Homeಮುಖಪುಟಚುನಾವಣಾ ಆಯೋಗದಿಂದ ಶೋಕಾಸ್ ನೋಟಿಸ್‌; 'ನಿಮ್ಮದು ಬಿಜೆಪಿಯ ಅಧೀನ ಸಂಸ್ಥೆಯೇ..’ ಎಂದು ಕಿಡಿಕಾರಿದ ಅತಿಶಿ

ಚುನಾವಣಾ ಆಯೋಗದಿಂದ ಶೋಕಾಸ್ ನೋಟಿಸ್‌; ‘ನಿಮ್ಮದು ಬಿಜೆಪಿಯ ಅಧೀನ ಸಂಸ್ಥೆಯೇ..’ ಎಂದು ಕಿಡಿಕಾರಿದ ಅತಿಶಿ

- Advertisement -
- Advertisement -

ದೆಹಲಿ ಸಚಿವೆ, ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕಿ ಅತಿಶಿ ಅವರಿಗೆ ಚುನಾವಣಾ ಆಯೋಗವು ಶುಕ್ರವಾರ ಶೋಕಾಸ್ ನೋಟಿಸ್ ನೀಡಿದ್ದಕ್ಕೆ ಅವರು ತರಾಟೆಗೆ ತೆಗೆದುಕೊಂಡಿದ್ದಾರೆ. “ಚುನಾವಣಾ ಸಂಸ್ಥೆಯು ಭಾರತೀಯ ಜನತಾ ಪಕ್ಷದ (ಬಿಜೆಪಿ) ಅಧೀನ ಸಂಸ್ಥೆಯೇ “ಎಂದು ಪ್ರಶ್ನಿಸಿರುವ ಅವರು, “ಚುನಾವಣಾ ಆಯೋಗದ ಸೂಚನೆಯನ್ನು ನಾನು ಮೇಲ್‌ನಲ್ಲಿ ಸ್ವೀಕರಿಸುವ ಮೊದಲೇ ಬಿಜೆಪಿಯು ಮಾಧ್ಯಮಗಳಲ್ಲಿ ಪ್ರಸಾರವಾಗಿದೆ” ಎಂದು ಅವರು ಆರೋಪ ಮಾಡಿದ್ದಾರರೆ.

“ಏಪ್ರಿಲ್ 4 ರಂದು ನಡೆದ ಸುದ್ದಿಗೋಷ್ಠಿ ವಿವಾರವಾಗಿ ಏಪ್ರಿಲ್ 5 ರಂದು ಬೆಳಿಗ್ಗೆ 11:15 ಕ್ಕೆ, ಸುದ್ದಿ ವಾಹಿನಿಗಳು ಅತಿಶಿಗೆ ನೋಟಿಸ್ ಕಳುಹಿಸಲಾಗಿದೆ ಎಂದು ಸುದ್ದಿ ಮಾಡಿವೆ. ಆದರೆ, ಸುದ್ದಿಯ ಅರ್ಧ ಗಂಟೆಯ ನಂತರ ನನಗೆ ನೋಟಿಸ್ ಸಿಕ್ಕಿತು. ಇದರರ್ಥ ಬಿಜೆಪಿಯು ಮೊದಲು ಚುನಾವಣಾ ಆಯೋಗದ ಸೂಚನೆಯನ್ನು ಮಾಧ್ಯಮಗಳಲ್ಲಿ ಹಾಕುತ್ತದೆ. ಅದರ ನಂತರ, ನನಗೆ ನೋಟೀಸ್ ಬರುತ್ತದೆ… ಚುನಾವಣಾ ಆಯೋಗವು ಬಿಜೆಪಿಯ ಅಂಗಸಂಸ್ಥೆಯಾಗಿದೆಯೇ ಎಂಬುದು ನನ್ನ ಪ್ರಶ್ನೆ” ಎಂದು ಇಂದಿನ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಬಂಧಿಸಿ, ಲೋಕಸಭೆ ಚುನಾವಣೆಗೆ ಮುನ್ನ ಕಾಂಗ್ರೆಸ್‌ನ ಬ್ಯಾಂಕ್ ಖಾತೆಗಳನ್ನು ಸ್ಥಗಿತಗೊಳಿಸಿದ ನಂತರ ಚುನಾವಣಾ ಸಂಸ್ಥೆ ಕೇಂದ್ರ ಏಜೆನ್ಸಿಗಳಿಗೆ ಏಕೆ ನೋಟಿಸ್ ನೀಡಲಿಲ್ಲ ಎಂದು ಅತಿಶಿ ಪ್ರಶ್ನಿಸಿದ್ದಾರೆ.

ಪಕ್ಷಾತೀತವಾಗಿ ನಡೆದುಕೊಳ್ಳುವಂತೆ ಚುನಾವಣಾ ಆಯೋಗಕ್ಕೆ ಮನವಿ ಮಾಡಿದ ಅವರು, ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರಕ್ಕೆ ತಲೆಬಾಗಬೇಡಿ ಎಂದು ಅವರು ಹೇಳಿದರು.

ವ್ಯಕ್ತಿಯೊಬ್ಬರ ಮೂಲಕ ಬಿಜೆಪಿಯು ತನ್ನನ್ನು ತಮ್ಮ ಪಕ್ಷಕ್ಕೆ ಸೇರಲು ಸಂಪರ್ಕಿಸಿದೆ ಎಂಬ ಆಕೆಯ ಹೇಳಿಕೆಗಳನ್ನು ಅನುಸರಿಸಿ ಚುನಾವಣಾ ಆಯೋಗವು ಅತಿಶಿಗೆ ಶೋಕಾಸ್ ನೋಟಿಸ್ ನೀಡಿತು. ಅವರು ಇತರ ಮೂವರು ಎಎಪಿ ನಾಯಕರಾದ ಸೌರಭ್ ಭಾರದ್ವಾಜ್, ರಾಘವ್ ಚಡ್ಡಾ ಮತ್ತು ದುರ್ಗೇಶ್ ಪಾಠಕ್ ಅವರೊಂದಿಗೆ ಬಿಜೆಪಿಗೆ ಸೇರದಿದ್ದಲ್ಲಿ ಇಡಿಯಿಂದ ಬಂಧಿಸಲ್ಪಡುವ ಮುಂದಿನ ಸಾಲಿನಲ್ಲಿ ಇರುವುದಾಗಿ ಅವರು ಹೇಳಿದ್ದರು.

ಬಿಜೆಪಿ ದೂರು ಆಧರಿಸಿ, ಚುನಾವಣಾ ಆಯೋಗವು ನೋಟಿಸ್‌ ನೀಡಿದದ್ದು, “ನೀವು ದೆಹಲಿಯ ರಾಷ್ಟ್ರೀಯ ರಾಜಧಾನಿ ಪ್ರದೇಶದ ಸರ್ಕಾರದ ಮಂತ್ರಿ ಮತ್ತು ರಾಷ್ಟ್ರೀಯ ಪಕ್ಷದ ನಾಯಕಿ. ಮತದಾರರು ತಮ್ಮ ನಾಯಕರು ಸಾರ್ವಜನಿಕ ವೇದಿಕೆಯಿಂದ ಏನು ಹೇಳಿದರೂ ನಂಬುತ್ತಾರೆ ಮತ್ತು ಆ ಅರ್ಥದಲ್ಲಿ, ಅವರು ನೀಡಿದ ಹೇಳಿಕೆಗಳು ಪ್ರಚಾರದ ಭಾಷಣದ ಮೇಲೆ ಪರಿಣಾಮ ಬೀರುತ್ತವೆ’ ಎಂದು ಹೇಳಿದೆ.

ಇದನ್ನೂ ಓದಿ; ಎಸ್‌ಸಿ ಪಟ್ಟಿಯಿಂದ ಲಂಬಾಣಿ, ಬೋವಿ, ಕೊರಮ, ಕೊರಚರನ್ನು ಕೈಬಿಡುವಂತೆ ಮನವಿ: ಕೇಂದ್ರ, ರಾಜ್ಯ ಸರ್ಕಾರಕ್ಕೆ ನೋಟಿಸ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅತ್ಯಾಚಾರ – ಮಕ್ಕಳ ಮೇಲಿನ ಸಾಮೂಹಿಕ ಲೈಂಗಿಕ ದೌರ್ಜನ್ಯ ಪ್ರಕರಣ: ಸ್ವಯಂ ಘೋಷಿತ ದೇವಮಾನವ ಅಸಾರಾಂ ಖುಲಾಸೆ

ಸ್ವಯಂ ಘೋಷಿತ ದೇವಮಾನವ ಅಸಾರಾಂ ಬಾಪು ಅವರನ್ನು ಭಾರತೀಯ ದಂಡ ಸಂಹಿತೆ, ಪೋಕ್ಸೋ ಕಾಯ್ದೆಯಡಿಯಲ್ಲಿ ಸಾಮೂಹಿಕ ಅತ್ಯಾಚಾರ ಮತ್ತು ಮಕ್ಕಳ ಮೇಲಿನ ಸಾಮೂಹಿಕ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದ ಆರೋಪಗಳಿಂದ ಖುಲಾಸೆಗೊಳಿಸಲಾಗಿದೆ. ಮೇ 27...

ಸಿದ್ದರಾಮಯ್ಯ ಅವರ ಮನವೊಲಿಸಿದ ಕಾಂಗ್ರೆಸ್‌ ಹೈಕಮಾಂಡ್; ಮುಖ್ಯಮಂತ್ರಿ ಸ್ಥಾನಕ್ಕೆ ನಾಳೆ ರಾಜೀನಾಮೆ?

ಕರ್ನಾಟಕದ ಮುಖ್ಯಮಂತ್ರಿ ಹುದ್ದೆಯ ಸುತ್ತಲಿನ ತೀವ್ರ ರಾಜಕೀಯ ನಾಟಕವು ಅಂತಿಮವಾಗಿ ನಿರ್ಣಾಯಕ ಹಂತ ತಲುಪಿದೆ. ನವದೆಹಲಿಯಲ್ಲಿ ಕಾಂಗ್ರೆಸ್ ಹೈಕಮಾಂಡ್‌ನ ನಿರಂತರ ಒತ್ತಡ ಮತ್ತು ಮಾತುಕತೆಗಳ ನಂತರ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಲು...

“ಎಚ್.ಎಸ್. ದೊರೆಸ್ವಾಮಿ ಭೌತಿಕವಾಗಿ ಇಲ್ಲದಿದ್ದರೂ ನಮ್ಮನ್ನು ಸದಾ ಪ್ರೇರೇಪಿಸುತ್ತಾರೆ”: ತೀಸ್ತಾ ಸೆಟಲ್ವಾಡ್

ಬೆಂಗಳೂರು: "ಹಿರಿಯ ಸ್ವಾತಂತ್ರ್ಯ ಹೋರಾಟಗಾರ, ದಿ. ಎಚ್.ಎಸ್. ದೊರೆಸ್ವಾಮಿ ಅವರು ದೈಹಿಕವಾಗಿ ನಮ್ಮೊಂದಿಗಿಲ್ಲದಿದ್ದರೂ, ಅವರ ಹೋರಾಟದ ಹಾದಿ ಮತ್ತು ಆದರ್ಶಗಳು ನಮ್ಮನ್ನು ಸದಾ ಪ್ರೇರೇಪಿಸುತ್ತಲೇ ಇರುತ್ತವೆ" ಎಂದು ಪ್ರಮುಖ ಮಾನವ ಹಕ್ಕುಗಳ ಹೋರಾಟಗಾರ್ತಿ...

ಕೇರಳ | ಆದಿವಾಸಿ ಯುವಕ ಮಧು ಗುಂಪು ಹತ್ಯೆ ಪ್ರಕರಣ : 12 ಮಂದಿ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಹೈಕೋರ್ಟ್

ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ್ದ ಕೇರಳದ ಆದಿವಾಸಿ ಯುವಕ ಮಧು ಗುಂಪು ಹಲ್ಲೆ ಮತ್ತು ಹತ್ಯೆ ಪ್ರಕರಣದ 12 ಜನ ಅಪರಾಧಿಗಳಿಗೆ ಹೈಕೋರ್ಟ್ ಸೋಮವಾರ (ಮೇ.25) ಜೀವಾವಧಿ ಶಿಕ್ಷೆ ಮತ್ತು ತಲಾ 2...

“ನನ್ನ ಅನುಮತಿ ಇಲ್ಲದೆ ನನ್ನ ಮಗುವನ್ನು ಸುಡಲಾಗಿದೆ”: ಕೊಲೆಯಾದ ಕೊಯಮತ್ತೂರು ಬಾಲಕಿಯ ತಾಯಿ ಅಳಲು

ಕೊಯಮತ್ತೂರು ಬಳಿ ಲೈಂಗಿಕ ದೌರ್ಜನ್ಯಕ್ಕೊಳಗಾಗಿ ಕೊಲೆಯಾದ 10 ವರ್ಷದ ಬಾಲಕಿಯ ತಾಯಿ, ತನ್ನ ಮಗಳ ಮೃತದೇಹದ ಅಂತ್ಯಸಂಸ್ಕಾರಕ್ಕೆ ತಾನು ಅನುಮತಿ ನೀಡಿರಲಿಲ್ಲ ಎಂದು ಹೇಳಿದ್ದಾರೆ. ಮಗುವಿನ ಮರಣೋತ್ತರ ಪರೀಕ್ಷೆಯ ನಂತರ, ತನ್ನ ಪತಿ...

ಅಷ್ಟೊಂದು ‘ಸೆಂಟಿಮೆಂಟ್’ ಬೇಡ: ‘ಕಾಕ್ರೋಚ್ ಅಭಿಯಾನ’ದ ವಿರುದ್ಧದ ಅರ್ಜಿಗೆ ಸಿಜೆಐ ಪ್ರತಿಕ್ರಿಯೆ

"ವ್ಯವಸ್ಥೆಯ ಮೇಲೆ ದಾಳಿ ಮಾಡುವವರ" ಕುರಿತು ತಾವು ನೀಡಿದ್ದ ಹೇಳಿಕೆಗೆ ವ್ಯಂಗ್ಯದ ರೂಪದಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಸೃಷ್ಟಿಯಾಗಿರುವ ‘ಕಾಕ್ರೋಚ್ ಜನತಾ ಪಾರ್ಟಿ’  ವಿವಾದವನ್ನು ಅಷ್ಟೊಂದು "ಭಾವನಾತ್ಮಕವಾಗಿ ತೆಗೆದುಕೊಳ್ಳಬೇಡಿ" ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ...

ನಾಳೆ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ ‘ಕರ್ನಾಟಕದ ಗೌರವಾರ್ಪಣೆ’

ಸ್ವಾತಂತ್ರ್ಯ ಸೇನಾನಿ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ 'ಕರ್ನಾಟಕದ ಗೌರವಾರ್ಪಣೆ' ಕಾರ್ಯಕ್ರಮವನ್ನು ನಾಳೆ, ಅಂದರೆ 2026 ಮೇ 26 ರಂದು ಬೆಳಿಗ್ಗೆ 10.30ಕ್ಕೆ ಬೆಂಗಳೂರಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ. ಎಚ್.ಎಸ್‌ ದೊರೆಸ್ವಾಮಿ ಸ್ಮಾರಕ ಪ್ರತಿಷ್ಠಾನ,...

FACT CHECK : ಕಾಕ್ರೋಚ್ ಜನತಾ ಪಾರ್ಟಿಯ ಹೆಚ್ಚಿನ ಫಾಲೋವರ್ಸ್ ಪಾಕಿಸ್ತಾನದವರಾ?

ಇತ್ತೀಚೆಗೆ ಹುಟ್ಟಿಕೊಂಡ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಇನ್‌ಸ್ಟಾಗ್ರಾಮ್ ಪೇಜ್ ಕಾಂಗ್ರೆಸ್‌ನ 13 ಮಿಲಿಯನ್ ಮತ್ತು ಬಿಜೆಪಿಯ 9 ಮಿಲಿಯನ್ ಫಾಲೋವರ್ಸ್‌ಗಳ ಗಡಿಯನ್ನು ದಾಟಿದ್ದು, ಬರೋಬ್ಬರಿ 23 ಮಿಲಿಯನ್ (ಮೇ 24ರಂತೆ) ಫಾಲೋವರ್ಸ್‌...

ಬಾಂಗ್ಲಾ ಗಡಿಯಾಚೆಗೆ ತಳ್ಳಿದವರ ವಾಪಸಾತಿ: ಭಾರತೀಯರನ್ನೇ ಗಡಿಪಾರು ಮಾಡುತ್ತಿರುವ ಕೇಂದ್ರ?

ದಾಖಲೆರಹಿತ ವಲಸಿಗರೆಂದು ಆರೋಪಿಸಿ ಅಧಿಕಾರಿಗಳು ಬಾಂಗ್ಲಾದೇಶದ ಗಡಿಯಾಚೆಗೆ 'ತಳ್ಳಿದ್ದ' ಪಶ್ಚಿಮ ಬಂಗಾಳದ ನಿವಾಸಿಗಳನ್ನು ವಾಪಸ್ ಕರೆ ತರುವುದಾಗಿ ಕೇಂದ್ರ ಸರ್ಕಾರ ಶುಕ್ರವಾರ (ಮೇ 22,2026) ಸುಪ್ರೀಂ ಕೋರ್ಟ್‌ಗೆ ವಾಗ್ದಾನ ಮಾಡಿದೆ ಎಂದು ವರದಿಯಾಗಿದೆ....

SIR ಜಾರಿಯಾದ್ರೆ ಗ್ಯಾರಂಟಿಯನ್ನು ಕಳೆದುಕೊಳ್ತೀರಿ!

"ಬಡವರ ಮತಗಳನ್ನು ಪಟ್ಟಿಯಿಂದ ತೆಗೆಯಲು ಎಸ್‌ಐಆರ್ (SIR) ಮೂಲಕ ದೊಡ್ಡ ಸಂಚು ರೂಪಿಸಲಾಗಿದೆ. ನಾವೆಲ್ಲರೂ ಬಹಳ ಎಚ್ಚರಿಕೆಯಿಂದ ಇರಬೇಕು, ಇಲ್ಲದಿದ್ದರೆ ಮತ ಹಕ್ಕಿನ ಜೊತೆಗೆ ಶಕ್ತಿ, ಗೃಹಲಕ್ಷ್ಮಿಯಂತಹ ಗ್ಯಾರೆಂಟಿ ಯೋಜನೆಯನ್ನು ಕಳೆದುಕೊಳ್ಳಬೇಕಾಗುತ್ತದೆ" ಎಂದು...