Homeಮುಖಪುಟಮೋದಿ ದೇಶ ಮತ್ತು ಪ್ರಜಾಪ್ರಭುತ್ವವನ್ನು ನಾಶಪಡಿಸುತ್ತಿದ್ದಾರೆ: ಜೈಪುರದಲ್ಲಿ ಸೋನಿಯಾ ಗಾಂಧಿ ವಾಗ್ಧಾಳಿ

ಮೋದಿ ದೇಶ ಮತ್ತು ಪ್ರಜಾಪ್ರಭುತ್ವವನ್ನು ನಾಶಪಡಿಸುತ್ತಿದ್ದಾರೆ: ಜೈಪುರದಲ್ಲಿ ಸೋನಿಯಾ ಗಾಂಧಿ ವಾಗ್ಧಾಳಿ

- Advertisement -
- Advertisement -

ಲೋಕಸಭೆ ಚುನಾವಣೆ ಹಿನ್ನೆಲೆ ನಿನ್ನೆ ಕಾಂಗ್ರೆಸ್‌ ಪಕ್ಷವು ಪ್ರಣಾಳಿಕೆಯನ್ನು ಬಿಡುಗಡೆ ಮಾಡಿತ್ತು. ಇದರ ಬೆನ್ನಲ್ಲಿ ಕಾಂಗ್ರೆಸ್‌ ನಾಯಕಿ ಸೋನಿಯಾ ಗಾಂಧಿ ಬಿಜೆಪಿ ವಿರುದ್ಧ ವಾಗ್ಧಾಳಿಯನ್ನು ನಡೆಸಿದ್ದು, ‘ದೇಶದ ಪ್ರಜಾಪ್ರಭುತ್ವ ಅಪಾಯದಲ್ಲಿದೆ, ಸಂವಿಧಾನವನ್ನು ಬದಲಾಯಿಸಲು ಪಿತೂರಿ ನಡೆಸಲಾಗುತ್ತಿದೆ’ ಎಂದು ಹೇಳಿದ್ದಾರೆ.

ಜೈಪುರದಲ್ಲಿ ನಡೆದ ರ್ಯಾಲಿಯಲ್ಲಿ ಮಾತನಾಡಿದ ಸೋನಿಯಾ ಗಾಂಧಿ, “ಮೋದಿ ಜಿ ದೇಶ ಮತ್ತು ಪ್ರಜಾಪ್ರಭುತ್ವವನ್ನು ನಾಶಪಡಿಸುತ್ತಿದ್ದಾರೆ’. ವಿಪಕ್ಷ ನಾಯಕರನ್ನು ಬೆದರಿಸಲು ನಾನಾ ತಂತ್ರಗಳನ್ನು ಹೆಣೆಯಲಾಗುತ್ತಿದ್ದು, ಬಿಜೆಪಿಗೆ ಸೇರುವಂತೆ ಒತ್ತಾಯಿಸಲಾಗುತ್ತಿದೆ. ಎಲ್ಲೆಡೆ ಅನ್ಯಾಯದ ಕತ್ತಲೆ ಇದೆ, ಎಲ್ಲಾ ಮತದಾರರು ನ್ಯಾಯಕ್ಕಾಗಿ ಬಿಜೆಪಿ ವಿರುದ್ಧ ಹೋರಾಡಬೇಕು ಎಂದು ಹೇಳಿದರು.

ಕಳೆದ 10 ವರ್ಷಗಳಲ್ಲಿ, ನಿರುದ್ಯೋಗ, ಹಣದುಬ್ಬರ, ಅಸಮಾನತೆ, ದೌರ್ಜನ್ಯಗಳನ್ನು ತಡೆಯಲು ಸರ್ಕಾರವು ಯಾವುದೇ ಮಹತ್ವದ ಹೆಜ್ಜೆಯನ್ನು ಇಟ್ಟಿಲ್ಲ ಎಂದು ರಾಜ್ಯಸಭಾ ಸಂಸದರು ಕೂಡ ಆಗಿರುವ ಸೋನಿಯಾ ಗಾಂಧಿ ಅವರು ಹೇಳಿದ್ದಾರೆ. ನಮ್ಮ ದೇಶದ ಸಂವಿಧಾನ ಬದಲಾವಣೆಗೆ ಷಡ್ಯಂತ್ರವನ್ನು ಮಾಡಲಾಗುತ್ತಿದೆ. ಸರಕಾರಿ ಸಂಸ್ಥೆಗಳನ್ನು ದುರುಪಯೋಗ ಪಡಿಸಲಾಗುತ್ತಿದೆ ಎಂದ ಸೋನಿಯಾ ಗಾಂಧಿ,  ನಿರುದ್ಯೋಗ, ಹಣದುಬ್ಬರ, ಅಸಮಾನತೆ ಕುರಿತು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ರ್ಯಾಲಿಯಲ್ಲಿ ವಿರೋಧ ಪಕ್ಷದ ನಾಯಕರಾದ ಅಶೋಕ್ ಗೆಹ್ಲೋಟ್, ಸಚಿನ್ ಪೈಲಟ್ ಕೂಡ ಮಾತನಾಡಿದ್ದಾರೆ,

ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಮಾತನಾಡಿ,  ನಿರುದ್ಯೋಗ, ಪರೀಕ್ಷಾ ಪ್ರಶ್ನೆ ಪತ್ರಿಕೆ ಸೋರಿಕೆ, ಚುನಾವಣೆ ಸಮಯದಲ್ಲಿ ಗ್ಯಾಸ್ ಬೆಲೆ ಇಳಿಕೆ ಬಗ್ಗೆ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು. ರೈತರು ರಸ್ತೆಗಿಳಿದು ಪ್ರತಿಭಟನೆ ನಡೆಸುತ್ತಿದ್ದು, ಪ್ರತಿ ಐಟಂಗೆ ಜಿಎಸ್‌ಟಿ ಸೇರಿಸಲಾಗಿದೆ ಎಂದು ಪ್ರಿಯಾಂಕಾ ಹೇಳಿದರು.

2024ರ ಲೋಕಸಭೆ ಚುನಾವಣೆಯಲ್ಲಿ ಹಾಕಲಿರುವ ಮತಗಳು ದೇಶದ ಪ್ರಜಾಪ್ರಭುತ್ವವನ್ನು ಉಳಿಸಲಿವೆ. ನಮ್ಮ ಪ್ರಜಾಪ್ರಭುತ್ವ ಹೇಗೆ ಅಪಾಯದಲ್ಲಿದೆ ಎಂದು ನೀವು ಆಶ್ಚರ್ಯ ಪಡಬೇಕು. ಪ್ರಜಾಪ್ರಭುತ್ವವನ್ನು ಬಲಪಡಿಸಲು ರೂಪುಗೊಂಡ ದೊಡ್ಡ ಸಂಸ್ಥೆಗಳು ದುರ್ಬಲಗೊಳ್ಳುತ್ತಿವೆ, ಅವುಗಳು ದುರುಪಯೋಗವಾಗುತ್ತಿವೆ. ಇಂದು ಎಂತಹಾ ಪರಿಸ್ಥಿತಿ ಇದೆ ಎಂದರೆ, ಇವಿಎಂ ಮೇಲೆ ಜನರಿಗೆ ನಂಬಿಕೆಯಿಲ್ಲದ ಪರಿಸ್ಥಿತಿ ಇದೆ ಎಂದು ಪ್ರಿಯಾಂಕ ಗಾಂಧಿ ಹೇಳಿದ್ದಾರೆ.

ನಿನ್ನೆ ಬಿಡುಗಡೆಯಾದ ಕಾಂಗ್ರೆಸ್ ‘ನ್ಯಾಯ ಪತ್ರ’ ಪ್ರಣಾಳಿಕೆಯ ಬಗ್ಗೆ ಮಾತನಾಡಿದ ಪ್ರಿಯಾಂಕಾ ಗಾಂಧಿ, ಪ್ರಣಾಳಿಕೆಯು ಚುನಾವಣೆಯ ನಂತರ ಅವರು ಮರೆತುಬಿಡುವ ಘೋಷಣೆಗಳ ಪಟ್ಟಿಯಲ್ಲ,  ಇದು ನ್ಯಾಯವನ್ನು ಬಯಸುವ ರಾಷ್ಟ್ರದ ಧ್ವನಿಯಾಗಿದೆ ಎಂದು ಹೇಳಿದರು. ಇಂದು ನಿರುದ್ಯೋಗ ಉತ್ತುಂಗದಲ್ಲಿದೆ, ನಿರುದ್ಯೋಗ ನಿವಾರಣೆಗೆ ಬಿಜೆಪಿ ಮತ್ತು ಮೋದಿ ಸರ್ಕಾರ ಏನು ಮಾಡಿದೆ? ಭರವಸೆಗಳನ್ನು ನೀಡಿತು ಆದರೆ ಈಡೇರಿಸಲಿಲ್ಲ. ಜನರ ಭರವಸೆಯನ್ನು ಮುರಿದು ಅಗ್ನಿವೀರ್ ಯೋಜನೆ ತಂದರು. ಪ್ರತಿ ರಾಜ್ಯದಲ್ಲೂ ರೈತರು ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿದ್ದಾರೆ ಆದರೆ, ಪ್ರಧಾನಿ ಮೋದಿ ಅವರ ಮಾತನ್ನು ಕೇಳಲು ಸಿದ್ಧರಿಲ್ಲ ಎಂದು ಹೇಳಿದ್ದಾರೆ.

ಇದನ್ನು ಓದಿ: ಕೇರಳ: ವಲಸೆ ಕಾರ್ಮಿಕನನ್ನು ಥಳಿಸಿ ಹತ್ಯೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...

ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ : ಮೊದಲ ಬೀದಿ ಹೋರಾಟಕ್ಕೆ ಸಜ್ಜಾದ ಕಾಕ್ರೋಚ್ ಜನತಾ ಪಾರ್ಟಿ

ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಅಲೆಯನ್ನು ಸೃಷ್ಟಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ತನ್ನ ಮೊದಲ ಬೀದಿ ಹೋರಾಟಕ್ಕೆ ಸಜ್ಜಾಗಿದೆ. ಜೂನ್ 6, 2026ರಂದು ನವದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆ ಆಯೋಜಿಸಿದ್ದು, ಇದರ...