Homeಮುಖಪುಟ'ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ ಪರ ಕೆಲಸ ಮಾಡುತ್ತೇನೆ': ಬಿಜೆಪಿ ಶಾಸಕ ಎಸ್.ಟಿ.ಸೋಮಶೇಖರ್

‘ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ ಪರ ಕೆಲಸ ಮಾಡುತ್ತೇನೆ’: ಬಿಜೆಪಿ ಶಾಸಕ ಎಸ್.ಟಿ.ಸೋಮಶೇಖರ್

- Advertisement -
- Advertisement -

ಬಿಜೆಪಿ ಏನು ಬೇಕಾದರೂ ಮಾಡಿಕೊಳ್ಳಲಿ, ಲೋಕಸಭೆ ಚುನಾವಣೆಯಲ್ಲಿ ನಾನು ಕಾಂಗ್ರೆಸ್‌ ಪರ ಕೆಲಸ ಮಾಡುತ್ತೇನೆ ಎಂದು ಯಶವಂತಪುರ ಕ್ಷೇತ್ರದ ಬಿಜೆಪಿ ಶಾಸಕ ಎಸ್.ಟಿ.ಸೋಮಶೇಖರ್ ಹೇಳಿದ್ದಾರೆ.

ಕೆಂಗೇರಿಯಲ್ಲಿ ಕಾರ್ಯಕರ್ತರ ಸಭೆಯನ್ನುದ್ದೇಶಿಸಿ ಮಾತನಾಡಿದ ಎಸ್‌ಟಿ ಸೋಮಶೇಖರ್‌, ಲೋಕಸಭಾ ಚುನಾವಣೆಯಲ್ಲಿ ನನ್ನ ಕ್ಷೇತ್ರಕ್ಕೆ ಯಾರು ಸಹಾಯ ಮಾಡುತ್ತಾರೆ ಅವರನ್ನು ಬೆಂಬಲಿಸುತ್ತೇನೆ ಎಂದು ಸ್ಪಷ್ಟನೆಯನ್ನು ನೀಡಿದ್ದಾರೆ.

ಬೆಂಗಳೂರು ಉತ್ತರ ಕ್ಷೇತ್ರದ ಶೋಭಾ ಕರಂದ್ಲಾಜೆ ವಿರುದ್ಧ ಪರೋಕ್ಷವಾಗಿ ವಾಗ್ಧಾಳಿ ನಡೆಸಿದ ಸೋಮಶೇಖರ್‌, ಚಿಕ್ಕಮಗಳೂರಿನಿಂದ ‘ಗೋ ಬ್ಯಾಕ್’ ಎಂದು ಹೊರ ಹಾಕಿದವರನ್ನು ತಂದು  ಬೆಂಗಳೂರಿನಲ್ಲಿ ಚುನಾವಣೆಗೆ ನಿಲ್ಲಿಸಿದ್ದಾರೆ. ಅಂತಹವರನ್ನು ಬೆಂಗಳೂರಿನವರು ಸ್ವಾಗತ ಮಾಡಬೇಕಾ? ಲೋಕಸಭೆ ಅಭ್ಯರ್ಥಿ ಘೋಷಣೆಯಾಗಿದೆ, ನನ್ನನ್ನು ಸಂಪರ್ಕಿಸಿ ಯಾರು ಕೂಡ ನನಗೆ ಬೆಂಬಲ ಕೊಡಿ ಎಂದು ಕೇಳಿಲ್ಲ. ನನ್ನ ಕ್ಷೇತ್ರದಲ್ಲಿ ಪ್ರಚಾರ ಮಾಡಿದರೂ, ಯಾರೂ ನನ್ನನ್ನು ಸಂಪರ್ಕಿಸಿಲ್ಲ. ಇದರಿಂದಾಗಿ ನಾನು ಸಭೆ ಕರೆದಿದ್ದೇನೆ.  ಈಗ ಸುಮ್ಮನಿದ್ದರೆ ಸ್ವಾಭಿಮಾನಕ್ಕೆ ಧಕ್ಕೆಯಾಗುತ್ತದೆ ಎಂದು ಸೋಮಶೇಖರ್ ಹೇಳಿದ್ದಾರೆ.

ಬಿಜೆಪಿಯವರು ಏನೆಲ್ಲಾ ಅವಮಾನ ಮಾಡಿದ್ದಾರೆ ಎಂದು ನನಗೆ ಗೊತ್ತಿದೆ. ರಾಜ್ಯ ಮತ್ತು ಕೇಂದ್ರದ ನಾಯಕರು ಸೇರಿಕೊಂಡು ನನಗೆ ಅವಮಾನ ಮಾಡಿದ್ದಾರೆ. ಗೃಹ ಸಚಿವ ಅಮಿತ್ ಶಾ ಬಂದರೂ ನನಗೆ ಆಹ್ವಾನ ನೀಡಿಲ್ಲ. ಇದೇ ಕಾರಣಕ್ಕೆ ಇವತ್ತು ಕಾರ್ಯಕರ್ತರ ಸಭೆ ಕರೆದಿದ್ದೇನೆ. ನಮ್ಮ ಅವಶ್ಯಕತೆ ಇಲ್ಲದವರು ಬಳಿ ನಾವೇಕೆ ಹೋಗಬೇಕು? ಎಂದು ಹೇಳಿದ್ದಾರೆ.

ಇನ್ನು ಬಿಜೆಪಿಯ ಯಾರು ಬಂದು ಕೇಳಿದರೂ ನಾನು ಬೆಂಬಲ ನೀಡುವುದಿಲ್ಲ. ನನಗೆ ಯಾವ ಹೈಕಮಾಂಡ್ ಇಲ್ಲ. ನನಗೆ ನನ್ನ ಕ್ಷೇತ್ರದ ಮತದಾರು ಹೈಕಮಾಂಡ್. ಮತದಾರರ ತೀರ್ಮಾನವೇ ನನ್ನ ಅಂತಿಮ ನಿರ್ಧಾರ. ಕಾಂಗ್ರೆಸ್ ಅಭ್ಯರ್ಥಿ ಪರ ಮನೆ ಮನೆಗೆ ತೆರಳಿ ಪ್ರಚಾರ ಮಾಡುತ್ತೇನೆ ಎಂದು ಹೇಳಿದ್ದಾರೆ.

ಯಶವಂತಪುರ ಕ್ಷೇತ್ರದ ಬಿಜೆಪಿ ಶಾಸಕರಾಗಿರುವ ಎಸ್.ಟಿ.ಸೋಮಶೇಖರ್ ಅವರು, ರಾಜ್ಯಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಅಡ್ಡಮತದಾನ ಮಾಡಿ ಸುದ್ದಿಯಾಗಿದ್ದರು. ಯಾರು ನನ್ನ ಕ್ಷೇತ್ರಕ್ಕೆ ಅನುದಾನ ಕೊಡುವುದಾಗಿ ಭರವಸೆ ನೀಡಿದ್ದಾರೋ, ಅವರಿಗೆ ಮತ ಹಾಕಿದ್ದೇನೆ. ಇದುವರೆಗೆ ಪಕ್ಷ ಹೇಳಿದ ಹಾಗೆ ಕೇಳಿದ್ದೇನೆ. ಆದರೆ, ಈ ಬಾರಿ ನನ್ನ ಕ್ಷೇತ್ರದ ಅಭಿವೃದ್ದಿಗೆ ಅನುದಾನ ಕೊಡುವುದಾಗಿ ಭರವಸೆ ನೀಡಿದವರ ಪರ ಮತ ಚಲಾಯಿಸಿದ್ದೇನೆ ಎಂದು ಹೇಳಿದ್ದರು.

ಅಡ್ಡಮತದಾನದ ಹಿನ್ನೆಲೆ ಎಸ್‌ಟಿ ಸೋಮಶೇಖರ್‌ ವಿರುದ್ಧ ಕ್ರಮಕೈಗೊಳ್ಳುವುದಾಗಿ ಬಿಜೆಪಿ ನಾಯಕರು ಹೇಳಿದ್ದರು. ಈ ಬಗ್ಗೆ ಪ್ರತಿಕ್ರಿಯಿಸಿದ್ದ ಸೋಮಶೇಖರ್‌, ನನ್ನ ಹೆದರಿಸುವ ಮಗ ಇನ್ನೂ ಹುಟ್ಟಿ ಬಂದಿಲ್ಲ. ಬಿಜೆಪಿಯವರು ಏನು ಮಾಡುತ್ತಾರೋ ಮಾಡಿಕೊಳ್ಳಲಿ. ನಾನು ಯಾವುದಕ್ಕೂ ಹೆದರುವುದಿಲ್ಲ ಎಂದು ಹೇಳಿದ್ದರು.

ಇದನ್ನು ಓದಿ: ಲೋಕಸಭೆ ಚುನಾವಣೆ ಪ್ರಜಾಪ್ರಭುತ್ವದ ರಕ್ಷಣೆಗಿರುವ ‘ಮಾಡು ಇಲ್ಲವೇ ಮಡಿ’ ಯುದ್ಧವಾಗಿದೆ: ಸ್ಟಾಲಿನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್ ಸರ್ವೆಗೆ ರೈತರ ತೀವ್ರ ವಿರೋಧ: ಅಧಿಕಾರಿಗಳಿಗೆ ಪೊರಕೆ ಏಟು, ಕಾರುಗಳು ಜಖಂ

ರಾಮನಗರ: ಬಿಡದಿ ಉಪನಗರ (ಟೌನ್‌ಶಿಪ್) ಯೋಜನೆಯನ್ನು ವಿರೋಧಿಸಿ ಸ್ಥಳೀಯ ರೈತರು ನಡೆಸುತ್ತಿರುವ ಹೋರಾಟ ದಿನದಿಂದ ದಿನಕ್ಕೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದು, ಸೋಮವಾರ (ಜುಲೈ 13) ಬೆಂಗಳೂರು ದಕ್ಷಿಣ ಜಿಲ್ಲೆಯ ರಾಮನಗರ ತಾಲೂಕಿನ ಮಂಡಲಹಳ್ಳಿ...

ಮನೆಕೆಲಸದಾಕೆ ಮೇಲಿನ ದೌರ್ಜನ್ಯ ಆರೋಪ ಪ್ರಕರಣ : ಜೆಡಿಎಸ್ ಶಾಸಕ ಹೆಚ್​​​.ಡಿ. ರೇವಣ್ಣಗೆ ಸುಪ್ರೀಂ ಕೋರ್ಟ್​ ನೋಟಿಸ್​

ಮಹಿಳೆಯ ಘನತೆಗೆ ಧಕ್ಕೆ ಹಾಗೂ ಲೈಂಗಿಕ ಕಿರುಕುಳ ಆರೋಪಗಳಿಗೆ ಸಂಬಂಧಿಸಿದ ಪ್ರಕರಣದಲ್ಲಿ ಕರ್ನಾಟಕ ಹೈಕೋರ್ಟ್‌ ನೀಡಿದ್ದ ಆದೇಶ ಪ್ರಶ್ನಿಸಿ ರಾಜ್ಯ ಸರ್ಕಾರ ಸಲ್ಲಿಸಿರುವ ಮೇಲ್ಮನವಿಗೆ ಸಂಬಂಧಿಸಿದಂತೆ, ಸುಪ್ರೀಂ ಕೋರ್ಟ್‌ ಸೋಮವಾರ (ಜು.13) ಜೆಡಿಎಸ್‌...

ದಲಿತ ಯುವಕರಿಗೆ ವಿದ್ಯುತ್ ಶಾಕ್‌ ಶಿಕ್ಷೆ: ಕಳ್ಳತನ ಆರೋಪದ ಮೇಲೆ ಇಬ್ಬರಿಗೆ ಚಿತ್ರಹಿಂಸೆ

ದಲಿತ ಯುವಕರ ಮೇಲೆ ಮಧ್ಯಪ್ರದೇಶದಲ್ಲಿ ನಡೆದಿರುವ ಅಮಾನವೀಯ ಕೃತ್ಯವೊಂದರ ವಿಡಿಯೋ ಇದೀಗ ನಾಗರಿಕ ಸಮಾಜವನ್ನೇ ಆಘಾತಕ್ಕೀಡು ಮಾಡಿದೆ. ನೀರಿನ ಪಂಪ್ ಮೋಟಾರ್ ಕದ್ದಿದ್ದಾರೆ ಎಂಬ ಶಂಕೆಯ ಮೇಲೆ ಇಬ್ಬರು ದಲಿತ ಯುವಕರನ್ನು ಕಂಬಕ್ಕೆ...

ರಾಮಮಂದಿರ ಹಗರಣ: ಕೇಂದ್ರ ಸರ್ಕಾರ, ಟ್ರಸ್ಟ್, ಉತ್ತರ ಪ್ರದೇಶ ಸರ್ಕಾರಕ್ಕೆ ‘ಸುಪ್ರೀಂ’ ನೋಟಿಸ್ 

ನವದೆಹಲಿ: ವಿಶ್ವಪ್ರಸಿದ್ಧ ಅಯೋಧ್ಯೆಯ ಶ್ರೀ ರಾಮಮಂದಿರಕ್ಕೆ ಸಾರ್ವಜನಿಕ ಭಕ್ತಾದಿಗಳಿಂದ ಹರಿದುಬಂದಿರುವ ಕೋಟ್ಯಂತರ ರೂಪಾಯಿ ದೇಣಿಗೆ ನಿಧಿಯ ಕಳ್ಳತನ, ದುರುಪಯೋಗ ಮತ್ತು ಆಡಳಿತಾತ್ಮಕ ಅಕ್ರಮಗಳ ಆರೋಪ ಇದೀಗ ದೇಶಾದ್ಯಂತ ಭಾರಿ ಸಂಚಲನ ಮೂಡಿಸಿದೆ. ಈ...

ಜಮ್ಮು-ಕಾಶ್ಮೀರ: ಪ್ರತ್ಯೇಕತಾವಾದಿಗಳು, ಉಗ್ರಗಾಮಿಗಳನ್ನು ವೈಭವೀಕರಿಸಿದ ಆರೋಪ: ಮೂವರು ಪ್ರಕಾಶಕರ ಬಂಧನ

ಜಮ್ಮು/ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಪ್ರತ್ಯೇಕತಾವಾದಿ ಹಾಗೂ ಭಯೋತ್ಪಾದಕ ನಾಯಕರನ್ನು ವೈಭವೀಕರಿಸುವ ಪುಸ್ತಕಗಳನ್ನು ಪ್ರಕಟಿಸಿ, ವಿತರಿಸಿದ ಗಂಭೀರ ಆರೋಪದ ಮೇಲೆ ಪ್ರತಿ-ಗುಪ್ತಚರ ವಿಭಾಗದ (ಸಿಐಜೆಕೆ) ಪೊಲೀಸರು ಭಾನುವಾರ ಇಬ್ಬರು ಪ್ರಮುಖ ಪ್ರಕಾಶನ ಸಂಸ್ಥೆಗಳಿಗೆ...

ಕರ್ನಾಟಕ ಎಸ್‍ಐಆರ್: ಮತದಾರರ ಸೌಲಭ್ಯ ಕೇಂದ್ರಗಳ ಕೊರತೆ, ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯಕ್ಕೆ ಅಡ್ಡಿ: ವರದಿ

ಬೆಂಗಳೂರು: ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಆರಂಭವಾಗಿ ಸುಮಾರು ಎರಡು ವಾರಗಳು ಕಳೆಯುತ್ತಾ ಬಂದಿದ್ದರೂ, ಚುನಾವಣಾ ಆಯೋಗವು ಸಾರ್ವಜನಿಕರ ಅನುಕೂಲಕ್ಕಾಗಿ ರಾಜ್ಯಾದ್ಯಂತ ಅಗತ್ಯವಿರುವಷ್ಟು ಮತದಾರರ ಸೌಲಭ್ಯ ಕೇಂದ್ರಗಳನ್ನು...

27 ಮಂದಿಯನ್ನು ‘ವಿದೇಶಿಯರು’ ಎಂದಿದ್ದ ಅಸ್ಸಾಂ ನ್ಯಾಯಮಂಡಳಿಗಳ ಆದೇಶ ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಒಬ್ಬ ವ್ಯಕ್ತಿಯ ಪೌರತ್ವ ಮತ್ತು ವಿದೇಶಿಯರ ಸ್ಥಾನಮಾನವನ್ನು ನಿರ್ಧರಿಸುವಾಗ ಕೇವಲ ಯಾಂತ್ರಿಕವಾಗಿ ತೀರ್ಪು ನೀಡಲಾಗದು, ಬದಲಿಗೆ ಅತ್ಯಂತ ನ್ಯಾಯಯುತ, ಕಾನೂನುಬದ್ಧ ಹಾಗೂ ಸಮಂಜಸವಾದ ಪ್ರಕ್ರಿಯೆಯನ್ನು ಕಡ್ಡಾಯವಾಗಿ ಪಾಲಿಸಲೇಬೇಕು ಎಂದು ಸುಪ್ರೀಂ ಕೋರ್ಟ್ ಸೋಮವಾರ...

ಶಿಕ್ಷಕ ‘ಖಾನ್ ಸರ್‌’ಗೆ ಪಟ್ನಾ ಕೋರ್ಟ್‌ನಲ್ಲಿ ಜಯ: ಕೋಚಿಂಗ್ ಸೆಂಟರ್ ದಾಳಿ ಪ್ರಕರಣದಲ್ಲಿ ಮುಂಗಡ ಜಾಮೀನು ಮಂಜೂರು

ಬಿಹಾರದ ಖ್ಯಾತ ಶಿಕ್ಷಕ ಫೈಸಲ್ ಖಾನ್ (ಜನಪ್ರಿಯವಾಗಿ ಖಾನ್ ಸರ್ ಎಂದು ಕರೆಯಲ್ಪಡುವ) ಅವರಿಗೆ ಪಟ್ನಾ ನ್ಯಾಯಾಲಯವು ಸೋಮವಾರ ಮುಂಗಡ ಜಾಮೀನು ಮಂಜೂರು ಮಾಡಿದೆ. ಈ ತಿಂಗಳ ಆರಂಭದಲ್ಲಿ ಅವರ ಕೋಚಿಂಗ್ ಇನ್ಸ್ಟಿಟ್ಯೂಟ್...

ಗುಜರಾತ್‌| ದನಗಳನ್ನು ಸಾಗಿಸುತ್ತಿದ್ದ ಟ್ರಕ್ ಚಾಲಕನನ್ನು ಬೆದರಿಸಿದ ನಕಲಿ ಗೋರಕ್ಷಕರು

ಗುಜರಾತ್‌ನ ವಲ್ಸಾದ್ ಜಿಲ್ಲೆಯಲ್ಲಿ ಸ್ವಘೋಷಿತ ಗೋರಕ್ಷಕರ ಗುಂಪೊಂದು ದನಗಳನ್ನು ಸಾಗಿಸುತ್ತಿದ್ದ ಟ್ರಕ್ ಅನ್ನು ಸುಮಾರು 100 ಕಿಲೋಮೀಟರ್‌ಗಳವರೆಗೆ ಬೆನ್ನಟ್ಟಿ, ವಾಹನವನ್ನು ತಡೆದು ಗುಂಪು ಮುಸ್ಲಿಂ ಚಾಲಕನನ್ನು ನಿಂದಿಸಿ ಬೆದರಿಸಿದ್ದಾರೆ. 'ಕ್ಲಾರಿಯನ್ ಇಂಡಿಯಾ' ವರದಿ ಪ್ರಕಾರ,...

ವಿಜಯ್ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ನಲ್ಲಿ ಜಯ: ತಮಿಳುನಾಡು ಗೋಹತ್ಯೆ ನಿಷೇಧದ ಹೈಕೋರ್ಟ್ ಆದೇಶಕ್ಕೆ ತಡೆ

ತಮಿಳುನಾಡಿನಲ್ಲಿ ಹಸು ಮತ್ತು ಕರುಗಳ ಹತ್ಯೆಯನ್ನು ರಾಜ್ಯಾದ್ಯಂತ ಸಂಪೂರ್ಣವಾಗಿ ನಿಷೇಧಿಸಿ ಮದ್ರಾಸ್ ಹೈಕೋರ್ಟ್ ನೀಡಿದ್ದ ಆದೇಶಕ್ಕೆ ಸುಪ್ರೀಂ ಕೋರ್ಟ್ ಸೋಮವಾರ ತಡೆ ನೀಡಿದೆ. ಮುಖ್ಯಮಂತ್ರಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (TVK)...