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ದ ಸಲ್ಲಿಸಿರುವ ಅರ್ಜಿಯ ವಿಚಾರಣೆ ಬುಧವಾರ (ಫೆ.4) ಸುಪ್ರೀಂ ಕೋರ್ಟ್‌ನಲ್ಲಿ ನಡೆಯುತ್ತಿದ್ದು, ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸ್ವತಃ ವಾದ ಮಂಡನೆ ಮಾಡುತ್ತಿದ್ದಾರೆ....

ಆರ್‌ಕಾಮ್ ಬ್ಯಾಂಕ್ ವಂಚನೆ ತನಿಖೆ: ಇಡಿ, ಸಿಬಿಐಗೆ ಸುಪ್ರೀಂ ಕೋರ್ಟ್ ಛೀಮಾರಿ; ದೇಶ ಬಿಟ್ಟು ಹೋಗದಂತೆ ಅನಿಲ್ ಅಂಬಾನಿಗೆ ತಾಕೀತು 

ರಿಲಯನ್ಸ್ ಕಮ್ಯುನಿಕೇಷನ್ಸ್, ಅದರ ಸಮೂಹ ಕಂಪನಿಗಳು ಮತ್ತು ಕೈಗಾರಿಕೋದ್ಯಮಿ ಅನಿಲ್ ಅಂಬಾನಿ ಒಳಗೊಂಡ ಬೃಹತ್ ಪ್ರಮಾಣದ ಬ್ಯಾಂಕ್ ವಂಚನೆ ಆರೋಪಗಳ ತನಿಖೆಗಾಗಿ ವಿಶೇಷ ತನಿಖಾ ತಂಡವನ್ನು ರಚಿಸುವಂತೆ ಸುಪ್ರೀಂ ಕೋರ್ಟ್ ಬುಧವಾರ ಜಾರಿ...

ಅಸ್ಸಾಂ ಮುಖ್ಯಮಂತ್ರಿಯಿಂದ ‘100 ಪ್ರಕರಣಗಳ ಬೆದರಿಕೆ’: ‘ಇದು ಮಾನವ ಹಕ್ಕುಗಳ ರಕ್ಷಕರನ್ನು ಮೌನಗೊಳಿಸುವ ಪ್ರಯತ್ನ’ ಎಂದ ಹರ್ಷ್ ಮಂದರ್ 

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ಮಾನವ ಹಕ್ಕುಗಳ ಹೋರಾಟಗಾರ ಹರ್ಷ್ ಮಂದರ್ ಅವರ ವಿರುದ್ಧ "ಕನಿಷ್ಠ 100 ಪ್ರಕರಣಗಳು" ದಾಖಲಿಸುವುದಾಗಿ ಬೆದರಿಕೆ ಹಾಕಿದ್ದರು. ಇದಕ್ಕೆ ಪ್ರತಿಕ್ರಿಯೆ ನೀಡಿರುವ ಮಾನವ ಹಕ್ಕುಗಳ...

ಅದಾನಿ–ಲಿಯೊನಾರ್ಡೊ ಒಪ್ಪಂದ| ಹೊಸ ರೂಪದಲ್ಲಿ ಭಾರತಕ್ಕೆ ಮರಳಿದ ಕಪ್ಪುಪಟ್ಟಿಗೆ ಸೇರಿದ್ದ ಅಗಸ್ಟಾ ವೆಸ್ಟ್‌ಲ್ಯಾಂಡ್!

ಅದಾನಿ ಡಿಫೆನ್ಸ್ ಆಂಡ್ ಏರೋಸ್ಪೇಸ್ ಮತ್ತು ಇಟಲಿಯ ಲಿಯೊನಾರ್ಡೊ ಕಂಪನಿಗಳು ಮಂಗಳವಾರ (ಫೆ.3) ಕಾರ್ಯತಂತ್ರದ ಒಪ್ಪಂದವೊಂದಕ್ಕೆ ಸಹಿ ಹಾಕಿದ್ದು, ಭಾರತದ ಹೆಲಿಕಾಪ್ಟರ್ ಉತ್ಪಾದನಾ ವ್ಯವಸ್ಥೆಯನ್ನು ಬಲಪಡಿಸಲು ಮತ್ತು ಅಭಿವೃದ್ಧಿಪಡಿಸಲು ಈ ಒಪ್ಪಂದ ಮಾಡಿಕೊಳ್ಳಲಾಗಿದೆ...

ಮಧ್ಯಪ್ರದೇಶದಲ್ಲಿ ದಲಿತ ವ್ಯಕ್ತಿಯ ಮೇಲೆ ಹಲ್ಲೆ; ವೀಡಿಯೊ ವೈರಲ್ ಬಳಿಕ ಆರೋಪಿ ಬಂಧನ

ಏಳು ತಿಂಗಳ ಹಿಂದಿನ ಘಟನೆಯ ಎರಡು ವೀಡಿಯೊಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ಮಧ್ಯಪ್ರದೇಶದ ಮೊರೆನಾ ಜಿಲ್ಲೆಯಲ್ಲಿ 20 ವರ್ಷದ ದಲಿತ ವ್ಯಕ್ತಿಯ ಮೇಲೆ ಹಲ್ಲೆ ಮತ್ತು ಅವಮಾನ ಮಾಡಿದ ಆರೋಪದ...

ಮಣಿಪುರದಲ್ಲಿ ಹೊಸ ಸರ್ಕಾರ : ಮೈತೇಯಿ ಸಮುದಾಯದ ವೈ. ಖೇಮ್ಚಂದ್‌ ನೂತನ ಸಿಎಂ, ಕುಕಿ-ನಾಗಾ ಸಮುದಾಯಗಳಿಗೆ ಡಿಸಿಎಂ ಹುದ್ದೆ

ಸುಮಾರು ಒಂದು ವರ್ಷದಿಂದ ರಾಷ್ಟ್ರಪತಿ ಆಳ್ವಿಕೆಯಲ್ಲಿರುವ ಮಣಿಪುರದಲ್ಲಿ ಹೊಸ ಸರ್ಕಾರ ರಚನೆಗೆ ಬಿಜೆಪಿ ಸಿದ್ದತೆ ನಡೆಸಿದೆ. ಶಾಸಕಾಂಗ ಪಕ್ಷದ ನಾಯಕರಾಗಿ ಮಾಜಿ ಸಚಿವ ಯುಮ್ನಮ್ ಖೇಮ್ಚಂದ್ ಸಿಂಗ್ ಅವರನ್ನು ಮಂಗಳವಾರ (ಜ.3) ಆಯ್ಕೆ...

ಸುಪ್ರೀಂ ಕೋರ್ಟ್ ನಿರ್ದೇಶನದ ಹೊರತಾಗಿಯೂ ಮುಂದುವರೆದ ಬುಲ್ಡೋಝರ್ ಅ’ನ್ಯಾಯ’ : ಯುಪಿ ಸರ್ಕಾರಕ್ಕೆ ಅಲಾಹಾಬಾದ್‌ ಹೈಕೋರ್ಟ್‌ ಛೀಮಾರಿ

ಉತ್ತರ ಪ್ರದೇಶದ ಸರ್ಕಾರದ "ಬುಲ್ಡೋಝರ್ ಅನ್ಯಾಯ" ವಿರುದ್ಧ ಸುಪ್ರೀಂ ಕೋರ್ಟ್ 2024ರ ನವೆಂಬರ್‌ನಲ್ಲಿ ಕಟ್ಟುನಿಟ್ಟಾದ ತೀರ್ಪು ನೀಡಿದ್ದರೂ, ದಂಡನಾತ್ಮಕ ಕ್ರಮವಾಗಿ ಕಟ್ಟಡಗಳನ್ನು ಉರುಳಿಸುವ ಪ್ರಕ್ರಿಯೆ ಇನ್ನೂ ಮುಂದುವರಿಯುತ್ತಿರುವುದರ ಬಗ್ಗೆ ಅಲಹಾಬಾದ್ ಹೈಕೋರ್ಟ್ ತೀವ್ರ...

‘ಕಾಶ್ಮೀರಿಗಳ ವಿರುದ್ಧ ಗುಂಪು ಹಿಂಸಾಚಾರಕ್ಕೆ ರಾಜ್ಯ ಸರ್ಕಾರ ಪ್ರೋತ್ಸಾಹಿಸುತ್ತಿದೆ’: ಮೆಹಬೂಬಾ ಮುಫ್ತಿ ಆರೋಪ

ಶ್ರೀನಗರ: ಕೇಂದ್ರಾಡಳಿತ ಪ್ರದೇಶದ ಹೊರಗೆ ಕಾಶ್ಮೀರಿಗಳ ವಿರುದ್ಧ ಗುಂಪು ಹಿಂಸಾಚಾರಕ್ಕೆ ರಾಜ್ಯ ಸರ್ಕಾರಗಳು ಪ್ರೋತ್ಸಾಹ ನೀಡುತ್ತಿರುವಂತೆ ಕಾಣುತ್ತಿದೆ, ಕಾನೂನಿನ ಆಡಳಿತವನ್ನು ದ್ವೇಷವು ಬದಲಾಯಿಸಲು ಅವಕಾಶ ನೀಡುತ್ತದೆ ಎಂದು ಪಿಡಿಪಿ ಅಧ್ಯಕ್ಷೆ ಮೆಹಬೂಬಾ ಮುಫ್ತಿ...

ಭಾರತ-ಅಮೆರಿಕ ವ್ಯಾಪಾರ ಒಪ್ಪಂದ | ಒತ್ತಡಕ್ಕೆ ಮಣಿದು ಪ್ರಧಾನಿ ರಾಜಿ ಮಾಡಿಕೊಂಡಿದ್ದಾರೆ, ದೇಶವನ್ನು ಮಾರಿದ್ದಾರೆ : ರಾಹುಲ್ ಗಾಂಧಿ

ಭಾರತ-ಅಮೆರಿಕ ವ್ಯಾಪಾರ ಒಪ್ಪಂದ ಸಂಬಂಧ ಪ್ರಧಾನಿ ನರೇಂದ್ರ ಮೋದಿ ವಿರುದ್ದ ವಿಪಕ್ಷ ನಾಯಕ ರಾಹುಲ್ ಗಾಂಧಿ ಮಂಗಳವಾರ (ಫೆ.3) ತೀವ್ರ ವಾಗ್ದಾಳಿ ನಡೆಸಿದ್ದು, "ಪ್ರಧಾನಿ ರಾಜಿ ಮಾಡಿಕೊಂಡಿದ್ದಾರೆ, ದೇಶವನ್ನು ಮಾರಿದ್ದಾರೆ" ಎಂದು ಆರೋಪಿಸಿದರು. ಸಂಸತ್ತಿನ...

ಧರ್ಮಸ್ಥಳ ಪ್ರಕರಣದ ಚರ್ಚೆ ವೇಳೆ ಹಲ್ಲೆಗೆ ಯತ್ನ; ವಸಂತ್ ಗಿಳಿಯಾರ್, ಪುನೀತ್ ಕೆರೆಹಳ್ಳಿ, ಕಿರಿಕ್ ಕೀರ್ತಿ ವಿರುದ್ಧ ಎಫ್‌ಐಆರ್

2025ರ ಅಕ್ಟೋಬರ್‌ನಲ್ಲಿ ‘R.ಕನ್ನಡ’ ಸುದ್ದಿ ವಾಹಿನಿಯಲ್ಲಿ ಧರ್ಮಸ್ಥಳ ಪ್ರಕರಣ ಸಂಬಂಧ ನಡೆದಿದ್ದ ಚರ್ಚಾ ಕಾರ್ಯಕ್ರಮದ ವೇಳೆ ದಾಂಧಲೆ ನಡೆಸಿ, ಹಲ್ಲೆಗೆ ಯತ್ನಿಸಿದ್ದ ಹಿಂದುತ್ವ ಕೋಮುವಾದಿ ಕಾರ್ಯಕರ್ತ ವಸಂತ್ ಗಿಳಿಯಾರ್, ಪುನೀತ್ ಕೆರೆಹಳ್ಳಿ ಹಾಗೂ...