Homeಕರ್ನಾಟಕರಾಜ್ಯಕ್ಕಾಗಿರುವ ಅನ್ಯಾಯವನ್ನು ನಿರ್ಮಲಾ ಸೀತಾರಾಮನ್ ಒಪ್ಪಿಕೊಂಡಿದ್ದಾರೆ: ಡಿಸಿಎಂ ಡಿ.ಕೆ. ಶಿವಕುಮಾರ್

ರಾಜ್ಯಕ್ಕಾಗಿರುವ ಅನ್ಯಾಯವನ್ನು ನಿರ್ಮಲಾ ಸೀತಾರಾಮನ್ ಒಪ್ಪಿಕೊಂಡಿದ್ದಾರೆ: ಡಿಸಿಎಂ ಡಿ.ಕೆ. ಶಿವಕುಮಾರ್

- Advertisement -
- Advertisement -

ಬರ ಪರಿಹಾರ ವಿಚಾರದಲ್ಲಿ ಇಷ್ಟು ದಿನ ರಾಜ್ಯ ಸರ್ಕಾರದ ಮೇಲೆ ಆರೋಪ ಮಾಡುತ್ತಿದ್ದ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಈಗ ರಾಜ್ಯಕ್ಕೆ ಆಗಿರುವ ಅನ್ಯಾಯ ಒಪ್ಪಿಕೊಂಡಿದ್ದು, ಅವರಿಗೆ ಧನ್ಯವಾದಗಳು ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು.

ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಅಪಾರ್ಟ್ಮೆಂಟ್ ನಿವಾಸಿಗಳ ಭೇಟಿ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಶಿವಕುಮಾರ್, ‘ಬರ ಪರಿಹಾರಕ್ಕೂ ಚುನಾವಣೆಗೂ ಏನು ಸಂಬಂಧ? ಈ ಹೇಳಿಕೆ ಮೂಲಕ ರಾಜ್ಯಕ್ಕೆ ಬರ ಪರಿಹಾರ ಬರುವುದು ವಿಳಂಬವಾಗಿದ್ದು, ರಾಜ್ಯಕ್ಕೆ ಅನ್ಯಾಯ ಆಗಿದೆ ಎಂದು ಒಪ್ಪಿಕೊಂಡಿದ್ದಾರೆ. ಇಷ್ಟು ದಿನಗಳ ಕಾಲ ರಾಜ್ಯ ಸರ್ಕಾರದ ಮೇಲೆ ಆರೋಪ ಮಾಡುತ್ತಿದ್ದರು’ ಎಂದರು.

‘ನಾವು ಬರ ಪರಿಹಾರ ನೀಡುವಂತೆ ಮನವಿ ನೀಡಿ ಎಷ್ಟು ತಿಂಗಳುಗಳಾಗಿವೆ? ನಾವು ಬರ ಪರಿಹಾರ ಮನವಿ ಕೊಟ್ಟ ಬಳಿಕ ನಾಲ್ಕು ತಿಂಗಳವರೆಗೂ ಯಾವುದೇ ಚುನಾವಣೆ ನೀತಿ ಸಂಹಿತೆ ಹಾಗೂ ಚುನಾವಣಾ ಆಯೋಗದ ನಿರ್ಬಂಧ ಇರಲಿಲ್ಲ. ಈಗ ಚುನಾವಣಾ ಆಯೋಗದ ನೆಪ ಹೇಳುತ್ತಿದ್ದಾರೆ. ಕೇಂದ್ರ ಸರ್ಕಾರದ ಅಕ್ಷಮ್ಯ ಅಪರಾಧದ ಬಗ್ಗೆ ಜನರಿಗೂ ಅರಿವಾಗಿದೆ. ಈ ಮೂಲಕ ಡಿ.ಕೆ. ಸುರೇಶ್ ಅವರ ನಮ್ಮ ತೆರಿಗೆ ನಮ್ಮ ಹಕ್ಕು, ನಮ್ಮ ಪಾಲಿನ ಹೋರಾಟ ಒಪ್ಪಿಕೊಂಡಿದ್ದಾರೆ; ಅವರಿಗೆ ಧನ್ಯವಾದಗಳು’ ಎಂದು ತಿರುಗೇಟು ಕೊಟ್ಟರು.

ಮೇಕೆದಾಟು ಯೋಜನೆ ವಿಚಾರವಾಗಿ ಕುಮಾರಸ್ವಾಮಿ ಹೇಳಿಕೆಗೆ ಪ್ರತಿಕ್ರಿಯಿಸಿ, ‘ಇಲ್ಲಿನ ಜನರ ಕಷ್ಟಕ್ಕೆ ಪರಿಹಾರ ನೀಡಿ ಧೈರ್ಯ ತುಂಬುವವರು ನಾವು. ಬೇರೆ ಅಭ್ಯರ್ಥಿಗಳು ನಮ್ಮಂತೆ ಜನರಿಗೆ ಅಭಯ ನೀಡುವುದಿಲ್ಲ. ಕುಮಾರಸ್ವಾಮಿ ಅವರು ಈಗ ಮೇಕೆದಾಟು, ಮಹದಾಯಿ ಯೋಜನೆ ಮಾಡುತ್ತೇವೆ ಎಂದು ಹೇಳುತ್ತಿದ್ದಾರೆ. ಅಧಿಕಾರ ಇದ್ದಾಗ ಈ ವಿಚಾರದಲ್ಲಿ ಏನೂ ಮಾಡದವರು ಈಗ ಏನು ಮಾಡುತ್ತಾರೆ. ನಾನು ಮೇಕೆದಾಟು ಪಾದಯಾತ್ರೆ ಮಾಡುವಾಗ ಅವರು ಕೊಟ್ಟಿರುವ ಹೇಳಿಕೆ ನೋಡಿ. ನಮ್ಮ ಪಾದಯಾತ್ರೆ ಸಂದರ್ಭದಲ್ಲಿ ಕಬಾಬ್ ತಿನ್ನೋಕೆ ಪಾದಯಾತ್ರೆ ಮಾಡುತ್ತಿದ್ದಾರೆ ಎಂದಿದ್ದ ಕುಮಾರಸ್ವಾಮಿ ಅವರು, ಈಗ ಪಾದಯಾತ್ರೆ ಬಗ್ಗೆ ಮಾತಾಡುತ್ತಿದ್ದಾರೆ. ಮಂಡ್ಯಕ್ಕೆ ಬಂದ ನಂತರ ಅವರಿಗೆ ಬಿಸಿ ತಟ್ಟಿರುವಂತೆ ಕಾಣುತ್ತಿದೆ’ ಎಂದರು.

‘ನಾವು ಹೋರಾಟ ಮಾಡಿದ್ದು ರಾಜ್ಯದ ಜನತೆಗಾಗಿ; ರಾಜಕಾರಣದಲ್ಲಿ ಅದು ನಮ್ಮ ಬದ್ಧತೆ. ಅದನ್ನು ಅವರಿಂದ ಸಹಿಸಲು ಆಗಲಿಲ್ಲ. ಅವರು ಏನಾದರೂ ಮಾಡಿಕೊಳ್ಳಲಿ. ಕಾವೇರಿ ಜಲಾನಯನ ಪ್ರದೇಶದ ಜನರಿಗೆ, ಬೆಂಗಳೂರು ಜನರಿಗೆ ಕುಡಿಯುವ ನೀರು ಪೂರೈಸಲು ನಾನು ನೀರಾವರಿ ಹಾಗೂ ಬೆಂಗಳೂರು ನಗರಾಭಿವೃದ್ಧಿ ಇಲಾಖೆ ಜವಾಬ್ದಾರಿ ತೆಗೆದುಕೊಂಡಿದ್ದೇನೆ’ ಎಂದು ಹೇಳಿದರು.

‘ನಾನು ಕೊಟ್ಟ ಮಾತಿನಂತೆ ನಡೆಯುತ್ತೇನೆ ಎಂದು ಜನರಿಗೆ ನಂಬಿಕೆ ಇದೆ. ಅವರ ನಂಬಿಕೆಗೆ ತಕ್ಕಂತೆ ನಡೆಯುತ್ತೇನೆ. ಇದು ಮತದಾರರಿಗೆ ಮನವರಿಕೆಯಾಗಿದೆ’ ಎಂದು ತಿಳಿಸಿದರು.

ಇದನ್ನೂ ಓದಿ; ಸ್ಫೋಟ ಪ್ರಕರಣದಲ್ಲಿ ಟಿಎಂಸಿ ಮುಖಂಡನ ಬಂಧನ; ‘ಬಿಜೆಪಿ-ಎನ್‌ಐಎ ಮೈತ್ರಿ’ ಎಂದ ಅಭಿಷೇಕ್ ಬ್ಯಾನರ್ಜಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪೊಲೀಸ್ ತುರ್ತು ವಾಹನದ ಚಾಲಕ ಸೇರಿ ಐವರಿಂದ ಯುವತಿ ಮೇಲೆ ಅತ್ಯಾಚಾರ!

ಪೊಲೀಸ್ ತುರ್ತು ಸೇವೆ (112) ವಾಹನದ ಚಾಲಕ ಸೇರಿದಂತೆ ಐವರು ಪುರುಷರು 19 ವರ್ಷದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಛತ್ತೀಸ್‌ಗಢದ ಕೋರ್ಬಾ ಜಿಲ್ಲೆಯ ಬಂಕಿಮೊಂಗ್ರ ಪ್ರದೇಶದಲ್ಲಿ ನಡೆದಿದೆ. ಜನವರಿ...

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...