HomeUncategorizedಚಂಡೀಗಢ: ಮೇಯರ್‌ ಚುನಾವಣೆಯಲ್ಲಿ ಬಿಜೆಪಿ ಗೆಲುವಿಗೆ ಕಾರಣವಾಗಿದ್ದ ಚುನಾವಣಾಧಿಕಾರಿ ಸುಪ್ರೀಂ ಕೋರ್ಟ್‌ನಲ್ಲಿ ಬೇಷರತ್‌ ಕ್ಷಮೆಯಾಚನೆ

ಚಂಡೀಗಢ: ಮೇಯರ್‌ ಚುನಾವಣೆಯಲ್ಲಿ ಬಿಜೆಪಿ ಗೆಲುವಿಗೆ ಕಾರಣವಾಗಿದ್ದ ಚುನಾವಣಾಧಿಕಾರಿ ಸುಪ್ರೀಂ ಕೋರ್ಟ್‌ನಲ್ಲಿ ಬೇಷರತ್‌ ಕ್ಷಮೆಯಾಚನೆ

- Advertisement -
- Advertisement -

ಚಂಡೀಗಢ ಮೇಯರ್‌ ಚುನಾವಣೆಯ ಚುನಾವಣಾಧಿಕಾರಿ ಆಗಿದ್ದ ಅನಿಲ್‌ ಮಸೀಹ್‌ ಮತಪತ್ರಗಳನ್ನು ತಿರುಚಿದ್ದ ತಮ್ಮ ನಡವಳಿಕೆಗಾಗಿ ಸುಪ್ರೀಂ ಕೋರ್ಟ್‌ನಲ್ಲಿ ಬೇಷರತ್‌ ಕ್ಷಮೆಯಾಚಿಸಿದ್ದಾರೆ.

ಜನವರಿ 30ರಂದು ನಡೆದಿದ್ದ ಚಂಡೀಗಢ ಮೇಯರ್ ಚುನಾವಣೆಗೆ ಚುನಾವಣಾಧಿಕಾರಿಯಾಗಿದ್ದ ಅನಿಲ್ ಮಸಿಹ್ ಮತಪತ್ರಗಳು ಅಮಾನ್ಯವಾಗಿದೆ ಎಂದು “ಸುಳ್ಳು ಹೇಳಿಕೆ” ನೀಡಿದ್ದಕ್ಕೆ ಅವರ ವಿರುದ್ಧ ಏಕೆ ನ್ಯಾಯಾಂಗ ನಿಂದನೆ ಪ್ರಕ್ರಿಯೆಗಳನ್ನು ಪ್ರಾರಂಭಿಸಬಾರದು ಎಂದು ಸುಪ್ರೀಂಕೋರ್ಟ್‌ ಪ್ರಶ್ನಿಸಿತ್ತು. ಮಸಿಹ್ ಪರವಾಗಿ ಹಾಜರಾದ ಹಿರಿಯ ವಕೀಲ ಮುಕುಲ್ ರೋಹಟಗಿ ಅವರು ಭಾರತದ ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್ ನೇತೃತ್ವದ ತ್ರಿಸದಸ್ಯ ಪೀಠಕ್ಕೆ, “ನಾನು ಸಂಪೂರ್ಣವಾಗಿ ಬೇಷರತ್ ಕ್ಷಮೆಯಾಚಿಸಿದ್ದೇನೆ” ಎಂದು ಮಸಿಹ್‌ ತಿಳಿಸಿರುವುದಾಗಿ ಹೇಳಿದ್ದಾರೆ.

ಅವರು ಮೊದಲ ಅಫಿಡವಿಟ್‌ನ್ನು ಹಿಂತೆಗೆದುಕೊಳ್ಳುತ್ತಾರೆ ಮತ್ತು ನ್ಯಾಯಾಲಯಕ್ಕೆ ಶರಣಾಗುತ್ತಾರೆ ಎಂದು ರೋಹಟಗಿ ಹೇಳಿದರು. ಇದನ್ನು ಗಮನಿಸಿದ ನ್ಯಾಯಮೂರ್ತಿಗಳಾದ ಜೆ ಬಿ ಪರ್ದಿವಾಲಾ ಮತ್ತು ಮನೋಜ್ ಮಿಶ್ರಾ ಅವರನ್ನೊಳಗೊಂಡ ಪೀಠ, ನ್ಯಾಯಾಲಯವು ಮುಂದಿನ ಜುಲೈನಲ್ಲಿ ಈ ಬಗ್ಗೆ ವಿಚಾರಣೆ ನಡೆಸಲಿದೆ ಎಂದು ಹೇಳಿದೆ.

ಮೇಯರ್ ಚುನಾವಣೆಯ ಸಂದರ್ಭದಲ್ಲಿ ಮತಯಂತ್ರಗಳನ್ನು ವಿರೂಪಗೊಳಿಸಿದ ಆರೋಪದ ಮೇಲೆ ಫೆಬ್ರವರಿ 19ರಂದು ಸುಪ್ರೀಂ ಕೋರ್ಟ್‌ನಿಂದ ಟೀಕೆಗೆ ಗುರಿಯಾಗಿದ್ದ ಮಸಿಹ್ ಅವರು ತಮ್ಮ ಮೊದಲ ಅಫಿಡವಿಟ್‌ನಲ್ಲಿ ನ್ಯಾಯಾಲಯಕ್ಕೆ ಹಾಜರಾಗುವ ಮೊದಲು ರಾಜಕೀಯ ಪಕ್ಷಗಳಿಂದ ಟೀಕೆಗೆ ಒಳಗಾಗಿರುವುದಾಗಿ ಹೇಳಿದ್ದರು. ಇದು ಕುಟುಂಬದ ಸದಸ್ಯರನ್ನು ಅಪಾರ ಮಾನಸಿಕ ಆಘಾತಕ್ಕೆ ತಳ್ಳಿದೆ ಎಂದು ಹೇಳಿದ್ದರು. ನಾನು ಆತಂಕದಲ್ಲಿದ್ದು, ಖಿನ್ನತೆ ಎದುರಿಸುತ್ತಿದ್ದೇನೆ. ಮತಪತ್ರಗಳನ್ನು ತಿದ್ದಿದ ಆರೋಪವನ್ನು ನಿರಾಕರಿಸಿ ಈ ಹಿಂದೆ ಸಲ್ಲಿಸಿದ್ದ ಅಫಿಡವಿಟ್‌ನ್ನು ಹಿಂಪಡೆಯುವುದಾಗಿ ಮಸೀಹ್‌ ಹೇಳಿದ್ದಾರೆ.

ಬಿಜೆಪಿ ಅಭ್ಯರ್ಥಿ ಮನೋಜ ಸೋನ್ಕರ್ ಅವರನ್ನು ಮೇಯರ್ ಹುದ್ದೆಗೆ ಆಯ್ಕಯಾಗಿದ್ದಾರೆ ಎಂದು ಮಸೀಹ್ ಪ್ರಕಟಿಸಿದ್ದ ಚುನಾವಣಾ ಫಲಿತಾಂಶವನ್ನು ಫೆ.20ರಂದು ರದ್ದುಗೊಳಿಸಿದ್ದ ಸರ್ವೋಚ್ಚ ನ್ಯಾಯಾಲಯವು, ಚಂಡಿಗಡ ಮೇಯರ್ ಚುನಾವಣೆಯಲ್ಲಿ ಆಪ್ ಅಭ್ಯರ್ಥಿ ಕುಲದೀಪ್ ಕುಮಾರ್ ಗೆದ್ದಿದ್ದಾರೆ ಎಂದು ಘೋಷಿಸಿತ್ತು. ಮಸೀಹ್‌ ಅವರಿಗೆ ಶೋಕಾಸ್ ನೋಟಿಸ್ ಹೊರಡಿಸಿದ್ದ ಸಂದರ್ಭದಲ್ಲಿ ನ್ಯಾಯಾಲಯವು, ಅವರು ಆಪ್ ನ ಕುಲದೀಪ್‌ ಕುಮಾರ್‌ ಪರವಾಗಿ ಚಲಾವಣೆಯಾಗಿದ್ದ ಮತಪತ್ರಗಳನ್ನು ಉದ್ದೇಶಪೂರ್ವಕವಾಗಿ ವಿರೂಪಗೊಳಿಸಿದ್ದಾರೆ ಎಂದು ಹೇಳಿತ್ತು.

ಚಂಡೀಗಢ ಮೇಯರ್ ಚುನಾವಣೆಯಲ್ಲಿ ಬಹುಮತವಿದ್ದರೂ ‘ಇಂಡಿಯಾ’ ಬ್ಲಾಕ್‌ನ ಎಎಪಿ ಅಭ್ಯರ್ಥಿ ಪರಾಭವಗೊಂಡಿದ್ದರು. ಮೈತ್ರಿ ಅಭ್ಯರ್ಥಿ ಪರವಾಗಿ ಚಲಾವಣೆಯಾಗಿದ್ದ ಎಂಟು ಮತಗಳನ್ನು ಅಸಿಂಧು ಎಂದು ಘೋಷಿಸಲಾಗಿದ್ದು, ಚುನಾವಣಾಧಿಕಾರಿ ವಿರುದ್ಧ ‘ಟ್ಯಾಂಪರಿಂಗ್’ ಆರೋಪ ಕೇಳಿಬಂದಿತ್ತು. ಮತಪತ್ರಗಳನ್ನು ತಿದ್ದುತ್ತಿರುವ ವಿಡಿಯೋಗಳು ಜಾಲತಾಣಗಳಲ್ಲಿ ವೈರಲ್ ಆಗಿತ್ತು.

ಎಎಪಿಯ ಕುಲದೀಪ್ ಕುಮಾರ್ ಅವರ 12 ಮತಗಳಿಗೆ ಹೋಲಿಸಿದರೆ ಸೋಂಕರ್ ಅವರು 16 ಮತಗಳನ್ನು ಪಡೆದರು, ಎಂಟು ಮತಗಳು ಅಸಿಂಧು ಎಂದು ಘೋಷಿಸಲಾಗಿತ್ತು. ಈ ಫಲಿತಾಂಶದ ಘೋಷಣೆಯು ಎಎಪಿ ಮತ್ತು ಕಾಂಗ್ರೆಸ್ ಕೌನ್ಸಿಲರ್‌ಗಳಿಂದ ಪ್ರತಿಭಟನೆಗೆ ಕಾರಣವಾಗಿತ್ತು.

ಇದನ್ನು ಓದಿ: ಲೋಕಸಭೆ ಚುನಾವಣೆ: ಪಂಜಾಬ್‌ನ ಎಲ್ಲಾ ಹಳ್ಳಿಗಳಲ್ಲಿ ಬಿಜೆಪಿ ವಿರುದ್ಧ ಅಭಿಯಾನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...