Homeಫ್ಯಾಕ್ಟ್‌ಚೆಕ್Fact Check: ಹಿಂದೂ ಧರ್ಮ ಬೋಧಿಸದಂತೆ ಕಾಂಗ್ರೆಸ್ ತಡೆ ಹಿಡಿದಿದೆ ಎಂಬುವುದು ಸುಳ್ಳು

Fact Check: ಹಿಂದೂ ಧರ್ಮ ಬೋಧಿಸದಂತೆ ಕಾಂಗ್ರೆಸ್ ತಡೆ ಹಿಡಿದಿದೆ ಎಂಬುವುದು ಸುಳ್ಳು

- Advertisement -
- Advertisement -

“ಸಂವಿಧಾನದ ಮೂಲಕ ಕಾಂಗ್ರೆಸ್ ಭಾರತವನ್ನು ಮುಸ್ಲಿಂ ರಾಷ್ಟ್ರವನ್ನಾಗಿ ಮಾಡಿತ್ತು. ಆದರೆ, ಅದನ್ನು ಘೋಷಿಸಲು ಆಗಿಲ್ಲ. ಕಾಂಗ್ರೆಸ್‌ನವರು ಆರ್ಟಿಕಲ್ 25ರ ಮೂಲಕ ಮತಾಂತರವನ್ನು ಕಾನೂನು ಬದ್ದಗೊಳಿಸಿದರು. ಆರ್ಟಿಕಲ್ 28ರ ಮೂಲಕ ಹಿಂದೂಗಳು ಧಾರ್ಮಿಕ ಶಿಕ್ಷಣದಿಂದ ವಂಚಿತರಾಗುವಂತೆ ಮಾಡಿದರು. ಆರ್ಟಿಕಲ್ 28ರ ಪ್ರಕಾರ ಹಿಂದೂ ಧರ್ಮವನ್ನು ಬೋಧಿಸುವಂತಿಲ್ಲ. ಆದರೆ, ಆರ್ಟಿಕಲ್ 30ರ ಮೂಲಕ ಮುಸ್ಲಿಮರು ಮತ್ತು ಕ್ರಿಶ್ಚಿಯನ್ನರು ತಮ್ಮ ಧಾರ್ಮಿಕ ಶಿಕ್ಷಣ ಪಡೆಯಲು ಅನುಮತಿಸಲಾಗಿದೆ” ಎಂದು ಪ್ರತಿಪಾದಿಸಲಾದ ಸಂದೇಶವೊಂದು ವಾಟ್ಸಾಪ್‌ನಲ್ಲಿ ಹರಿದಾಡುತ್ತಿದೆ.

ಫ್ಯಾಕ್ಟ್‌ಚೆಕ್ : ವೈರಲ್ ವಾಟ್ಸಾಪ್ ಸಂದೇಶದಲ್ಲಿ ಹೇಳಿರುವುದು ನಿಜಾನಾ? ಎಂದು ನಾನುಗೌರಿ.ಕಾಂ ಸತ್ಯಾ ಸತ್ಯತೆ ಪರಿಶೀಲನೆ ನಡೆಸಿದೆ.

ಇದಕ್ಕಾಗಿ ನಾವು ಸಂದೇಶದಲ್ಲಿ ಹೇಳಿರುವ ಸಂವಿಧಾನ ಆರ್ಟಿಕಲ್‌ಗಳು ಏನು ಹೇಳಿವೆ ಎಂದು ಪರಿಶೀಲಿಸಿದ್ದೇವೆ.

ಸಂವಿಧಾನದ 25ನೇ ವಿಧಿಯು ಭಾರತದಲ್ಲಿ ಧಾರ್ಮಿಕ ಸ್ವಾತಂತ್ರ್ಯದ ಕುರಿತು ಹೇಳುತ್ತದೆ. ಇದು ಭಾರತದ ಎಲ್ಲಾ ವ್ಯಕ್ತಿಗಳಿಗೆ ಧಾರ್ಮಿಕ ಸ್ವಾತಂತ್ರ್ಯವನ್ನು ಖಾತರಿಪಡಿಸುತ್ತದೆ ಮತ್ತು ಭಾರತದ ಎಲ್ಲಾ ವ್ಯಕ್ತಿಗಳು ಸಾರ್ವಜನಿಕ ಸುವ್ಯವಸ್ಥೆ, ನೈತಿಕತೆ, ಆರೋಗ್ಯ ಮತ್ತು ಇತರ ನಿಬಂಧನೆಗಳಿಗೆ ಒಳಪಟ್ಟಿರುತ್ತಾರೆ ಎಂದು ಹೇಳುತ್ತದೆ. ಭಾರತದ ನಾಗರಿಕರು ಆತ್ಮಸಾಕ್ಷಿಯ ಸ್ವಾತಂತ್ರ್ಯಕ್ಕೆ ಸಮಾನವಾಗಿ ಅರ್ಹರಾಗಿರುತ್ತಾರೆ. ಧರ್ಮವನ್ನು ಮುಕ್ತವಾಗಿ ಪ್ರತಿಪಾದಿಸುವ, ಅಭ್ಯಾಸ ಮಾಡುವ ಮತ್ತು ಪ್ರಚಾರ ಮಾಡುವ ಹಕ್ಕನ್ನು ಈ ವಿಧಿ ನೀಡಿದೆ.

ಆರ್ಟಿಕಲ್ 25 ಭಾರತೀಯರಿಗೆ ಧಾರ್ಮಿಕ ಸ್ವಾತಂತ್ರ್ಯದ ಹಕ್ಕನ್ನು ನೀಡಿದೆಯೇ ಹೊರತು, ಇದು ಮತಾಂತರವನ್ನು ಕಾನೂನು ಬದ್ದಗೊಳಿಸಿದ ವಿಧಿಯಲ್ಲ. ಧಾರ್ಮಿಕ ಸ್ವಾತಂತ್ರ್ಯ ಎನ್ನುವುದು ಪ್ರತಿಯೊಬ್ಬ ಭಾರತೀಯನ ಮೂಲಭೂತ ಹಕ್ಕಾಗಿದೆ.

ಸಂವಿಧಾನದ 28ನೇ ವಿಧಿಯು ಸರ್ಕಾರದ ಅನುದಾನದಲ್ಲಿ ನಿರ್ವಹಿಸಲ್ಪಡುವ ಯಾವುದೇ ಶಿಕ್ಷಣ ಸಂಸ್ಥೆಗಳಲ್ಲಿ ಧಾರ್ಮಿಕ ಸೂಚನೆಗಳನ್ನು ನೀಡಲಾಗುವುದಿಲ್ಲ. ಇದು ಸರ್ಕಾರದಿಂದ ಧನಸಹಾಯ ಪಡೆದ ಸಾರ್ವಜನಿಕ ಶಿಕ್ಷಣ ಸಂಸ್ಥೆಗಳು ಜಾತ್ಯತೀತವಾಗಿ ಉಳಿಯುತ್ತದೆ ಮತ್ತು ಧಾರ್ಮಿಕ ಬೋಧನೆಗಳನ್ನು ನೀಡುವುದಿಲ್ಲ ಎಂದು ಖಚಿತಪಡಿಸುತ್ತದೆ.

ಇನ್ನು ಸರ್ಕಾರದ ಅನುದಾನದಲ್ಲಿ ನಿರ್ವಹಿಸಲ್ಪಡೆ ಖಾಸಗಿ ಶಿಕ್ಷಣ ಸಂಸ್ಥೆಗಳಲ್ಲಿ ಧಾರ್ಮಿಕ ಶಿಕ್ಷಣವನ್ನು ಅನುಮತಿಸಲಾಗಿದೆ. ಆದರೆ, ಇಲ್ಲಿ ವಿದ್ಯಾರ್ಥಿಗಳು ಅಪ್ರಾಪ್ತರಾಗದ್ದರೆ ಅವರ ಪೋಷಕರ ಒಪ್ಪಿಗೆ ಅಗತ್ಯವಿದೆ. ಈ ಸಂಸ್ಥೆಗಳಿಗೆ ಹಾಜರಾಗುವ ವಿದ್ಯಾರ್ಥಿಗಳು ಧಾರ್ಮಿಕ ಬೋಧನೆಯನ್ನು ಸ್ವೀಕರಿಸಬೇಕೆ ಅಥವಾ ಬೇಡವೇ ಎಂಬುದನ್ನು ಆಯ್ಕೆ ಮಾಡುವ ಹಕ್ಕನ್ನು ಹೊಂದಿರುತ್ತಾರೆ.
ರಾಜ್ಯದ ನಿಧಿಯಿಂದ ಸಂಪೂರ್ಣವಾಗಿ ನಿರ್ವಹಿಸಲ್ಪಡದ ಶಿಕ್ಷಣ ಸಂಸ್ಥೆಗಳಲ್ಲಿ, ನಿರ್ದಿಷ್ಟ ಧರ್ಮಕ್ಕೆ ಸೇರಿದ ವಿದ್ಯಾರ್ಥಿಗಳು ಸಂಸ್ಥೆಯು ನಡೆಸುವ ಧಾರ್ಮಿಕ ಪೂಜೆ ಅಥವಾ ಧಾರ್ಮಿಕ ಸೂಚನೆಗೆ ಹಾಜರಾಗುವ ಹಕ್ಕನ್ನು ಹೊಂದಿರುತ್ತಾರೆ.

ಸಂವಿಧಾನದ 30ನೇ ವಿಧಿಯು ಅಲ್ಪಸಂಖ್ಯಾತರಿಗೆ ತಮ್ಮ ಆಯ್ಕೆಯ ಶಿಕ್ಷಣ ಸಂಸ್ಥೆಗಳನ್ನು ಸ್ಥಾಪಿಸಲು ಮತ್ತು ನಿರ್ವಹಿಸುವ ಹಕ್ಕನ್ನು ನೀಡುತ್ತದೆ. ಈ ಹಕ್ಕನ್ನು ಧರ್ಮ ಅಥವಾ ಭಾಷೆಯ ಆಧಾರದ ಮೇಲೆ ಅಲ್ಪಸಂಖ್ಯಾತರಿಗೆ ನೀಡಲಾಗಿದೆ ಮತ್ತು ಅವರ ಸಾಂಸ್ಕೃತಿಕ ಮತ್ತು ಶೈಕ್ಷಣಿಕ ಹಿತಾಸಕ್ತಿಗಳನ್ನು ರಕ್ಷಿಸಲು ಉದ್ದೇಶಿಸಲಾಗಿದೆ. ಈ ಶಿಕ್ಷಣ ಸಂಸ್ಥೆಗಳಿಗೆ ನೆರವು ನೀಡುವಲ್ಲಿ ರಾಜ್ಯವು ಯಾವುದೇ ಶಿಕ್ಷಣ ಸಂಸ್ಥೆಯನ್ನು ಧರ್ಮ ಅಥವಾ ಭಾಷೆಯ ಆಧಾರದ ಮೇಲೆ ಅಲ್ಪಸಂಖ್ಯಾತರ ನಿರ್ವಹಣೆಗೆ ಒಳಪಟ್ಟಿದೆ ಎಂಬ ಕಾರಣಕ್ಕೆ ತಾರತಮ್ಯ ಮಾಡಬಾರದು. ಎಂದು ತಿಳಿಸುತ್ತದೆ.

ಅಲ್ಪ ಸಂಖ್ಯಾತರಿಗೆ ಅವರ ಆಯ್ಕೆಯ ಶಿಕ್ಷಣ ಸಂಸ್ಥೆಗಳನ್ನು ಸ್ಥಾಪಿಸಲು ಅವಕಾಶ ನೀಡಿರುವುದು, ಅಲ್ಪ ಸಂಖ್ಯಾತರ ಶೈಕ್ಷಣಿಕೆ, ಸಾಮಾಜಿಕ ಅಭಿವೃದ್ದಿಗಾಗಿ ಆಗಿದೆ. ಅಲ್ಲದೆ, ಅಲ್ಪ ಸಂಖ್ಯಾತರ ಧಾರ್ಮಿಕ ಶಿಕ್ಷಣವನ್ನು ಹರಡಲು ಅಲ್ಲ. ಇಲ್ಲಿ ಅಲ್ಪ ಸಂಖ್ಯಾತರು ಎಂದರೆ ಕೇವಲ ಮುಸ್ಲಿಮರು ಎಂಬುವುದು ತಪ್ಪು ಕ್ರೈಸ್ತರು, ಬೌದ್ಧರು, ಜೈನರು ಮತ್ತು ಪಾರ್ಸಿಗಳು ಕೂಡ ಅಲ್ಪ ಸಂಖ್ಯಾತರಾಗಿದ್ದಾರೆ.

ಹಾಗಾಗಿ, ಆರ್ಟಿಕಲ್ 25, 28, 30ರ ಮೂಲಕ ಕಾಂಗ್ರೆಸ್ ಮತಾಂತರವನ್ನು ಕಾನೂನು ಬದ್ದಗೊಳಿಸಿದೆ. ಹಿಂದೂಗಳನ್ನು ಧಾರ್ಮಿಕ ಶಿಕ್ಷಣದಿಂದ ವಂಚಿತರಾಗುವಂತೆ ಮಾಡಿದೆ. ಹಿಂದೂ ಧರ್ಮದ ಬಗ್ಗೆ ಭೋದಿಸುವಂತಿಲ್ಲ ಎಂಬುದು ಸುಳ್ಳು ಪ್ರತಿಪಾದನೆಯಾಗಿದೆ.

ನಾವು ಮೇಲೆ ಉಲ್ಲೇಖಿಸಿದ ಪುರಾವೆಗಳನ್ನು ಹೊರತುಪಡಿಸಿ ನೋಡುವುದಾದರೆ, ವಾಟ್ಸಾಪ್‌ನಲ್ಲಿ ಹರಿದಾಡುತ್ತಿರುವ ಸಂದೇಶ ಒಂದು ರೀತಿ ಬಾಲಿಶತನದಿಂದ ಕೂಡಿದೆ ಎಂದು ಹೇಳಬಹುದು. ಯಾಕೆಂದರೆ, ಪ್ರತಿಯೊಬ್ಬ ಭಾರತೀಯ ಪ್ರಜೆಗೂ ಇಲ್ಲಿರುವ ಪ್ರಸ್ತುತ ಕಾನೂನುಗಳ ಬಗ್ಗೆ ಸಾಮಾನ್ಯ ಅರಿವಿದೆ. ಇಲ್ಲಾ ಅಂದರೆ, ಸುಮ್ಮನೆ ಗೂಗಲ್ ಮೂಲಕ ಸರ್ಚ್ ಮಾಡಿದರೆ ಮೇಲೆ ಉಲ್ಲೇಖಿಸಿದ ಆರ್ಟಿಕಲ್‌ಗಳ ಬಗ್ಗೆ ಎಷ್ಟು ಮಾಹಿತಿ ಬೇಕಾದರು ಹಲವು ಮೂಲಗಳಲ್ಲಿ ಲಭ್ಯವಿದೆ.

ಹಿಂದೂಗಳು ಧರ್ಮ ಬೋಧಿಸುವಂತಿಲ್ಲ ಎಂಬುವುದು ಸುಳ್ಳು ಪ್ರತಿಪಾದನೆಯಾಗಿದೆ. ಭಾರತದ ಪ್ರತಿಯೊಬ್ಬ ಪ್ರಜೆಯೂ ಸಂವಿಧಾನ ಅಡಿ ಧಾರ್ಮಿಕ ಸ್ವಾತಂತ್ರ್ಯದ ಮೂಲಭೂತ ಹಕ್ಕನ್ನು ಹೊಂದಿರುತ್ತಾರೆ. ದೇಶದಲ್ಲಿ ಪ್ರಸ್ತುತ ಹಿಂದೂ ಧಾರ್ಮಿಕ ಆಚರಣೆಗಳು ಯಾವುದೇ ಅಡೆತಡೆ ಇಲ್ಲದೆ ನಡೆಯುತ್ತಿದೆ.

ಇದನ್ನೂ ಓದಿ : Fact Check : ‘ಮೋದಿ ದೇಶದ್ರೋಹಿ’ ಎಂಬ ಭಾಗ ಕೈಬಿಟ್ಟು ವೈಕೋ ಹೇಳಿಕೆ ಹಂಚಿಕೊಂಡ ANI

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...