Homeಅಂತರಾಷ್ಟ್ರೀಯಚುನಾವಣೆಯಲ್ಲಿ ಹಸ್ತಕ್ಷೇಪ: ಭಾರತದ ಮೇಲೆ ಕೆನಡಾದಿಂದ ಮತ್ತೊಂದು ಆರೋಪ

ಚುನಾವಣೆಯಲ್ಲಿ ಹಸ್ತಕ್ಷೇಪ: ಭಾರತದ ಮೇಲೆ ಕೆನಡಾದಿಂದ ಮತ್ತೊಂದು ಆರೋಪ

- Advertisement -
- Advertisement -

ಕೆನಡಾ ತನ್ನ ಚುನಾವಣೆಯಲ್ಲಿ ಭಾರತ ಮತ್ತು ಪಾಕಿಸ್ತಾನ ಹಸ್ತಕ್ಷೇಪ ಮಾಡುತ್ತಿದೆ ಎಂದು ಆರೋಪಿಸಿದೆ, ಆದರೆ ಈ ಆರೋಪವನ್ನು ಭಾರತವು ತಳ್ಳಿಹಾಕಿದೆ.

2019 ಮತ್ತು 2021ರ ಸಾರ್ವತ್ರಿಕ ಚುನಾವಣೆಗಳಲ್ಲಿ ಭಾರತ ಮತ್ತು ಪಾಕಿಸ್ತಾನ ದೇಶಗಳ ರಹಸ್ಯ ಹಸ್ತಕ್ಷೇಪವನ್ನು ಉಲ್ಲೇಖಿಸಿ ಕೆನಡಾದ ಬೇಹುಗಾರಿಕಾ ಸಂಸ್ಥೆಯು ವರ್ಗೀಕರಿಸದ ಸಾರಾಂಶವನ್ನು ಬಿಡುಗಡೆ ಮಾಡಿದೆ. ಭಾರತವು ಈ ಆರೋಪವನ್ನು ‘ಆಧಾರರಹಿತ’ ಎಂದು ಕರೆದಿದೆ.

ಕೆನಡಿಯನ್ ಸೆಕ್ಯುರಿಟಿ ಇಂಟೆಲಿಜೆನ್ಸ್ ಸರ್ವೀಸ್(CSIS), ಕೆನಡಾದ ಚುನಾವಣಾ ಪ್ರಕ್ರಿಯೆಗಳ ಮೇಲೆ ಪ್ರಭಾವ ಬೀರಲು ಭಾರತ ಮತ್ತು ಪಾಕಿಸ್ತಾನ ಸಂಘಟಿತ ಪ್ರಯತ್ನಗಳನ್ನು ಮಾಡುತ್ತಿದೆ ಹೇಳುತ್ತದೆ. ಆದರೆ, ಭಾರತವು ಈ ಆರೋಪಗಳನ್ನು ಕಟುವಾಗಿ ನಿರಾಕರಿಸಿದೆ.

CSIS ದಾಖಲೆಗಳು 2021ರಲ್ಲಿ, ಭಾರತ ಸರ್ಕಾರವು ಖಲಿಸ್ತಾನಿ ಚಳುವಳಿ ಅಥವಾ ಪಾಕಿಸ್ತಾನದ ಪರವಾದ ನಿಲುವುಗಳ ಬಗ್ಗೆ ಸಹಾನುಭೂತಿ ಹೊಂದಿರುವ ಭಾರತೀಯ ಮೂಲದ ಮತದಾರರಿಗೆ ಆಶ್ರಯ ನೀಡುವ ನಿರ್ದಿಷ್ಟ ಜಿಲ್ಲೆಗಳನ್ನು ಗುರಿಯಾಗಿಸಿಕೊಂಡಿದೆ ಎಂದು ಆರೋಪಿಸಿದೆ. ಭಾರತ ಸರ್ಕಾರ 2021ರಲ್ಲಿ ಹಸ್ತಕ್ಷೇಪದ ಉದ್ದೇಶದಿಂದ ಭಾರತ ಸರ್ಕಾರ ನಕಲಿ ಏಜೆಂಟರನ್ನು ಬಳಸುವುದು ಸೇರಿದಂತೆ ರಹಸ್ಯ ಚಟುವಟಿಕೆಗಳನ್ನು ನಡೆಸಿರುವ ಸಾಧ್ಯತೆ ಇದೆ ಎಂದು ಸಿಎಸ್ಐಎಸ್ ಆಪಾದಿಸಿದೆ.

ಅಂತೆಯೇ, 2019ರಲ್ಲಿ ಪಾಕಿಸ್ತಾನ ಸರ್ಕಾರದ ಅಧಿಕಾರಿಗಳು ಕೆನಡಾದ ರಾಜಕೀಯದೊಳಗೆ ಪಾಕಿಸ್ತಾನದ ಹಿತಾಸಕ್ತಿಗಳನ್ನು ಮುನ್ನಡೆಸುವ ಗುರಿಯನ್ನು ಹೊಂದಿರುವ ರಹಸ್ಯ ಚಟುವಟಿಕೆಗಳಲ್ಲಿ ತೊಡಗಿದ್ದರು ಎಂದು ಹೇಳಿದೆ. ಭಾರತವು ಈ ಕುರಿತ ಆರೋವನ್ನು ನಿರಾಕರಿಸಿ ಇತರ ರಾಷ್ಟ್ರಗಳ ಪ್ರಜಾಪ್ರಭುತ್ವ ಪ್ರಕ್ರಿಯೆಗಳಲ್ಲಿ ಹಸ್ತಕ್ಷೇಪ ಮಾಡದಿರುವ ತನ್ನ ಬದ್ಧತೆಯನ್ನು ಉಲ್ಲೇಖಿಸಿದೆ. ಭಾರತೀಯ ಹಸ್ತಕ್ಷೇಪದ ಆರೋಪಗಳ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ರಣಧೀರ ಜೈಸ್ವಾಲ್, ಭಾರತದ ಆಂತರಿಕ ವಿಚಾರಗಳಲ್ಲಿ ಕೆನಡಾ ಹಸ್ತಕ್ಷೇಪ ಮಾಡುತ್ತಿದೆ ಎಂಬ ಪ್ರತ್ಯಾರೋಪ ಮಾಡಿದರು.

ಜನವರಿಯಲ್ಲಿ, ಕೆನಡಾ ತನ್ನ ರಾಷ್ಟ್ರೀಯ ಚುನಾವಣೆಗಳಲ್ಲಿ ವಿದೇಶಿ ಹಸ್ತಕ್ಷೇಪದ ಆರೋಪಗಳ ಬಗ್ಗೆ ತನಿಖೆ ಮಾಡುವ ಬಗ್ಗೆ ಹೇಳಿತ್ತು, ಬ್ಲೂಮ್‌ಬರ್ಗ್ ವರದಿಯ ಪ್ರಕಾರ ಭಾರತದ ಮೇಲೆ ನಿರ್ದಿಷ್ಟ ಗಮನವನ್ನು ಕೇಂದ್ರೀಕರಿಸಿದೆ. ಕೆನಡಾದ ಆಯೋಗವು ಈ ಬಗ್ಗೆ ವಿಚಾರಣೆ ನಡೆಸುತ್ತಿರುವ ಬಗ್ಗೆ ಮಾದ್ಯಮ ವರದಿಗಳು ನಮ್ಮ ಗಮನಕ್ಕೆ ಬಂದಿದೆ. ಕೆನಡಾದ ಚುನಾವಣೆಯಲ್ಲಿ ಭಾರತದ ಹಸ್ತಕ್ಷೇಪದ ಎಲ್ಲಾ ಆಧಾರರಹಿತ ಆರೋಪಗಳನ್ನು ನಾವು ಬಲವಾಗಿ ತಿರಸ್ಕರಿಸುತ್ತೇವೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್ ಹೇಳಿದ್ದಾರೆ.

ಚೀನಾ ದೇಶವು, ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರ ಆಡಳಿತಕ್ಕೆ ಸಹಾನುಭೂತಿ ಹೊಂದಿರುವ ಅಭ್ಯರ್ಥಿಗಳನ್ನು ಬೆಂಬಲಿಸುವ ಮೂಲಕ ಕೆನಡಾದ ಚುನಾವಣೆಗಳ ಮೇಲೆ ಪ್ರಭಾವ ಬೀರಲು ಪ್ರಯತ್ನಿಸಿದೆ ಎಂಬ ಗುಪ್ತಚರ ವರದಿಗಳಿಗೆ ಪ್ರತಿಕ್ರಿಯೆಯಾಗಿ ಕೆನಡಾದ ಪ್ರಧಾನಿ ಜಸ್ಟಿನ್ ಟ್ರುಡೊ ಈ ಕುರಿತು ತನಿಖೆಗೆ ಸೂಚಿಸಿದ್ದರು.

ಜೂ.18ರಂದು ಬ್ರಿಟಿಷ್ ಕೊಲಂಬಿಯಾ ಪ್ರಾಂತ್ಯದ ಪಂಜಾಬಿ ಪ್ರಾಬಲ್ಯದ ಸರ್ರೆ ನಗರದಲ್ಲಿರುವ ಗುರುನಾನಕ್ ಸಿಖ್ ಗುರುದ್ವಾರದ ಪಾರ್ಕಿಂಗ್ ಸ್ಥಳದಲ್ಲಿ ಖಲಿಸ್ತಾನಿ ಪ್ರತ್ಯೇಕತಾವಾದಿ ನಿಜ್ಜರ್ ಹತ್ಯೆ ನಡೆದಿತ್ತು. ನಿಜ್ಜರ್‌ ಹತ್ಯೆಯಲ್ಲಿ ಭಾರತೀಯ ಏಜೆಂಟರ ಸಂಭಾವ್ಯ ಕೈವಾಡದ ಬಗ್ಗೆ ಕೆನಡಾದ ಪ್ರಧಾನಿ ಜಸ್ಟಿನ್ ಟ್ರುಡೊ ಸೆಪ್ಟೆಂಬರ್‌ನಲ್ಲಿ ಆರೋಪಿಸಿದ್ದರು. ಟ್ರುಡೊ ಅವರ ಆರೋಪಗಳನ್ನು ಭಾರತವು ಅಸಂಬದ್ಧ ಎಂದು ತಿರಸ್ಕರಿಸಿತ್ತು. ಆ ಬಳಿಕ ಭಾರತ ಮತ್ತು ಕೆನಡಾ ನಡುವಿನ ಸಂಬಂಧಗಳು ಹದಗೆಟ್ಟಿದ್ದವು. ಎರಡೂ ದೇಶಗಳ ರಾಜತಾಂತ್ರಿಕ ಅಧಿಕಾರಿಗಳ ಉಚ್ಛಾಟಣೆಯು ನಡೆದಿತ್ತು. ಭಾರತವು ಕೆನಡಾದ ನಾಗರಿಕರಿಗೆ ವೀಸಾಗಳನ್ನು ನೀಡುವುದನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿತ್ತು. ಎರಡೂ ದೇಶಗಳ ನಡುವಿನ ಹಳಸಿದ್ದ ಸಂಬಂಧ ಸಂಪೂರ್ಣವಾಗಿ ಸರಿ ದಾರಿಗೆ ಬರುವ ಮೊದಲೇ ಭಾರತದ ವಿರುದ್ಧ ಕೆನಡಾ ಇದೀಗ ಮತ್ತೊಂದು ಆರೋಪವನ್ನು ಮಾಡಿದೆ.

ಇದನ್ನು ಓದಿ: ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ಸಂಪತ್ತಿನ ಮರು ಹಂಚಿಕೆಗೆ ಸಮೀಕ್ಷೆ ನಡೆಸುತ್ತೇವೆ: ರಾಹುಲ್ ಗಾಂಧಿ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ರಾಜಭವನ’ಗಳನ್ನು ‘ಲೋಕಭವನ’ಗಳೆಂದು ಮರುನಾಮಕರಣ; ಇದು ಒಕ್ಕೂಟ ವ್ಯವಸ್ಥೆ ಮತ್ತು ಭಾಷಾ ಸಮಾನತೆಯ ಮೇಲಿನ ಆಕ್ರಮಣ: ಜಾಗೃತ ಕರ್ನಾಟಕ

ದೇಶಾದಾದ್ಯಂತ ಇರುವ ರಾಜಭವನಗಳ ಹೆಸರನ್ನು ಲೋಕಭವನ ಎಂದು ಮರುನಾಮಕರಣ ಮಾಡುವುದಾಗಿ ಕೇಂದ್ರ ಗೃಹಸಚಿವಾಲಯ ತೀರ್ಮಾನಿಸಿದೆ. ಕೇಂದ್ರದ  ಈ ನೀತಿಯನ್ನು ವಿರೋಧಿಸಿರುವ ಜಾಗೃತ ಕರ್ನಾಟಕ ದೇಶದ ಎಲ್ಲಾ ಹಿಂದಿಯೇತರ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದೆ....

ಯುಜಿಸಿ ಈಕ್ವಿಟಿ ನಿಯಮಗಳ ಮೇಲಿನ ಸುಪ್ರೀಂ ಕೋರ್ಟ್ ತಡೆಗೆ ವಿದ್ಯಾರ್ಥಿಗಳ ಪ್ರತಿಭಟನೆ, ರೋಹಿತ್ ಕಾಯ್ದೆಗೆ ಒತ್ತಾಯ

ಯುಜಿಸಿ ಇಕ್ವಿಟಿ ನಿಯಮಗಳಿಗೆ ಸುಪ್ರೀಂ ಕೋರ್ಟ್ ನೀಡಿದ ತಡೆಯಾಜ್ಞೆಯ ವಿರುದ್ಧ ಮತ್ತು ವಿಶ್ವವಿದ್ಯಾಲಯಗಳಲ್ಲಿ ಜಾತಿ ತಾರತಮ್ಯವನ್ನು ಎದುರಿಸಲು ಶಾಸನಬದ್ಧ ರೋಹಿತ್ ಕಾಯ್ದೆಯನ್ನು ಜಾರಿಗೆ ತರುವಂತೆ ಒತ್ತಾಯಿಸಿ ಅಖಿಲ ಭಾರತ ವಿದ್ಯಾರ್ಥಿ ಸಂಘ (ಎಐಎಸ್ಎ)...

ನರವಾಣೆ ಅಪ್ರಕಟಿತ ಪುಸ್ತಕ ಗದ್ದಲ | ಸತ್ಯ ಹೊರಬಂದರೆ ಮೋದಿ, ರಾಜನಾಥ್ ಸಿಂಗ್ ಮುಖವಾಡ ಬಯಲಾಗಲಿದೆ : ರಾಹುಲ್ ಗಾಂಧಿ

ಮಾಜಿ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಮುಕುಂದ್ ನರವಾಣೆ ಅವರ ಅಪ್ರಕಟಿತ ಆತ್ಮಚರಿತ್ರೆ ಕುರಿತು ರಾಹುಲ್ ಗಾಂಧಿ ಸೋಮವಾರ (ಫೆ.2) ಲೋಕಸಭೆಯಲ್ಲಿ ಉಲ್ಲೇಖಿಸಿದ್ದು, ಈ ವೇಳೆ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ತೀವ್ರ...

ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ಘರ್ಷಣೆ : ಮೂವರ ಬಂಧನ

ಗುಜರಾತ್‌ನ ಪಠಾಣ್ ತಾಲೂಕಿನ ಚದ್ರುಮಣ ಗ್ರಾಮದಲ್ಲಿ ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದು, ಇನ್ನೂ ಐವರ ಬಂಧನಕ್ಕೆ ಬಲೆ ಬೀಸಿದ್ದಾರೆ. ಆರೋಪಿಗಳ ವಿರುದ್ದ ಎಸ್‌ಸಿ/ಎಸ್‌ಟಿ...

ಲೋಕಸಭೆಯಲ್ಲಿ ಲಡಾಖ್ ಬಿಕ್ಕಟ್ಟಿನ ಬಗ್ಗೆ ಮಾಜಿ ಸೇನಾ ಮುಖ್ಯಸ್ಥರ ಅಪ್ರಕಟಿತ ಆತ್ಮಚರಿತ್ರೆ ಉಲ್ಲೇಖಿಸಿದ ರಾಹುಲ್ ಗಾಂಧಿ: ಸಭೆಯಲ್ಲಿ ತೀವ್ರ ಗದ್ದಲ

ಸೋಮವಾರ ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಮಾಜಿ ಸೇನಾ ಮುಖ್ಯಸ್ಥ ಎಂಎಂ ನರವಾಣೆ ಅವರ ಆತ್ಮಚರಿತ್ರೆಯಿಂದ ಉಲ್ಲೇಖಿಸಲು ಪ್ರಯತ್ನಿಸಿದ ನಂತರ ಗದ್ದಲ ಭುಗಿಲೆದ್ದಿತು. ರಾಹುಲ್ ಮಾತನಾಡಲು ಪ್ರಾರಂಭಿಸುತ್ತಿದ್ದಂತೆ, ರಕ್ಷಣಾ ಸಚಿವ...

ಪಂಜಾಬ್ ನಿರೀಕ್ಷೆಗಳನ್ನು ಪೂರೈಸುವಲ್ಲಿ ಕೇಂದ್ರ ಬಜೆಟ್ ಮತ್ತೊಮ್ಮೆ ವಿಫಲವಾಗಿದೆ: ಸಿಎಂ ಭಗವಂತ್ ಮಾನ್

ಕೇಂದ್ರ ಬಜೆಟ್ ಮತ್ತೊಮ್ಮೆ ಪಂಜಾಬ್‌ನ ನಿರೀಕ್ಷೆಗಳನ್ನು ಪೂರೈಸುವಲ್ಲಿ ವಿಫಲವಾಗಿದೆ ಎಂದು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಮತ್ತು ಆಡಳಿತಾರೂಢ ಆಮ್ ಆದ್ಮಿ ಪಕ್ಷದ (ಎಎಪಿ) ಸರ್ಕಾರದ ಸಚಿವರು ಭಾನುವಾರ ಅಭಿಪ್ರಾಯಪಟ್ಟಿದ್ದಾರೆ. ಬಜೆಟ್ ರೈತರಿಗೆ ಯಾವುದೇ...

ರಾಜ್ಯಪಾಲರು ಪೂರ್ಣ ಭಾಷಣ ಓದಿಲ್ಲ, ‘ಜೈ ಸಂವಿಧಾನ’ ಎನ್ನುವುದನ್ನು ಉಲ್ಲೇಖಿಸದೆ ಹೋದರು : ಸಿಎಂ ಸಿದ್ದರಾಮಯ್ಯ

ರಾಜ್ಯಪಾಲರು ಪೂರ್ತಿ ಭಾಷಣ ಓದದೆ ತರಾತುರಿಯಲ್ಲಿ ಹೋದರು. ಭಾಷಣದಲ್ಲಿದ್ದ "ಜೈ ಸಂವಿಧಾನ" ಎನ್ನುವುದನ್ನೂ ಉಲ್ಲೇಖಿಸದೆ ತೆರಳಿದರು. ರಾಷ್ಟ್ರಗೀತೆ ಮುಗಿಯುವವರೆಗೂ ಕಾಯದೆ ಹೋಗಿಬಿಟ್ಟರು. ಇದು ಸರಿಯಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬಿಜೆಪಿ ಶಾಸಕ...

ಉತ್ತರಾಖಂಡ| ಹಿಂದುತ್ವ ಗುಂಪಿನ ಕಿರುಕುಳದಿಂದ ಮುಸ್ಲಿಂ ಅಂಗಡಿ ಮಾಲೀಕನನ್ನು ರಕ್ಷಿಸಿದ ದೀಪಕ್ ಕುಮಾರ್

ಸ್ಥಳೀಯ ಮುಸ್ಲಿಂ ಅಂಗಡಿ ಮಾಲೀಕನ ವಿರುದ್ಧ ಬಜರಂಗದಳ ಸದಸ್ಯರು ನೀಡುತ್ತಿದ್ದ ಕಿರುಕುಳವನ್ನು ಜಿಮ್ ಮಾಲೀಕ ದೀಪಕ್ ಕುಮಾರ್ ಸ್ಥಳದಲ್ಲೇ ಎದುರಿಸಿದ್ದಾರೆ. ಆಕ್ರೋಶಿತರಾದ ಹಿಂದುತ್ವ ಗುಂಪಿನ ಸದಸ್ಯರು ದೀಪಕ್ ವಿರುದ್ಧವೇ ಪ್ರತಿಭಟನೆ ನಡೆಸಿದ್ದು, ಹಲವಾರ...

ಎಸ್‌ಐಆರ್ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ನಡೆಸುವ ಭಾರತೀಯ ಚುನಾವಣಾ ಆಯೋಗದ (ಇಸಿಐ) ನಿರ್ಧಾರವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ...

ದಕ್ಷಿಣ ಪಿನಾಕಿನಿ ಜಲವಿವಾದ : ನ್ಯಾಯಮಂಡಳಿ ಸ್ಥಾಪಿಸಲು ಸುಪ್ರೀಂ ಕೋರ್ಟ್ ಆದೇಶ

ದಕ್ಷಿಣ ಪಿನಾಕಿನಿ (ಪೆನ್ನೈಯಾರ್) ನದಿ ನೀರಿನ ಹಂಚಿಕೆಗೆ ಸಂಬಂಧಿಸಿದಂತೆ ತಮಿಳುನಾಡು ಮತ್ತು ಕರ್ನಾಟಕ ರಾಜ್ಯಗಳ ನಡುವೆ ಬಾಕಿ ಇರುವ ವಿವಾದಗಳನ್ನು ಪರಿಹರಿಸಲು ನ್ಯಾಯಮಂಡಳಿ ಸ್ಥಾಪಿಸುವಂತೆ ಸುಪ್ರೀಂ ಕೋರ್ಟ್ ಸೋಮವಾರ (ಫೆ.2) ನಿರ್ದೇಶನ ನೀಡಿದೆ. ಕೇಂದ್ರ...