Homeಮುಖಪುಟಬಿಜೆಪಿ ಭ್ರಷ್ಟಾಚಾರದ ಬಗ್ಗೆ ಮಾತನಾಡುವುದು, ಲಾಡೆನ್ ಅಹಿಂಸೆ ಬಗ್ಗೆ ಮಾತನಾಡಿದಂತೆ: ಸಂಜಯ್‌ ಸಿಂಗ್‌

ಬಿಜೆಪಿ ಭ್ರಷ್ಟಾಚಾರದ ಬಗ್ಗೆ ಮಾತನಾಡುವುದು, ಲಾಡೆನ್ ಅಹಿಂಸೆ ಬಗ್ಗೆ ಮಾತನಾಡಿದಂತೆ: ಸಂಜಯ್‌ ಸಿಂಗ್‌

- Advertisement -
- Advertisement -

ಬಿಜೆಪಿ ಭ್ರಷ್ಟಾಚಾರದ ಬಗ್ಗೆ ಮಾತನಾಡುವುದು ಮತ್ತು ಬಿನ್ ಲಾಡೆನ್ ಅಹಿಂಸೆ ಬಗ್ಗೆ ಮಾತನಾಡುವುದು ಎರಡೂ ಒಂದೇ ಎಂದು ಎಎಪಿ ಸಂಸದ ಸಂಜಯ್ ಸಿಂಗ್ ಹೇಳಿದ್ದಾರೆ.

ಬಿಜೆಪಿ ಭ್ರಷ್ಟಾಚಾರದ ಬಗ್ಗೆ ಮಾತನಾಡುವುದು, ಮಾಜಿ ಅಲ್-ಖೈದಾ ಮುಖ್ಯಸ್ಥ ಒಸಾಮಾ ಬಿನ್ ಲಾಡೆನ್ ಅಹಿಂಸೆಯ ಬಗ್ಗೆ ಮಾತನಾಡಿದಂತೆ. ಬಿಜೆಪಿ ಭ್ರಷ್ಟ ಪಕ್ಷವಾಗಿದೆ. ಜನಾರ್ದನ ರೆಡ್ಡಿ, ಅಜಿತ್ ಪವಾರ್, ಛಗನ್ ಭುಜಬಲ್, ನಾರಾಯಣ ರಾಣೆ, ಮುಕುಲ್ ರಾಯ್ ಮತ್ತು ಸುಭೇಂದು ಅಧಿಕಾರಿ ಅವರ ವಿರುದ್ಧ ಭ್ರಷ್ಟಾಚಾರದ ಆರೋಪವಿದ್ದು ಅವರು ಬಿಜೆಪಿ ಪಕ್ಷದ ನಾಯಕರು ಎಂದು ಹೇಳಿದ್ದಾರೆ. ನಾನು ಎಷ್ಟು ಹೆಸರುಗಳನ್ನು ಎಣಿಸಬೇಕೆಂದು ನೀವು ಬಯಸುತ್ತೀರಿ? ಭ್ರಷ್ಟ ನಾಯಕರ ಪಟ್ಟಿ ಮಾಡಿದರೆ ಎಲ್ಲರೂ ಈಗ ಬಿಜೆಪಿಯಲ್ಲಿರುವುದು ಕಂಡು ಬರುತ್ತದೆ ಎಂದು ಸಂಜಯ್ ಸಿಂಗ್‌ ಹೇಳಿದ್ದಾರೆ.

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಬಂಧನವನ್ನು ವಿರೋಧಿಸಿ ಎಎಪಿ ಏಪ್ರಿಲ್ 7ರಂದು ರಾಷ್ಟ್ರವ್ಯಾಪಿ ಉಪವಾಸ ಸತ್ಯಾಗ್ರಹವನ್ನು ನಡೆಸಿದೆ. ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಎಎಪಿಗೆ ಕೇಜ್ರಿವಾಲ್ ಬಂಧನವು ದೊಡ್ಡ ವಿಷಯವಾಗಿದೆ. ಜೈಲಿನಿಂದ ಸರ್ಕಾರವನ್ನು ನಡೆಸುತ್ತಿರುವ ಕೇಜ್ರಿವಾಲ್ ಅವರ ರಾಜೀನಾಮೆಗೆ ಬಿಜೆಪಿ ಒತ್ತಾಯಿಸುತ್ತಿದ್ದಾರೆ, ಮಣಿಪುರ ಸುಮಾರು ಒಂದು ವರ್ಷದಿಂದ ಜನಾಂಗೀಯ ಹಿಂಸಾಚಾರದಲ್ಲಿ ಸಿಲುಕಿದೆ. ಕೇಸರಿ ಪಕ್ಷವು ಮಣಿಪುರ ಮುಖ್ಯಮಂತ್ರಿ ಎನ್.ಬಿರೇನ್ ಸಿಂಗ್ ಅಥವಾ ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಅಜಯ್ ಮಿಶ್ರಾ ತೇನಿ ಅವರಿಂದ ರಾಜೀನಾಮೆ ಕೇಳಿದೆಯೇ ಎಂದು ಸಿಂಗ್ ಕೇಳಿದ್ದಾರೆ.

ನಿನ್ನೆ ದೇಶಾದ್ಯಂತ ಮಾತ್ರವಲ್ಲದೆ ವಿದೇಶಗಳಲ್ಲೂ ಉಪವಾಸ ಸತ್ಯಾಗ್ರಹ ನಡೆಸಲಾಗಿದೆ. ಕೇಜ್ರಿವಾಲ್ ವಿರುದ್ಧ ಬಿಜೆಪಿ ಹೇಗೆ ಸುಳ್ಳು ಕೇಸ್ ಹಾಕಿ ಜೈಲಿಗೆ ತಳ್ಳಿದೆ ಎಂಬುವುದನ್ನು ಬಯಲಿಗೆಳೆಯುವುದು ಈ ಪ್ರತಿಭಟನೆಯ ಏಕೈಕ ಉದ್ದೇಶವಾಗಿತ್ತು. ವಾಸ್ತವದಲ್ಲಿ ಮದ್ಯದ ಹಗರಣದ ಹಿಂದೆ ಬಿಜೆಪಿಯ ಕೈವಾಡವಿದೆ. AAPಯನ್ನು ಲಿಂಕ್ ಮಾಡುವ ಯಾವುದೇ ಹಣದ ಜಾಡು ಕಂಡುಬಂದಿಲ್ಲ. ಲಿಕ್ಕರ್ ಹಗರಣದಲ್ಲಿ ಕಿಂಗ್ ಪಿನ್ ಎನ್ನಲಾದ ಶರತ್ ರೆಡ್ಡಿಯಿಂದ ಬಿಜೆಪಿ 55 ಕೋಟಿ ರೂ. ಪಡೆದುಕೊಂಡಿದೆ. ಇದು ಆರಂಭ ಮಾತ್ರ, ಬಿಜೆಪಿಯನ್ನು ಬಯಲಿಗೆಳೆಯಲು ಧರಣಿ, ಪ್ರತಿಭಟನೆ ಮಾಡುತ್ತೇವೆ ಎಂದು ಹೇಳಿದ್ದಾರೆ.

ಪ್ರಜಾಪ್ರಭುತ್ವ ಮತ್ತು ಸಂವಿಧಾನ ಎರಡೂ ಬೆದರಿಕೆಗಳನ್ನು ಎದುರಿಸುತ್ತಿವೆ ಎಂಬುದರಲ್ಲಿ ಸಂದೇಹವಿಲ್ಲ. ಚುನಾಯಿತ ಸಿಎಂಗಳನ್ನು ಬಂಧಿಸುವ ರೀತಿ ನೋಡಿದಾಗ ನಮ್ಮ ಪ್ರಜಾಪ್ರಭುತ್ವ ಅಪಾಯದಲ್ಲಿದೆ ಎನ್ನುವುದು ಮನವರಿಕೆಯಾಗುತ್ತದೆ. ಸ್ವತಂತ್ರ ಭಾರತದಲ್ಲಿ ಬಿಜೆಪಿ ಅತ್ಯಂತ ಭ್ರಷ್ಟ ಪಕ್ಷ ಎಂಬ ಅಂಶವನ್ನೂ ನಾವು ಎತ್ತಿ ತೋರಿಸುತ್ತೇವೆ. ಬಿಜೆಪಿ ಇಡೀ ದೇಶವನ್ನು ಅದಾನಿಗೆ ಒತ್ತೆ ಇಟ್ಟಿದೆ, ತನ್ನ ದೊಡ್ಡ ಉದ್ಯಮಿ ಸ್ನೇಹಿತರ ಸಾಲವನ್ನು ಮನ್ನಾ ಮಾಡಿದೆ ಎಂದು ಸಂಜಯ್‌ ಸಿಂಗ್‌ ಹೇಳಿದ್ದಾರೆ.

ಇದನ್ನು ಓದಿ: ಗುಜರಾತ್‌: ನಮಾಝ್‌ ಮಾಡುತ್ತಿದ್ದಾಗ ವಿದೇಶಿ ವಿದ್ಯಾರ್ಥಿಗಳ ಮೇಲೆ ದಾಳಿ ಪ್ರಕರಣ: ಹಾಸ್ಟೆಲ್‌ ಬಿಟ್ಟು ತೆರಳುವಂತೆ ಸಂತ್ರಸ್ತರಿಗೆ ಸೂಚನೆ

 

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...