Homeಮುಖಪುಟಚೆನ್ನೈನಲ್ಲಿ 4 ಕೋಟಿ ರೂ.ನಗದು ಸಾಗಿಸುವಾಗ ಸಿಕ್ಕಿಬಿದ್ದ ಬಿಜೆಪಿ ಕಾರ್ಯಕರ್ತರು

ಚೆನ್ನೈನಲ್ಲಿ 4 ಕೋಟಿ ರೂ.ನಗದು ಸಾಗಿಸುವಾಗ ಸಿಕ್ಕಿಬಿದ್ದ ಬಿಜೆಪಿ ಕಾರ್ಯಕರ್ತರು

- Advertisement -
- Advertisement -

ಚೆನ್ನೈನ ತಾಂಬರಂ ರೈಲು ನಿಲ್ದಾಣದಲ್ಲಿ 4 ಕೋಟಿ ರೂ.ನಗದು ಸಾಗಾಟ ಮಾಡುವಾಗ ಬಿಜೆಪಿ ಕಾರ್ಯಕರ್ತರು ಪೊಲೀಸರಿಗೆ ಸಿಕ್ಕಿಬಿದ್ದಿರುವ ಘಟನೆ ನಡೆದಿದೆ.

ಆರೋಪಿಗಳನ್ನು ಬಿಜೆಪಿ ಸದಸ್ಯ ಹಾಗೂ ಅಗರಂ ಮೂಲದ ಎಸ್ ಸತೀಶ್ (33), ಆತನ ಸಹೋದರ ಎಸ್ ನವೀನ್ (31), ತೂತುಕುಡಿಯ ಎಸ್ ಪೆರುಮಾಳ್ (26) ಎಂದು ಗುರುತಿಸಲಾಗಿದೆ. ಎರಡನೇ ದರ್ಜೆಯ ಎಸಿ ಕೋಚ್‌ನಲ್ಲಿ ಶೋಧ ನಡೆಸಿದಾಗ ಅವರು ಸಾಗಿಸುತ್ತಿದ್ದ ಬ್ಯಾಗ್‌ಗಳಲ್ಲಿ 500ರ ನೋಟುಗಳ ಕಂತೆ ಪತ್ತೆಯಾಗಿತ್ತು. ಇವರು ಆರು ಬ್ಯಾಗ್‌ಗಳಲ್ಲಿ 4 ಕೋಟಿ ರೂ.ಹಣವನ್ನು ಸಾಗಿಸುತ್ತಿದ್ದರು ಎನ್ನಲಾಗಿದೆ. ಮೂವರು ರೈಲಿನಲ್ಲಿ ತಿರುನಲ್ವೇಲಿಗೆ ತೆರಳುತ್ತಿದ್ದಾಗ ಫ್ಲೈಯಿಂಗ್ ಸ್ಕ್ವಾಡ್ ಅವರನ್ನು ವಶಕ್ಕೆ ಪಡೆದಿದೆ. ಈ ವಿಷಯದ ಕುರಿತು ಹೆಚ್ಚಿನ ತನಿಖೆ ನಡೆಯುತ್ತಿದೆ.

ಈ ಕುರಿತು ಮಾಹಿತಿಯನ್ನು ಸ್ವೀಕರಿಸಿದ ನಂತರ, ಪೊಲೀಸರು ಮತ್ತು ತಾಂಬರಂನಲ್ಲಿ ಬೀಡುಬಿಟ್ಟಿದ್ದ ಫ್ಲೈಯಿಂಗ್ ಸ್ಕ್ವಾಡ್ ನಿನ್ನೆ ರಾತ್ರಿ 9 ಗಂಟೆ ಸುಮಾರಿಗೆ ಚೆನ್ನೈನ ತಾಂಬರಂ ರೈಲು ನಿಲ್ದಾಣಕ್ಕೆ ತೆರಳಿದ್ದರು.  ನಂತರ ಪೊಲೀಸರು ಮೂವರೂ ಶಂಕಿತರನ್ನು ಬಂಧಿಸಿ ಆದಾಯ ತೆರಿಗೆ ಇಲಾಖೆಗೆ ಮಾಹಿತಿ ನೀಡಿದ್ದಾರೆ. ವರದಿಗಳ ಪ್ರಕಾರ, ಐಟಿ ತಂಡಗಳು ಆರೋಪಿಗಳನ್ನು ಭಾನುವಾರ ಅಥವಾ ಸೋಮವಾರ ವಿಚಾರಣೆ ನಡೆಸಲಿವೆ.

ಇದರ ಜೊತೆಗೆ ಪೊಲೀಸರು ಕಿಲ್ಪಾಕ್, ಟ್ರಿಪ್ಲಿಕೇನ್ ಮತ್ತು ಸಾಲಿಗ್ರಾಮಮ್ ಮತ್ತು ತಿರುನಲ್ವೇಲಿ ಬಿಜೆಪಿ ಅಭ್ಯರ್ಥಿ ನೈನಾರ್ ನಾಗೇಂದ್ರನ್ ಅವರಿಗೆ ಸಂಬಂಧಿಸಿದ ಸ್ಥಳಗಳಲ್ಲಿ ಶೋಧ ಕಾರ್ಯಾಚರಣೆಯನ್ನು ನಡೆಸಿದ್ದಾರೆ.

ಬಿಜೆಪಿ ಅಭ್ಯರ್ಥಿಯ ಸೂಚನೆ ಮೇರೆಗೆ ನಗದು ವರ್ಗಾವಣೆ ಮಾಡಿದ್ದಾರೆ ಎಂದು ತನಿಖೆಯ ವೇಳೆ ಆರೋಪಿಗಳು ಹೇಳಿದ್ದಾರೆ ಎನ್ನಲಾಗಿದೆ. ತಿರುನಲ್ವೇಲಿ ಲೋಕಸಭಾ ಕ್ಷೇತ್ರದಲ್ಲಿ ಹಣವನ್ನು ವಿತರಿಸಲು ಇವರು ಸಾಗಾಟ ಮಾಡುತ್ತಿದ್ದರಾ ಎಂಬ ಬಗ್ಗೆ ತನಿಖೆ ನಡೆಯುತ್ತಿದೆ.

39 ಲೋಕಸಭಾ ಸ್ಥಾನಗಳನ್ನು ಹೊಂದಿರುವ ತಮಿಳುನಾಡಿನಲ್ಲಿ ಲೋಕಸಭೆ ಚುನಾವಣೆಯ ಹಿನ್ನೆಲೆ ಏಪ್ರಿಲ್ 19ರಂದು ಒಂದೇ ಹಂತದಲ್ಲಿ ಮತದಾನ ನಡೆಯಲಿದೆ. ಜೂನ್ 4ರಂದು ಮತ ಎಣಿಕೆ ನಡೆಯಲಿದೆ.

ಇದನ್ನು ಓದಿ: ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ಸಂಪತ್ತಿನ ಮರು ಹಂಚಿಕೆಗೆ ಸಮೀಕ್ಷೆ ನಡೆಸುತ್ತೇವೆ: ರಾಹುಲ್ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇರಳ | ಆದಿವಾಸಿ ಯುವಕ ಮಧು ಗುಂಪು ಹತ್ಯೆ ಪ್ರಕರಣ : 12 ಮಂದಿ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಹೈಕೋರ್ಟ್

ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ್ದ ಕೇರಳದ ಆದಿವಾಸಿ ಯುವಕ ಮಧು ಗುಂಪು ಹಲ್ಲೆ ಮತ್ತು ಹತ್ಯೆ ಪ್ರಕರಣದ 12 ಜನ ಅಪರಾಧಿಗಳಿಗೆ ಹೈಕೋರ್ಟ್ ಸೋಮವಾರ (ಮೇ.25) ಜೀವಾವಧಿ ಶಿಕ್ಷೆ ಮತ್ತು ತಲಾ 2...

“ನನ್ನ ಅನುಮತಿ ಇಲ್ಲದೆ ನನ್ನ ಮಗುವನ್ನು ಸುಡಲಾಗಿದೆ”: ಕೊಲೆಯಾದ ಕೊಯಮತ್ತೂರು ಬಾಲಕಿಯ ತಾಯಿ ಅಳಲು

ಕೊಯಮತ್ತೂರು ಬಳಿ ಲೈಂಗಿಕ ದೌರ್ಜನ್ಯಕ್ಕೊಳಗಾಗಿ ಕೊಲೆಯಾದ 10 ವರ್ಷದ ಬಾಲಕಿಯ ತಾಯಿ, ತನ್ನ ಮಗಳ ಮೃತದೇಹದ ಅಂತ್ಯಸಂಸ್ಕಾರಕ್ಕೆ ತಾನು ಅನುಮತಿ ನೀಡಿರಲಿಲ್ಲ ಎಂದು ಹೇಳಿದ್ದಾರೆ. ಮಗುವಿನ ಮರಣೋತ್ತರ ಪರೀಕ್ಷೆಯ ನಂತರ, ತನ್ನ ಪತಿ...

ಅಷ್ಟೊಂದು ‘ಸೆಂಟಿಮೆಂಟ್’ ಬೇಡ: ‘ಕಾಕ್ರೋಚ್ ಅಭಿಯಾನ’ದ ವಿರುದ್ಧದ ಅರ್ಜಿಗೆ ಸಿಜೆಐ ಪ್ರತಿಕ್ರಿಯೆ

"ವ್ಯವಸ್ಥೆಯ ಮೇಲೆ ದಾಳಿ ಮಾಡುವವರ" ಕುರಿತು ತಾವು ನೀಡಿದ್ದ ಹೇಳಿಕೆಗೆ ವ್ಯಂಗ್ಯದ ರೂಪದಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಸೃಷ್ಟಿಯಾಗಿರುವ ‘ಕಾಕ್ರೋಚ್ ಜನತಾ ಪಾರ್ಟಿ’  ವಿವಾದವನ್ನು ಅಷ್ಟೊಂದು "ಭಾವನಾತ್ಮಕವಾಗಿ ತೆಗೆದುಕೊಳ್ಳಬೇಡಿ" ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ...

ನಾಳೆ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ ‘ಕರ್ನಾಟಕದ ಗೌರವಾರ್ಪಣೆ’

ಸ್ವಾತಂತ್ರ್ಯ ಸೇನಾನಿ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ 'ಕರ್ನಾಟಕದ ಗೌರವಾರ್ಪಣೆ' ಕಾರ್ಯಕ್ರಮವನ್ನು ನಾಳೆ, ಅಂದರೆ 2026 ಮೇ 26 ರಂದು ಬೆಳಿಗ್ಗೆ 10.30ಕ್ಕೆ ಬೆಂಗಳೂರಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ. ಎಚ್.ಎಸ್‌ ದೊರೆಸ್ವಾಮಿ ಸ್ಮಾರಕ ಪ್ರತಿಷ್ಠಾನ,...

FACT CHECK : ಕಾಕ್ರೋಚ್ ಜನತಾ ಪಾರ್ಟಿಯ ಹೆಚ್ಚಿನ ಫಾಲೋವರ್ಸ್ ಪಾಕಿಸ್ತಾನದವರಾ?

ಇತ್ತೀಚೆಗೆ ಹುಟ್ಟಿಕೊಂಡ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಇನ್‌ಸ್ಟಾಗ್ರಾಮ್ ಪೇಜ್ ಕಾಂಗ್ರೆಸ್‌ನ 13 ಮಿಲಿಯನ್ ಮತ್ತು ಬಿಜೆಪಿಯ 9 ಮಿಲಿಯನ್ ಫಾಲೋವರ್ಸ್‌ಗಳ ಗಡಿಯನ್ನು ದಾಟಿದ್ದು, ಬರೋಬ್ಬರಿ 23 ಮಿಲಿಯನ್ (ಮೇ 24ರಂತೆ) ಫಾಲೋವರ್ಸ್‌...

ಬಾಂಗ್ಲಾ ಗಡಿಯಾಚೆಗೆ ತಳ್ಳಿದವರ ವಾಪಸಾತಿ: ಭಾರತೀಯರನ್ನೇ ಗಡಿಪಾರು ಮಾಡುತ್ತಿರುವ ಕೇಂದ್ರ?

ದಾಖಲೆರಹಿತ ವಲಸಿಗರೆಂದು ಆರೋಪಿಸಿ ಅಧಿಕಾರಿಗಳು ಬಾಂಗ್ಲಾದೇಶದ ಗಡಿಯಾಚೆಗೆ 'ತಳ್ಳಿದ್ದ' ಪಶ್ಚಿಮ ಬಂಗಾಳದ ನಿವಾಸಿಗಳನ್ನು ವಾಪಸ್ ಕರೆ ತರುವುದಾಗಿ ಕೇಂದ್ರ ಸರ್ಕಾರ ಶುಕ್ರವಾರ (ಮೇ 22,2026) ಸುಪ್ರೀಂ ಕೋರ್ಟ್‌ಗೆ ವಾಗ್ದಾನ ಮಾಡಿದೆ ಎಂದು ವರದಿಯಾಗಿದೆ....

SIR ಜಾರಿಯಾದ್ರೆ ಗ್ಯಾರಂಟಿಯನ್ನು ಕಳೆದುಕೊಳ್ತೀರಿ!

"ಬಡವರ ಮತಗಳನ್ನು ಪಟ್ಟಿಯಿಂದ ತೆಗೆಯಲು ಎಸ್‌ಐಆರ್ (SIR) ಮೂಲಕ ದೊಡ್ಡ ಸಂಚು ರೂಪಿಸಲಾಗಿದೆ. ನಾವೆಲ್ಲರೂ ಬಹಳ ಎಚ್ಚರಿಕೆಯಿಂದ ಇರಬೇಕು, ಇಲ್ಲದಿದ್ದರೆ ಮತ ಹಕ್ಕಿನ ಜೊತೆಗೆ ಶಕ್ತಿ, ಗೃಹಲಕ್ಷ್ಮಿಯಂತಹ ಗ್ಯಾರೆಂಟಿ ಯೋಜನೆಯನ್ನು ಕಳೆದುಕೊಳ್ಳಬೇಕಾಗುತ್ತದೆ" ಎಂದು...

ವೈಯಕ್ತಿಕ ಸ್ವಾತಂತ್ರ್ಯ Vs ಕಠಿಣ ಕಾಯ್ದೆ: ಯುಎಪಿಎ ಜಾಮೀನು ಭಿನ್ನಾಭಿಪ್ರಾಯಕ್ಕೆ ಸಿಗುವುದೇ ಸುಪ್ರೀಂ ಪರಿಹಾರ?

ಯುಎಪಿಎ ಅಡಿಯಲ್ಲಿ ದೀರ್ಘಕಾಲದ ಜೈಲುವಾಸದ ಹಿನ್ನೆಲೆ, ಜಾಮೀನು ನೀಡುವ ಕುರಿತು ಸುಪ್ರೀಂ ಕೋರ್ಟ್‌ನ ಎರಡು ನ್ಯಾಯಪೀಠಗಳ ನಡುವೆ ಭಿನ್ನಾಭಿಪ್ರಾಯ ಮೂಡಿದ ಕಾರಣ, ವಿಚಾರವನ್ನು ಸುಪ್ರೀಂ ಕೋರ್ಟ್‌ ವಿಸ್ತೃತ ಪೀಠಕ್ಕೆ ಶಿಫಾರಸು ಮಾಡಲಾಗಿದೆ ಎಂದು...

ತಾಯ್ತನ ಕ್ರೀಡೆಗೆ ಅಡ್ಡಿಯಾಗಬಾರದು: ಕುಸ್ತಿ ಒಕ್ಕೂಟಕ್ಕೆ ದೆಹಲಿ ಹೈಕೋರ್ಟ್ ಚಾಟಿ, ವಿನೇಶ್ ಫೋಗಟ್‌ಗೆ ಬಿಗ್ ರಿಲೀಫ್!

ಖ್ಯಾತ ಮಹಿಳಾ ಕುಸ್ತಿ ಪಟು ವಿನೇಶ್ ಫೋಗಟ್ ಅವರನ್ನು ದೇಶೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸದಂತೆ "ಅನರ್ಹ" ಎಂದು ಘೋಷಿಸಿದ್ದ ಭಾರತೀಯ ಕುಸ್ತಿ ಒಕ್ಕೂಟದ (WFI) ನಿರ್ಧಾರವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ....

ಗುಜರಾತ್: ಜಾನುವಾರು ಹತ್ಯೆ ಆರೋಪದಲ್ಲಿ ಬಂಧಿಸಿದ 70 ವರ್ಷದ ಮುಸ್ಲಿಂ ವ್ಯಕ್ತಿ ಸಾವು: ‘ತಂದೆಯನ್ನು ಕೊಂದರು’ ಎಂದು ಆರೋಪಿಸಿದ ಮಗ

ಗುಜರಾತ್‌ನ ಅಹಮದಾಬಾದ್ ನಗರದಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದ 70 ವರ್ಷದ ಜಹೀರ್ ಶೇಖ್ ಎಂಬ ಮುಸ್ಲಿಂ ವೃದ್ಧರೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಈ ಘಟನೆಯು ಗುಜರಾತ್‌ನಲ್ಲಿ ತೀವ್ರ ಸಂಚಲನ ಸೃಷ್ಟಿಸಿದ್ದು, ಕಸ್ಟಡಿ ನಿಂದನೆ, ಪೊಲೀಸರ ದೌರ್ಜನ್ಯ...