Homeಮುಖಪುಟ'ಮತದಾನದ ಹಕ್ಕಿಗಿಂತ ಬದುಕುವ ಹಕ್ಕು ಮುಖ್ಯವಾಗಿದೆ': ಮಣಿಪುರದ ಶಿಬಿರಗಳಲ್ಲಿ 'ಚುನಾವಣೆ' ಬಗ್ಗೆ ಸಂತ್ರಸ್ತರ ಅಸಮಾಧಾನ

‘ಮತದಾನದ ಹಕ್ಕಿಗಿಂತ ಬದುಕುವ ಹಕ್ಕು ಮುಖ್ಯವಾಗಿದೆ’: ಮಣಿಪುರದ ಶಿಬಿರಗಳಲ್ಲಿ ‘ಚುನಾವಣೆ’ ಬಗ್ಗೆ ಸಂತ್ರಸ್ತರ ಅಸಮಾಧಾನ

- Advertisement -
- Advertisement -

ಮತದಾನದ ಮೊದಲು ಬದುಕುವ ಹಕ್ಕು ಮುಖ್ಯವಾಗಿದೆ, ಮತದಾನದ ಮೊದಲು ಶಾಂತಿ ಮುಖ್ಯವಾಗಿದೆ ಎಂದು ಮಣಿಪುರದ ಪರಿಹಾರ ಶಿಬಿರಗಳಿಂದ ಆಗ್ರಹ ಕೇಳಿ ಬಂದಿದ್ದು, ‘ಮತದಾನ ನಮಗೆ ಏನೂ ಅಲ್ಲ’ ಎಂದು ಮಣಿಪುರ ಜನಾಂಗೀಯ ಹಿಂಸಾಚಾರದ ಸಂತ್ರಸ್ತರು ಹೇಳಿಕೊಂಡಿದ್ದಾರೆ.

‘ನನ್ನದಲ್ಲದ ಸ್ಥಳದ ಪ್ರತಿನಿಧಿಯನ್ನು ಆಯ್ಕೆ ಮಾಡಲು ನಾನೇಕೆ ಮತ ಹಾಕಬೇಕು. ಚುನಾವಣೆ ನಮಗೆ ಏನೂ ಅಲ್ಲ’ ಎಂದು ಮಣಿಪುರದಲ್ಲಿ ಜನಾಂಗೀಯ ಹಿಂಸಾಚಾರದಿಂದ 11 ತಿಂಗಳ ಹಿಂದೆ ತನ್ನ ಮನೆಯನ್ನು ಕಳೆದುಕೊಂಡು ಶಿಬಿರದಲ್ಲಿ ವಾಸಿಸುತ್ತಿರುವ ಸಂತ್ರಸ್ತೆ ನೋಬಿ ಹೇಳುತ್ತಾರೆ.

ಮಣಿಪುರದಲ್ಲಿ ಜನಾಂಗೀಯ ಹಿಂಸಾಚಾರದ ಬಳಿಕ ಮತ ಚಲಾಯಿಸುವ ಮೊದಲು ಬದುಕುವ ಹಕ್ಕು ಮತ್ತು ಚುನಾವಣೆಯ ಮೊದಲು ಶಾಂತಿ ಎಂಬ ಬೇಡಿಕೆಯನ್ನು ನೋಬಿ ಮಾತ್ರ ಮುಂದಿಟ್ಟಿರುವುದಲ್ಲ, ಮನೆಗೆ ಮರಳಲು ಸಾಧ್ಯವಾಗದೆ ಪರಿಹಾರ ಶಿಬಿರಗಳಲ್ಲಿ ದಿನದೂಡುತ್ತಿರುವ ಪ್ರತಿಯೊಬ್ಬ ನಿರಾಶ್ರಿತರ ಆಗ್ರಹ ಇದಾಗಿದೆ.

2019ರ ಲೋಕಸಭೆ ಚುನಾವಣೆಯಲ್ಲಿ ಮಣಿಪುರದಲ್ಲಿ ಶೇಕಡಾ 82ಕ್ಕಿಂತ ಹೆಚ್ಚು ಮತದಾನ ದಾಖಲಾಗುವುದರೊಂದಿಗೆ ರಾಜ್ಯವು ಸಾಂಪ್ರದಾಯಿಕವಾಗಿ ಅತಿ ಹೆಚ್ಚು ಮತದಾನವನ್ನು ಮಾಡಿದ ರಾಜ್ಯಗಳಲ್ಲಿ ಸ್ಥಾನವನ್ನು ಪಡೆದುಕೊಂಡಿತ್ತು. ಆದರೆ ಜನಾಂಗೀಯ ಹಿಂಸಾಚಾರವು ಈ ಬಾರಿಯ ಮತದಾನದ ಮೇಲೆ ಕರಿನೆರಳು ಬೀರಿದ್ದು, ಹಲವಾರು ನಾಗರಿಕ ಸಮಾಜದ ಗುಂಪುಗಳು ಮತ್ತು ಹಿಂಸಾಚಾರ ಪೀಡಿತ ಜನರು ಪ್ರಸ್ತುತ ಪರಿಸ್ಥಿತಿಯಲ್ಲಿ ಚುನಾವಣೆಗಳನ್ನು ನಡೆಸುವ ಬಗೆಯ ಪ್ರಸ್ತುತತೆಯನ್ನು ಪ್ರಶ್ನಿಸುತ್ತಿದ್ದಾರೆ.

ಗೌರವದಿಂದ ಬದುಕುವ ನನ್ನ ಹಕ್ಕನ್ನು ಖಚಿತಪಡಿಸಿಕೊಳ್ಳಲು ಸರ್ಕಾರಕ್ಕೆ ಸಾಧ್ಯವಾಗಲಿಲ್ಲ ಮತ್ತು ಅವರು ನನ್ನ ಮತದಾನದ ಹಕ್ಕನ್ನು ಖಚಿತಪಡಿಸಲು ಹೊರಟಿದ್ದಾರೆಯೇ? ನನ್ನ ಕಣ್ಣೆದುರೇ ನನ್ನ ಮನೆ ಸುಟ್ಟುಹೋಯಿತು. ನಾನು ಮತ್ತು ನನ್ನ ಕುಟುಂಬ ರಾತ್ರೋರಾತ್ರಿ ಅಲ್ಲಿಂದ ಪಲಾಯನ ಮಾಡಿದೆವು. ಅಲ್ಲಿ ಏನು ಉಳಿದಿದೆ ಎಂದು ನಮಗೆ ತಿಳಿದಿಲ್ಲ. ಇನ್ನು ಮುಂದೆ ನನ್ನದಲ್ಲದ ಸ್ಥಳದ ಪ್ರತಿನಿಧಿಗೆ ನಾನು ಏಕೆ ಮತ ಹಾಕಬೇಕು? ಇದೆಲ್ಲವೂ ಗಿಮಿಕ್, ಚುನಾವಣೆಗಳು ನಮಗೆ ಏನೂ ಅಲ್ಲ ಎಂದು ನೋಬಿ ಹೇಳಿದ್ದಾರೆ.

ಮಣಿಪುರ ರಾಜ್ಯವು ಕಳೆದ ವರ್ಷ ಮೇ 3ರಿಂದ ಬಹುಸಂಖ್ಯಾತ ಮೈತೈ ಸಮುದಾಯ ಮತ್ತು ಕುಕಿಗಳ ನಡುವೆ ಹಿಂಸಾಚಾರಕ್ಕೆ ಸಾಕ್ಷಿಯಾಗಿದೆ. ನಿರಂತರವಾಗಿ ಮುಂದುವರಿದ ಹಿಂಸಾಚಾರದ ಪರಿಣಾಮವಾಗಿ 200ಕ್ಕೂ ಹೆಚ್ಚು ಜೀವಗಳು ಬಲಿಯಾಗಿದೆ. ಮೈತೈ ಸಮುದಾಯದ ಜನರು ಇಂಫಾಲ್‌ ನಗರದಲ್ಲಿ ವಾಸಿಸುತ್ತಿದ್ದರೆ, ಕುಕಿಗಳು ಬೆಟ್ಟ ಪ್ರದೇಶಗಳಿಗೆ ಸ್ಥಳಾಂತರಗೊಂಡಿದ್ದಾರೆ.

ಮಣಿಪುರದಲ್ಲಿ ಏಪ್ರಿಲ್ 19 ಮತ್ತು 26ರಂದು ಎರಡು ಹಂತಗಳಲ್ಲಿ ಲೋಕಸಭೆ ಚುನಾವಣೆ ನಡೆಯಲಿದೆ. ಮಣಿಪುರದ ಕೆಲವು ಭಾಗಗಳಲ್ಲಿ ಏಪ್ರಿಲ್ 19ರಂದು ಮೊದಲ ಹಂತದಲ್ಲಿ ಮತದಾನವಾದರೆ, ಉಳಿದ ಭಾಗಗಳಲ್ಲಿ ಏಪ್ರಿಲ್ 26ರಂದು 2ನೇ ಹಂತದಲ್ಲಿ ಮತದಾನ ನಡೆಯಲಿವೆ. ಅಧಿಕಾರಿಗಳ ಪ್ರಕಾರ, ಮಣಿಪುರದಲ್ಲಿ ಅಶಾಂತಿಯ ನಂತರ 50,000ಕ್ಕೂ ಹೆಚ್ಚು ಜನರು ಶಿಬಿರಗಳಲ್ಲಿ ವಾಸಿಸುತ್ತಿದ್ದಾರೆ.

ಶಿಬಿರಗಳಲ್ಲಿನ ಸಂತ್ರಸ್ತರು, ಲೋಕಸಭೆ ಚುನಾವಣೆಯ ಸಮಯವನ್ನು ಪ್ರಶ್ನಿಸಿದ್ದಾರೆ ಮತ್ತು ಪರಿಹಾರ ಶಿಬಿರಗಳಲ್ಲಿ ಮತದಾನವನ್ನು ಆಯೋಜಿಸುವ ಕಲ್ಪನೆಯು ಒಂದು ಗಿಮಿಕ್ ಹೊರತು ಬೇರೇನೂ ಅಲ್ಲ ಎಂದು  ಹೇಳಿದ್ದಾರೆ. ಇಂಫಾಲ್ ಕಣಿವೆಯ ನಾಲ್ಕು ಪರಿಹಾರ ಶಿಬಿರಗಳಲ್ಲಿ ಚುನಾವಣಾ ಪ್ರಕ್ರಿಯೆಯ ಬಗ್ಗೆ ಸಂತ್ರಸ್ತರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಇದನ್ನು ಓದಿ: ಮೋದಿ-ಶಾ ಅವರ ಸೈದ್ಧಾಂತಿಕ ಪೂರ್ವಜರು ಸ್ವಾತಂತ್ರ್ಯ ಹೋರಾಟದಲ್ಲಿ ಭಾರತೀಯರ ವಿರುದ್ಧ ಬ್ರಿಟಿಷರು, ಮುಸ್ಲಿಂ ಲೀಗ್‌ನ್ನು ಬೆಂಬಲಿಸಿದರು: ಪ್ರಣಾಳಿಕೆ ಕುರಿತ ಟೀಕೆಗೆ ಖರ್ಗೆ ಪ್ರತಿಕ್ರಿಯೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...

ಪೆಟ್ರೋಲ್‌ನಲ್ಲಿ ಎಥನಾಲ್ ಪ್ರಮಾಣ ಬಹಿರಂಗಪಡಿಸುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪೆಟ್ರೋಲ್‌ನಲ್ಲಿ ಬೆರೆಸಲಾಗುವ ಎಥನಾಲ್ ಪ್ರಮಾಣವನ್ನು ಕಡ್ಡಾಯವಾಗಿ ನಮೂದಿಸಬೇಕು ಮತ್ತು ವಾಹನಗಳಿಗೆ ಎಥನಾಲ್ ಮಿಶ್ರಿತ ಇಂಧನದ ಹೊಂದಾಣಿಕೆಯ ಬಗ್ಗೆ ಹೆಚ್ಚಿನ ಪಾರದರ್ಶಕತೆ ತರಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆ...

ದೆಹಲಿ| ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಿದ ಎಂಸಿಡಿ

ದೆಹಲಿ ಹೈಕೋರ್ಟ್ ನಿರ್ದೇಶನದಂತೆ, ಮೊಘಲರ ಕಾಲದ ಐತಿಹಾಸಿಕ ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ನಿರ್ಮಾಣಗಳನ್ನು ಸಮೀಕ್ಷೆ ಮಾಡಿ, ಒತ್ತುವರಿಯನ್ನು ತೆರವುಗೊಳಿಸುವ ಬೃಹತ್ ಕಾರ್ಯಾಚರಣೆಯನ್ನು ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಸೋಮವಾರ (ಆ.31) ಪ್ರಾರಂಭಿಸಿದೆ...

ವೆನೆಜುವೆಲಾ ಮತ್ತೆ ಎದ್ದು ನಿಲ್ಲಲಿದೆ: ಬಂಧನದಲ್ಲಿರುವ ವೆನೆಜುವೆಲಾ ಮಾಜಿ ಅಧ್ಯಕ್ಷ ಮಡುರೊ ಮೊದಲ ಫೋಟೋ ಹಂಚಿಕೆ

ಜನವರಿಯಲ್ಲಿ ಅಮೆರಿಕ ಪಡೆಗಳಿಂದ ಬಂಧನಕ್ಕೊಳಗಾಗಿದ್ದ ವೆನೆಜುವೆಲಾದ ಮಾಜಿ ಅಧ್ಯಕ್ಷ ನಿಕೋಲಸ್ ಮಡುರೊ, ಅಮೆರಿಕದ ಬಂಧನ ಕೇಂದ್ರದಿಂದ ತಮ್ಮ ಎರಡು ಛಾಯಾಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಬಂಧನದ ಬಳಿಕ ಮಡುರೊ ಅವರ ಫೋಟೋಗಳು ಹೊರಬಂದಿರುವುದು...

‘ಮಹಿಳೆಯರು ಆಭರಣದಂತೆ ಮನೆಯಲ್ಲೇ ಇರಬೇಕು’ ಮುಸ್ಲಿಂ ಧರ್ಮಗುರು ವಿವಾದಾತ್ಮಕ ಹೇಳಿಕೆ

ಮಹಿಳೆಯರು ಮನೆಯಲ್ಲೇ ಇರಬೇಕು ಮತ್ತು ಸಾರ್ವಜನಿಕ ಕ್ಷೇತ್ರಕ್ಕೆ ಪ್ರವೇಶಿಸಬಾರದು ಎಂದು ಕೇರಳದ ಪ್ರಭಾವಿ ಮುಸ್ಲಿಂ ಧರ್ಮಗುರು ಶೇಖ್ ಅಬೂಬಕರ್ ಅಹ್ಮದ್ ನೀಡಿದ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ...

ಹಲ್ದ್ವಾನಿ ‘ಶುದ್ಧೀಕರಣ’ ವಿವಾದ : ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್

ಉತ್ತರಾಖಂಡದ ಹಲ್ದ್ವಾನಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ರ್‍ಯಾಲಿ ನಡೆದ ಸ್ಥಳದಲ್ಲಿ ಬಿಜೆಪಿ ಬೆಂಬಲಿಗರು 'ಶುದ್ಧೀಕರಣ' ನಡೆಸಿದ ವಿವಾದ ಹೊಸ ರಾಜಕೀಯ ಮತ್ತು ಕಾನೂನು ತಿರುವು ಪಡೆದುಕೊಂಡಿದೆ. ಜಾತಿ ನಿಂದನೆಗೆ ಸಂಬಂಧಿಸಿದಂತೆ...

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...