Homeಕರ್ನಾಟಕ'ಇದೇ ನಿಮ್ಮ ನಿಜವಾದ ಜಾತಕ..'; ಪ್ರಲ್ಹಾದ ಜೋಷಿ 'ರಾಜಕೀಯ ತಂತ್ರಗಾರಿಕೆ' ವಾಟ್ಸಾಪ್ ಸಂದೇಶ ವೈರಲ್

‘ಇದೇ ನಿಮ್ಮ ನಿಜವಾದ ಜಾತಕ..’; ಪ್ರಲ್ಹಾದ ಜೋಷಿ ‘ರಾಜಕೀಯ ತಂತ್ರಗಾರಿಕೆ’ ವಾಟ್ಸಾಪ್ ಸಂದೇಶ ವೈರಲ್

- Advertisement -
- Advertisement -

ಹುಬ್ಬಳ್ಳಿ-ಧಾರವಾಡ ಬಿಜೆಪಿ ಲೋಕಸಭಾ ಅಭ್ಯರ್ಥಿ, ಕೇಂದ್ರ ಸಚಿವ ಪ್ರಲ್ಹಾದ ಜೋಷಿ ವಿರುದ್ಧ ಕ್ಷೇತ್ರದಲ್ಲಿ ಎದ್ದಿರುವ ಅಸಮಾಧಾನ ಕಡಿಮೆಯಾಗುವ ಲಕ್ಷಣ ಕಾಣುತ್ತಿಲ್ಲ. ಮತದಾನಕ್ಕೆ ದಿನಗಣನೆ ಆರಂಭವಾಗಿರುವ ಈ ಹೊತ್ತಿನಲ್ಲೆ ದಿಂಗಾಲೇಶ್ವರ ಸ್ವಾಮೀಜಿ ಸೇರಿದಂತೆ ಹಲವು ವೀರಶೈವ ಲಿಂಗಾಯಿತ ಸ್ವಾಮೀಜಿಗಳ ಬಂಡಾಯ ಸಾರಿದ್ದು, ಇದೀಗ ಜೋಷಿ ವಿರುದ್ಧ 12 ಅಂಶಗಳ ಚಾರ್ಜ್ ಶೀಟ್ ಒಂದು ವಾಟ್ಸಾಪ್ ನಲ್ಲಿ ಹರಿದಾಡುತ್ತಿದೆ.

ವಾಟ್ಸಾಪ್ ಸಂದೇಶದಲ್ಲಿ ಏನಿದೆ?

‘ಮಿ. ಜೋಷಿ, ಹಳ್ಳಿ ಜನ ದಡ್ಡರಲ್ಲ, ಅವರಿಗೆ ನಿಮ್ಮ ಜಾತಕ ಚೆನ್ನಾಗಿ ಗೊತ್ತಿದೆ. ನಿಮ್ಮ ಜಾತಕ ನಾ ಹೇಳತೀನಿ ಕೇಳ್ರಿ; ಇದೂ ಯಾರಿಗೂ ಗೊತ್ತಿಲ್ಲಾಂತ ತಿಳಿಬೇಡ್ರಿ.. ಎಂದು ಕಟುವಾಗಿ ಟೀಕಿಸಿರುವ ಸಂದೇಶದಲ್ಲಿ, ಜೋಷಿ ತಮ್ಮ ರಾಜಕೀಯ ಜೀವನದಲ್ಲಿ ಈವರೆಗೆ ನಡೆಸಿರುವ ತಂತ್ರಗಾರಿಕೆಗೆ ಸಂಬಂಧಿಸಿದಂತೆ ಒಟ್ಟು ಹನ್ನೆರಡು ಅಂಶಗಳನ್ನು ಪಟ್ಟಿ ಮಾಡಲಾಗಿದೆ.

ಅಮೃತ್ ದೇಸಾಯಿ ಹೆಗಲ ಮೇಲೆ ಬಂದೂಕು ಇಟ್ಟು ಸೀಮಾ ಮಸೂತಿ ಹೊಡೆದ್ರಿ, ⁠ನಾಗರಾಜ್ ಚಬ್ಬಿ ಕರ್ಕೊಂಡು ಬಂದು ಶಿವು ಹಿರೇಮಠ್ ಅವರನ್ ನಿತ್ರಾಣ ಮಾಡಿದಿರಿ, ⁠ಈರೇಶ್ ಅಂಚಟಗೇರಿನ್ ಚೂ ಬಿಟ್ಟು ಅರವಿಂದ್ ಬೆಲ್ಲದ್ ಹೊಡೆಯಾಕ್ ಪ್ರಯತ್ನ ಪಟ್ರಿ, ⁠ಅದೇ ಬೆಲ್ಲದ್ ಬಳಸ್ಕೊಂಡು ಮುನೇನಕೊಪ್ಪನ್ ಹೊಡೆಯಾಕ್ ಟ್ರೈ ಮಾಡಿದ್ರಿ, ⁠ಅಧಿಕಾರ ದುರ್ಬಳಕೆ ಮಾಡಿಕೊಂಡು ವಿನಯ್ ಕುಲಕರ್ಣಿನ್ ಜೈಲಿಗಟ್ಟಿ, ಜಿಲ್ಲೆಯೊಳಗ ಕಾಲ್ ಇಡದಂಗ್ ಮಾಡಿದ್ರಿ’ ಎಂದು ಆರೋಪ ಮಾಡಿದ್ದಾರೆ.

ಮುಂದುವರಿದು, ‘⁠ಡಾ.ನಾಲವಾಡ್ ಅವರಿಗೆ ಆಸೆ ಹುಟ್ಟಿಸಿ ಹಾವೇರಿಗೆ ಕಳಿಸಿ ಹೈರಾಣ ಮಾಡಿದ್ರಿ, ⁠ಡಾ.ನಾಲವಾಡ್ ಹಿಂದೆನೇ ಶರಣು ಅಂಗಡಿನೂ ಚೂ ಬಿಟ್ಟು ಮಜಾ ನೋಡಿದ್ರಿ, ⁠ಹೈಕಮಾಂಡ್ ಹೆಗಲ ಮೇಲೆ ಬಂದೂಕು ಇಟ್ಟು ಜಗದೀಶ್ ಶೆಟ್ರಿಗೆ ಟಿಕೆಟ್ ಕೊಡದೇ ಅಸಹ್ಯ ಮಾಡಿದ್ರಿ, ಈಗ ಧಾರವಾಡ ಜಿಲ್ಲೆಯಿಂದಲೇ ಹೊರಗ ಹಾಕಿದ್ರಿ, ⁠ಎಂ.ಆರ್.ಪಾಟೀಲ್ ಬಳಸಕೊಂಡು ಚಿಕ್ಕನಗೌಡ್ರನ್ ಮುಗಿಸಿದಿರಿ. ⁠ಅನಂತ್ ಕುಮಾರ್ ಕೈ ಹಿಡ್ಕೊಂಡ್ ಮೇಲೆ ಬಂದು ಅವರ್ ಸತ್ ಮೇಲೆ ಅವರ ಕುಟುಂಬದ್ ಬೆನ್ನಾಗ್ ಚೂರಿ ಹಾಕಿದ್ರಿ. ⁠ನಿಂಬಣ್ಣವರ್ ವಯಸ್ಸೂ ನೋಡದೇ ಎಲ್ಲಾ ಕಡೆ ಅಸಹ್ಯ ಮಾಡಿದ್ರಿ, ಸಾಯೂತನಕ ಬಿಡಲಿಲ್ಲ. ⁠ವಿಜಯ್ ಸಂಕೇಶ್ವರ್ ಕೊಟ್ಟ ಭಿಕ್ಷೆಯಲ್ಲಿ ಎಂಪಿ ಆಗಿ ಅವರ ಬಗ್ಗೆ ತುಚ್ಛವಾಗಿ ಮಾತಾಡಿದ್ರಿ, ಇದೇ ನಿಮ್ಮ ನಿಜವಾದ ಜಾತಕ’ ಎಂದು ಕಿಡಿಕಾರಿದ್ದಾರೆ.

ಕೇಂದ್ರ ಸಚಿವ  ಪ್ರಲ್ಹಾದ ಜೋಷಿ ವಿರುದ್ಧ ಕ್ಷೇತ್ರದ ಮುಖಂಡರ ಕೋಪ ಇನ್ನೂ ತಣ್ಣಗಾಗಿಲ್ಲ. ಬಹುತೇಕ ಲಿಂಗಾಯತ ಮತ್ತು ಒಬಿಸಿ ಸಮುದಾಯದ ಮಠಾಧಿಶರು ಜೋಷಿ ವಿರುದ್ಧವಾಗಿ ನಿಂತಿದ್ದು, ಈ ಸಂದರ್ಭದಲ್ಲಿ ರಾಜಕೀಯ ಪಕ್ಷಗಳ ವಾಟ್ಸಾಪ್ ಗುಂಪುಗಳಲ್ಲಿ ಈ ಸಂದೇಶ ಹರಿದಾಡುತ್ತಿರುವುದು ಬಿಜೆಪಿ ಮುಖಂಡರಿಗೆ ಮುಜುಗರ ತಂದಿದೆ.

ಈ ನಡುವೆ ಲಿಂಗಾಯತ ಸಮಾಜದ ಬೆನ್ನಿಗೆ ಚೂರಿ ಹಾಕಿದ್ದಾರೆ ಎಂದು ಆರೋಪಿಸಿ ಪ್ರಲ್ಹಾದ ಜೋಶಿ ವಿರುದ್ಧ ಸಿಡಿದೆದ್ದಿರುವ ದಿಂಗಾಲೇಶ್ವರ ಸ್ವಾಮೀಜಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಬೇಕು ಎಂಬ ಒತ್ತಡ ದಿನೇದಿನೇ ಹೆಚ್ಚಾಗುತ್ತಿದೆ. ಸ್ವಾಮೀಜಿ ಯಾವ ನಿರ್ಧಾರ ಕೈಗೊಳ್ಳಲಿದ್ದಾರೆ ಎಂಬುದನ್ನು ಕಾದುನೋಡಬೇಕಿದೆ.

ಇದನ್ನೂ ಓದಿ; ಅಬಕಾರಿ ನೀತಿ ಪ್ರಕರಣ: ಬಿಆರ್‌ಎಸ್ ನಾಯಕಿ ಕವಿತಾ ಸಲ್ಲಿಸಿದ್ದ ಮಧ್ಯಂತರ ಜಾಮೀನು ಅರ್ಜಿ ವಜಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್‌| ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಕತ್ತಿಯಿಂದ ಹಲ್ಲೆ

ಗುಜರಾತ್‌ನ ಪಠಾನ್ ಜಿಲ್ಲೆಯ ಗ್ರಾಮವೊಂದರಲ್ಲಿ, ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಕತ್ತಿಯಿಂದ ಹಲ್ಲೆ ನಡೆಸಿರುವ ಘಟನೆ ನಡೆದಿದೆ. ದಲಿತ ಸಮುದಾಯದ ಯುವಕ ವಿಶಾಲ್ ಚಾವ್ಡಾಗೆ ಮದುವೆಯ ಸಂತೋಷದ ದಿನವು ಜೀವನದ ದುಃಸ್ವಪ್ನವಾಗಿ...

ಗೃಹಲಕ್ಷ್ಮಿ ಯೋಜನೆಯಿಂದ 52 ಸಾವಿರಕ್ಕೂ ಹೆಚ್ಚಿನ ಮಹಿಳೆಯರು ಹೊರಕ್ಕೆ: ಆದಾಯ ತೆರಿಗೆ ಇಲಾಖೆ ದಾಖಲೆಗಳು ಕಾರಣ ಎಂದ ಲಕ್ಷ್ಮಿ ಹೆಬ್ಬಾಳ್ಕರ್

ಬೆಂಗಳೂರು: ರಾಜ್ಯಾದ್ಯಂತ 1.26 ಕೋಟಿ ಫಲಾನುಭವಿಗಳಲ್ಲಿ 52,000 ಕ್ಕೂ ಹೆಚ್ಚು ಮಹಿಳೆಯರನ್ನು ಗೃಹಲಕ್ಷ್ಮಿ ಯೋಜನೆಯಿಂದ ತೆಗೆದುಹಾಕಲಾಗಿದೆ, ಏಕೆಂದರೆ ಅವರು ಜಿಎಸ್ಟಿ ಅಥವಾ ಆದಾಯ ತೆರಿಗೆ ಇಲಾಖೆಗಳ ದಾಖಲೆಗಳಲ್ಲಿ ತೆರಿಗೆದಾರರಾಗಿದ್ದಾರೆ ಎಂದು ಮಹಿಳಾ ಮತ್ತು...

ವಿಬಿ-ಜಿ ರಾಮ್ ಜಿ ಕಾಯ್ದೆ ವಿರುದ್ಧ ವಿಧಾನಸಭೆಯಲ್ಲಿ ನಿರ್ಣಯ ಮಂಡನೆ

ಮನರೇಗಾ ಬದಲಾಗಿ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಬಿ-ಜಿ ರಾಮ್ ಜಿ ಕಾಯ್ದೆ ವಿರುದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಗಳವಾರ (ಫೆ.3) ವಿಧಾನಸಭೆಯಲ್ಲಿ ನಿರ್ಣಯ ಮಂಡಿಸಿದರು. ರಾಜ್ಯದ ಗ್ರಾಮೀಣ ಜನರ ಬದುಕಿನ ಹಕ್ಕನ್ನು ಕಾಪಾಡುವ ದೃಷ್ಟಿಯಿಂದ,...

‘ಖಾಸಗಿ ಮಾಹಿತಿಯ ಕಳ್ಳತನ’ : ವಿವಾದಾತ್ಮಕ ಗೌಪ್ಯತೆ ನೀತಿ ಸಂಬಂಧ ವಾಟ್ಸಾಪ್, ಮೆಟಾ ವಿರುದ್ಧ ಸುಪ್ರೀಂ ಕೋರ್ಟ್ ಕಿಡಿ

ನಾಗರಿಕರ ಗೌಪ್ಯತೆಯ ಹಕ್ಕನ್ನು ಉಲ್ಲಂಘಿಸಲಾಗಿದೆ ಎಂದು ಮಂಗಳವಾರ ಸುಪ್ರೀಂ ಕೋರ್ಟ್ ವಾಟ್ಸಾಪ್ ಮತ್ತು ಅದರ ಪೋಷಕ ಕಂಪನಿ ಮೆಟಾವನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ. ಡೇಟಾ ಹಂಚಿಕೆಯ ಹೆಸರಿನಲ್ಲಿ ಬಳಕೆದಾರರ ಖಾಸಗಿ ಡೇಟಾವನ್ನು ಬಳಸಿಕೊಳ್ಳಲು...

‘ಲ್ಯಾಂಡ್ ಲಾರ್ಡ್’ ತೆರಿಗೆ ವಿನಾಯಿತಿಗೆ ಡಿಎಸ್ಎಸ್ ಮನವಿ: ಒಪ್ಪಿದ ಸಿಎಂ ಸಿದ್ದರಾಮಯ್ಯ

ಸಾಮಾಜಿಕ ನ್ಯಾಯ ಮತ್ತು ಸಂವಿಧಾನಾತ್ಮಕ ಮೌಲ್ಯಗಳನ್ನು ಪ್ರತಿಪಾದಿಸುವ 'ಲ್ಯಾಂಡ್ ಲಾರ್ಡ್' ಕನ್ನಡ ಸಿನಿಮಾಗೆ ಸಂಪೂರ್ಣ ತೆರಿಗೆ ವಿನಾಯಿತಿ ನೀಡುವಂತೆ ಡಿಎಸ್ಎಸ್ ಅಂಬೇಡ್ಕರ್ ವಾದ ಮತ್ತು ದಲಿತ ಹೋರಾಟಗಾರರು ಸಿಎಂ ಸಿದ್ದರಾಮಯ್ಯ ಅವರಿಗೆ ಮನವಿ...

‘ಮೋದಿ ಅಂತಿಮವಾಗಿ ಶರಣಾಗಿದ್ದಾರೆ’: ಇಂಡೋ-ಯುಎಸ್ ವ್ಯಾಪಾರ ಒಪ್ಪಂದ ಎಲ್ಲಾ ಒಪ್ಪಂದಗಳ ಪಿತಾಮಹನಾಗಲು ಸಾಧ್ಯವಿಲ್ಲ: ಕಾಂಗ್ರೆಸ್

ನವದೆಹಲಿ: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಇಂಡೋ-ಯುಎಸ್ ವ್ಯಾಪಾರ ಒಪ್ಪಂದ ಘೋಷಣೆಗೆ ಸಂಬಂಧಿಸಿದಂತೆ ಸೋಮವಾರ ರಾತ್ರಿ ಕೇಂದ್ರ ಸರ್ಕಾರವನ್ನು ಗುರಿಯಾಗಿಸಿಕೊಂಡು ಕಾಂಗ್ರೆಸ್, ಪ್ರಧಾನಿ ನರೇಂದ್ರ ಮೋದಿ "ಅಂತಿಮವಾಗಿ ಶರಣಾಗಿದ್ದಾರೆ" ಮತ್ತು ಈ...

ಎಪ್‌ಸ್ಟೀನ್ ಜೊತೆಗಿನ ಸಂಪರ್ಕ ಬಹಿರಂಗ : ಲೇಬರ್ ಪಕ್ಷಕ್ಕೆ ಲಾರ್ಡ್ ಮ್ಯಾಂಡೆಲ್ಸನ್ ರಾಜೀನಾಮೆ

ಅಮೆರಿಕದ ಮಕ್ಕಳ ಲೈಂಗಿಕ ಹಗರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ದಾಖಲೆಗಳು ಬಹಿರಂಗಗೊಂಡ ಬೆನ್ನಲ್ಲೇ ಬ್ರಿಟನ್ ರಾಜಕಾರಣಿ ಲಾರ್ಡ್ ಪೀಟರ್ ಮ್ಯಾಂಡೆಲ್ಸನ್ ಲೇಬರ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ಎಪ್‌ಸ್ಟೀನ್‌ ಜೊತೆಗಿನ ಸಂಪರ್ಕ...

ಭಾರತದ ಕಾರ್ಯತಂತ್ರದ ಸ್ವಾಯತ್ತತೆಗೆ ಏನಾಯಿತು; ಅಮೆರಿಕದೊಂದಿಗಿನ ವ್ಯಾಪಾರ ಒಪ್ಪಂದದ ಕುರಿತು ಬಿಜೆಪಿಯನ್ನು ಪ್ರಶ್ನಿಸಿದ ಮನೀಶ್ ತಿವಾರಿ

ಮಂಗಳವಾರ ಅಮೆರಿಕ ಜೊತೆಗಿನ ಹೊಸ ವ್ಯಾಪಾರ ಒಪ್ಪಂದದ ಬಗ್ಗೆ ಕಾಂಗ್ರೆಸ್ ಸಂಸದ ಮನೀಶ್ ತಿವಾರಿ ಬಿಜೆಪಿಯನ್ನು ತರಾಟೆಗೆ ತೆಗೆದುಕೊಂಡರು ಮತ್ತು ವ್ಯಾಪಾರ ಒಪ್ಪಂದಕ್ಕಾಗಿ ನವದೆಹಲಿ ತನ್ನ ಕಾರ್ಯತಂತ್ರದ ಸ್ವಾಯತ್ತತೆಯನ್ನು ತ್ಯಾಗ ಮಾಡಿದೆಯೇ ಎಂದು...

ಖಾಸಗಿ ಜಾಗದಲ್ಲಿ ಪ್ರಾರ್ಥನಾ ಸಭೆ ನಡೆಸಲು ಅನುಮತಿ ಅಗತ್ಯವಿಲ್ಲ : ಅಲಹಾಬಾದ್ ಹೈಕೋರ್ಟ್

ಉತ್ತರ ಪ್ರದೇಶದಲ್ಲಿ ಖಾಸಗಿ ಆಸ್ತಿಯಲ್ಲಿ ಧಾರ್ಮಿಕ ಪ್ರಾರ್ಥನಾ ಸಭೆ ನಡೆಸಲು ಯಾವುದೇ ಅನುಮತಿ ಅಗತ್ಯವಿಲ್ಲ ಎಂದು ಅಲಹಾಬಾದ್ ಹೈಕೋರ್ಟ್ ತೀರ್ಪು ನೀಡಿದೆ. ಆದರೆ, ಕಾರ್ಯಕ್ರಮಕ್ಕೆ ಸಾರ್ವಜನಿಕ ರಸ್ತೆ ಅಥವಾ ಸಾರ್ವಜನಿಕ ಆಸ್ತಿ ಬಳಸಿಕೊಳ್ಳುವುದಾದರೆ ಕನಿಷ್ಠ...

ರಾಜ್ಯ ಸರ್ಕಾರ ‘ವಿಬಿ–ಜಿ ರಾಮ್ ಜಿ ಕಾಯ್ದೆ’ ತಿರಸ್ಕರಿಸಬೇಕು : ಮನರೇಗಾ ರಕ್ಷಣಾ ಒಕ್ಕೂಟದ ಮಹಾ ಪಂಚಾಯತ್‌ ಆಗ್ರಹ

ನರೇಗಾ ಯೋಜನೆ ಮುಂದುವರಿಸಲು ರಾಷ್ಟ್ರಪತಿ ಆದೇಶ ಹೊರಡಿಸಬೇಕು. ವಿಬಿ–ಜಿ ರಾಮ್‌ ಜಿ ಕಾಯ್ದೆಯನ್ನು ರಾಜ್ಯ ಸರ್ಕಾರ ತಿರಸ್ಕರಿಸಬೇಕು ಎಂದು ಆಗ್ರಹಿಸಿ 'ಮನರೇಗಾ ರಕ್ಷಣಾ ಒಕ್ಕೂಟ'ದ ಮಹಾ ಪಂಚಾಯತ್‌ನಲ್ಲಿ ನಿರ್ಣಯ ಕೈಗೊಳ್ಳಲಾಗಿದೆ. ಸೋಮವಾರ (ಫೆ.2)...