Homeಮುಖಪುಟಲೋಕಸಭೆ ಚುನಾವಣೆ: ಪಂಜಾಬ್‌ನ ಎಲ್ಲಾ ಹಳ್ಳಿಗಳಲ್ಲಿ ಬಿಜೆಪಿ ವಿರುದ್ಧ ಅಭಿಯಾನ

ಲೋಕಸಭೆ ಚುನಾವಣೆ: ಪಂಜಾಬ್‌ನ ಎಲ್ಲಾ ಹಳ್ಳಿಗಳಲ್ಲಿ ಬಿಜೆಪಿ ವಿರುದ್ಧ ಅಭಿಯಾನ

- Advertisement -
- Advertisement -

ಪಂಜಾಬ್‌ನಲ್ಲಿ ಲೋಕಸಭೆ ಚುನಾವಣೆ ಹಿನ್ನೆಲೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದ ಬೆನ್ನಲ್ಲಿ, ಕಿಸಾನ್ ಮಜ್ದೂರ್ ಸಂಘರ್ಷ ಸಮಿತಿ (ಕೆಎಂಎಸ್‌ಸಿ) ಮತ್ತು ಸಂಯುಕ್ತ ಕಿಸಾನ್ ಮೋರ್ಚಾ ಪಂಜಾಬ್‌ನಾದ್ಯಂತ ಎಲ್ಲಾ ಗ್ರಾಮಗಳಲ್ಲಿ ಬಿಜೆಪಿ ಅಭ್ಯರ್ಥಿಗಳ ವಿರುದ್ಧ ಅಭಿಯಾನವನ್ನು ಆರಂಭಿಸಿದೆ.

ಪಂಜಾಬ್‌ನ 13,000 ಹಳ್ಳಿಗಳ ನಿವಾಸಿಗಳಿಗೆ ಬಿಜೆಪಿ ಅಭ್ಯರ್ಥಿಗಳು ಪ್ರಚಾರಕ್ಕೆ ಬಂದರೆ ಅವರನ್ನು ಘೇರಾವ್ ಮಾಡಿ ಪ್ರಶ್ನಿಸುವಂತೆ ಮನವಿ ಮಾಡಿದ್ದೇವೆ. ನಮ್ಮ ಮಿತ್ರ ಪಕ್ಷಗಳು ದೇಶಾದ್ಯಂತ ಬಿಜೆಪಿ ವಿರುದ್ಧ ಪ್ರಚಾರ ನಡೆಸಲಿವೆ ಎಂದು ಕಿಸಾನ್ ಮಜ್ದೂರ್ ಸಂಘರ್ಷ ಸಮಿತಿಯ ಸರ್ವಾನ್ ಸಿಂಗ್ ಪಂಧೇರ್ ಹೇಳಿದ್ದಾರೆ.

ಹಲವಾರು ರೈತ ಸಂಘಗಳ ಸದಸ್ಯರು ಅಮೃತಸರದ ಚಬ್ಬಾ ಗ್ರಾಮದಿಂದ ಬಿಜೆಪಿ ವಿರೋಧಿ ಪ್ರಚಾರವನ್ನು ಪ್ರಾರಂಭಿಸಿದರು. ಇದಕ್ಕೂ ಮುನ್ನ ಸಂಗ್ರೂರ್ ಮತ್ತು ಬಟಿಂಡಾ ಜಿಲ್ಲೆಗಳ ಹಲವು ಗ್ರಾಮಗಳಲ್ಲಿ ರೈತರು ಬಿಜೆಪಿ ನಾಯಕರಿಗೆ ಪ್ರವೇಶಕ್ಕೆ ಅನುಮತಿಯಿಲ್ಲ ಎಂದು ಪೋಸ್ಟರ್‌ಗಳನ್ನು ಅಳವಡಿಸಿದ್ದರು. ಬಿಜೆಪಿಯನ್ನು ಬಯಲಿಗೆಳೆಯಿರಿ, ಬಿಜೆಪಿಯನ್ನು ವಿರೋಧಿಸಿ ಹಾಗೂ ಬಿಜೆಪಿಯನ್ನು ಶಿಕ್ಷಿಸಿ ಎಂದು ಪೋಸ್ಟರ್ ಹಾಗೂ ಭಿತ್ತಿ ಪತ್ರಗಳನ್ನು ಕೂಡ ಹಲವು ಹಳ್ಳಿಗಳಲ್ಲಿ ಅಂಟಿಸಲಾಗಿದೆ.

ಕೆಎಂಎಸ್‌ಸಿಯ ಸರ್ವಾನ್ ಸಿಂಗ್ ಪಂಧೇರ್, ಗುರ್ಬಚನ್ ಸಿಂಗ್ ಚಬ್ಬಾ ಮತ್ತು ಗುರ್ಲಾಲ್ ಸಿಂಗ್ ಮಾನ್ ಅವರು ಈ ಅಭಿಯಾನ ಪಂಜಾಬ್‌ನಲ್ಲಿ ಮಾತ್ರವಲ್ಲ, ಬಿಜೆಪಿ ಅಭ್ಯರ್ಥಿಗಳನ್ನು ದೇಶಾದ್ಯಂತ ಹಳ್ಳಿಗಳಿಗೆ ಪ್ರವೇಶಿಸಲು ಬಿಡುವುದಿಲ್ಲ ಎಂದು ಹೇಳಿದ್ದಾರೆ.

ಖಾನೌರಿ ಗಡಿಯಲ್ಲಿ ಹರ್ಯಾಣ ಪೊಲೀಸರೊಂದಿಗೆ ನಡೆದ ಘರ್ಷಣೆಯಲ್ಲಿ ಪ್ರಾಣ ಕಳೆದುಕೊಂಡ ಶುಭಕರನ್ ಸಿಂಗ್ ಅವರ ಫೋಟೋಗಳನ್ನು ಹೊಂದಿರುವ ಬ್ಯಾನರ್‌ಗಳನ್ನು ಮುದ್ರಿಸಲಾಗಿದೆ. ರೈತರನ್ನು ಒಗ್ಗೂಡಿಸಲು ರಾಜ್ಯದಲ್ಲಿ ಬಿರುಸಿನ ಪ್ರಚಾರ ನಡೆಸಲಾಗುವುದು. ಬಿಜೆಪಿ ಅಭ್ಯರ್ಥಿಗಳಿಗೆ ಕೇಳಲು ಪ್ರಶ್ನಾವಳಿಗಳನ್ನು ಸಿದ್ಧಪಡಿಸಲಾಗುವುದು ಮತ್ತು ಕರ ಪತ್ರಗಳನ್ನು ದೊಡ್ಡ ಪ್ರಮಾಣದಲ್ಲಿ ಮುದ್ರಿಸಲಾಗುವುದು ಎಂದು ತಿಳಿಸಿದ್ದಾರೆ.

ದೇಶದಾದ್ಯಂತ ಜಿಲ್ಲಾ ಮಟ್ಟದಲ್ಲಿ ಸಭೆಗಳನ್ನು ನಡೆಸಿ ಮೋದಿ ಸರಕಾರದ ಅಸಲಿಯತ್ತನ್ನು ಬಯಲಿಗೆಳೆಯಲು ಅಭಿಯಾನಗಳನ್ನು ಹಮ್ಮಿಕೊಳ್ಳಲಾಗುವುದು ಎಂದು ರೈತ ಮುಖಂಡರು ತಿಳಿಸಿದ್ದಾರೆ.

ಗಡಿ ಸಂಘರ್ಷ ಸಮಿತಿ ಮತ್ತು ಜಮ್ಹೂರಿ ಕಿಸಾನ್ ಸಭಾದ ರೈತ ಮುಖಂಡರಾದ ರತ್ತನ್ ಸಿಂಗ್ ರಾಂಧವಾ ಮತ್ತು ಡಾ.ಸತ್ನಾಮ್ ಸಿಂಗ್ ಅಜ್ನಾಲಾ ಮಾತನಾಡಿ, ಗಡಿ ಭಾಗದ ರೈತರಿಗೆ ಸಂಬಂಧಿಸಿದ ಸಮಸ್ಯೆಗಳನ್ನು ಕೇಂದ್ರವು ಪರಿಹರಿಸಲಿಲ್ಲ. ಎಲ್ಲಾ ರೈತ ಸಂಘಗಳು ಬಿಜೆಪಿ ನಾಯಕರನ್ನು ವಿರೋಧಿಸಲು ಮತ್ತು ಹಳ್ಳಿಗಳಲ್ಲಿ ಕಪ್ಪು ಬಾವುಟ ಪ್ರದರ್ಶಿಸಲು ಕರೆ ನೀಡಿವೆ. ಇಡೀ ಕೃಷಿ ಕ್ಷೇತ್ರವನ್ನು ಕಾರ್ಪೊರೇಟ್‌ಗಳಿಗೆ ಹಸ್ತಾಂತರಿಸಲು ಬಿಜೆಪಿ ಮುಂದಾಗಿದೆ. ಪ್ರತಿಭಟನಾ ನಿರತ ರೈತರ ಮೇಲೆ ಹಲ್ಲೆ ನಡೆಸಿ ಕಂಬಿಗಳ ಹಿಂದೆ ತಳ್ಳಲಾಗುತ್ತಿದೆ. ಇದು ಪ್ರಜಾಪ್ರಭುತ್ವದ ಕಗ್ಗೊಲೆ ಎಂದು ಹೇಳಿದ್ದಾರೆ.

ಇದನ್ನು ಓದಿ: ದೆಹಲಿ ಅಬಕಾರಿ ನೀತಿ ಪ್ರಕರಣ: ಕೆ. ಕವಿತಾ ಅವರ ಸಿಬಿಐ ವಿಚಾರಣೆಗೆ ಕೋರ್ಟ್ ಅನುಮತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪೊಲೀಸ್ ತುರ್ತು ವಾಹನದ ಚಾಲಕ ಸೇರಿ ಐವರಿಂದ ಯುವತಿ ಮೇಲೆ ಅತ್ಯಾಚಾರ!

ಪೊಲೀಸ್ ತುರ್ತು ಸೇವೆ (112) ವಾಹನದ ಚಾಲಕ ಸೇರಿದಂತೆ ಐವರು ಪುರುಷರು 19 ವರ್ಷದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಛತ್ತೀಸ್‌ಗಢದ ಕೋರ್ಬಾ ಜಿಲ್ಲೆಯ ಬಂಕಿಮೊಂಗ್ರ ಪ್ರದೇಶದಲ್ಲಿ ನಡೆದಿದೆ. ಜನವರಿ...

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...