Homeಮುಖಪುಟಪ.ಬಂಗಾಳ: ಎನ್‌ಐಎ ಅಧಿಕಾರಿಗಳ ವಿರುದ್ಧ ಪ್ರಕರಣ ದಾಖಲು

ಪ.ಬಂಗಾಳ: ಎನ್‌ಐಎ ಅಧಿಕಾರಿಗಳ ವಿರುದ್ಧ ಪ್ರಕರಣ ದಾಖಲು

- Advertisement -
- Advertisement -

ಪ.ಬಂಗಾಳದಲ್ಲಿ ಎನ್‌ಐಎ ಅಧಿಕಾರಿಗಳ ಮೇಲೆ ದಾಳಿ ಪ್ರಕರಣ ವಿಭಿನ್ನವಾದಂತಹ ತಿರುವನ್ನು ಪಡೆದುಕೊಂಡಿದೆ. ಇದೀಗ ಎನ್‌ಐಎ ಅಧಿಕಾರಿಗಳ ವಿರುದ್ಧ ಟಿಎಂಸಿ ನಾಯಕ ಮೊನೊಬ್ರತಾ ಜಾನಾ ಅವರ ಪತ್ನಿ ಎಫ್‌ಐಆರ್‌ ದಾಖಲಿಸಿದ್ದಾರೆ.

ತನಿಖೆ ನಡೆಸುವ ನೆಪದಲ್ಲಿ ಭೂಪತಿನಗರದಲ್ಲಿರುವ ತಮ್ಮ ನಿವಾಸಕ್ಕೆ ಬಲವಂತವಾಗಿ ಪ್ರವೇಶಿಸಿದ ಎನ್‌ಐಎ ಅಧಿಕಾರಿಗಳು ತಮ್ಮ ಜೊತೆ ಅಸಭ್ಯವಾಗಿ ವರ್ತಿಸಿದ್ದಾರೆ ಎಂದು ಬಂಧಿತ ಟಿಎಂಸಿ ನಾಯಕನ ಪತ್ನಿ ಆರೋಪಿಸಿದ್ದಾರೆ.

2022ರಲ್ಲಿ ಪಶ್ಚಿಮ ಬಂಗಾಳದ ಪುರ್ಬಾ ಮೇದಿನ್‌ಪುರ ಜಿಲ್ಲೆಯಲ್ಲಿ ಮೂವರು ಸಾವನ್ನಪ್ಪಿದ ಸ್ಫೋಟ ಪ್ರಕರಣದಲ್ಲಿ ಇಬ್ಬರು ಪ್ರಮುಖ ಸಂಚುಕೋರರಾದ ಬಲಾಯಿ ಚರಣ್ ಮೈತಿ ಮತ್ತು ಮನೋಬ್ರತ ಜನಾ ಅವರನ್ನು ರಾಷ್ಟ್ರೀಯ ತನಿಖಾ ಸಂಸ್ಥೆ ಶನಿವಾರ ಬಂಧಿಸಿದೆ. ಶನಿವಾರ ಬೆಳಗ್ಗೆ ಎನ್‌ಐಎ ಅಧಿಕಾರಿಗಳು ದಾಳಿ ನಡೆಸಿದಾಗ ತಮ್ಮ ನಿವಾಸದಲ್ಲಿನ ಆಸ್ತಿಗಳನ್ನು ಧ್ವಂಸ ಮಾಡಿದ್ದಾರೆ ಎಂದು ಆರೋಪಿಸಿ ಜಾನ ಪತ್ನಿ ಮೋನಿ ಜಾನಾ ಭೂಪತಿನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಎನ್‌ಐಎ ಅಧಿಕಾರಿಗಳು ಹಲ್ಲೆ ನಡೆಸಿದ್ದಾರೆ ಎಂದು ಮಹಿಳೆಯೊಬ್ಬರು ನೀಡಿದ ದೂರನ್ನು ಸ್ವೀಕರಿಸಿದ ನಂತರ ನಾವು ಎಫ್‌ಐಆರ್ ದಾಖಲಿಸಿದ್ದೇವೆ. ನಾವು ದೂರಿನ ಬಗ್ಗೆ ಪರಿಶೀಲಿಸುತ್ತಿದ್ದೇವೆ ಎಂದು ಪೊಲೀಸ್ ಅಧಿಕಾರಿಯೋರ್ವರು ಹೇಳಿದ್ದಾರೆ.

ಎನ್‌ಐಎ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ:

ಪಶ್ಚಿಮ ಬಂಗಾಳದ ಪೂರ್ವ ಮಿಡ್ನಾಪುರ ಜಿಲ್ಲೆಯಲ್ಲಿ ಶನಿವಾರ ಮುಂಜಾನೆ ರಾಷ್ಟ್ರೀಯ ತನಿಖಾ ಸಂಸ್ಥೆಯ ತಂಡವೊಂದರ ಮೇಲೆ ಸ್ಥಳೀಯರು ದಾಳಿ ನಡೆಸಿದ್ದಾರೆ ಎಂದು ವರದಿಯಾಗಿತ್ತು, ಈ ಬಗ್ಗೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, 2022ರಲ್ಲಿ ‘ಪಟಾಕಿ ಸಿಡಿದ” ಘಟನೆಯನ್ನು ಮುಂದಿಟ್ಟು ಎನ್ಐಎ ತಂಡವು ಮುಂಜಾನೆ ಹಲವಾರು ಮನೆಗಳಿಗೆ ನುಗ್ಗಿದೆ, ಈ ವೇಳೆ ಆತ್ಮ ರಕ್ಷಣೆಗೆ ಗ್ರಾಮಸ್ಥರು ಪ್ರತಿರೋಧ ತೋರಿದ್ದಾರೆ ಎಂದು ಹೇಳಿದ್ದರು.

ಸ್ಥಳೀಯರ ಮೇಲೆ ಎನ್‌ಐಎ ದಾಳಿ ನಡೆಸಿದೆ ಎಂದು ಆರೋಪಿಸಿದ ಟಿಎಂಸಿ ಮುಖ್ಯಸ್ಥೆ ಮಮತಾ ಬ್ಯಾನರ್ಜಿ, ದಾಳಿಯ ನೇತೃತ್ವ ವಹಿಸಿದವರು ಯಾರು? ಮಹಿಳೆಯರು ದಾಳಿ ಮಾಡಲಿಲ್ಲ, ಎನ್‌ಐಎ ದಾಳಿ ನಡೆಸಿತ್ತು. ಮಧ್ಯರಾತ್ರಿಯ ನಂತರ ಯಾರಾದರೂ ಮಹಿಳೆಯರಿರುವ ಮನೆಗೆ ನುಗ್ಗಿ ಅವರಿಗೆ ಹಿಂಸಿಸಿದರೆ, ಮಹಿಳೆಯರು ಏನು ಮಾಡಬೇಕು? ಅವರು ಕುಳಿತುಕೊಂಡು ನೋಡಬೇಕೆ? ಅವರು ತಮ್ಮನ್ನು ತಾವು ರಕ್ಷಿಸಿಕೊಳ್ಳಬೇಕಲ್ಲವೇ ಮತ್ತು ತಮ್ಮ ಘನತೆಯನ್ನು ಕಾಪಾಡಬೇಕಲ್ಲವೇ? ಎಂದು ಮಮತಾ ಬ್ಯಾನರ್ಜಿ ಪ್ರಶ್ನಿಸಿದ್ದರು.

ಮಧ್ಯರಾತ್ರಿಯ ನಂತರ ಕೆಲವು ಅಪರಿಚಿತರು ಗ್ರಾಮಕ್ಕೆ ಪ್ರವೇಶಿಸುವುದನ್ನು ಗ್ರಾಮಸ್ಥರು ನೋಡಿದರೆ, ಅವರು ಹೇಗೆ ಗುರುತಿಸುತ್ತಾರೆ? ಚುನಾವಣೆಗೂ ಮುನ್ನವೇಕೆ ಜನರನ್ನು ಬಂಧಿಸಲಾಗುತ್ತಿದೆ? ಟಿಎಂಸಿಯ ಎಲ್ಲಾ ಬೂತ್ ಏಜೆಂಟ್‌ಗಳನ್ನು ಬಂಧಿಸಿ ನಂತರ ಬಿಜೆಪಿ ಚುನಾವಣೆಯಲ್ಲಿ ಗೆಲ್ಲುವ ಭರವಸೆ ಇಟ್ಟುಕೊಂಡಿದೆಯಾ? ಬಿಜೆಪಿಯನ್ನು ಬೆಂಬಲಿಸಲು ಈ ಬಂಧನಗಳನ್ನು ಮಾಡಲಾಗಿದೆ ಎಂದು ಬ್ಯಾನರ್ಜಿ ಹೇಳಿದ್ದರು.

ಅಧಿಕಾರಿಗಳು ಗಾಯಗೊಂಡಿದ್ದಾರೆ: ಎನ್‌ಐಎ

ಭೂಪತಿನಗರದಲ್ಲಿ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿ ತನಿಖೆಗೆ ತೆರಳಿದ್ದ ವೇಳೆ ಸ್ಥಳೀಯರು ಕಲ್ಲುಗಳು ಮತ್ತು ಇಟ್ಟಿಗೆಗಳಿಂದ ದಾಳಿ ನಡೆಸಿದ್ದು, ಕಾರು ಸಂಪೂರ್ಣವಾಗಿ ಜಖಂಗೊಂಡಿದೆ ಮತ್ತು ಅಧಿಕಾರಿಯೋರ್ವರು ಗಾಯಗೊಂಡಿದ್ದಾರೆ ಎಂದು ಹೇಳಿದ್ದರು.

ಏನಿದು ಸ್ಪೋಟ ಪ್ರಕರಣ?

ಡಿಸೆಂಬರ್ 3, 2022ರಂದು ಸ್ಥಳೀಯ ತೃಣಮೂಲ ಕಾಂಗ್ರೆಸ್ ನಾಯಕ ರಾಜ್‌ಕುಮಾರ್ ಮನ್ನಾ ಅವರ ಮನೆಯಲ್ಲಿ ನಡೆದ ಸ್ಫೋಟದಲ್ಲಿ ಮನ್ನಾ ಮತ್ತು ಇಬ್ಬರು ಪಕ್ಷದ ಕಾರ್ಯಕರ್ತರಾದ ಬಿಸ್ವಜಿತ್ ಗಯೆನ್ ಮತ್ತು ಬುದ್ಧದೇಬ್ ಮನ್ನಾ ಸೇರಿದಂತೆ ಮೂವರು ಸಾವನ್ನಪ್ಪಿದ್ದರು. ಮಾರ್ಚ್ 2023ರಲ್ಲಿ ಕಲ್ಕತ್ತಾ ಹೈಕೋರ್ಟ್ ಘಟನೆಯ ಬಗ್ಗೆ NIA ತನಿಖೆಗೆ ಆದೇಶಿಸಿದೆ. ತನಿಖಾ ಸಂಸ್ಥೆಯು ಕಳೆದ ವರ್ಷ ಜೂನ್‌ನಲ್ಲಿ ಈ ಕುರಿತು ತನಿಖೆಯನ್ನು ಪ್ರಾರಂಭಿಸಿದೆ ಮತ್ತು 8 ಟಿಎಂಸಿ ಕಾರ್ಯಕರ್ತರು ಮತ್ತು ಸ್ಥಳೀಯ ಮುಖಂಡರಿಗೆ ಸಮನ್ಸ್ ಕಳುಹಿಸಿತ್ತು.

ಇದನ್ನು ಓದಿ: ಬಿಜೆಪಿ ಸ್ವತಂತ್ರ ಭಾರತದ ಅತ್ಯಂತ ಭ್ರಷ್ಟ ಪಕ್ಷ: ಸಂಜಯ್ ಸಿಂಗ್ ವಾಗ್ಧಾಳಿ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...

ಸೌದಿಗೆ ಪ್ರಯಾಣಿಸುವ ತನ್ನ ನಾಗರಿಕರಿಗೆ ಎಚ್ಚರಿಕೆ ನೀಡಿದ ಅಮೆರಿಕ

ಸೌದಿ ಅರೇಬಿಯಾ ಬೆಂಬಲಿತ ಪಡೆಗಳು ಮತ್ತು ಯೆಮೆನ್‌ನ ಹೌದಿ ಬಂಡುಕೋರರ ನಡುವಿನ ಸಂಘರ್ಷ ತೀವ್ರಗೊಂಡಿದ್ದು, ಸೌದಿ ಯುದ್ಧ ವಿಮಾನವೊಂದನ್ನು ಹೊಡೆದುರುಳಿಸಿರುವುದಾಗಿ ಹೌದಿ ಪಡೆಗಳು ಪ್ರತಿಪಾದಿಸಿವೆ. ಮತ್ತೊಂದೆಡೆ, ಪವಿತ್ರ ನಗರಿ ಮಕ್ಕಾದ ದಕ್ಷಿಣ ಭಾಗದಲ್ಲಿ...