Homeಕರ್ನಾಟಕ'ಇದೇ ನಿಮ್ಮ ನಿಜವಾದ ಜಾತಕ..'; ಪ್ರಲ್ಹಾದ ಜೋಷಿ 'ರಾಜಕೀಯ ತಂತ್ರಗಾರಿಕೆ' ವಾಟ್ಸಾಪ್ ಸಂದೇಶ ವೈರಲ್

‘ಇದೇ ನಿಮ್ಮ ನಿಜವಾದ ಜಾತಕ..’; ಪ್ರಲ್ಹಾದ ಜೋಷಿ ‘ರಾಜಕೀಯ ತಂತ್ರಗಾರಿಕೆ’ ವಾಟ್ಸಾಪ್ ಸಂದೇಶ ವೈರಲ್

- Advertisement -
- Advertisement -

ಹುಬ್ಬಳ್ಳಿ-ಧಾರವಾಡ ಬಿಜೆಪಿ ಲೋಕಸಭಾ ಅಭ್ಯರ್ಥಿ, ಕೇಂದ್ರ ಸಚಿವ ಪ್ರಲ್ಹಾದ ಜೋಷಿ ವಿರುದ್ಧ ಕ್ಷೇತ್ರದಲ್ಲಿ ಎದ್ದಿರುವ ಅಸಮಾಧಾನ ಕಡಿಮೆಯಾಗುವ ಲಕ್ಷಣ ಕಾಣುತ್ತಿಲ್ಲ. ಮತದಾನಕ್ಕೆ ದಿನಗಣನೆ ಆರಂಭವಾಗಿರುವ ಈ ಹೊತ್ತಿನಲ್ಲೆ ದಿಂಗಾಲೇಶ್ವರ ಸ್ವಾಮೀಜಿ ಸೇರಿದಂತೆ ಹಲವು ವೀರಶೈವ ಲಿಂಗಾಯಿತ ಸ್ವಾಮೀಜಿಗಳ ಬಂಡಾಯ ಸಾರಿದ್ದು, ಇದೀಗ ಜೋಷಿ ವಿರುದ್ಧ 12 ಅಂಶಗಳ ಚಾರ್ಜ್ ಶೀಟ್ ಒಂದು ವಾಟ್ಸಾಪ್ ನಲ್ಲಿ ಹರಿದಾಡುತ್ತಿದೆ.

ವಾಟ್ಸಾಪ್ ಸಂದೇಶದಲ್ಲಿ ಏನಿದೆ?

‘ಮಿ. ಜೋಷಿ, ಹಳ್ಳಿ ಜನ ದಡ್ಡರಲ್ಲ, ಅವರಿಗೆ ನಿಮ್ಮ ಜಾತಕ ಚೆನ್ನಾಗಿ ಗೊತ್ತಿದೆ. ನಿಮ್ಮ ಜಾತಕ ನಾ ಹೇಳತೀನಿ ಕೇಳ್ರಿ; ಇದೂ ಯಾರಿಗೂ ಗೊತ್ತಿಲ್ಲಾಂತ ತಿಳಿಬೇಡ್ರಿ.. ಎಂದು ಕಟುವಾಗಿ ಟೀಕಿಸಿರುವ ಸಂದೇಶದಲ್ಲಿ, ಜೋಷಿ ತಮ್ಮ ರಾಜಕೀಯ ಜೀವನದಲ್ಲಿ ಈವರೆಗೆ ನಡೆಸಿರುವ ತಂತ್ರಗಾರಿಕೆಗೆ ಸಂಬಂಧಿಸಿದಂತೆ ಒಟ್ಟು ಹನ್ನೆರಡು ಅಂಶಗಳನ್ನು ಪಟ್ಟಿ ಮಾಡಲಾಗಿದೆ.

ಅಮೃತ್ ದೇಸಾಯಿ ಹೆಗಲ ಮೇಲೆ ಬಂದೂಕು ಇಟ್ಟು ಸೀಮಾ ಮಸೂತಿ ಹೊಡೆದ್ರಿ, ⁠ನಾಗರಾಜ್ ಚಬ್ಬಿ ಕರ್ಕೊಂಡು ಬಂದು ಶಿವು ಹಿರೇಮಠ್ ಅವರನ್ ನಿತ್ರಾಣ ಮಾಡಿದಿರಿ, ⁠ಈರೇಶ್ ಅಂಚಟಗೇರಿನ್ ಚೂ ಬಿಟ್ಟು ಅರವಿಂದ್ ಬೆಲ್ಲದ್ ಹೊಡೆಯಾಕ್ ಪ್ರಯತ್ನ ಪಟ್ರಿ, ⁠ಅದೇ ಬೆಲ್ಲದ್ ಬಳಸ್ಕೊಂಡು ಮುನೇನಕೊಪ್ಪನ್ ಹೊಡೆಯಾಕ್ ಟ್ರೈ ಮಾಡಿದ್ರಿ, ⁠ಅಧಿಕಾರ ದುರ್ಬಳಕೆ ಮಾಡಿಕೊಂಡು ವಿನಯ್ ಕುಲಕರ್ಣಿನ್ ಜೈಲಿಗಟ್ಟಿ, ಜಿಲ್ಲೆಯೊಳಗ ಕಾಲ್ ಇಡದಂಗ್ ಮಾಡಿದ್ರಿ’ ಎಂದು ಆರೋಪ ಮಾಡಿದ್ದಾರೆ.

ಮುಂದುವರಿದು, ‘⁠ಡಾ.ನಾಲವಾಡ್ ಅವರಿಗೆ ಆಸೆ ಹುಟ್ಟಿಸಿ ಹಾವೇರಿಗೆ ಕಳಿಸಿ ಹೈರಾಣ ಮಾಡಿದ್ರಿ, ⁠ಡಾ.ನಾಲವಾಡ್ ಹಿಂದೆನೇ ಶರಣು ಅಂಗಡಿನೂ ಚೂ ಬಿಟ್ಟು ಮಜಾ ನೋಡಿದ್ರಿ, ⁠ಹೈಕಮಾಂಡ್ ಹೆಗಲ ಮೇಲೆ ಬಂದೂಕು ಇಟ್ಟು ಜಗದೀಶ್ ಶೆಟ್ರಿಗೆ ಟಿಕೆಟ್ ಕೊಡದೇ ಅಸಹ್ಯ ಮಾಡಿದ್ರಿ, ಈಗ ಧಾರವಾಡ ಜಿಲ್ಲೆಯಿಂದಲೇ ಹೊರಗ ಹಾಕಿದ್ರಿ, ⁠ಎಂ.ಆರ್.ಪಾಟೀಲ್ ಬಳಸಕೊಂಡು ಚಿಕ್ಕನಗೌಡ್ರನ್ ಮುಗಿಸಿದಿರಿ. ⁠ಅನಂತ್ ಕುಮಾರ್ ಕೈ ಹಿಡ್ಕೊಂಡ್ ಮೇಲೆ ಬಂದು ಅವರ್ ಸತ್ ಮೇಲೆ ಅವರ ಕುಟುಂಬದ್ ಬೆನ್ನಾಗ್ ಚೂರಿ ಹಾಕಿದ್ರಿ. ⁠ನಿಂಬಣ್ಣವರ್ ವಯಸ್ಸೂ ನೋಡದೇ ಎಲ್ಲಾ ಕಡೆ ಅಸಹ್ಯ ಮಾಡಿದ್ರಿ, ಸಾಯೂತನಕ ಬಿಡಲಿಲ್ಲ. ⁠ವಿಜಯ್ ಸಂಕೇಶ್ವರ್ ಕೊಟ್ಟ ಭಿಕ್ಷೆಯಲ್ಲಿ ಎಂಪಿ ಆಗಿ ಅವರ ಬಗ್ಗೆ ತುಚ್ಛವಾಗಿ ಮಾತಾಡಿದ್ರಿ, ಇದೇ ನಿಮ್ಮ ನಿಜವಾದ ಜಾತಕ’ ಎಂದು ಕಿಡಿಕಾರಿದ್ದಾರೆ.

ಕೇಂದ್ರ ಸಚಿವ  ಪ್ರಲ್ಹಾದ ಜೋಷಿ ವಿರುದ್ಧ ಕ್ಷೇತ್ರದ ಮುಖಂಡರ ಕೋಪ ಇನ್ನೂ ತಣ್ಣಗಾಗಿಲ್ಲ. ಬಹುತೇಕ ಲಿಂಗಾಯತ ಮತ್ತು ಒಬಿಸಿ ಸಮುದಾಯದ ಮಠಾಧಿಶರು ಜೋಷಿ ವಿರುದ್ಧವಾಗಿ ನಿಂತಿದ್ದು, ಈ ಸಂದರ್ಭದಲ್ಲಿ ರಾಜಕೀಯ ಪಕ್ಷಗಳ ವಾಟ್ಸಾಪ್ ಗುಂಪುಗಳಲ್ಲಿ ಈ ಸಂದೇಶ ಹರಿದಾಡುತ್ತಿರುವುದು ಬಿಜೆಪಿ ಮುಖಂಡರಿಗೆ ಮುಜುಗರ ತಂದಿದೆ.

ಈ ನಡುವೆ ಲಿಂಗಾಯತ ಸಮಾಜದ ಬೆನ್ನಿಗೆ ಚೂರಿ ಹಾಕಿದ್ದಾರೆ ಎಂದು ಆರೋಪಿಸಿ ಪ್ರಲ್ಹಾದ ಜೋಶಿ ವಿರುದ್ಧ ಸಿಡಿದೆದ್ದಿರುವ ದಿಂಗಾಲೇಶ್ವರ ಸ್ವಾಮೀಜಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಬೇಕು ಎಂಬ ಒತ್ತಡ ದಿನೇದಿನೇ ಹೆಚ್ಚಾಗುತ್ತಿದೆ. ಸ್ವಾಮೀಜಿ ಯಾವ ನಿರ್ಧಾರ ಕೈಗೊಳ್ಳಲಿದ್ದಾರೆ ಎಂಬುದನ್ನು ಕಾದುನೋಡಬೇಕಿದೆ.

ಇದನ್ನೂ ಓದಿ; ಅಬಕಾರಿ ನೀತಿ ಪ್ರಕರಣ: ಬಿಆರ್‌ಎಸ್ ನಾಯಕಿ ಕವಿತಾ ಸಲ್ಲಿಸಿದ್ದ ಮಧ್ಯಂತರ ಜಾಮೀನು ಅರ್ಜಿ ವಜಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...