Homeಮುಖಪುಟಗಾಝಾ ಮೇಲಿನ ಇಸ್ರೇಲ್ ಆಕ್ರಮಣಕ್ಕೆ 6 ತಿಂಗಳು: 33 ಸಾವಿರ ದಾಟಿದ ಸಾವಿನ ಸಂಖ್ಯೆ

ಗಾಝಾ ಮೇಲಿನ ಇಸ್ರೇಲ್ ಆಕ್ರಮಣಕ್ಕೆ 6 ತಿಂಗಳು: 33 ಸಾವಿರ ದಾಟಿದ ಸಾವಿನ ಸಂಖ್ಯೆ

- Advertisement -
- Advertisement -

ಇಸ್ರೇಲ್-ಹಮಾಸ್ ನಡುವಿನ ಸಂಘರ್ಷ ಪ್ರಾರಂಭಗೊಂಡು ಆರು ತಿಂಗಳು ತುಂಬಿದ್ದು, ಗಾಝಾದಲ್ಲಿ ಸಾವಿನ ಸಂಖ್ಯೆ 33 ಸಾವಿರ ದಾಟಿದೆ ಎಂದು ಅಲ್ಲಿನ ಆರೋಗ್ಯ ಸಚಿವಾಲಯ ತಿಳಿಸಿದೆ.

ಗಾಝಾ ಮೇಲೆ ಇಸ್ರೇಲ್ ಆಕ್ರಮಣ ನಡೆಸಲು ಪ್ರಾರಂಭಿಸಿ ಅರ್ಧ ವರ್ಷ ಪೂರ್ಣಗೊಂಡರೂ, ಯುದ್ದ ನಿಲ್ಲುವ ಯಾವುದೇ ಲಕ್ಷಣ ಗೋಚರಿಸುತ್ತಿಲ್ಲ. ಪ್ರತಿ ದಿನವೂ ಗಾಝಾದಲ್ಲಿ ಕಟ್ಟಡಗಳು ಉರುಳುವುದು ನೂರಾರು ಜನರು ಸಾವನ್ನಪ್ಪುವುದು ಮುಂದುವರೆಯುತ್ತಲೇ ಇದೆ.

ಇಸ್ರೇಲ್ ಸೇನೆ ಹಮಾಸ್ ಹೆಸರೇಳಿಕೊಂಡು ಗಾಝಾದ ಮೇಲೆ ಮನ ಬಂದಂತೆ ಮಿಸೈಲ್ ದಾಳಿ, ಯುದ್ಧ ಟ್ಯಾಂಕರ್‌ಗಳ ಮೂಲಕ ದಾಳಿ, ಕಂಡ ಕಂಡಲ್ಲಿ ಮನುಷ್ಯರನ್ನು ಗುಂಡಿಟ್ಟು ಕೊಲ್ಲುವ ಮೂಲಕ ಅಕ್ಷರಶಃ ನರಕವನ್ನಾಗಿಸಿದೆ.

ಗಾಝಾದ ಲಕ್ಷಾಂತರ ನಾಗರಿಕರು ತಮ್ಮದೆಲ್ಲವನ್ನು ಬಿಟ್ಟು ದೂರದ ಊರುಗಳಿಗೆ ಪಲಾಯಣ ಮಾಡಿದ್ದಾರೆ. ಆದರೆ, ಅಲ್ಲಿಯೂ ಶಿಬಿರಗಳನ್ನು ಗುರಿಯಾಗಿಸಿ ಇಸ್ರೇಲ್ ದಾಳಿ ನಡೆಸುತ್ತಿದೆ. ಉತ್ತರ ಗಾಝಾದಲ್ಲಿ ಲಕ್ಷಾಂತರ ಜನರು ಹಸಿವಿನಿಂದ ನರಳುತ್ತಿದ್ದಾರೆ. ಒಂದೆಡೆ ಬರಗಾಲ ಮತ್ತೊಂದೆಡೆ ಆಹಾರದ ಕೊರತೆ ಜನರನ್ನು ನರಳುವಂತೆ ಮಾಡಿದೆ ಎಂದು ಅಲ್ ಜಝೀರಾ ವರದಿ ಮಾಡಿದೆ.

ಗಾಝಾದ ದಕ್ಷಿಣದ ನಗರದಲ್ಲಿ ಮಕ್ಕಳು, ಮಹಿಳೆಯರು, ವೃದ್ದರೂ ಎನ್ನದೆ ಎಲ್ಲಾ ವರ್ಗದ ಜನರು ಆಹಾರಕ್ಕಾಗಿ ಪಾತ್ರೆ ಹಿಡಿದು ನಿಂತಿರುವ ದೃಶ್ಯಗಳು ಕಾಣುತ್ತಿವೆ. ರಫಾ ನಗರದಲ್ಲಿ ಯಾವುದೇ ಸೌಲಭ್ಯಗಳಿಲ್ಲದ ಟೆಂಟ್‌ಗಳು ತುಂಬಿವೆ. ಗಾಝಾದ ಇತರ ಭಾಗಗಳಲ್ಲಿ ಇಸ್ರೇಲ್‌ನ ಆಕ್ರಮಣದಿಂದ ಪಲಾಯನ ಮಾಡಿದ ಲಕ್ಷಾಂತರ ಪ್ಯಾಲೆಸ್ತೀನಿಯರು ತುಂಬಿದ್ದಾರೆ. ರಫಾ ನಗರದಲ್ಲಿ ನಿರಾಶ್ರಿತ ಆಗಮನದಿಂದ ಜನಸಂಖ್ಯೆ ಸುಮಾರು 1.4 ಮಿಲಿಯನ್‌ಗೆ ತಲುಪಿದೆ. ಇದು ಅಲ್ಲಿನ ಸಾಮಾನ್ಯ ಜನಸಂಖ್ಯೆಗಿಂತ ಐದು ಪಟ್ಟು ಹೆಚ್ಚು ಎಂದು ಹೇಳಲಾಗ್ತಿದೆ.

ಆರು ತಿಂಗಳು ಕಳೆದರೂ ಇನ್ನೂ ಇಸ್ರೇಲ್ ಆಕ್ರಮಣ ಯಾವ ದಿಕ್ಕಿದೆ ಮುಂದುವರೆಯಿಲಿದೆ ಎಂದು ಗೊತ್ತಾಗುತ್ತಿಲ್ಲ. ವಿಶ್ವ ಸಂಸ್ಥೆಯ ಭದ್ರತಾ ಸಮಿತಿ, ಮಾನವ ಹಕ್ಕುಗಳ ಸಮಿತಿಯಲ್ಲಿ ಹಲವು ಬಾರಿ ತಕ್ಷಣ ಕದನ ವಿರಾಮಕ್ಕೆ ನಿರ್ಣಯ ಅಂಗೀಕರಿಸಿದರೂ ಯಾವುದೇ ಪರಿಣಾಮ ಬೀರಿಲ್ಲ. ಹಮಾಸ್ ಮತ್ತು ಇಸ್ರೇಲ್ ನಡುವೆ ಯುಎಸ್‌ಎಸ್‌ಎ, ಈಜಿಪ್ಟ್, ಕತಾರ್ ಮಧ್ಯಸ್ಥಿಕೆ ನಡೆಸಿದರೂ, ಅದೂ ಫಲ ಕೊಟ್ಟಿಲ್ಲ. ಇಸ್ರೇಲ್ ತನ್ನ ಆಕ್ರಮಣವನ್ನು ರಫಾಗೆ ವಿಸ್ತರಿಸಲು ನಿರ್ಧರಿಸಿದೆ ಎಂದು ಅಲ್ಲಿನ ರಕ್ಷಣಾ ಸಚಿವ ಹೇಳಿದ್ದಾರೆ. ಹಾಗೇನಾದರು ಆದರೆ, ಸಾವು-ನೋವುಗಳ ಸಂಖ್ಯೆ ಹೆಚ್ಚಾಗಬಹುದು.

ಅಕ್ಟೋಬರ್ 7, 2023ರಂದು ಪ್ರಾರಂಭಗೊಂಡ ಹಮಾಸ್ ಮತ್ತು ಇಸ್ರೇಲ್ ನಡುವಿನ ಸಂಘರ್ಷ 6 ತಿಂಗಳ ಕಳೆದರೂ ಮುಂದುವರೆದಿದೆ. ಈ ಯುದ್ಧದಲ್ಲಿ ಇಸ್ರೇಲ್ ಮತ್ತು ಹಮಾಸ್‌ನ ಎಷ್ಟು ಜನರು ಬಲಿಯಾಗಿದ್ದಾರೆ ಗೊತ್ತಿಲ್ಲ. ಆದರೆ, 30 ಸಾವಿರದಷ್ಟು ಅಮಾಯಕ ನಾಗರಿಕರು ಮಾತ್ರ ತಮ್ಮ ಪ್ರಾಣ ಕಳೆದುಕೊಂಡಿದ್ದಾರೆ.

ಇದನ್ನೂ ಓದಿ : ಇಸ್ರೇಲ್‌ನ ಯಾವುದೇ ರಾಯಭಾರಿ ಕಚೇರಿಗಳು ಇನ್ನು ಸುರಕ್ಷಿತವಾಗಿರಲ್ಲ: ಪ್ರತಿಕಾರದ ಎಚ್ಚರಿಕೆ ನೀಡಿದ ಇರಾನ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...