Homeಮುಖಪುಟಕೇರಳ: ವಲಸೆ ಕಾರ್ಮಿಕನನ್ನು ಥಳಿಸಿ ಹತ್ಯೆ

ಕೇರಳ: ವಲಸೆ ಕಾರ್ಮಿಕನನ್ನು ಥಳಿಸಿ ಹತ್ಯೆ

- Advertisement -
- Advertisement -

ಕೇರಳದ ಎರ್ನಾಕುಲಂ ಜಿಲ್ಲೆಯಲ್ಲಿ ಅಮಾನವೀಯ ಘಟನೆಯೊಂದು ನಡೆದಿದ್ದು, ಅರುಣಾಚಲ ಪ್ರದೇಶದ ವಲಸೆ ಕಾರ್ಮಿಕನೋರ್ವನನ್ನು ಥಳಿಸಿ ಹತ್ಯೆ ಮಾಡಲಾಗಿದೆ.

ಜಿಲ್ಲೆಯ ಮುವಾಟ್ಟುಪುಳ ಬಳಿಯ ವಳಕೋಮ್‌ನಲ್ಲಿರುವ ರೆಸ್ಟೋರೆಂಟ್‌ನಲ್ಲಿ ಕೆಲಸ ಮಾಡುತ್ತಿದ್ದ ಅಶೋಕದಾಸ್ (24) ಗುರುವಾರ ಸಂಜೆ ಮಹಿಳಾ ಸಹೋದ್ಯೋಗಿಯನ್ನು ಭೇಟಿ ಮಾಡಲು ಹೋದಾಗ ತಂಡವೊಂದು ಅಮಾನುಷವಾಗಿ ಹಲ್ಲೆ ನಡೆಸಿದೆ. ಗಂಭೀರ ಗಾಯಗೊಂಡ ಅವರು ಮರುದಿನ ಸಾವನ್ನಪ್ಪಿದರು. ಘಟನೆಗೆ ಸಂಬಂಧಿಸಿದಂತೆ 10 ಮಂದಿಯನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ.

ಪೊಲೀಸರ ಪ್ರಕಾರ, ಅಡುಗೆ ಕೆಲಸ ಮಾಡುತ್ತಿದ್ದ ವಲಸೆ ಕಾರ್ಮಿಕ ಗುರುವಾರ ಸಂಜೆ ತನ್ನ ಸಹೋದ್ಯೋಗಿಯ ಬಾಡಿಗೆ ಕೋಣೆಗೆ ಹೋಗಿದ್ದ. ಅಲ್ಲಿಂದ ಅವರು ಹಿಂತಿರುಗುತ್ತಿದ್ದಾಗ, ಗುಂಪೊಂದು ಅಶೋಕದಾಸ್ ಅವರನ್ನು ಅಡ್ಡಗಟ್ಟಿ ಪ್ರಶ್ನಿಸಲು ಪ್ರಾರಂಭಿಸಿದೆ. ಈ ವೇಳೆ ಅಶೋಕ್‌ದಾಸ್‌ ತಪ್ಪಿಸಿಕೊಳ್ಳಲು ಪ್ರಯತ್ನಿಸಿದರು, ಆದರೆ ಗುಂಪು ಅಶೋಕದಾಸ್ ಅವರನ್ನು ರಸ್ತೆಬದಿಯಲ್ಲಿ ಕಂಬಕ್ಕೆ ಕಟ್ಟಿಹಾಕಿ ಅಮಾನುಷವಾಗಿ ಹಲ್ಲೆ ನಡೆಸಿದೆ.

ಪೊಲೀಸರು ಸ್ಥಳಕ್ಕಾಗಮಿಸಿದಾಗ ಅಶೋಕದಾಸ್ ತೀವ್ರ ರಕ್ತಸ್ರಾವವಾಗಿ ಬಿದ್ದಿರುವುದು ಕಂಡು ಬಂದಿದೆ. ಆತನ ಎದೆ ಮತ್ತು ತಲೆಗೆ ಗಾಯಗಳಾಗಿತ್ತು, ಅವರು ಅವರನ್ನು ಹತ್ತಿರದ ಆಸ್ಪತ್ರೆಗೆ ಮತ್ತು ನಂತರ ಕೊಟ್ಟಾಯಂನ ಸರ್ಕಾರಿ ವೈದ್ಯಕೀಯ ಕಾಲೇಜಿಗೆ ದಾಖಲಿಸಿದ್ದರು, ಅಲ್ಲಿ ಅವರು ಶುಕ್ರವಾರ ನಿಧನರಾಗಿದ್ದರು.

ದಾಳಿಗೆ ಕಾರಣವೇನು ಎಂಬುದನ್ನು ಪತ್ತೆ ಹಚ್ಚಲು ಪ್ರಯತ್ನಿಸುತ್ತಿದ್ದೇವೆ ಎಂದು ಪೊಲೀಸರು ತಿಳಿಸಿದ್ದಾರೆ. ಅಶೋಕದಾಸ್ ಭೇಟಿಯಾಗಲು ಹೋಗಿದ್ದ ಮಹಿಳೆ ಆತನ ವಿರುದ್ಧ ಯಾವುದೇ ದೂರು ನೀಡಿಲ್ಲ ಎನ್ನುವುದು ತಿಳಿದು ಬಂದಿದೆ.

ಹತ್ಯೆಗೆ ಸಂಬಂಧಿಸಿದಂತೆ 10 ಮಂದಿಯನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ. ಬಂಧಿತರನ್ನು ವೈಕ್ಕಂ ಮೂಲದ ವಿಜೀಶ್, ಸತ್ಯನ್, ಅನೀಶ್, ಸೂರಜ್, ಕೇಶವ್, ಇಲಿಯಾಸ್ ಕೆ ಪಾಲ್, ಅಮಲ್, ಅತುಲ್ ಕೃಷ್ಣ, ಸನಲ್ ಮತ್ತು ಎಮಿಲ್ ಎಂದು ಗುರುತಿಸಲಾಗಿದೆ. ಆರೋಪಿಗಳ ವಿರುದ್ಧ ಮೊದಲು ಭಾರತೀಯ ದಂಡ ಸಂಹಿತೆಯ ಸೆಕ್ಷನ್ 174ರ ಅಡಿಯಲ್ಲಿ ಪ್ರಕರಣವನ್ನು ದಾಖಲಿಸಲಾಗಿತ್ತು. ಪ್ರಾಥಮಿಕ ತನಿಖೆಯ ಬಳಿಕ ಪ್ರಕರಣದಲ್ಲಿ ಹೆಚ್ಚುವರಿ ಸೆಕ್ಷನ್‌ಗಳನ್ನು ಸೇರಿಸಲಾಗಿದೆ, IPC ಸೆಕ್ಷನ್ 302ರಡಿ ಪ್ರಕರಣ ದಾಖಲಿಸಲಾಗಿದೆ ಎಂದು ಹೇಳಿದ್ದಾರೆ.

ಇದನ್ನು ಓದಿ: ‘ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ ಪರ ಕೆಲಸ ಮಾಡುತ್ತೇನೆ’: ಬಿಜೆಪಿ ಶಾಸಕ ಎಸ್.ಟಿ.ಸೋಮಶೇಖರ್

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...