Homeಕರ್ನಾಟಕರಾಜ್ಯಕ್ಕಾಗಿರುವ ಅನ್ಯಾಯವನ್ನು ನಿರ್ಮಲಾ ಸೀತಾರಾಮನ್ ಒಪ್ಪಿಕೊಂಡಿದ್ದಾರೆ: ಡಿಸಿಎಂ ಡಿ.ಕೆ. ಶಿವಕುಮಾರ್

ರಾಜ್ಯಕ್ಕಾಗಿರುವ ಅನ್ಯಾಯವನ್ನು ನಿರ್ಮಲಾ ಸೀತಾರಾಮನ್ ಒಪ್ಪಿಕೊಂಡಿದ್ದಾರೆ: ಡಿಸಿಎಂ ಡಿ.ಕೆ. ಶಿವಕುಮಾರ್

- Advertisement -
- Advertisement -

ಬರ ಪರಿಹಾರ ವಿಚಾರದಲ್ಲಿ ಇಷ್ಟು ದಿನ ರಾಜ್ಯ ಸರ್ಕಾರದ ಮೇಲೆ ಆರೋಪ ಮಾಡುತ್ತಿದ್ದ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಈಗ ರಾಜ್ಯಕ್ಕೆ ಆಗಿರುವ ಅನ್ಯಾಯ ಒಪ್ಪಿಕೊಂಡಿದ್ದು, ಅವರಿಗೆ ಧನ್ಯವಾದಗಳು ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು.

ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಅಪಾರ್ಟ್ಮೆಂಟ್ ನಿವಾಸಿಗಳ ಭೇಟಿ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಶಿವಕುಮಾರ್, ‘ಬರ ಪರಿಹಾರಕ್ಕೂ ಚುನಾವಣೆಗೂ ಏನು ಸಂಬಂಧ? ಈ ಹೇಳಿಕೆ ಮೂಲಕ ರಾಜ್ಯಕ್ಕೆ ಬರ ಪರಿಹಾರ ಬರುವುದು ವಿಳಂಬವಾಗಿದ್ದು, ರಾಜ್ಯಕ್ಕೆ ಅನ್ಯಾಯ ಆಗಿದೆ ಎಂದು ಒಪ್ಪಿಕೊಂಡಿದ್ದಾರೆ. ಇಷ್ಟು ದಿನಗಳ ಕಾಲ ರಾಜ್ಯ ಸರ್ಕಾರದ ಮೇಲೆ ಆರೋಪ ಮಾಡುತ್ತಿದ್ದರು’ ಎಂದರು.

‘ನಾವು ಬರ ಪರಿಹಾರ ನೀಡುವಂತೆ ಮನವಿ ನೀಡಿ ಎಷ್ಟು ತಿಂಗಳುಗಳಾಗಿವೆ? ನಾವು ಬರ ಪರಿಹಾರ ಮನವಿ ಕೊಟ್ಟ ಬಳಿಕ ನಾಲ್ಕು ತಿಂಗಳವರೆಗೂ ಯಾವುದೇ ಚುನಾವಣೆ ನೀತಿ ಸಂಹಿತೆ ಹಾಗೂ ಚುನಾವಣಾ ಆಯೋಗದ ನಿರ್ಬಂಧ ಇರಲಿಲ್ಲ. ಈಗ ಚುನಾವಣಾ ಆಯೋಗದ ನೆಪ ಹೇಳುತ್ತಿದ್ದಾರೆ. ಕೇಂದ್ರ ಸರ್ಕಾರದ ಅಕ್ಷಮ್ಯ ಅಪರಾಧದ ಬಗ್ಗೆ ಜನರಿಗೂ ಅರಿವಾಗಿದೆ. ಈ ಮೂಲಕ ಡಿ.ಕೆ. ಸುರೇಶ್ ಅವರ ನಮ್ಮ ತೆರಿಗೆ ನಮ್ಮ ಹಕ್ಕು, ನಮ್ಮ ಪಾಲಿನ ಹೋರಾಟ ಒಪ್ಪಿಕೊಂಡಿದ್ದಾರೆ; ಅವರಿಗೆ ಧನ್ಯವಾದಗಳು’ ಎಂದು ತಿರುಗೇಟು ಕೊಟ್ಟರು.

ಮೇಕೆದಾಟು ಯೋಜನೆ ವಿಚಾರವಾಗಿ ಕುಮಾರಸ್ವಾಮಿ ಹೇಳಿಕೆಗೆ ಪ್ರತಿಕ್ರಿಯಿಸಿ, ‘ಇಲ್ಲಿನ ಜನರ ಕಷ್ಟಕ್ಕೆ ಪರಿಹಾರ ನೀಡಿ ಧೈರ್ಯ ತುಂಬುವವರು ನಾವು. ಬೇರೆ ಅಭ್ಯರ್ಥಿಗಳು ನಮ್ಮಂತೆ ಜನರಿಗೆ ಅಭಯ ನೀಡುವುದಿಲ್ಲ. ಕುಮಾರಸ್ವಾಮಿ ಅವರು ಈಗ ಮೇಕೆದಾಟು, ಮಹದಾಯಿ ಯೋಜನೆ ಮಾಡುತ್ತೇವೆ ಎಂದು ಹೇಳುತ್ತಿದ್ದಾರೆ. ಅಧಿಕಾರ ಇದ್ದಾಗ ಈ ವಿಚಾರದಲ್ಲಿ ಏನೂ ಮಾಡದವರು ಈಗ ಏನು ಮಾಡುತ್ತಾರೆ. ನಾನು ಮೇಕೆದಾಟು ಪಾದಯಾತ್ರೆ ಮಾಡುವಾಗ ಅವರು ಕೊಟ್ಟಿರುವ ಹೇಳಿಕೆ ನೋಡಿ. ನಮ್ಮ ಪಾದಯಾತ್ರೆ ಸಂದರ್ಭದಲ್ಲಿ ಕಬಾಬ್ ತಿನ್ನೋಕೆ ಪಾದಯಾತ್ರೆ ಮಾಡುತ್ತಿದ್ದಾರೆ ಎಂದಿದ್ದ ಕುಮಾರಸ್ವಾಮಿ ಅವರು, ಈಗ ಪಾದಯಾತ್ರೆ ಬಗ್ಗೆ ಮಾತಾಡುತ್ತಿದ್ದಾರೆ. ಮಂಡ್ಯಕ್ಕೆ ಬಂದ ನಂತರ ಅವರಿಗೆ ಬಿಸಿ ತಟ್ಟಿರುವಂತೆ ಕಾಣುತ್ತಿದೆ’ ಎಂದರು.

‘ನಾವು ಹೋರಾಟ ಮಾಡಿದ್ದು ರಾಜ್ಯದ ಜನತೆಗಾಗಿ; ರಾಜಕಾರಣದಲ್ಲಿ ಅದು ನಮ್ಮ ಬದ್ಧತೆ. ಅದನ್ನು ಅವರಿಂದ ಸಹಿಸಲು ಆಗಲಿಲ್ಲ. ಅವರು ಏನಾದರೂ ಮಾಡಿಕೊಳ್ಳಲಿ. ಕಾವೇರಿ ಜಲಾನಯನ ಪ್ರದೇಶದ ಜನರಿಗೆ, ಬೆಂಗಳೂರು ಜನರಿಗೆ ಕುಡಿಯುವ ನೀರು ಪೂರೈಸಲು ನಾನು ನೀರಾವರಿ ಹಾಗೂ ಬೆಂಗಳೂರು ನಗರಾಭಿವೃದ್ಧಿ ಇಲಾಖೆ ಜವಾಬ್ದಾರಿ ತೆಗೆದುಕೊಂಡಿದ್ದೇನೆ’ ಎಂದು ಹೇಳಿದರು.

‘ನಾನು ಕೊಟ್ಟ ಮಾತಿನಂತೆ ನಡೆಯುತ್ತೇನೆ ಎಂದು ಜನರಿಗೆ ನಂಬಿಕೆ ಇದೆ. ಅವರ ನಂಬಿಕೆಗೆ ತಕ್ಕಂತೆ ನಡೆಯುತ್ತೇನೆ. ಇದು ಮತದಾರರಿಗೆ ಮನವರಿಕೆಯಾಗಿದೆ’ ಎಂದು ತಿಳಿಸಿದರು.

ಇದನ್ನೂ ಓದಿ; ಸ್ಫೋಟ ಪ್ರಕರಣದಲ್ಲಿ ಟಿಎಂಸಿ ಮುಖಂಡನ ಬಂಧನ; ‘ಬಿಜೆಪಿ-ಎನ್‌ಐಎ ಮೈತ್ರಿ’ ಎಂದ ಅಭಿಷೇಕ್ ಬ್ಯಾನರ್ಜಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...

ಸೌದಿಗೆ ಪ್ರಯಾಣಿಸುವ ತನ್ನ ನಾಗರಿಕರಿಗೆ ಎಚ್ಚರಿಕೆ ನೀಡಿದ ಅಮೆರಿಕ

ಸೌದಿ ಅರೇಬಿಯಾ ಬೆಂಬಲಿತ ಪಡೆಗಳು ಮತ್ತು ಯೆಮೆನ್‌ನ ಹೌದಿ ಬಂಡುಕೋರರ ನಡುವಿನ ಸಂಘರ್ಷ ತೀವ್ರಗೊಂಡಿದ್ದು, ಸೌದಿ ಯುದ್ಧ ವಿಮಾನವೊಂದನ್ನು ಹೊಡೆದುರುಳಿಸಿರುವುದಾಗಿ ಹೌದಿ ಪಡೆಗಳು ಪ್ರತಿಪಾದಿಸಿವೆ. ಮತ್ತೊಂದೆಡೆ, ಪವಿತ್ರ ನಗರಿ ಮಕ್ಕಾದ ದಕ್ಷಿಣ ಭಾಗದಲ್ಲಿ...

ಪ್ರಜ್ವಲ್ ಪ್ರಕರಣ ಮುಂದಿಟ್ಟುಕೊಂಡು ‘ದೇವೇಗೌಡರ ಕುಟುಂಬದ ಧ್ವನಿ ಅಡಗಿಸಲು ಅಸಾಧ್ಯ’: ಸರ್ಕಾರದ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ

ಹೊಳೆನರಸೀಪುರ: ಪ್ರಜ್ವಲ್ ರೇವಣ್ಣ ಪ್ರಕರಣದ ನೆಪದಲ್ಲಿ ದೇವೇಗೌಡರ ಕುಟುಂಬದ ಧ್ವನಿಯನ್ನು ಅಡಗಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಜೈಲಿನಲ್ಲಿದ್ದ ಸಂದರ್ಭದಲ್ಲಿ ಪ್ರಜ್ವಲ್ ರೇವಣ್ಣ ಅವರಿಗೆ ಮೊಬೈಲ್‌ ಫೋನ್ ಹಾಗೂ...