Homeಮುಖಪುಟಲೋಕಸಭೆ ಚುನಾವಣೆ ಪ್ರಜಾಪ್ರಭುತ್ವದ ರಕ್ಷಣೆಗಿರುವ 'ಮಾಡು ಇಲ್ಲವೇ ಮಡಿ' ಯುದ್ಧವಾಗಿದೆ: ಸ್ಟಾಲಿನ್

ಲೋಕಸಭೆ ಚುನಾವಣೆ ಪ್ರಜಾಪ್ರಭುತ್ವದ ರಕ್ಷಣೆಗಿರುವ ‘ಮಾಡು ಇಲ್ಲವೇ ಮಡಿ’ ಯುದ್ಧವಾಗಿದೆ: ಸ್ಟಾಲಿನ್

- Advertisement -
- Advertisement -

ಲೋಕಸಭೆ ಚುನಾವಣೆಯನ್ನು ಭಾರತದ ಪ್ರಜಾಪ್ರಭುತ್ವದ ತಿರುಳನ್ನು ರಕ್ಷಿಸುವ ಮಾಡು ಇಲ್ಲವೇ ಮಡಿ ಯುದ್ಧವಾಗಿದೆ ಎಂದು ತಮಿಳುನಾಡು ಸಿಎಂ ಎಂಕೆ ಸ್ಟಾಲಿನ್ ಹೇಳಿದ್ದಾರೆ.

ಸ್ವಾತಂತ್ರ್ಯಕ್ಕಾಗಿ ಎರಡನೇ ಹೋರಾಟದ ಮಧ್ಯೆ ನಾವು ಇದ್ದಂತೆ ಭಾಸವಾಗುತ್ತಿದೆ.  ಇದು ಭಾರತದ ತಿರುಳನ್ನು ರಕ್ಷಿಸುವುದು: ಪ್ರಜಾಪ್ರಭುತ್ವ, ಜಾತ್ಯತೀತತೆ ಮತ್ತು ನಮ್ಮ ಬಹುತ್ವ ಸಮಾಜವನ್ನು ರಕ್ಷಿಸಬೇಕಿದೆ ಎಂದು ಹೇಳಿದ್ದಾರೆ.

ತಮ್ಮ ಚೆನ್ನೈ ನಿವಾಸದಲ್ಲಿ ಇಂಡಿಯನ್ ಎಕ್ಸ್‌ಪ್ರೆಸ್‌ಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಡಿಎಂಕೆ ಮುಖ್ಯಸ್ಥರು ಆಗಿರುವ ಸ್ಟಾಲಿನ್‌, ಮೋದಿ ಮತ್ತು ಬಿಜೆಪಿ ವಿರುದ್ಧ ಪ್ರತಿಪಕ್ಷಗಳು ಬಲವಾದ ತಂಡ ಹೊಂದಿವೆ. ಅಖಿಲೇಶ್ ಯಾದವ್, (ಅರವಿಂದ್) ಕೇಜ್ರಿವಾಲ್, ಉದ್ಧವ್ ಠಾಕ್ರೆ, ಮಮತಾ ಬ್ಯಾನರ್ಜಿ ಮತ್ತು ತೇಜಸ್ವಿ ಯಾದವ್ ಅವರಂತಹ ನಾಯಕರು ನಮ್ಮೊಂದಿಗೆ ಇದ್ದಾರೆ. ಈ ಹೋರಾಟದಲ್ಲಿ ನಾವು ಒಗ್ಗಟ್ಟಾಗಿದ್ದೇವೆ, ಮುಂಬರುವ ಚುನಾವಣೆಯಲ್ಲಿ ರಾಹುಲ್ ಗಾಂಧಿಯಂತಹ ಕ್ರಿಯಾಶೀಲ ಯುವ ನಾಯಕ ಮೋದಿಯ ಆ ಬೆಳೆಸಿದ ಚಿತ್ರಣವನ್ನು ಮತ್ತು ಆರೆಸ್ಸೆಸ್‌ ನಿರೂಪಣೆಯನ್ನು ಕೆಡವಲು ಸಜ್ಜಾಗಿದ್ದಾರೆ ಎಂದು ಸ್ಟಾಲಿನ್ ಹೇಳಿದರು. ಲೋಕಸಭೆ ಚುನಾವಣೆಯನ್ನು “ಭಾರತೀಯ ಪ್ರಜಾಪ್ರಭುತ್ವಕ್ಕಾಗಿ ಮಾಡು ಇಲ್ಲವೇ ಮಡಿ ಯುದ್ಧ” ಎಂದು ಬಣ್ಣಿಸಿದ್ದಾರೆ.

ಬಿಜೆಪಿಗೆ ತೆರಳಿದ ನಂತರ ಆಪ್ ನಾಯಕರ ವಿರುದ್ಧದ ಪ್ರಕರಣಗಳು ಹಿಂತೆಗೆದುಕೊಳ್ಳುವ ಕುರಿತ ವರದಿಯನ್ನು ಉಲ್ಲೇಖಿಸಿದ ಸ್ಟಾಲಿನ್, ‘ಒಂದು ದಶಕದ ಅಧಿಕಾರದ ನಂತರ, ಮೋದಿ ಸರ್ಕಾರವು ತಮ್ಮ ಸಾಧನೆಗಳನ್ನು ಪ್ರದರ್ಶಿಸುವ ಬದಲು ಹಿಂದಿನದನ್ನು ಕೆದಕುವ ಕೆಲಸದಲ್ಲಿ ನಿರತವಾಗಿದೆ,  ಪಂಡಿತ್ ನೆಹರೂ ಮತ್ತು ಇಂದಿರಾ ಗಾಂಧಿಯಂತಹ ದಿಗ್ಗಜರ ಬಳಿ ಬೆರಳು ತೋರಿಸುತ್ತಿದೆ. ಮತ್ತು ಈಗ ಅವರ ಮುಖ್ಯ ಕಾರ್ಯಸೂಚಿ ಏನು? ಮೇಲ್ನೋಟಕ್ಕೆ, ಪ್ರತಿಪಕ್ಷಗಳನ್ನು ಹಿಡಿತದಲ್ಲಿಟ್ಟುಕೊಳ್ಳುವುದಾಗಿದೆ ಎಂದು ಹೇಳಿದ್ದಾರೆ.

ಆರ್‌ಟಿಐ ಉತ್ತರದ ಆಧಾರದ ಮೇಲೆ ಇಂದಿರಾ ಗಾಂಧಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಲು ಪಕ್ಷ ಎತ್ತಿರುವ ಕಚ್ಚತೀವು ವಿಷಯವನ್ನು ಉಲ್ಲೇಖಿಸಿ ಬಿಜೆಪಿ ತನ್ನ ಉದ್ದೇಶಗಳಿಗಾಗಿ ಆರ್‌ಟಿಐನ್ನು ಬಳಸಲು ನಿರ್ಧರಿಸಿದೆ ಎಂದು ಅವರು ಹೇಳಿದರು. ಮೋದಿಯವರ ಮಾತುಗಳನ್ನು ಇನ್ನು ಮುಂದೆ ಜನರು ನಂಬಲಾರರು ಎಂಬ ಭಯದಿಂದ ಅವರು ಆರ್‌ಟಿಐಗೆ ಮೊರೆ ಹೋಗಿದ್ದಾರೆ ಎಂದು ಹೇಳಿದರು.

ಡಿಎಂಕೆ ತನ್ನ ಸಾಮಾಜಿಕ ನ್ಯಾಯದ ಸಿದ್ಧಾಂತಕ್ಕೆ ಯಾವಾಗಲೂ ಬದ್ಧವಾಗಿದೆ ಎಂದು ಪ್ರತಿಪಾದಿಸಿದ ಸ್ಟಾಲಿನ್‌, “ಎಲ್ಲರಿಗೂ ಎಲ್ಲವೂ” ಎಂಬ ತತ್ವದ ಮೇಲೆ ಬಲವಾದ ನಂಬಿಕೆಯನ್ನು ಹೊಂದಿದೆ ಎಂದು ಹೇಳಿದ್ದು, ಬಿಜೆಪಿ ಬೇರೆಯೇ ಆಟವನ್ನು ಆಡುತ್ತದೆ, ಅವರು ದ್ವೇಷವನ್ನು ಬೆಳೆಸುತ್ತಾರೆ ಮತ್ತು ಆರೆಸ್ಸೆಸ್ ಸಿದ್ಧಾಂತದಲ್ಲಿ ರಾಜಕೀಯವನ್ನು ಮಾಡುತ್ತಾರೆ. ಇಂದು ಮೋದಿಯನ್ನು ಮುಂದಾಳತ್ವವನ್ನಾಗಿ ಮಾಡಿಕೊಂಡಿದ್ದಾರೆ. ನಿನ್ನೆ ಬೇರೊಬ್ಬರಿದ್ದರು ಮತ್ತು ಅದು ನಾಳೆ ಮತ್ತೊಂದು ಮುಖವನ್ನು ಹುಡುಕುತ್ತದೆ ಎಂದು ಹೇಳಿದ್ದಾರೆ.

ಬಿಜೆಪಿಗರು ಪ್ರಜಾಪ್ರಭುತ್ವ ಮತ್ತು ಸಹಕಾರಿ ಸಂಯುಕ್ತ ವ್ಯವಸ್ಥೆಯ  ಬಗ್ಗೆ ಮಾತನಾಡಲು ಇಷ್ಟಪಡುತ್ತಾರೆ, ಆದರೆ ಅದು ನಿಜವಾಗಿಯೂ ಎಲ್ಲಿದೆ? ಪ್ರಾಯೋಗಿಕವಾಗಿ ಇದು ಅಸ್ತಿತ್ವದಲ್ಲಿಲ್ಲ ಎಂದು ಹೇಳಿದ್ದಾರೆ.

ಇದನ್ನು ಓದಿ: ಚಂಡೀಗಢ: ಮೇಯರ್‌ ಚುನಾವಣೆಯಲ್ಲಿ ಬಿಜೆಪಿ ಗೆಲುವಿಗೆ ಕಾರಣವಾಗಿದ್ದ ಚುನಾವಣಾಧಿಕಾರಿ ಸುಪ್ರೀಂ ಕೋರ್ಟ್‌ನಲ್ಲಿ ಬೇಷರತ್‌ ಕ್ಷಮೆಯಾಚನೆ

 

 

 

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಸಿಕ್‌| ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರು

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ನಿಫಾದ್ ನಗರ ಪಂಚಾಯತ್ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿಯನ್ನು ಖಂಡಿಸಿ ಮತ್ತು ಅಧಿಕಾರಿಗಳ ನಿರ್ಲಕ್ಷ್ಯವನ್ನು ಖಂಡಿಸಿದ ಪ್ರತಿಭಟನಾಕಾರರ ಗುಂಪೊಂದು ನಗರ ಪಂಚಾಯತ್ ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು...

ವಿವಾಹಿತೆ ಮೇಲೆ ಅತ್ಯಾಚಾರ ಆರೋಪ : ಬಿಜೆಪಿ ಮಾಜಿ ಶಾಸಕನ ವಿರುದ್ಧ ಎಫ್‌ಐಆರ್

ಗನ್‌ ಪಾಯಿಂಟ್‌ ಇಟ್ಟು ಬೆದರಿಸಿ 22 ವರ್ಷದ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಮಹಾರಾಷ್ಟ್ರದ ಬಿಜೆಪಿ ಮಾಜಿ ಶಾಸಕ ಮತ್ತು ವಜಾಗೊಂಡಿರುವ ಪೊಲೀಸ್ ಸಿಬ್ಬಂದಿಯೊಬ್ಬರ ವಿರುದ್ಧ ಗುರುವಾರ (ಸೆ.17)...

ಬ್ರಿಕ್ಸ್ ಶೃಂಗಸಭೆಯಲ್ಲಿ ಸಂಪೂರ್ಣ ಸಸ್ಯಹಾರಿ ಮೆನು; ಶಿವಸೇನೆ ತೀವ್ರ ವಾಗ್ದಾಳಿ

ದೆಹಲಿಯಲ್ಲಿ ನಡೆದ 18ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ವಿದೇಶಿ ಪ್ರತಿನಿಧಿಗಳಿಗೆ ಕೇವಲ ಸಸ್ಯಹಾರಿ ಆಹಾರವನ್ನು ಬಡಿಸಿರುವುದನ್ನು ಖಂಡಿಸಿರುವ ಶಿವಸೇನೆ (ಯುಬಿಟಿ) ಗುರುವಾರ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ಇದು ಅಂತರರಾಷ್ಟ್ರೀಯ ಅತಿಥಿಗಳ ಮೇಲೆ...

ದೆಹಲಿ ಎಸ್‌ಐಆರ್: ಮತದಾರರ ಪಟ್ಟಿಯಿಂದ ಹೆಸರುಗಳ ಡಿಲೀಟ್ ಪ್ರಶ್ನಿಸಿ ಅರ್ಜಿ; ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ದೆಹಲಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅಭಿಯಾನದಡಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 21ರಂದು ನಡೆಸಲು ಸುಪ್ರೀಂ ಕೋರ್ಟ್ ಗುರುವಾರ ಒಪ್ಪಿಗೆ ಸೂಚಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್...

ಕೇರಳ | ಮಿತಿಗಿಂತ ಹೆಚ್ಚು ಮದ್ಯ ಸಂಗ್ರಹ ಆರೋಪ : ರಿಪೋರ್ಟರ್ ಟಿವಿ ಎಂಡಿ ಆಂಟೋ ಆಗಸ್ಟಿನ್ ಬಂಧನ

ಕೇರಳ ಅಬಕಾರಿ ಇಲಾಖೆಯು ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ವ್ಯವಸ್ಥಾಪಕ ನಿರ್ದೇಶಕ (ಎಂಡಿ) ಆಂಟೋ ಆಗಸ್ಟಿನ್ ಅವರನ್ನು ಗುರುವಾರ (ಸೆ.17) ಮುಂಜಾನೆ ಬಂಧಿಸಿದೆ. ಎರ್ನಾಕುಲಂನಲ್ಲಿರುವ ಸುದ್ದಿ ವಾಹಿನಿಯ ಕಚೇರಿಯಿಂದ ಮುಂಜಾನೆ ಸುಮಾರು...

ದೆಹಲಿ: ಜಾಮೀನು ಸಿಕ್ಕ ಬೆನ್ನಲ್ಲೇ ಸ್ವತಂತ್ರ ಭಾರದ್ವಾಜ್ ವಿಡಿಯೋ ವೈರಲ್; ಷರತ್ತು ಉಲ್ಲಂಘನೆ ಆರೋಪ!

ಜಂತರ್ ಮಂತರ್‌ನಲ್ಲಿ ದಲಿತ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಜಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಂಧಿತರಾಗಿದ್ದ ಹಿಂದುತ್ವ ಪ್ರಭಾವಿ ಸ್ವತಂತ್ರ ಭಾರದ್ವಾಜ್ ಅವರಿಗೆ ದೆಹಲಿ ನ್ಯಾಯಾಲಯ ಮೂರು ವಾರಗಳ ಮಧ್ಯಂತರ...

ಸರ್ಕಾರದ ಹಸ್ತಕ್ಷೇಪದಿಂದ ಕ್ಯಾಂಪಸ್ ನಿರ್ಬಂಧದವರೆಗೆ: ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯದ ಕುಸಿತ ಬಯಲಿಗೆಳೆದ ಜಾಗತಿಕ ವರದಿ 

ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯವು ತೀವ್ರವಾಗಿ ನಿರ್ಬಂಧಿತವಾಗಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರದ ಹೆಚ್ಚುತ್ತಿರುವ ಹಸ್ತಕ್ಷೇಪ, ಕ್ಯಾಂಪಸ್‌ಗಳಲ್ಲಿ ಶೈಕ್ಷಣಿಕ ಮತ್ತು ರಾಜಕೀಯ ಅಭಿವ್ಯಕ್ತಿಯ ಮೇಲಿನ ನಿರ್ಬಂಧಗಳು, ವಿದ್ವಾಂಸರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕ್ರಮಗಳು...

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...