Homeಮುಖಪುಟಗುಜರಾತ್‌: ನಮಾಝ್‌ ಮಾಡುತ್ತಿದ್ದಾಗ ವಿದೇಶಿ ವಿದ್ಯಾರ್ಥಿಗಳ ಮೇಲೆ ದಾಳಿ ಪ್ರಕರಣ: ಹಾಸ್ಟೆಲ್‌ ಬಿಟ್ಟು ತೆರಳುವಂತೆ ಸಂತ್ರಸ್ತರಿಗೆ...

ಗುಜರಾತ್‌: ನಮಾಝ್‌ ಮಾಡುತ್ತಿದ್ದಾಗ ವಿದೇಶಿ ವಿದ್ಯಾರ್ಥಿಗಳ ಮೇಲೆ ದಾಳಿ ಪ್ರಕರಣ: ಹಾಸ್ಟೆಲ್‌ ಬಿಟ್ಟು ತೆರಳುವಂತೆ ಸಂತ್ರಸ್ತರಿಗೆ ಸೂಚನೆ

- Advertisement -
- Advertisement -

ಗುಜರಾತ್‌ ವಿವಿಯ ಹಾಸ್ಟೆಲ್‌ನಲ್ಲಿದ್ದ 7 ವಿದೇಶಿ ವಿದ್ಯಾರ್ಥಿಗಳನ್ನು ಹಾಸ್ಟೆಲ್‌ ಬಿಟ್ಟು ತೆರಳಲು ಸೂಚಿಸಲಾಗಿದೆ. ಇತ್ತೀಚೆಗೆ ಹಾಸ್ಟೆಲ್‌ನಲ್ಲಿ ರಂಝಾನ್‌ ಹಿನ್ನೆಲೆ ನಮಾಝ್‌ ಮಾಡುವಾಗ ವಿದ್ಯಾರ್ಥಿಗಳ ಮೇಲೆ ಬಲಪಂಥೀಯ ಗುಂಪೊಂದು ದಾಳಿ ನಡೆಸಿತ್ತು. ಇದು ಅಂತರಾಷ್ಟ್ರೀಯ ಮಟ್ಟದಲ್ಲಿ ಸುದ್ದಿಯಾಗಿತ್ತು, ಭಾರತದಲ್ಲಿ ವಿದೇಶಿ ವಿದ್ಯಾರ್ಥಿಗಳ ಸುರಕ್ಷತೆಯ ಬಗ್ಗೆ ಪ್ರಶ್ನೆಯನ್ನು ಹುಟ್ಟು ಹಾಕಿತ್ತು.

ಇದೀಗ ಅಫ್ಘಾನಿಸ್ತಾನದ ಆರು ಮತ್ತು ಪೂರ್ವ ಆಫ್ರಿಕಾದ ಓರ್ವ ವಿದ್ಯಾರ್ಥಿಯನ್ನು ಗುಜರಾತ್ ವಿಶ್ವವಿದ್ಯಾನಿಲಯದ ಹಾಸ್ಟೆಲ್ ಕೊಠಡಿಯಿಂದ ನಿರ್ಗಮಿಸುವಂತೆ ಸೂಚಿಸಲಾಗಿದೆ. ಮಾರ್ಚ್ 16ರ ದಾಳಿಯ ಕೆಲವು ದಿನಗಳ ನಂತರ ಅಪ್ಘಾನ್‌ ಮತ್ತು ಗ್ಯಾಂಬಿಯನ್ ನಿಯೋಗವು ವಿಶ್ವವಿದ್ಯಾನಿಲಯಕ್ಕೆ ಭೇಟಿ ನೀಡಿತ್ತು ಮತ್ತು ವಿದ್ಯಾರ್ಥಿಗಳ ಸುರಕ್ಷತಾ ಕ್ರಮಗಳ ಕುರಿತು ಗುಜರಾತ್‌ ವಿವಿಯ ಉಪಕುಲಪತಿಗಳೊಂದಿಗೆ ಸಭೆ ನಡೆಸಿತ್ತು.

ಪಿಟಿಐ ಜೊತೆ ಮಾತನಾಡಿದ ವಿಶ್ವವಿದ್ಯಾನಿಲಯದ ಉಪಕುಲಪತಿ ನೀರ್ಜಾ ಗುಪ್ತಾ, ಅಫ್ಘಾನಿಸ್ತಾನದ ಆರು ಮತ್ತು ಪೂರ್ವ ಆಫ್ರಿಕಾದ ಒಬ್ಬ ವಿದ್ಯಾರ್ಥಿಗೆ ತಮ್ಮ ಹಾಸ್ಟೆಲ್ ಕೊಠಡಿಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇವರು ಅಧ್ಯಯನವನ್ನು ಪೂರ್ಣಗೊಳಿಸಿದ್ದಾರೆ ಮತ್ತು ಕೆಲ ಆಡಳಿತಾತ್ಮಕ ಕಾರ್ಯ ಬಾಕಿ ಇರುವುದರಿಂದ ವಸತಿ ನಿಲಯದಲ್ಲೇ ಉಳಿದುಕೊಂಡಿದ್ದಾರೆ. ಅವರು ಇನ್ನೂ ಇಲ್ಲಿ ಉಳಿದುಕೊಳ್ಳುವ ಅಗತ್ಯವಿಲ್ಲದಿರುವುದರಿಂದ ಅವರಿಗೆ ತಾಯ್ನಾಡಿಗೆ ಮರಳಲು ಬೇಕಾದ ವ್ಯವಸ್ಥೆಯನ್ನು ಮಾಡಲಾಗಿದೆ ಎಂದು ಹೇಳಿದ್ದಾರೆ.

ನಾವು ಅಗತ್ಯವಿರುವ ದಾಖಲೆಗಳನ್ನು ಪೂರ್ಣಗೊಳಿಸಿದ್ದೇವೆ ಮತ್ತು ಅವರು ಈಗ ಸುರಕ್ಷಿತವಾಗಿ ತಮ್ಮ ದೇಶಗಳಿಗೆ ಮರಳಬಹುದು. ನಮ್ಮ ಹಾಸ್ಟೆಲ್‌ನಲ್ಲಿ ಯಾವುದೇ ಹಳೆಯ ವಿದ್ಯಾರ್ಥಿಗಳನ್ನು ಇರಿಸಿಕೊಳ್ಳಲು ನಾವು ಬಯಸುವುದಿಲ್ಲ. ನಾವು ಆಯಾ ದೇಶಗಳ ರಾಯಾಭಾರಿಗಳಿಗೆ ತಿಳಿಸಿದ್ದೇವೆ ಮತ್ತು ಅವರು ಈ ವಿದ್ಯಾರ್ಥಿಗಳನ್ನು ಹಾಸ್ಟೆಲ್ ಖಾಲಿ ಮಾಡುವಂತೆ ಸೂಚಿಸಿದ್ದಾರೆ ಎಂದು ಉಪಕುಲಪತಿ ಹೇಳಿದ್ದಾರೆ.

ಗುಜರಾತ್ ವಿಶ್ವವಿದ್ಯಾನಿಲಯದ ಹಾಸ್ಟೆಲ್‌ಗೆ ಮಾ.16ರಂದು ನುಗ್ಗಿದ ಗುಂಪೊಂದು ನಮಾಝ್‌ ಮಾಡಿದ್ದಕ್ಕಾಗಿ ಅಫ್ಘಾನಿಸ್ತಾನ ಮತ್ತು ಉಜ್ಬೇಕಿಸ್ತಾನದ ವಿದ್ಯಾರ್ಥಿಗಳ ಮೇಲೆ ದಾಳಿ ಮಾಡಿದ್ದಾರೆ. ಘಟನೆಯಲ್ಲಿ ಶ್ರೀಲಂಕಾ, ತಜಕಿಸ್ತಾನ, ಆಫ್ರಿಕಾ ದೇಶದ ಐವರು ವಿದ್ಯಾರ್ಥಿಗಳು ಗಾಯಗೊಂಡಿದ್ದರು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು.

ರಂಜಾನ್ ಸಮಯದಲ್ಲಿ ರಾತ್ರಿ ತರಾವೀಹ್ ನಮಾಝ್‌ ಮಾಡಲು ನಾವು ಜಮಾಯಿಸಿದ್ದೆವು. ದೊಣ್ಣೆಗಳು ಮತ್ತು ಚಾಕುಗಳೊಂದಿಗೆ ಶಸ್ತ್ರಸಜ್ಜಿತವಾದ ಗುಂಪೊಂದು ಹಾಸ್ಟೆಲ್‌ಗೆ ನುಗ್ಗಿ ನಮ್ಮ ಮೇಲೆ ದಾಳಿ ಮಾಡಿ  ಕೊಠಡಿಗಳನ್ನು ಧ್ವಂಸಗೊಳಿಸಿದೆ ಎಂದು ವಿದ್ಯಾರ್ಥಿಗಳು ಆರೋಪಿಸಿದ್ದರು. ಘಟನೆಗೆ ಸಂಬಂಧಿಸಿ ಐವರನ್ನು ಪೊಲೀಸರು ಬಂಧಿಸಿದ್ದರು.

ಇದನ್ನು ಓದಿ: ಕೇಜ್ರಿವಾಲ್‌ ಬಂಧನ ಬಿಜೆಪಿಯ ಶವಪೆಟ್ಟಿಗೆಗಿರುವ ಕೊನೆಯ ಮೊಳೆ: ಎಎಪಿ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...

ಸೌದಿಗೆ ಪ್ರಯಾಣಿಸುವ ತನ್ನ ನಾಗರಿಕರಿಗೆ ಎಚ್ಚರಿಕೆ ನೀಡಿದ ಅಮೆರಿಕ

ಸೌದಿ ಅರೇಬಿಯಾ ಬೆಂಬಲಿತ ಪಡೆಗಳು ಮತ್ತು ಯೆಮೆನ್‌ನ ಹೌದಿ ಬಂಡುಕೋರರ ನಡುವಿನ ಸಂಘರ್ಷ ತೀವ್ರಗೊಂಡಿದ್ದು, ಸೌದಿ ಯುದ್ಧ ವಿಮಾನವೊಂದನ್ನು ಹೊಡೆದುರುಳಿಸಿರುವುದಾಗಿ ಹೌದಿ ಪಡೆಗಳು ಪ್ರತಿಪಾದಿಸಿವೆ. ಮತ್ತೊಂದೆಡೆ, ಪವಿತ್ರ ನಗರಿ ಮಕ್ಕಾದ ದಕ್ಷಿಣ ಭಾಗದಲ್ಲಿ...

ಪ್ರಜ್ವಲ್ ಪ್ರಕರಣ ಮುಂದಿಟ್ಟುಕೊಂಡು ‘ದೇವೇಗೌಡರ ಕುಟುಂಬದ ಧ್ವನಿ ಅಡಗಿಸಲು ಅಸಾಧ್ಯ’: ಸರ್ಕಾರದ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ

ಹೊಳೆನರಸೀಪುರ: ಪ್ರಜ್ವಲ್ ರೇವಣ್ಣ ಪ್ರಕರಣದ ನೆಪದಲ್ಲಿ ದೇವೇಗೌಡರ ಕುಟುಂಬದ ಧ್ವನಿಯನ್ನು ಅಡಗಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಜೈಲಿನಲ್ಲಿದ್ದ ಸಂದರ್ಭದಲ್ಲಿ ಪ್ರಜ್ವಲ್ ರೇವಣ್ಣ ಅವರಿಗೆ ಮೊಬೈಲ್‌ ಫೋನ್ ಹಾಗೂ...