Homeಕರ್ನಾಟಕರಾಜ್ಯಕ್ಕೆ ಬರ ಪರಿಹಾರ ಬಿಡುಗಡೆ ವಿಳಂಬ: ಕೇಂದ್ರದಿಂದ ಪ್ರತಿಕ್ರಿಯೆ ಕೋರಿದ ಸುಪ್ರೀಂಕೋರ್ಟ್‌

ರಾಜ್ಯಕ್ಕೆ ಬರ ಪರಿಹಾರ ಬಿಡುಗಡೆ ವಿಳಂಬ: ಕೇಂದ್ರದಿಂದ ಪ್ರತಿಕ್ರಿಯೆ ಕೋರಿದ ಸುಪ್ರೀಂಕೋರ್ಟ್‌

- Advertisement -
- Advertisement -

ಬರ ಪರಿಹಾರ ಬಿಡುಗಡೆಗೆ ನಿರ್ದೇಶನ ಕೋರಿ ಕರ್ನಾಟಕ ಸರ್ಕಾರ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್, ಕೇಂದ್ರ ಸರ್ಕಾರಕ್ಕೆ ನೋಟಿಸ್‌ ನೀಡಿದ್ದು, ಎರಡು ವಾರಗಳಲ್ಲಿ ಈ ಕುರಿತು ಪ್ರತಿಕ್ರಿಯಿಸುವಂತೆ ಕೇಂದ್ರ ಸರಕಾರಕ್ಕೆ ಸೂಚಿಸಿದೆ.

ನ್ಯಾಯಮೂರ್ತಿಗಳಾದ ಬಿ ಆರ್‌ ಗವಾಯಿ ಮತ್ತು ಸಂದೀಪ್‌ ಮೆಹ್ತಾ ಅವರ ಪೀಠ ಈ ಕುರಿತು ಅರ್ಜಿಯನ್ನು ವಿಚಾರಣೆ ನಡೆಸಿದೆ. ಈ ಬಗ್ಗೆ ಕೇಂದ್ರಕ್ಕೆ ಸಮಯಾವಕಾಶ ನೀಡಬೇಕೆಂದು ಕೇಂದ್ರ ಪರ ಹಾಜರಿದ್ದ ಅಟಾರ್ನಿ ಜನರಲ್‌ ಆರ್‌ ವೆಂಕಟರಮಣಿ ಮತ್ತು ಸಾಲಿಸಿಟರ್‌ ಜನರಲ್‌ ತುಷಾರ್‌ ಮೆಹ್ತಾ ಕೋರಿದ್ದಾರೆ. ಅನುದಾನ ಬಿಡುಗಡೆ ವಿಚಾರದ ನಿರ್ಧಾರ ಒಂದು ತಿಂಗಳೊಳಗೆ ಅಂದರೆ ಡಿಸೆಂಬರ್‌ ಒಳಗೆ ತೆಗೆದುಕೊಳ್ಳಬೇಕಾಗಿತ್ತು ಆದರೆ ಕೋರ್ಟ್‌ ಹಸ್ತಕ್ಷೇಪದಿಂದ ಸಮಸ್ಯೆ ಪರಿಹಾರವಾಗಬಹುದೆಂಬ ನಿರೀಕ್ಷೆಯಿದೆ ಎಂದು ಕರ್ನಾಟಕ ಸರ್ಕಾರದ ಪರ ವಾದ ಮಂಡಿಸಿದ ಕಪಿಲ್‌ ಸಿಬಲ್‌ ಹೇಳಿದ್ದಾರೆ.

ಈ ಕುರಿತ ಸಚಿವ ಕೃಷ್ಣಬೈರೇಗೌಡ ಅವರು ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ್ದು, ಗೌರವಾನ್ವಿತ ಸುಪ್ರೀಂಕೋರ್ಟ್‌ ಈ ಕುರಿತು ನಿರ್ಧಾರ ತೆಗೆದುಕೊಂಡು 2 ವಾರಗಳಲ್ಲಿ ಪ್ರತಿಕ್ರಿಯಿಸಬೇಕು ಎಂದು ಸೂಚಿಸಿದೆ. ರಾಜ್ಯ ಸರಕಾರಗಳು ಎಷ್ಟು ಬಾರಿ ನ್ಯಾಯಾಲಯಕ್ಕೆ ಬರಬೇಕು? ಎಂದು ಸುಪ್ರೀಂ ಕೋರ್ಟ್ ಕೇಳಿದೆ. ಈ ವೇಳೆ ಭಾರತ ಸರ್ಕಾರದ ಪರ ವಕೀಲರು ಸಮಸ್ಯೆಯನ್ನು ಪರಿಹರಿಸಿ ಮತ್ತೆ ನ್ಯಾಯಾಲಯಕ್ಕೆ ಬರುತ್ತೇವೆ ಎಂದು ಹೇಳಿದರು ಎಂದು ಬರೆದುಕೊಂಡಿದ್ದಾರೆ.

ಕೇಂದ್ರ ಸರ್ಕಾರದಿಂದ ಬರ ಪರಿಹಾರ ಕೊಡಿಸುವಂತೆ ಕರ್ನಾಟಕ ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್ ಮೊರೆ ಹೋಗಿತ್ತು.  ಈ ಬಗ್ಗೆ ಮಾತನಾಡಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ, ಐದು ತಿಂಗಳು ಕಾದರೂ ಕೇಂದ್ರ ಸರ್ಕಾರ ಬರ ಪರಿಹಾರ ಕೊಟ್ಟಿಲ್ಲ. ಹಾಗಾಗಿ, ಅನಿವಾರ್ಯವಾಗಿ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದೇವೆ. ಸರ್ಕಾರದ ವಿರುದ್ದ ಸಂವಿಧಾನದ ವಿಧಿ 32ರ ಅಡಿ ಕೇಂದ್ರ ನಾವು ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದೇವೆ. ಇಂದು ಬೆಳಿಗ್ಗೆ ಅರ್ಜಿ ಹಾಕಿದ್ದೇವೆ. ನಮಗೆ ಸಿಗಬೇಕಾದ ಪರಿಹಾರ ಸಿಗಬೇಕು ಎಂದು ಹೇಳಿದ್ದರು.

ಅಕ್ಟೋಬರ್‌ನಲ್ಲಿ ಕೇಂದ್ರ ತಂಡ ರಾಜ್ಯಕ್ಕೆ ಬಂದು‌ ಬರ ಪರಿಶೀಲನೆ ನಡೆಸಿ ಕೇಂದ್ರಕ್ಕೆ ವರದಿ ನೀಡಿದೆ. ಈ ವರದಿ ಕೊಟ್ಟ ಒಂದು ತಿಂಗಳಲ್ಲಿ ರಾಜ್ಯಕ್ಕೆ ಬರ ಪರಿಹಾರ ಕೊಡುವ ಬಗ್ಗೆ ತೀರ್ಮಾನ ತೆಗೆದುಕೊಳ್ಳಬೇಕು ಎನ್ನುವುದು ನಿಯಮ. ಆದರೆ ಪರಿಹಾರವನ್ನು ಬಿಡಿಗಡೆ ಮಾಡಿರಲಿಲ್ಲ.

ಕಂದಾಯ ಸಚಿವ ಕೃಷ್ಣಬೈರೇಗೌಡ ಅವರು ದೆಹಲಿಗೆ ಹೋಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿ ಪರಿಹಾರ ಬಿಡುಗಡೆಗೆ ಮನವಿ ಮಾಡಿದ್ದರು. ಬೆಂಗಳೂರಿನಲ್ಲಿ ಪ್ರಧಾನಿ ಮೋದಿಯನ್ನು  ಸಿಎಂ ಭೇಟಿ ಮಾಡಿ ಪರಿಹಾರ ಬಿಡುಗಡೆಗೆ ಮನವಿ ಮಾಡಿದ್ದರು. ಆದರೆ ಪರಿಹಾರ ಬಿಡುಗಡೆ ಮಾಡಿರಲಿಲ್ಲ. ಇದಲ್ಲದೆ ಸಿಎಂ ಸಿದ್ದರಾಮಯ್ಯ ಅವರು, ಸಚಿವರು, ಶಾಸಕರ ದಂಡಿನೊಂದಿಗೆ ದೆಹಲಿಯ ಜಂತರ್‌ ಮಂತರ್‌ನಲ್ಲಿ ಧರಣಿಯನ್ನೂ ನಡೆಸಿ ದೇಶದ ಗಮನ ಸೆಳೆದಿದ್ದರು.

ಇದನ್ನು ಓದಿ: ಧಾರವಾಡ: ಕೇಂದ್ರ ಸಚಿವ ಪ್ರಲ್ಹಾದ ಜೋಷಿ ವಿರುದ್ಧ ಸಿಡಿದೆದ್ದ ದಿಂಗಾಲೇಶ್ವರ ಸ್ವಾಮೀಜಿ; ಸ್ವತಂತ್ರವಾಗಿ ಸ್ಪರ್ಧೆ ಘೋಷಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...

ಪೆಟ್ರೋಲ್‌ನಲ್ಲಿ ಎಥನಾಲ್ ಪ್ರಮಾಣ ಬಹಿರಂಗಪಡಿಸುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪೆಟ್ರೋಲ್‌ನಲ್ಲಿ ಬೆರೆಸಲಾಗುವ ಎಥನಾಲ್ ಪ್ರಮಾಣವನ್ನು ಕಡ್ಡಾಯವಾಗಿ ನಮೂದಿಸಬೇಕು ಮತ್ತು ವಾಹನಗಳಿಗೆ ಎಥನಾಲ್ ಮಿಶ್ರಿತ ಇಂಧನದ ಹೊಂದಾಣಿಕೆಯ ಬಗ್ಗೆ ಹೆಚ್ಚಿನ ಪಾರದರ್ಶಕತೆ ತರಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆ...

ದೆಹಲಿ| ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಿದ ಎಂಸಿಡಿ

ದೆಹಲಿ ಹೈಕೋರ್ಟ್ ನಿರ್ದೇಶನದಂತೆ, ಮೊಘಲರ ಕಾಲದ ಐತಿಹಾಸಿಕ ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ನಿರ್ಮಾಣಗಳನ್ನು ಸಮೀಕ್ಷೆ ಮಾಡಿ, ಒತ್ತುವರಿಯನ್ನು ತೆರವುಗೊಳಿಸುವ ಬೃಹತ್ ಕಾರ್ಯಾಚರಣೆಯನ್ನು ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಸೋಮವಾರ (ಆ.31) ಪ್ರಾರಂಭಿಸಿದೆ...

ವೆನೆಜುವೆಲಾ ಮತ್ತೆ ಎದ್ದು ನಿಲ್ಲಲಿದೆ: ಬಂಧನದಲ್ಲಿರುವ ವೆನೆಜುವೆಲಾ ಮಾಜಿ ಅಧ್ಯಕ್ಷ ಮಡುರೊ ಮೊದಲ ಫೋಟೋ ಹಂಚಿಕೆ

ಜನವರಿಯಲ್ಲಿ ಅಮೆರಿಕ ಪಡೆಗಳಿಂದ ಬಂಧನಕ್ಕೊಳಗಾಗಿದ್ದ ವೆನೆಜುವೆಲಾದ ಮಾಜಿ ಅಧ್ಯಕ್ಷ ನಿಕೋಲಸ್ ಮಡುರೊ, ಅಮೆರಿಕದ ಬಂಧನ ಕೇಂದ್ರದಿಂದ ತಮ್ಮ ಎರಡು ಛಾಯಾಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಬಂಧನದ ಬಳಿಕ ಮಡುರೊ ಅವರ ಫೋಟೋಗಳು ಹೊರಬಂದಿರುವುದು...

‘ಮಹಿಳೆಯರು ಆಭರಣದಂತೆ ಮನೆಯಲ್ಲೇ ಇರಬೇಕು’ ಮುಸ್ಲಿಂ ಧರ್ಮಗುರು ವಿವಾದಾತ್ಮಕ ಹೇಳಿಕೆ

ಮಹಿಳೆಯರು ಮನೆಯಲ್ಲೇ ಇರಬೇಕು ಮತ್ತು ಸಾರ್ವಜನಿಕ ಕ್ಷೇತ್ರಕ್ಕೆ ಪ್ರವೇಶಿಸಬಾರದು ಎಂದು ಕೇರಳದ ಪ್ರಭಾವಿ ಮುಸ್ಲಿಂ ಧರ್ಮಗುರು ಶೇಖ್ ಅಬೂಬಕರ್ ಅಹ್ಮದ್ ನೀಡಿದ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ...

ಹಲ್ದ್ವಾನಿ ‘ಶುದ್ಧೀಕರಣ’ ವಿವಾದ : ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್

ಉತ್ತರಾಖಂಡದ ಹಲ್ದ್ವಾನಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ರ್‍ಯಾಲಿ ನಡೆದ ಸ್ಥಳದಲ್ಲಿ ಬಿಜೆಪಿ ಬೆಂಬಲಿಗರು 'ಶುದ್ಧೀಕರಣ' ನಡೆಸಿದ ವಿವಾದ ಹೊಸ ರಾಜಕೀಯ ಮತ್ತು ಕಾನೂನು ತಿರುವು ಪಡೆದುಕೊಂಡಿದೆ. ಜಾತಿ ನಿಂದನೆಗೆ ಸಂಬಂಧಿಸಿದಂತೆ...