Homeಮುಖಪುಟಗಾಝಾ ಮೇಲಿನ ಇಸ್ರೇಲ್ ಆಕ್ರಮಣಕ್ಕೆ 6 ತಿಂಗಳು: 33 ಸಾವಿರ ದಾಟಿದ ಸಾವಿನ ಸಂಖ್ಯೆ

ಗಾಝಾ ಮೇಲಿನ ಇಸ್ರೇಲ್ ಆಕ್ರಮಣಕ್ಕೆ 6 ತಿಂಗಳು: 33 ಸಾವಿರ ದಾಟಿದ ಸಾವಿನ ಸಂಖ್ಯೆ

- Advertisement -
- Advertisement -

ಇಸ್ರೇಲ್-ಹಮಾಸ್ ನಡುವಿನ ಸಂಘರ್ಷ ಪ್ರಾರಂಭಗೊಂಡು ಆರು ತಿಂಗಳು ತುಂಬಿದ್ದು, ಗಾಝಾದಲ್ಲಿ ಸಾವಿನ ಸಂಖ್ಯೆ 33 ಸಾವಿರ ದಾಟಿದೆ ಎಂದು ಅಲ್ಲಿನ ಆರೋಗ್ಯ ಸಚಿವಾಲಯ ತಿಳಿಸಿದೆ.

ಗಾಝಾ ಮೇಲೆ ಇಸ್ರೇಲ್ ಆಕ್ರಮಣ ನಡೆಸಲು ಪ್ರಾರಂಭಿಸಿ ಅರ್ಧ ವರ್ಷ ಪೂರ್ಣಗೊಂಡರೂ, ಯುದ್ದ ನಿಲ್ಲುವ ಯಾವುದೇ ಲಕ್ಷಣ ಗೋಚರಿಸುತ್ತಿಲ್ಲ. ಪ್ರತಿ ದಿನವೂ ಗಾಝಾದಲ್ಲಿ ಕಟ್ಟಡಗಳು ಉರುಳುವುದು ನೂರಾರು ಜನರು ಸಾವನ್ನಪ್ಪುವುದು ಮುಂದುವರೆಯುತ್ತಲೇ ಇದೆ.

ಇಸ್ರೇಲ್ ಸೇನೆ ಹಮಾಸ್ ಹೆಸರೇಳಿಕೊಂಡು ಗಾಝಾದ ಮೇಲೆ ಮನ ಬಂದಂತೆ ಮಿಸೈಲ್ ದಾಳಿ, ಯುದ್ಧ ಟ್ಯಾಂಕರ್‌ಗಳ ಮೂಲಕ ದಾಳಿ, ಕಂಡ ಕಂಡಲ್ಲಿ ಮನುಷ್ಯರನ್ನು ಗುಂಡಿಟ್ಟು ಕೊಲ್ಲುವ ಮೂಲಕ ಅಕ್ಷರಶಃ ನರಕವನ್ನಾಗಿಸಿದೆ.

ಗಾಝಾದ ಲಕ್ಷಾಂತರ ನಾಗರಿಕರು ತಮ್ಮದೆಲ್ಲವನ್ನು ಬಿಟ್ಟು ದೂರದ ಊರುಗಳಿಗೆ ಪಲಾಯಣ ಮಾಡಿದ್ದಾರೆ. ಆದರೆ, ಅಲ್ಲಿಯೂ ಶಿಬಿರಗಳನ್ನು ಗುರಿಯಾಗಿಸಿ ಇಸ್ರೇಲ್ ದಾಳಿ ನಡೆಸುತ್ತಿದೆ. ಉತ್ತರ ಗಾಝಾದಲ್ಲಿ ಲಕ್ಷಾಂತರ ಜನರು ಹಸಿವಿನಿಂದ ನರಳುತ್ತಿದ್ದಾರೆ. ಒಂದೆಡೆ ಬರಗಾಲ ಮತ್ತೊಂದೆಡೆ ಆಹಾರದ ಕೊರತೆ ಜನರನ್ನು ನರಳುವಂತೆ ಮಾಡಿದೆ ಎಂದು ಅಲ್ ಜಝೀರಾ ವರದಿ ಮಾಡಿದೆ.

ಗಾಝಾದ ದಕ್ಷಿಣದ ನಗರದಲ್ಲಿ ಮಕ್ಕಳು, ಮಹಿಳೆಯರು, ವೃದ್ದರೂ ಎನ್ನದೆ ಎಲ್ಲಾ ವರ್ಗದ ಜನರು ಆಹಾರಕ್ಕಾಗಿ ಪಾತ್ರೆ ಹಿಡಿದು ನಿಂತಿರುವ ದೃಶ್ಯಗಳು ಕಾಣುತ್ತಿವೆ. ರಫಾ ನಗರದಲ್ಲಿ ಯಾವುದೇ ಸೌಲಭ್ಯಗಳಿಲ್ಲದ ಟೆಂಟ್‌ಗಳು ತುಂಬಿವೆ. ಗಾಝಾದ ಇತರ ಭಾಗಗಳಲ್ಲಿ ಇಸ್ರೇಲ್‌ನ ಆಕ್ರಮಣದಿಂದ ಪಲಾಯನ ಮಾಡಿದ ಲಕ್ಷಾಂತರ ಪ್ಯಾಲೆಸ್ತೀನಿಯರು ತುಂಬಿದ್ದಾರೆ. ರಫಾ ನಗರದಲ್ಲಿ ನಿರಾಶ್ರಿತ ಆಗಮನದಿಂದ ಜನಸಂಖ್ಯೆ ಸುಮಾರು 1.4 ಮಿಲಿಯನ್‌ಗೆ ತಲುಪಿದೆ. ಇದು ಅಲ್ಲಿನ ಸಾಮಾನ್ಯ ಜನಸಂಖ್ಯೆಗಿಂತ ಐದು ಪಟ್ಟು ಹೆಚ್ಚು ಎಂದು ಹೇಳಲಾಗ್ತಿದೆ.

ಆರು ತಿಂಗಳು ಕಳೆದರೂ ಇನ್ನೂ ಇಸ್ರೇಲ್ ಆಕ್ರಮಣ ಯಾವ ದಿಕ್ಕಿದೆ ಮುಂದುವರೆಯಿಲಿದೆ ಎಂದು ಗೊತ್ತಾಗುತ್ತಿಲ್ಲ. ವಿಶ್ವ ಸಂಸ್ಥೆಯ ಭದ್ರತಾ ಸಮಿತಿ, ಮಾನವ ಹಕ್ಕುಗಳ ಸಮಿತಿಯಲ್ಲಿ ಹಲವು ಬಾರಿ ತಕ್ಷಣ ಕದನ ವಿರಾಮಕ್ಕೆ ನಿರ್ಣಯ ಅಂಗೀಕರಿಸಿದರೂ ಯಾವುದೇ ಪರಿಣಾಮ ಬೀರಿಲ್ಲ. ಹಮಾಸ್ ಮತ್ತು ಇಸ್ರೇಲ್ ನಡುವೆ ಯುಎಸ್‌ಎಸ್‌ಎ, ಈಜಿಪ್ಟ್, ಕತಾರ್ ಮಧ್ಯಸ್ಥಿಕೆ ನಡೆಸಿದರೂ, ಅದೂ ಫಲ ಕೊಟ್ಟಿಲ್ಲ. ಇಸ್ರೇಲ್ ತನ್ನ ಆಕ್ರಮಣವನ್ನು ರಫಾಗೆ ವಿಸ್ತರಿಸಲು ನಿರ್ಧರಿಸಿದೆ ಎಂದು ಅಲ್ಲಿನ ರಕ್ಷಣಾ ಸಚಿವ ಹೇಳಿದ್ದಾರೆ. ಹಾಗೇನಾದರು ಆದರೆ, ಸಾವು-ನೋವುಗಳ ಸಂಖ್ಯೆ ಹೆಚ್ಚಾಗಬಹುದು.

ಅಕ್ಟೋಬರ್ 7, 2023ರಂದು ಪ್ರಾರಂಭಗೊಂಡ ಹಮಾಸ್ ಮತ್ತು ಇಸ್ರೇಲ್ ನಡುವಿನ ಸಂಘರ್ಷ 6 ತಿಂಗಳ ಕಳೆದರೂ ಮುಂದುವರೆದಿದೆ. ಈ ಯುದ್ಧದಲ್ಲಿ ಇಸ್ರೇಲ್ ಮತ್ತು ಹಮಾಸ್‌ನ ಎಷ್ಟು ಜನರು ಬಲಿಯಾಗಿದ್ದಾರೆ ಗೊತ್ತಿಲ್ಲ. ಆದರೆ, 30 ಸಾವಿರದಷ್ಟು ಅಮಾಯಕ ನಾಗರಿಕರು ಮಾತ್ರ ತಮ್ಮ ಪ್ರಾಣ ಕಳೆದುಕೊಂಡಿದ್ದಾರೆ.

ಇದನ್ನೂ ಓದಿ : ಇಸ್ರೇಲ್‌ನ ಯಾವುದೇ ರಾಯಭಾರಿ ಕಚೇರಿಗಳು ಇನ್ನು ಸುರಕ್ಷಿತವಾಗಿರಲ್ಲ: ಪ್ರತಿಕಾರದ ಎಚ್ಚರಿಕೆ ನೀಡಿದ ಇರಾನ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...