Homeಕರ್ನಾಟಕಕೇಂದ್ರದಿಂದ ಕರ್ನಾಟಕಕ್ಕೆ ಅನ್ಯಾಯ: ಬಹಿರಂಗ ಚರ್ಚೆ ಆಹ್ವಾನದ ಬಗ್ಗೆ ಕೇಳಿದ್ದಕ್ಕೆ ಉಡಾಫೆಯಿಂದ ಉತ್ತರಿಸಿದ ನಿರ್ಮಲಾ ಸೀತಾರಾಮನ್

ಕೇಂದ್ರದಿಂದ ಕರ್ನಾಟಕಕ್ಕೆ ಅನ್ಯಾಯ: ಬಹಿರಂಗ ಚರ್ಚೆ ಆಹ್ವಾನದ ಬಗ್ಗೆ ಕೇಳಿದ್ದಕ್ಕೆ ಉಡಾಫೆಯಿಂದ ಉತ್ತರಿಸಿದ ನಿರ್ಮಲಾ ಸೀತಾರಾಮನ್

- Advertisement -
- Advertisement -

ಕರ್ನಾಟಕ ರಾಜ್ಯಕ್ಕೆ ಕೇಂದ್ರ ಸರ್ಕಾರ ಪರಿಹಾರಗಳಲ್ಲಿ ಬಿಡುಗಡೆ ಮಾಡದೆ ವಿಳಂಬ ಮಾಡಿದೆ ಎಂದು ರಾಜ್ಯ ಸರಕಾರ ಆರೋಪಿಸಿತ್ತು, ಇದಲ್ಲದೆ ಪರಿಹಾರ ಬಿಡುಗಡೆಗೆ ನಿರ್ದೇಶನ ಕೋರಿ ಸಿದ್ದರಾಮಯ್ಯ ಸರಕಾರ ಸುಪ್ರೀಂಕೋರ್ಟ್‌ ಮೊರೆ ಹೋಗಿತ್ತು. ಈ ಮಧ್ಯೆ ಮಾರ್ಚ್‌ 24ರಂದು ಬೆಂಗಳೂರಿನಲ್ಲಿ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ್ದ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು, ಕರ್ನಾಟಕಕ್ಕೆ ನೀಡಬೇಕಿದ್ದ ಒಂದೊಂದು ಪೈಸೆಯನ್ನೂ ನಾವು ಸರಿಯಾದ ಸಮಯಕ್ಕೆ ನೀಡಿದ್ದೇವೆ ಎಂದು ಹೇಳಿಕೆಯನ್ನು ನೀಡಿದ್ದರು.

ತೆರಿಗೆ ಹಂಚಿಕೆ ಅನುದಾನದಲ್ಲಿ ಅನ್ಯಾಯದ ಬಗ್ಗೆ ಕರ್ನಾಟದಿಂದ ರಾಜ್ಯಸಭೆಗೆ ಆಯ್ಕೆಯಾಗಿರುವ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಬಹಿರಂಗ ಚರ್ಚೆಗೆ ಅವರು ಸಿದ್ದರಿದ್ದೀರಾ ಎಂದು  ಸಚಿವ ಕೃಷ್ಣಬೈರೇಗೌಡ ಅವರು ಪ್ರಶ್ನಿಸಿದ್ದರು. ಇದರ ಬೆನ್ನಲ್ಲಿ ಜಾಗೃತ ಕರ್ನಾಟಕ ಸಂಘಟನೆ ಮುಖಾಮುಖಿ ಬಹಿರಂಗ ಚರ್ಚೆಗೆ ವೇದಿಕೆ ಸಿದ್ದ ಮಾಡಿತ್ತು. ಆದರೆ ಅವರು ಚರ್ಚೆಗೆ ಹಾಜರಾಗದೆ ಗೈರಾಗಿದ್ದರು.

ಈ ಮಧ್ಯೆ ಕೇಂದ್ರದಿಂದ ಕರ್ನಾಟಕಕ್ಕೆ ಅನ್ಯಾಯದ ಬಗ್ಗೆ ಪತ್ರಿಕಾಗೋಷ್ಠಿಯಲ್ಲಿ ಬಹಿರಂಗ ಚರ್ಚೆಯ ಆಹ್ವಾನದ ಬಗ್ಗೆ ಕೇಳಿದ್ದಕ್ಕೆ ಸಚಿವೆ ನಿರ್ಮಲಾ ಸೀತಾರಾಮನ್ ಉಡಾಫೆಯಿಂದ ಉತ್ತರಿಸಿದ್ದಾರೆ. ಈ ಕುರಿತ ವಿಡಿಯೋ ವೈರಲ್‌ ಆಗಿದೆ. ಸಚಿವರ ಬಳಿ ಪತ್ರಿಗೋಷ್ಟಿಯಲ್ಲಿ ತೆರಿಗೆ ಹಂಚಿಕೆ ಅನುದಾನದ ಬಗ್ಗೆ ಚರ್ಚೆಗೆ ಬಹಿರಂಗ ಆಹ್ವಾನ ಬಂದಿತ್ತು ಅದನ್ನು ಯಾಕೆ ಸ್ವೀಕಾರ ಮಾಡಬಾರದು ಎಂದು ಪ್ರಶ್ನಿಸಿದ್ದಾರೆ. ಇದಲ್ಲದೆ ಇನ್ನೋರ್ವ ಪತ್ರಕರ್ತರು, ಚರ್ಚೆಗೆ ಆಹ್ವಾನ ಬಂದಿದೆ, ಕರ್ನಾಟಕ ಸರಕಾರ ಮತ್ತು ಇಬ್ಬರು ಒಂದೇ ವೇದಿಕೆಯಲ್ಲಿ ಕುಳಿತು ಇದಕ್ಕೆ ಸ್ಪಷ್ಟನೆ ನೀಡಬಹುದಲ್ಲ ಎಂದು ಕೇಳಿದ್ದಾರೆ. ಈಗ ಎಲ್ಲರೂ ಹಣಕಾಸಿನ ವಿಚಾರಕ್ಕೆ ನನ್ನಲ್ಲಿ ಪ್ರಶ್ನೆ ಕೇಳುತ್ತಿದ್ದಾರೆ. ಮೊದಲು ಕೇಳಿ ಎಂದು ಉಡಾಫೆಯಿಂದ ಉತ್ತರಿಸಿದ್ದಾರೆ.

 

ಚರ್ಚೆಗೆ ವೇದಿಕೆ ಸಿದ್ದಪಡಿಸಿದ್ದ ಜಾಗೃತ ಕರ್ನಾಟಕ ಸಂಘಟನೆ 

ತೆರಿಗೆ ಹಂಚಿಕೆ ಅನುದಾನದಲ್ಲಿ ಅನ್ಯಾಯದ ಬಗ್ಗೆ ಮುಖಾಮುಖಿ ಚರ್ಚೆಗೆ ಜಾಗೃತ ಕರ್ನಾಟಕ ಸಂಘಟನೆ ಬೆಂಗಳೂರಿನ ಗಾಂಧಿ ಭವನದಲ್ಲಿ ಸಿದ್ದಪಡಿಸಿದ್ದ ವೇದಿಕೆಯಲ್ಲಿ ಶನಿವಾರ ಸಂಜೆ 5.30ಕ್ಕೆ ಸರಿಯಾಗಿ ಕಾರ್ಯಕ್ರಮ ಆರಂಭವಾಗಿತು. ನಿರ್ಮಲಾ ಸೀತಾರಾಮನ್ ಅವರಿಗೆ ಒಂದು ಕುರ್ಚಿಯನ್ನು, ಕೃಷ್ಣ ಬೈರೇಗೌಡರಿಗೆ ಒಂದು ಕುರ್ಚಿಯನ್ನು ಕಾಯ್ದಿರಿಸಲಾಗಿತ್ತು. ನಿರ್ಮಲಾ ಸೀತಾರಾಮನ್ ಚರ್ಚೆಗೆ ಹಾಜರಾಗದೆ ಗೈರಾಗಿದ್ದರು. ಸಭೆಯಲ್ಲಿ ಪಿಪಿಟಿ ಪ್ರೆಸೆಂಟೇಷನ್ ಮೂಲಕ ರಾಜ್ಯಕ್ಕಾದ ತೆರಿಗೆ ವಂಚನೆ ಬಗ್ಗೆ ಸಚಿವ ಕೃಷ್ಣ ಬೈರೇಗೌಡ ಅವರು ವಿವರಣೆ ನೀಡಿದ್ದರು. ಆರ್ಥಿಕ ವಿಶ್ಲೇಷಕರಾದ ಪ್ರೊ.ಟಿ.ಆರ್‌.ಚಂದ್ರಶೇಖರ್‌, ರೈತಸಂಘದ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ, ಬರಹಗಾರ ನಾಗೇಗೌಡ ಕೀಲಾರ, ಹೈಕೋರ್ಟ್ ವಕೀಲರಾದ ರಾಜಲಕ್ಷ್ಮಿ ಅಂಕಲಗಿ, ಜಾಗೃತ ಕರ್ನಾಟಕ ಸಂಘಟನೆಯ ಸೀತಾ, ಕನ್ನಡಪರ ಹೋರಾಟಗಾರ ಶಿವಾನಂದ ಗುಂಡಣ್ಣ ಸಂವಾದದಲ್ಲಿ ಪಾಲ್ಗೊಂಡಿದ್ದರು.

ಇದನ್ನು ಓದಿ: ಎನ್‌ಐಎ ಅಧಿಕಾರಿಗಳು ಮಧ್ಯರಾತ್ರಿ ಮನೆಗೆ ನುಗ್ಗಿ ಮಹಿಳೆಯರಿಗೆ ಹಿಂಸಿಸಿದ್ದಾರೆ: ಮಮತಾ ಬ್ಯಾನರ್ಜಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...