Homeಮುಖಪುಟಗಾಝಾ ಮೇಲಿನ ಇಸ್ರೇಲ್ ಆಕ್ರಮಣಕ್ಕೆ 6 ತಿಂಗಳು: 33 ಸಾವಿರ ದಾಟಿದ ಸಾವಿನ ಸಂಖ್ಯೆ

ಗಾಝಾ ಮೇಲಿನ ಇಸ್ರೇಲ್ ಆಕ್ರಮಣಕ್ಕೆ 6 ತಿಂಗಳು: 33 ಸಾವಿರ ದಾಟಿದ ಸಾವಿನ ಸಂಖ್ಯೆ

- Advertisement -
- Advertisement -

ಇಸ್ರೇಲ್-ಹಮಾಸ್ ನಡುವಿನ ಸಂಘರ್ಷ ಪ್ರಾರಂಭಗೊಂಡು ಆರು ತಿಂಗಳು ತುಂಬಿದ್ದು, ಗಾಝಾದಲ್ಲಿ ಸಾವಿನ ಸಂಖ್ಯೆ 33 ಸಾವಿರ ದಾಟಿದೆ ಎಂದು ಅಲ್ಲಿನ ಆರೋಗ್ಯ ಸಚಿವಾಲಯ ತಿಳಿಸಿದೆ.

ಗಾಝಾ ಮೇಲೆ ಇಸ್ರೇಲ್ ಆಕ್ರಮಣ ನಡೆಸಲು ಪ್ರಾರಂಭಿಸಿ ಅರ್ಧ ವರ್ಷ ಪೂರ್ಣಗೊಂಡರೂ, ಯುದ್ದ ನಿಲ್ಲುವ ಯಾವುದೇ ಲಕ್ಷಣ ಗೋಚರಿಸುತ್ತಿಲ್ಲ. ಪ್ರತಿ ದಿನವೂ ಗಾಝಾದಲ್ಲಿ ಕಟ್ಟಡಗಳು ಉರುಳುವುದು ನೂರಾರು ಜನರು ಸಾವನ್ನಪ್ಪುವುದು ಮುಂದುವರೆಯುತ್ತಲೇ ಇದೆ.

ಇಸ್ರೇಲ್ ಸೇನೆ ಹಮಾಸ್ ಹೆಸರೇಳಿಕೊಂಡು ಗಾಝಾದ ಮೇಲೆ ಮನ ಬಂದಂತೆ ಮಿಸೈಲ್ ದಾಳಿ, ಯುದ್ಧ ಟ್ಯಾಂಕರ್‌ಗಳ ಮೂಲಕ ದಾಳಿ, ಕಂಡ ಕಂಡಲ್ಲಿ ಮನುಷ್ಯರನ್ನು ಗುಂಡಿಟ್ಟು ಕೊಲ್ಲುವ ಮೂಲಕ ಅಕ್ಷರಶಃ ನರಕವನ್ನಾಗಿಸಿದೆ.

ಗಾಝಾದ ಲಕ್ಷಾಂತರ ನಾಗರಿಕರು ತಮ್ಮದೆಲ್ಲವನ್ನು ಬಿಟ್ಟು ದೂರದ ಊರುಗಳಿಗೆ ಪಲಾಯಣ ಮಾಡಿದ್ದಾರೆ. ಆದರೆ, ಅಲ್ಲಿಯೂ ಶಿಬಿರಗಳನ್ನು ಗುರಿಯಾಗಿಸಿ ಇಸ್ರೇಲ್ ದಾಳಿ ನಡೆಸುತ್ತಿದೆ. ಉತ್ತರ ಗಾಝಾದಲ್ಲಿ ಲಕ್ಷಾಂತರ ಜನರು ಹಸಿವಿನಿಂದ ನರಳುತ್ತಿದ್ದಾರೆ. ಒಂದೆಡೆ ಬರಗಾಲ ಮತ್ತೊಂದೆಡೆ ಆಹಾರದ ಕೊರತೆ ಜನರನ್ನು ನರಳುವಂತೆ ಮಾಡಿದೆ ಎಂದು ಅಲ್ ಜಝೀರಾ ವರದಿ ಮಾಡಿದೆ.

ಗಾಝಾದ ದಕ್ಷಿಣದ ನಗರದಲ್ಲಿ ಮಕ್ಕಳು, ಮಹಿಳೆಯರು, ವೃದ್ದರೂ ಎನ್ನದೆ ಎಲ್ಲಾ ವರ್ಗದ ಜನರು ಆಹಾರಕ್ಕಾಗಿ ಪಾತ್ರೆ ಹಿಡಿದು ನಿಂತಿರುವ ದೃಶ್ಯಗಳು ಕಾಣುತ್ತಿವೆ. ರಫಾ ನಗರದಲ್ಲಿ ಯಾವುದೇ ಸೌಲಭ್ಯಗಳಿಲ್ಲದ ಟೆಂಟ್‌ಗಳು ತುಂಬಿವೆ. ಗಾಝಾದ ಇತರ ಭಾಗಗಳಲ್ಲಿ ಇಸ್ರೇಲ್‌ನ ಆಕ್ರಮಣದಿಂದ ಪಲಾಯನ ಮಾಡಿದ ಲಕ್ಷಾಂತರ ಪ್ಯಾಲೆಸ್ತೀನಿಯರು ತುಂಬಿದ್ದಾರೆ. ರಫಾ ನಗರದಲ್ಲಿ ನಿರಾಶ್ರಿತ ಆಗಮನದಿಂದ ಜನಸಂಖ್ಯೆ ಸುಮಾರು 1.4 ಮಿಲಿಯನ್‌ಗೆ ತಲುಪಿದೆ. ಇದು ಅಲ್ಲಿನ ಸಾಮಾನ್ಯ ಜನಸಂಖ್ಯೆಗಿಂತ ಐದು ಪಟ್ಟು ಹೆಚ್ಚು ಎಂದು ಹೇಳಲಾಗ್ತಿದೆ.

ಆರು ತಿಂಗಳು ಕಳೆದರೂ ಇನ್ನೂ ಇಸ್ರೇಲ್ ಆಕ್ರಮಣ ಯಾವ ದಿಕ್ಕಿದೆ ಮುಂದುವರೆಯಿಲಿದೆ ಎಂದು ಗೊತ್ತಾಗುತ್ತಿಲ್ಲ. ವಿಶ್ವ ಸಂಸ್ಥೆಯ ಭದ್ರತಾ ಸಮಿತಿ, ಮಾನವ ಹಕ್ಕುಗಳ ಸಮಿತಿಯಲ್ಲಿ ಹಲವು ಬಾರಿ ತಕ್ಷಣ ಕದನ ವಿರಾಮಕ್ಕೆ ನಿರ್ಣಯ ಅಂಗೀಕರಿಸಿದರೂ ಯಾವುದೇ ಪರಿಣಾಮ ಬೀರಿಲ್ಲ. ಹಮಾಸ್ ಮತ್ತು ಇಸ್ರೇಲ್ ನಡುವೆ ಯುಎಸ್‌ಎಸ್‌ಎ, ಈಜಿಪ್ಟ್, ಕತಾರ್ ಮಧ್ಯಸ್ಥಿಕೆ ನಡೆಸಿದರೂ, ಅದೂ ಫಲ ಕೊಟ್ಟಿಲ್ಲ. ಇಸ್ರೇಲ್ ತನ್ನ ಆಕ್ರಮಣವನ್ನು ರಫಾಗೆ ವಿಸ್ತರಿಸಲು ನಿರ್ಧರಿಸಿದೆ ಎಂದು ಅಲ್ಲಿನ ರಕ್ಷಣಾ ಸಚಿವ ಹೇಳಿದ್ದಾರೆ. ಹಾಗೇನಾದರು ಆದರೆ, ಸಾವು-ನೋವುಗಳ ಸಂಖ್ಯೆ ಹೆಚ್ಚಾಗಬಹುದು.

ಅಕ್ಟೋಬರ್ 7, 2023ರಂದು ಪ್ರಾರಂಭಗೊಂಡ ಹಮಾಸ್ ಮತ್ತು ಇಸ್ರೇಲ್ ನಡುವಿನ ಸಂಘರ್ಷ 6 ತಿಂಗಳ ಕಳೆದರೂ ಮುಂದುವರೆದಿದೆ. ಈ ಯುದ್ಧದಲ್ಲಿ ಇಸ್ರೇಲ್ ಮತ್ತು ಹಮಾಸ್‌ನ ಎಷ್ಟು ಜನರು ಬಲಿಯಾಗಿದ್ದಾರೆ ಗೊತ್ತಿಲ್ಲ. ಆದರೆ, 30 ಸಾವಿರದಷ್ಟು ಅಮಾಯಕ ನಾಗರಿಕರು ಮಾತ್ರ ತಮ್ಮ ಪ್ರಾಣ ಕಳೆದುಕೊಂಡಿದ್ದಾರೆ.

ಇದನ್ನೂ ಓದಿ : ಇಸ್ರೇಲ್‌ನ ಯಾವುದೇ ರಾಯಭಾರಿ ಕಚೇರಿಗಳು ಇನ್ನು ಸುರಕ್ಷಿತವಾಗಿರಲ್ಲ: ಪ್ರತಿಕಾರದ ಎಚ್ಚರಿಕೆ ನೀಡಿದ ಇರಾನ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...