Homeಅಂತರಾಷ್ಟ್ರೀಯಚುನಾವಣೆಯಲ್ಲಿ ಹಸ್ತಕ್ಷೇಪ: ಭಾರತದ ಮೇಲೆ ಕೆನಡಾದಿಂದ ಮತ್ತೊಂದು ಆರೋಪ

ಚುನಾವಣೆಯಲ್ಲಿ ಹಸ್ತಕ್ಷೇಪ: ಭಾರತದ ಮೇಲೆ ಕೆನಡಾದಿಂದ ಮತ್ತೊಂದು ಆರೋಪ

- Advertisement -
- Advertisement -

ಕೆನಡಾ ತನ್ನ ಚುನಾವಣೆಯಲ್ಲಿ ಭಾರತ ಮತ್ತು ಪಾಕಿಸ್ತಾನ ಹಸ್ತಕ್ಷೇಪ ಮಾಡುತ್ತಿದೆ ಎಂದು ಆರೋಪಿಸಿದೆ, ಆದರೆ ಈ ಆರೋಪವನ್ನು ಭಾರತವು ತಳ್ಳಿಹಾಕಿದೆ.

2019 ಮತ್ತು 2021ರ ಸಾರ್ವತ್ರಿಕ ಚುನಾವಣೆಗಳಲ್ಲಿ ಭಾರತ ಮತ್ತು ಪಾಕಿಸ್ತಾನ ದೇಶಗಳ ರಹಸ್ಯ ಹಸ್ತಕ್ಷೇಪವನ್ನು ಉಲ್ಲೇಖಿಸಿ ಕೆನಡಾದ ಬೇಹುಗಾರಿಕಾ ಸಂಸ್ಥೆಯು ವರ್ಗೀಕರಿಸದ ಸಾರಾಂಶವನ್ನು ಬಿಡುಗಡೆ ಮಾಡಿದೆ. ಭಾರತವು ಈ ಆರೋಪವನ್ನು ‘ಆಧಾರರಹಿತ’ ಎಂದು ಕರೆದಿದೆ.

ಕೆನಡಿಯನ್ ಸೆಕ್ಯುರಿಟಿ ಇಂಟೆಲಿಜೆನ್ಸ್ ಸರ್ವೀಸ್(CSIS), ಕೆನಡಾದ ಚುನಾವಣಾ ಪ್ರಕ್ರಿಯೆಗಳ ಮೇಲೆ ಪ್ರಭಾವ ಬೀರಲು ಭಾರತ ಮತ್ತು ಪಾಕಿಸ್ತಾನ ಸಂಘಟಿತ ಪ್ರಯತ್ನಗಳನ್ನು ಮಾಡುತ್ತಿದೆ ಹೇಳುತ್ತದೆ. ಆದರೆ, ಭಾರತವು ಈ ಆರೋಪಗಳನ್ನು ಕಟುವಾಗಿ ನಿರಾಕರಿಸಿದೆ.

CSIS ದಾಖಲೆಗಳು 2021ರಲ್ಲಿ, ಭಾರತ ಸರ್ಕಾರವು ಖಲಿಸ್ತಾನಿ ಚಳುವಳಿ ಅಥವಾ ಪಾಕಿಸ್ತಾನದ ಪರವಾದ ನಿಲುವುಗಳ ಬಗ್ಗೆ ಸಹಾನುಭೂತಿ ಹೊಂದಿರುವ ಭಾರತೀಯ ಮೂಲದ ಮತದಾರರಿಗೆ ಆಶ್ರಯ ನೀಡುವ ನಿರ್ದಿಷ್ಟ ಜಿಲ್ಲೆಗಳನ್ನು ಗುರಿಯಾಗಿಸಿಕೊಂಡಿದೆ ಎಂದು ಆರೋಪಿಸಿದೆ. ಭಾರತ ಸರ್ಕಾರ 2021ರಲ್ಲಿ ಹಸ್ತಕ್ಷೇಪದ ಉದ್ದೇಶದಿಂದ ಭಾರತ ಸರ್ಕಾರ ನಕಲಿ ಏಜೆಂಟರನ್ನು ಬಳಸುವುದು ಸೇರಿದಂತೆ ರಹಸ್ಯ ಚಟುವಟಿಕೆಗಳನ್ನು ನಡೆಸಿರುವ ಸಾಧ್ಯತೆ ಇದೆ ಎಂದು ಸಿಎಸ್ಐಎಸ್ ಆಪಾದಿಸಿದೆ.

ಅಂತೆಯೇ, 2019ರಲ್ಲಿ ಪಾಕಿಸ್ತಾನ ಸರ್ಕಾರದ ಅಧಿಕಾರಿಗಳು ಕೆನಡಾದ ರಾಜಕೀಯದೊಳಗೆ ಪಾಕಿಸ್ತಾನದ ಹಿತಾಸಕ್ತಿಗಳನ್ನು ಮುನ್ನಡೆಸುವ ಗುರಿಯನ್ನು ಹೊಂದಿರುವ ರಹಸ್ಯ ಚಟುವಟಿಕೆಗಳಲ್ಲಿ ತೊಡಗಿದ್ದರು ಎಂದು ಹೇಳಿದೆ. ಭಾರತವು ಈ ಕುರಿತ ಆರೋವನ್ನು ನಿರಾಕರಿಸಿ ಇತರ ರಾಷ್ಟ್ರಗಳ ಪ್ರಜಾಪ್ರಭುತ್ವ ಪ್ರಕ್ರಿಯೆಗಳಲ್ಲಿ ಹಸ್ತಕ್ಷೇಪ ಮಾಡದಿರುವ ತನ್ನ ಬದ್ಧತೆಯನ್ನು ಉಲ್ಲೇಖಿಸಿದೆ. ಭಾರತೀಯ ಹಸ್ತಕ್ಷೇಪದ ಆರೋಪಗಳ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ರಣಧೀರ ಜೈಸ್ವಾಲ್, ಭಾರತದ ಆಂತರಿಕ ವಿಚಾರಗಳಲ್ಲಿ ಕೆನಡಾ ಹಸ್ತಕ್ಷೇಪ ಮಾಡುತ್ತಿದೆ ಎಂಬ ಪ್ರತ್ಯಾರೋಪ ಮಾಡಿದರು.

ಜನವರಿಯಲ್ಲಿ, ಕೆನಡಾ ತನ್ನ ರಾಷ್ಟ್ರೀಯ ಚುನಾವಣೆಗಳಲ್ಲಿ ವಿದೇಶಿ ಹಸ್ತಕ್ಷೇಪದ ಆರೋಪಗಳ ಬಗ್ಗೆ ತನಿಖೆ ಮಾಡುವ ಬಗ್ಗೆ ಹೇಳಿತ್ತು, ಬ್ಲೂಮ್‌ಬರ್ಗ್ ವರದಿಯ ಪ್ರಕಾರ ಭಾರತದ ಮೇಲೆ ನಿರ್ದಿಷ್ಟ ಗಮನವನ್ನು ಕೇಂದ್ರೀಕರಿಸಿದೆ. ಕೆನಡಾದ ಆಯೋಗವು ಈ ಬಗ್ಗೆ ವಿಚಾರಣೆ ನಡೆಸುತ್ತಿರುವ ಬಗ್ಗೆ ಮಾದ್ಯಮ ವರದಿಗಳು ನಮ್ಮ ಗಮನಕ್ಕೆ ಬಂದಿದೆ. ಕೆನಡಾದ ಚುನಾವಣೆಯಲ್ಲಿ ಭಾರತದ ಹಸ್ತಕ್ಷೇಪದ ಎಲ್ಲಾ ಆಧಾರರಹಿತ ಆರೋಪಗಳನ್ನು ನಾವು ಬಲವಾಗಿ ತಿರಸ್ಕರಿಸುತ್ತೇವೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್ ಹೇಳಿದ್ದಾರೆ.

ಚೀನಾ ದೇಶವು, ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರ ಆಡಳಿತಕ್ಕೆ ಸಹಾನುಭೂತಿ ಹೊಂದಿರುವ ಅಭ್ಯರ್ಥಿಗಳನ್ನು ಬೆಂಬಲಿಸುವ ಮೂಲಕ ಕೆನಡಾದ ಚುನಾವಣೆಗಳ ಮೇಲೆ ಪ್ರಭಾವ ಬೀರಲು ಪ್ರಯತ್ನಿಸಿದೆ ಎಂಬ ಗುಪ್ತಚರ ವರದಿಗಳಿಗೆ ಪ್ರತಿಕ್ರಿಯೆಯಾಗಿ ಕೆನಡಾದ ಪ್ರಧಾನಿ ಜಸ್ಟಿನ್ ಟ್ರುಡೊ ಈ ಕುರಿತು ತನಿಖೆಗೆ ಸೂಚಿಸಿದ್ದರು.

ಜೂ.18ರಂದು ಬ್ರಿಟಿಷ್ ಕೊಲಂಬಿಯಾ ಪ್ರಾಂತ್ಯದ ಪಂಜಾಬಿ ಪ್ರಾಬಲ್ಯದ ಸರ್ರೆ ನಗರದಲ್ಲಿರುವ ಗುರುನಾನಕ್ ಸಿಖ್ ಗುರುದ್ವಾರದ ಪಾರ್ಕಿಂಗ್ ಸ್ಥಳದಲ್ಲಿ ಖಲಿಸ್ತಾನಿ ಪ್ರತ್ಯೇಕತಾವಾದಿ ನಿಜ್ಜರ್ ಹತ್ಯೆ ನಡೆದಿತ್ತು. ನಿಜ್ಜರ್‌ ಹತ್ಯೆಯಲ್ಲಿ ಭಾರತೀಯ ಏಜೆಂಟರ ಸಂಭಾವ್ಯ ಕೈವಾಡದ ಬಗ್ಗೆ ಕೆನಡಾದ ಪ್ರಧಾನಿ ಜಸ್ಟಿನ್ ಟ್ರುಡೊ ಸೆಪ್ಟೆಂಬರ್‌ನಲ್ಲಿ ಆರೋಪಿಸಿದ್ದರು. ಟ್ರುಡೊ ಅವರ ಆರೋಪಗಳನ್ನು ಭಾರತವು ಅಸಂಬದ್ಧ ಎಂದು ತಿರಸ್ಕರಿಸಿತ್ತು. ಆ ಬಳಿಕ ಭಾರತ ಮತ್ತು ಕೆನಡಾ ನಡುವಿನ ಸಂಬಂಧಗಳು ಹದಗೆಟ್ಟಿದ್ದವು. ಎರಡೂ ದೇಶಗಳ ರಾಜತಾಂತ್ರಿಕ ಅಧಿಕಾರಿಗಳ ಉಚ್ಛಾಟಣೆಯು ನಡೆದಿತ್ತು. ಭಾರತವು ಕೆನಡಾದ ನಾಗರಿಕರಿಗೆ ವೀಸಾಗಳನ್ನು ನೀಡುವುದನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿತ್ತು. ಎರಡೂ ದೇಶಗಳ ನಡುವಿನ ಹಳಸಿದ್ದ ಸಂಬಂಧ ಸಂಪೂರ್ಣವಾಗಿ ಸರಿ ದಾರಿಗೆ ಬರುವ ಮೊದಲೇ ಭಾರತದ ವಿರುದ್ಧ ಕೆನಡಾ ಇದೀಗ ಮತ್ತೊಂದು ಆರೋಪವನ್ನು ಮಾಡಿದೆ.

ಇದನ್ನು ಓದಿ: ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ಸಂಪತ್ತಿನ ಮರು ಹಂಚಿಕೆಗೆ ಸಮೀಕ್ಷೆ ನಡೆಸುತ್ತೇವೆ: ರಾಹುಲ್ ಗಾಂಧಿ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾಂಗ್ರೆಸ್ ನಿಂದ ಏಪ್ರಿಲ್ 12ರಂದು ‘ರನ್ ಫಾರ್ ಅಂಬೇಡ್ಕರ್, ರನ್ ಫಾರ್ ಕಾನ್ಸ್ಟಿಟ್ಯೂಷನ್’ ಮ್ಯಾರಥಾನ್ ಆಯೋಜನೆ

ನವದೆಹಲಿ: ಬಿ.ಆರ್. ಅಂಬೇಡ್ಕರ್ ಅವರ ಜನ್ಮ ದಿನಾಚರಣೆಯ ಅಂಗವಾಗಿ ಕಾಂಗ್ರೆಸ್ ಭಾನುವಾರ 'ಅಂಬೇಡ್ಕರ್‌ಗಾಗಿ ಓಟ, ಸಂವಿಧಾನಕ್ಕಾಗಿ ಓಟ' ಮ್ಯಾರಥಾನ್ ಆಯೋಜಿಸಿದೆ. ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಇಲ್ಲಿನ ಮಂಡಿ ಹೌಸ್‌ನಿಂದ ಮ್ಯಾರಥಾನ್‌ಗೆ...

ಮುಖ್ಯವಾಹಿನಿಗೆ ಬಂದ 42 ಕೇಡರ್‌ಗಳು; ರಾಜ್ಯದಲ್ಲಿ’ಮಾವೋವಾದಿ ಕಾರ್ಯಾಚರಣೆ’ ಅಂತ್ಯವಾಗಿದೆ ಎಂದ ತೆಲಂಗಾಣ ಪೊಲೀಸರು

ರಾಜ್ಯದಲ್ಲಿ ಸಿಪಿಐ (ಮಾವೋವಾದಿ) ಸಂಘಟನೆಯ ಕಾರ್ಯಚರಣೆ ಅಂತಿಮವಾಗಿದೆ ಎಂದು ತೆಲಂಗಾಣ ಪೊಲೀಸರು ಘೋಷಣೆ ಮಾಡಿದ್ದಾರೆ. ಬೆಟಾಲಿಯನ್ ಕಮಾಂಡರ್ ಮತ್ತು ಎರಡು ಪ್ರಮುಖ ಗುಂಪುಗಳ ಹಿರಿಯ ನಾಯಕತ್ವ ಸೇರಿದಂತೆ ನಿಷೇಧಿತ ಸಂಘಟನೆಯ 42 ಕೇಡರ್‌ಗಳು...

‘ಹಿಂದಿ ನಿರ್ಮೂಲನೆ ಮಾಡುತ್ತೇವೆ’ ಎಂದು ಸಚಿವರು ಹೇಳಿಲ್ಲ; ಹಿಂದಿ ಪರ ಅರ್ಜಿ ವಜಾ; ₹1 ಲಕ್ಷ ದಂಡ ವಿಧಿಸಿದ ಹೈಕೋರ್ಟ್‌

ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ಹಿಂದಿ ಸೇರಿದಂತೆ ತೃತೀಯ ಭಾಷಾ ವಿಷಯಗಳ ಮೌಲ್ಯಮಾಪನ ಸಂಬಂಧ ರಾಜ್ಯ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ನೀಡಿದ ಹೇಳಿಕೆಯ ವಿರುದ್ಧ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆಯನ್ನು (ಪಿಐಎಲ್) ಕರ್ನಾಟಕ...

ದೆಹಲಿ| ಮುಸ್ಲಿಮರ ಮೇಲಿನ ದ್ವೇಷಕ್ಕೆ ಜೀವಂತ ಹಂದಿಗಳನ್ನು ಪೂಜಿಸುತ್ತಿರುವ ಹಿಂದೂಗಳು

ಹಳೆಯ ದೆಹಲಿಯ ಹಿಂದೂ-ಮುಸ್ಲಿಂ ಜನರು ವಾಸಿಸುವ ತ್ರನಗರದ ನೆರೆಹೊರೆಯಲ್ಲಿ ಹಿಂದೂ ಕುಟುಂಬಗಳು ಜೀವಂತ ಹಂದಿಗಳನ್ನು ಪೂಜಿಸುತ್ತಿದ್ದಾರೆ. ಮುಸ್ಲಿಮರ ಮೇಲಿನ ದ್ವೇಷಕ್ಕೆ ಮನೆಯ ಮುಂಭಾಗ ಅಲಂಕೃತ ಹಂದಿ (ವರಹಾಸ್ವಾಮಿ) ಚಿತ್ರಗಳನ್ನು ಅಳವಡಿಸಿದ್ದಾರೆ ಎಂದು 'ದಿ...

ಪ. ಬಂಗಾಳ: ಮಹಿಳೆಯರಿಗೆ ₹3,000 ರಿಂದ 6 ತಿಂಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ ಸೇರಿದಂತೆ ಹಲವು ಭರವಸೆ ನೀಡಿದ ಬಿಜೆಪಿ 

ಕೋಲ್ಕತ್ತಾ : ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಪ್ರಚಾರ ಆರಂಭವಾಗಿದ್ದು, ಮೊದಲ ಹಂತದ ಮತದಾನಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ಕೇಂದ್ರ ಗೃಹ ಸಚಿವ ಅಮಿತ್ ಶಾ ಶುಕ್ರವಾರ ಪಶ್ಚಿಮ ಬಂಗಾಳದ ಬಿಜೆಪಿ...

ಹಾಸನ| ರೈತ ಮುಖಂಡ ವಾಸುದೇವ ಕಲ್ಕೆರೆ ಮೇಲೆ ಹಲ್ಲೆ; ದುಷ್ಕರ್ಮಿಗಳ ಬಂಧನಕ್ಕೆ ಕೆಪಿಆರ್‌ಎಸ್‌ ಆಗ್ರಹ

ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲ್ಲೂಕಿನ ಕರ್ನಾಟಕ ಪ್ರಾಂತ ರೈತ ಸಂಘದ (ಕೆಪಿಆರ್‌ಎಸ್‌) ಕಾರ್ಯದರ್ಶಿ ಹಾಗೂ ಕಲ್ಕೆರೆ ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ, ಡಿವೈಎಫ್‌ಐ ಜಿಲ್ಲಾಧ್ಯಕ್ಷ ವಾಸುದೇವ ಕಲ್ಕೆರೆ ಮೇಲೆ ಹಲ್ಲೆ-ದೌರ್ಜನ್ಯ ನಡೆಸಿರುವ ಗೂಂಡಾಗಳನ್ನು...

ಉತ್ತರ ಪ್ರದೇಶ| ಡಿಜಿಟಲ್ ಬಂಧನದಿಂದ ಪೋಷಕರನ್ನು ರಕ್ಷಿಸಿದ 8ನೇ ತರಗತಿ ವಿದ್ಯಾರ್ಥಿ

ಸುಮಾರು 10 ಗಂಟೆಗಳ ಕಾಲ ವೀಡಿಯೊ ಕರೆ ಮೂಲಕ ಡಿಜಿಟಲ್ ಬಂಧನಕ್ಕೆ ಒಳಗಾಗಿದ್ದ ತನ್ನ ಹೆತ್ತವರು ಹಣ ಕಳೆದುಕೊಳ್ಳದಂತೆ 8ನೇ ತರಗತಿಯ ಬಾಲಕನೊಬ್ಬ ರಕ್ಷಿಸಿರುವ ಘಟನೆ ಬೆಳಕಿಗೆ ಬಂದಿದೆ. ಉತ್ತರ ಪ್ರದೇಶದ ಬರೇಲಿಯಲ್ಲಿ...

ಅಸ್ಸಾಂ: ಪವನ್ ಖೇರಾ ವಿರುದ್ಧದ ಪ್ರಕರಣದಲ್ಲಿ ಒಂದು ವಾರದ ನಿರೀಕ್ಷಣ ಜಾಮೀನು ನೀಡಿದ ತೆಲಂಗಾಣ ಹೈಕೋರ್ಟ್

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ ಅವರು ಸಲ್ಲಿಸಿದ ಎಫ್‌ಐಆರ್‌ಗೆ ಸಂಬಂಧಿಸಿದಂತೆ ತೆಲಂಗಾಣ ಹೈಕೋರ್ಟ್ ಶುಕ್ರವಾರ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರಿಗೆ ಒಂದು ವಾರದ...

ನಿವಾಸದಲ್ಲಿ ನಗದು ಪತ್ತೆ ಪ್ರಕರಣದಲ್ಲಿ ಸಿಲುಕಿದ್ದ ನ್ಯಾಯಮೂರ್ತಿ ಯಶವಂತ್ ವರ್ಮಾ ರಾಜೀನಾಮೆ

ತಮ್ಮ ನಿವಾಸದಲ್ಲಿ ನಗದು ಪತ್ತೆ ಆರೋಪದ ಕೇಂದ್ರಬಿಂದುವಾಗಿದ್ದ ಅಲಹಾಬಾದ್ ಹೈಕೋರ್ಟ್ ನ್ಯಾಯಾಧೀಶ ನ್ಯಾಯಮೂರ್ತಿ ಯಶವಂತ್ ವರ್ಮಾ ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ತಮ್ಮ ರಾಜೀನಾಮೆಯನ್ನು ಸಲ್ಲಿಸಿದ್ದಾರೆ. ಕಳೆದ ವರ್ಷ ಏಪ್ರಿಲ್ 5...

ಆಂಧ್ರಪ್ರದೇಶ: ಬೇಸಿಗೆ ವಿಹಾರಕ್ಕೆಂದು ತೆರಳಿದ್ದ ಮೂವರು ಅಪ್ರಾಪ್ತ ಬಾಲಕಿಯರು ಅನಂತಗಿರಿ ಜಲಪಾತದಲ್ಲಿ ಮುಳುಗಿ ಸಾವು 

ಅನಂತಗಿರಿ: ಬೇಸಿಗೆ ವಿಹಾಕ್ಕೆಂದು ತೆರಳಿದ್ದ ಮೂವರು ಅಪ್ರಾಪ್ತ ಬಾಲಕಿಯರು ಅನಂತಗಿರಿ ಜಲಪಾತದಲ್ಲಿ ಸೆಲ್ಫಿ ತೆಗೆದುಕೊಳ್ಳಲು ಜಲಪಾತಕ್ಕೆ ಇಳಿದು ನೀರಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಅಲ್ಲೂರಿ ಸೀತಾರಾಮರಾಜು ಮೂಲಗುಮ್ಮಿ ಗ್ರಾಮದಲ್ಲಿ ನಾಲ್ವರು...