Homeಫ್ಯಾಕ್ಟ್‌ಚೆಕ್Fact Check: ಕಾಂಗ್ರೆಸ್‌ ಪ್ರಣಾಳಿಕೆ ದೇಶಕ್ಕೆ ಅಪಾಯಕಾರಿ ಎಂದು ಸುಳ್ಳು ಸುದ್ದಿ ಹಂಚಿಕೆ

Fact Check: ಕಾಂಗ್ರೆಸ್‌ ಪ್ರಣಾಳಿಕೆ ದೇಶಕ್ಕೆ ಅಪಾಯಕಾರಿ ಎಂದು ಸುಳ್ಳು ಸುದ್ದಿ ಹಂಚಿಕೆ

- Advertisement -
- Advertisement -

“ಕಾಂಗ್ರೆಸ್ ಪ್ರಣಾಳಿಕೆ ಭಯಾನಕವಾಗಿದೆ. ನನ್ನ ಜೀವನದಲ್ಲಿ ಇಂತಹ ಅಪಾಯಕಾರಿ ಪ್ರಣಾಳಿಕೆಯನ್ನು ನೋಡಿಲ್ಲ. ಇದು ಪಿಎಫ್ಐನ ವಿಷನ್-2047 ಡಾಕ್ಯುಮೆಂಟ್ ಇದ್ದಂತೆ. ತ್ರಿವಳಿ ತಲಾಖ್ ಅನ್ನು ಮರಳಿ ತರುತ್ತೇವೆ. ಸರ್ಕಾರಿ ಮತ್ತು ಖಾಸಗಿ ಉದ್ಯೋಗಗಳಲ್ಲಿ ಮುಸ್ಲಿಮರಿಗೆ ಮೀಸಲಾತಿ, ಲವ್ ಜಿಹಾದ್‌ ಮತ್ತು ಶಾಲೆಗಳಲ್ಲಿ ಬುರ್ಖಾಗೆ ಬೆಂಬಲ. ಬಹುಸಂಖ್ಯಾತವಾದವನ್ನು (ಹಿಂದೂ ಧರ್ಮ) ಕೊನೆಗೊಳಿಸುತ್ತೇವೆ. ಗೋಮಾಂಸವನ್ನು ಕಾನೂನು ಬದ್ದ ಮಾಡುತ್ತೇವೆ. ಮುಸ್ಲಿಮರಿಗೆ ಪ್ರತ್ಯೇಖ ಸಾಲ ಬಡ್ಡಿ ನೀಡುತ್ತೇವೆ ಎಂದು ಘೋಷಿಸಿಕೊಂಡಿದ್ದಾರೆ” ಎಂದು ಪ್ರತಿಪಾದಿಸಿ ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾಗಿದೆ.

ಸ್ಟಾರ್ ಬಾಯ್ ತರುಣ್ ಎಂಬ ಎಕ್ಸ್ ಬಳಕೆದಾರನೊಬ್ಬ ಈ ಪೋಸ್ಟ್ ಅನ್ನು ಅಪ್ಲೋಡ್ ಮಾಡಿದ್ದು, ಇನ್ನೂ ಅನೇಕ ಎಕ್ಸ್ ಬಳಕೆದಾರರು ಇದೇ ಪೋಸ್ಟ್ ಅನ್ನು ಹಂಚಿಕೊಂಡಿದ್ದಾರೆ.

ಪೋಸ್ಟ್ ಲಿಂಕ್ ಇಲ್ಲಿದೆ 

ಫ್ಯಾಕ್ಟ್‌ಚೆಕ್ : ಸಾಮಾಜಿಕ ಮಾಧ್ಯಮಗಳಲ್ಲಿ ಕಾಂಗ್ರೆಸ್ ಪ್ರಣಾಳಿಕೆಯ ಕುರಿತು ಹಂಚಿಕೊಳ್ಳಲಾದ ಪೋಸ್ಟ್ ಬಗ್ಗೆ ನಾನುಗೌರಿ.ಕಾಂ ಸತ್ಯಾಸತ್ಯತೆ ಪರಿಶೀಲನೆ ನಡೆಸಿದೆ.

ವೈರಲ್ ಪೋಸ್ಟ್‌ನಲ್ಲಿ ಹೇಳಿರುವ ಅಂಶಗಳು ನಿಜಾನ? ಎಂದು ತಿಳಿದುಕೊಳ್ಳಲು, ಇತ್ತೀಚೆಗೆ ಕಾಂಗ್ರೆಸ್‌ ಬಿಡುಗಡೆ ಮಾಡಿರುವ ಲೋಕಸಭೆ ಚುನಾವಣೆಯ ಪ್ರಣಾಳಿಕೆಯನ್ನು ನಾವು ಪರಿಶೀಲಿಸಿದ್ದೇವೆ.

ಕಾಂಗ್ರೆಸ್‌ ಅಧಿಕೃತ ವೆಬ್‌ಸೈಟ್‌ನಲ್ಲಿರುವ ಪ್ರಣಾಳಿಕೆಯಲ್ಲಿ…

1. ಸಂವಿಧಾನದ 15, 16, 25, 26, 28, 29 ಮತ್ತು 30 ನೇ ವಿಧಿಗಳ ಅಡಿಯಲ್ಲಿ ಒಬ್ಬರ ನಂಬಿಕೆಯನ್ನು ಆಚರಿಸುವ ಮೂಲಭೂತ ಹಕ್ಕು ಮತ್ತು ಧಾರ್ಮಿಕ ಅಲ್ಪಸಂಖ್ಯಾತರಿಗೆ ಖಾತರಿಪಡಿಸಿದ ಹಕ್ಕುಗಳನ್ನು ನಾವು ಗೌರವಿಸುತ್ತೇವೆ ಮತ್ತು ಎತ್ತಿ ಹಿಡಿಯುತ್ತೇವೆ.

2. ಸಂವಿಧಾನದ 15, 16, 29 ಮತ್ತು 30 ನೇ ವಿಧಿಗಳ ಅಡಿಯಲ್ಲಿ ಖಾತರಿಪಡಿಸಿದ ಭಾಷಾ ಅಲ್ಪಸಂಖ್ಯಾತರ ಹಕ್ಕುಗಳನ್ನು ನಾವು ಗೌರವಿಸುತ್ತೇವೆ ಮತ್ತು ಎತ್ತಿ ಹಿಡಿಯುತ್ತೇವೆ.

3. ಶಿಕ್ಷಣ, ಉದ್ಯೋಗ, ವ್ಯವಹಾರ, ಸೇವೆಗಳು, ಕ್ರೀಡೆ, ಕಲೆ ಮತ್ತು ಇತರ ಕ್ಷೇತ್ರಗಳಲ್ಲಿ ಹೆಚ್ಚುತ್ತಿರುವ ಅವಕಾಶಗಳ ಸಂಪೂರ್ಣ ಲಾಭವನ್ನು ಪಡೆಯಲು ಅಲ್ಪಸಂಖ್ಯಾತರಿಗೆ ಸೇರಿದ ವಿದ್ಯಾರ್ಥಿಗಳು ಮತ್ತು ಯುವಕರನ್ನು ನಾವು ಪ್ರೋತ್ಸಾಹಿಸುತ್ತೇವೆ ಮತ್ತು ಸಹಾಯ ಮಾಡುತ್ತೇವೆ.

4. ನಾವು ವಿದೇಶದಲ್ಲಿ ಅಧ್ಯಯನಕ್ಕಾಗಿ ಮೌಲಾನಾ ಆಜಾದ್ ವಿದ್ಯಾರ್ಥಿವೇತನವನ್ನು ಪುನಃ ಸ್ಥಾಪಿಸುತ್ತೇವೆ ಮತ್ತು ವಿದ್ಯಾರ್ಥಿವೇತನದ ಸಂಖ್ಯೆಯನ್ನು ಹೆಚ್ಚಿಸುತ್ತೇವೆ.

5. ಅಲ್ಪಸಂಖ್ಯಾತರ ಆರ್ಥಿಕ ಸಬಲೀಕರಣವು ಭಾರತವು ತನ್ನ ಸಂಪೂರ್ಣ ಸಾಮರ್ಥ್ಯವನ್ನು ಅರಿತುಕೊಳ್ಳಲು ಅಗತ್ಯವಾದ ಹೆಜ್ಜೆಯಾಗಿದೆ. ಬ್ಯಾಂಕ್‌ಗಳು ಅಲ್ಪಸಂಖ್ಯಾತರಿಗೆ ಯಾವುದೇ ತಾರತಮ್ಯವಿಲ್ಲದೆ ಸಾಂಸ್ಥಿಕ ಸಾಲವನ್ನು ಒದಗಿಸುತ್ತವೆ ಎಂದು ನಾವು ಖಚಿತಪಡಿಸುತ್ತೇವೆ.

6. ಅಲ್ಪಸಂಖ್ಯಾತರು ಶಿಕ್ಷಣ, ಆರೋಗ್ಯ, ಸಾರ್ವಜನಿಕ ಉದ್ಯೋಗ, ಲೋಕೋಪಯೋಗಿ ಒಪ್ಪಂದಗಳು, ಕೌಶಲ್ಯ ಅಭಿವೃದ್ಧಿ, ಕ್ರೀಡೆ ಮತ್ತು ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ತಾರತಮ್ಯವಿಲ್ಲದೆ ತಮ್ಮ ನ್ಯಾಯಯುತ ಪಾಲನ್ನು ಪಡೆಯುವುದನ್ನು ನಾವು ಖಚಿತಪಡಿಸುತ್ತೇವೆ.

7. ಪ್ರತಿಯೊಬ್ಬ ನಾಗರಿಕನಂತೆ, ಅಲ್ಪಸಂಖ್ಯಾತರಿಗೂ ಉಡುಗೆ, ಆಹಾರ, ಭಾಷೆ ಮತ್ತು ವೈಯಕ್ತಿಕ ಕಾನೂನುಗಳ ಆಯ್ಕೆಯ ಸ್ವಾತಂತ್ರ್ಯವಿದೆ ಎಂದು ಕಾಂಗ್ರೆಸ್ ಖಚಿತಪಡಿಸುತ್ತದೆ.

8. ನಾವು ವೈಯಕ್ತಿಕ ಕಾನೂನುಗಳ ಸುಧಾರಣೆಯನ್ನು ಪ್ರೋತ್ಸಾಹಿಸುತ್ತೇವೆ. ಅಂತಹ ಸುಧಾರಣೆಯನ್ನು ಸಂಬಂಧಪಟ್ಟ ಸಮುದಾಯಗಳ ಭಾಗವಹಿಸುವಿಕೆ ಮತ್ತು ಒಪ್ಪಿಗೆಯೊಂದಿಗೆ ಕೈಗೊಳ್ಳಬೇಕು.

9. ಸಂವಿಧಾನದ ಎಂಟನೇ ಪರಿಚ್ಛೇದಕ್ಕೆ ಹೆಚ್ಚಿನ ಭಾಷೆಗಳನ್ನು ಸೇರಿಸುವ ದೀರ್ಘಕಾಲದ ಬೇಡಿಕೆಗಳನ್ನು ಈಡೇರಿಸುವುದಾಗಿ ಕಾಂಗ್ರೆಸ್ ಭರವಸೆ ನೀಡಿದೆ.

ಇವಿಷ್ಟು ಕಾಂಗ್ರೆಸ್ ಈ ಬಾರಿಯ ಲೋಕಸಭೆ ಚುನಾವಣೆಗೆ ಪ್ರಣಾಳಿಕೆಯಲ್ಲಿ ನೀಡಿರುವ ಭರವಸೆಗಳಾಗಿವೆ. ವೈರಲ್ ಪೋಸ್ಟ್‌ನಲ್ಲಿ ಹೇಳಿದಂತೆ ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ತ್ರಿವಳಿ ತಲಾಖ್ ಮರಳಿ ತರುತ್ತೇವೆ, ಲವ್ ಜಿಹಾದ್ ಬೆಂಬಲಿಸುತ್ತೇವೆ, ಬಹು ಸಂಖ್ಯಾತವಾದವನ್ನು ಕೊನೆಗೊಳಿಸುತ್ತೇವೆ ಎಂದಿಲ್ಲ. ಆದರಿಂದ ಸಾಮಾಜಿಕ ಮಾಧ್ಯಗಳಲ್ಲಿ ಹರಿದಾಡುತ್ತಿರುವುದು ಸುಳ್ಳು ಸುದ್ದಿಯಾಗಿದೆ.

ಇದನ್ನೂ ಓದಿ : Fact Check: ಹಿಂದೂ ಧರ್ಮ ಬೋಧಿಸದಂತೆ ಕಾಂಗ್ರೆಸ್ ತಡೆ ಹಿಡಿದಿದೆ ಎಂಬುವುದು ಸುಳ್ಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...

ಪೆಟ್ರೋಲ್‌ನಲ್ಲಿ ಎಥನಾಲ್ ಪ್ರಮಾಣ ಬಹಿರಂಗಪಡಿಸುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪೆಟ್ರೋಲ್‌ನಲ್ಲಿ ಬೆರೆಸಲಾಗುವ ಎಥನಾಲ್ ಪ್ರಮಾಣವನ್ನು ಕಡ್ಡಾಯವಾಗಿ ನಮೂದಿಸಬೇಕು ಮತ್ತು ವಾಹನಗಳಿಗೆ ಎಥನಾಲ್ ಮಿಶ್ರಿತ ಇಂಧನದ ಹೊಂದಾಣಿಕೆಯ ಬಗ್ಗೆ ಹೆಚ್ಚಿನ ಪಾರದರ್ಶಕತೆ ತರಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆ...

ದೆಹಲಿ| ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಿದ ಎಂಸಿಡಿ

ದೆಹಲಿ ಹೈಕೋರ್ಟ್ ನಿರ್ದೇಶನದಂತೆ, ಮೊಘಲರ ಕಾಲದ ಐತಿಹಾಸಿಕ ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ನಿರ್ಮಾಣಗಳನ್ನು ಸಮೀಕ್ಷೆ ಮಾಡಿ, ಒತ್ತುವರಿಯನ್ನು ತೆರವುಗೊಳಿಸುವ ಬೃಹತ್ ಕಾರ್ಯಾಚರಣೆಯನ್ನು ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಸೋಮವಾರ (ಆ.31) ಪ್ರಾರಂಭಿಸಿದೆ...

ವೆನೆಜುವೆಲಾ ಮತ್ತೆ ಎದ್ದು ನಿಲ್ಲಲಿದೆ: ಬಂಧನದಲ್ಲಿರುವ ವೆನೆಜುವೆಲಾ ಮಾಜಿ ಅಧ್ಯಕ್ಷ ಮಡುರೊ ಮೊದಲ ಫೋಟೋ ಹಂಚಿಕೆ

ಜನವರಿಯಲ್ಲಿ ಅಮೆರಿಕ ಪಡೆಗಳಿಂದ ಬಂಧನಕ್ಕೊಳಗಾಗಿದ್ದ ವೆನೆಜುವೆಲಾದ ಮಾಜಿ ಅಧ್ಯಕ್ಷ ನಿಕೋಲಸ್ ಮಡುರೊ, ಅಮೆರಿಕದ ಬಂಧನ ಕೇಂದ್ರದಿಂದ ತಮ್ಮ ಎರಡು ಛಾಯಾಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಬಂಧನದ ಬಳಿಕ ಮಡುರೊ ಅವರ ಫೋಟೋಗಳು ಹೊರಬಂದಿರುವುದು...

‘ಮಹಿಳೆಯರು ಆಭರಣದಂತೆ ಮನೆಯಲ್ಲೇ ಇರಬೇಕು’ ಮುಸ್ಲಿಂ ಧರ್ಮಗುರು ವಿವಾದಾತ್ಮಕ ಹೇಳಿಕೆ

ಮಹಿಳೆಯರು ಮನೆಯಲ್ಲೇ ಇರಬೇಕು ಮತ್ತು ಸಾರ್ವಜನಿಕ ಕ್ಷೇತ್ರಕ್ಕೆ ಪ್ರವೇಶಿಸಬಾರದು ಎಂದು ಕೇರಳದ ಪ್ರಭಾವಿ ಮುಸ್ಲಿಂ ಧರ್ಮಗುರು ಶೇಖ್ ಅಬೂಬಕರ್ ಅಹ್ಮದ್ ನೀಡಿದ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ...