Homeಮುಖಪುಟಬಿಜೆಪಿ ಕೊಟ್ಟ ಪಟ್ಟಿಯಂತೆ ಟಿಎಂಸಿ ನಾಯಕರನ್ನು ಟಾರ್ಗೆಟ್ ಮಾಡುತ್ತಿರುವ ಎನ್‌ಐಎ: ಸಾಕೇತ್ ಗೋಖಲೆ

ಬಿಜೆಪಿ ಕೊಟ್ಟ ಪಟ್ಟಿಯಂತೆ ಟಿಎಂಸಿ ನಾಯಕರನ್ನು ಟಾರ್ಗೆಟ್ ಮಾಡುತ್ತಿರುವ ಎನ್‌ಐಎ: ಸಾಕೇತ್ ಗೋಖಲೆ

ಚು. ಆಯೋಗದ ಅನುಮತಿಯಿಲ್ಲದೆ ಬಿಜೆಪಿ ಸರ್ಕಾರದ ಅಧಿಕಾರಿಯನ್ನು ಎನ್‌ಐಎ ಮುಖ್ಯಸ್ಥರಾಗಿ ನೇಮಿಸಿದ್ದು ಹೇಗೆ? ಗಂಭೀರ ಪ್ರಶ್ನೆ ಎತ್ತಿದ ಟಿಎಂಸಿ ಸಂಸದ

- Advertisement -
- Advertisement -

ರಾಷ್ಟ್ರೀಯ ತನಿಖಾ ದಳ (ಎನ್‌ಐಎ) ವನ್ನು ದುರ್ಬಳಕೆ ಮಾಡಿಕೊಂಡು ತೃಣಮೂಲ ಕಾಂಗ್ರೆಸ್ (ಟಿಎಂಸಿ) ನಾಯಕರನ್ನು ಗುರಿಯಾಗಿಸಲಾಗುತ್ತಿದೆ ಎಂದು ರಾಜ್ಯಸಭಾ ಸಂಸದ ಸಾಕೇತ್ ಗೋಖಲೆ ಆರೋಪಿಸಿದ್ದಾರೆ.

ಈ ಆರೋಪವನ್ನು ಪುಷ್ಠೀಕರಿಸುವ ಕೆಲವೊಂದು ಪುರಾವೆಗಳನ್ನು ಅವರು ಜನರ ಮುಂದಿಟ್ಟಿದ್ದು, ಕೆಲ ಗಂಭೀರ ಪ್ರಶ್ನೆಗಳನ್ನು ಎತ್ತಿದ್ದಾರೆ.

ಬಿಜೆಪಿ ಎನ್‌ಐಎ ಮೂಲಕ ಟಿಎಂಸಿ ನಾಯರನ್ನು ಹೇಗೆ ಗುರಿಯಾಗಿಸುತ್ತಿದೆ ಎಂದು ನಿನ್ನೆ (ಏ.7) ನಾವು ಸುದ್ದಿಗೋಷ್ಠಿ ನಡೆಸಿದ್ದೆವು. ಕಳೆದ ಮಾರ್ಚ್ 26ರಂದು ಬಿಜೆಪಿ ನಾಯಕರ ಜಿತೇಂದ್ರ ತಿವಾರಿ ಅವರು ಕೊಲ್ಕತ್ತಾದಲ್ಲಿ ಎನ್‌ಐಎ ಎಸ್‌ಪಿ ಅವರನ್ನು ಭೇಟಿಯಾಗಿದ್ದರು. ಜಿತೇಂದ್ರ ತಿವಾರಿ ಒಂದು ಬ್ಯಾಗ್‌ನೊಂದಿಗೆ ಹೋಗಿದ್ದರು. ನಾವು ನಿನ್ನೆ ಸಾರ್ವಜನಿಕವಾಗಿ ಇದಕ್ಕೆ ಸಾಕ್ಷಿ ತೋರಿಸಿದ್ದೇವೆ ಎಂದು ಸಾಕೇತ್ ಗೋಖಲೆ ಹೇಳಿದ್ದಾರೆ.

ಎನ್‌ಐಎ ಎಸ್‌ಪಿಯನ್ನು ಭೇಟಿಯಾಗಿದ್ದ ಬಿಜೆಪಿ ನಾಯಕರ ಜಿತೇಂದ್ರ ತಿವಾರಿ ಬಂಗಾಳದಲ್ಲಿ ಯಾವೆಲ್ಲ ಟಿಎಂಸಿ ನಾಯಕರು ಮತ್ತು ಕಾರ್ಯಕರ್ತರನ್ನು ಗುರಿಪಡಿಸಬೇಕು ಎಂದು ಪಟ್ಟಿ ಕೊಟ್ಟಿದ್ದರು. ಅದೇ ದಿನ (ಮಾ.26) ಮೋದಿ ಸರ್ಕಾರ ಎನ್‌ಐಎ ಮುಖ್ಯಸ್ಥರಾಗಿ (ಎನ್‌ಐಎ ಡಿಜಿ) ಸದಾನಂದ ದಾಟೆ ಅವರನ್ನು ನೇಮಿಸಿದೆ. ಹೊಸ ಎನ್‌ಐಎ ಮುಖ್ಯಸ್ಥ ಮಾ.26ರವರೆಗೆ ಮಹಾರಾಷ್ಟ್ರದ ಎಟಿಎಸ್‌ ಅಲ್ಲಿ ಕೆಲಸ ಮಾಡುತ್ತಿದ್ದರು. ಅವರನ್ನು ಎಟಿಎಸ್‌ಗೆ ಬಿಜೆಪಿ ನಾಯಕ ಹಾಗೂ ಮಹಾರಾಷ್ಟ್ರದ ಗೃಹ ಸಚಿವ ದೇವೇಂದ್ರ ಫಡ್ನವಿಸ್ ನೇಮಿಸಿದ್ದರು ಎಂದು ಸಾಕೇತ್ ಗೋಖಲೆ ತಿಳಿಸಿದ್ದಾರೆ.

ಇವಿಷ್ಟು ಮಾಹಿತಿಯನ್ನು ತಿಳಿಸಿರುವ ಸಾಕೇತ್ ಗೋಖಲೆ ಕೆಲವೊಂದು ಗಂಭೀರ ಪ್ರಶ್ನೆಗಳನ್ನು ಮುಂದಿಟ್ಟಿದ್ದು, ಅವುಗಳು ಹೀಗಿವೆ..

ಮಹಾರಾಷ್ಟ್ರದ ರಾಜ್ಯ ಬಿಜೆಪಿ ಸರ್ಕಾರದಿಂದ ನೇಮಕಗೊಂಡ ಮತ್ತು ಸೇವೆ ಸಲ್ಲಿಸುತ್ತಿದ್ದ ಅಧಿಕಾರಿಯೊಬ್ಬರು ಚುನಾವಣಾ ಸಮಯದಲ್ಲಿ ಇದ್ದಕ್ಕಿದ್ದಂತೆ ಎನ್‌ಐಎ ಡಿಜಿಯಾಗಿ ನೇಮಕಗೊಳಿಸುವಾಗ ಮೋದಿ ಸರ್ಕಾರ ಚುನಾವಣಾ ಆಯೋಗದ ಅನುಮತಿಯನ್ನು ತೆಗೆದುಕೊಂಡಿದೆಯೇ?

ಪಶ್ಚಿಮ ಬಂಗಾಳದ ಡಿಜಿಪಿ (ಪೊಲೀಸ್‌) ಯನ್ನು ಚುನಾವಣಾ ಆಯೋಗ 24 ಗಂಟೆಗಳಲ್ಲಿ 3 ಬಾರಿ ಬದಲಾಯಿಸಿದಾಗ, ಮಹಾರಾಷ್ಟ್ರ ಬಿಜೆಪಿ ಸರ್ಕಾರ ನೇಮಕ ಮಾಡಿದ ಅಧಿಕಾರಿಯನ್ನು ಚುನಾವಣಾ ಆಯೋಗದ ಅನುಮೋದನೆಯಿಲ್ಲದೆ ಎನ್‌ಐಎ ಮುಖ್ಯಸ್ಥರಾಗಿ ನೇಮಿಸಿದ್ದು ಹೇಗೆ?

ಹೊಸ ಎನ್‌ಐಎ ಮುಖ್ಯಸ್ಥರನ್ನು ನೇಮಿಸಿದ ಒಂದೇ ದಿನದಲ್ಲಿ ಬಿಜೆಪಿಯು ಪಶ್ಚಿಮ ಬಂಗಾಳದಲ್ಲಿ ಎನ್‌ಐಎ ಜೊತೆ ಪಿತೂರಿ ನಡೆಸುತ್ತಿರುವುದು ನಮ್ಮನ್ನು ಬೆರಗುಗೊಳಿಸಿದೆ. ಈ ವಿಚಾರವನ್ನು ತಕ್ಷಣವೇ ಚುನಾವಣಾ ಆಯೋಗ ತನಿಖೆ ಮಾಡಬೇಕು ಮತ್ತು ಆಯೋಗದ ಅನುಮೋದನೆಯಿಲ್ಲದೆ ಹೊಸ ಎನ್‌ಐಎ ಮುಖ್ಯಸ್ಥರನ್ನು ಹೇಗೆ ನೇಮಿಸಲಾಯಿತು ಎಂಬುವುದನ್ನು ಮೋದಿ ಸರ್ಕಾರವು ವಿವರಿಸಬೇಕು ಎಂದು ಸಾಕೇತ್ ಗೋಖಲೆ ಆಗ್ರಹಿಸಿದ್ದಾರೆ.

ಕೇಂದ್ರದ ತನಿಖಾ ಸಂಸ್ಥೆಗಳು ಮತ್ತು ಬಿಜೆಪಿಯು ಈ ಲೋಕಸಭಾ ಚುನಾವಣೆಯ ಸಮಯದಲ್ಲಿ ಆಳವಾದ ಸಂಬಂಧಲ್ಲಿದೆ. ತನಿಖಾ ಸಂಸ್ಥೆಗಳು ಅಕ್ಷರಶಃ ಬಿಜೆಪಿಯ ಖಾಸಗಿ ಮಾಫಿಯಾದಂತೆ ಕಾರ್ಯನಿರ್ವಹಿಸುತ್ತಿವೆ. ಪಶ್ಚಿಮ ಬಂಗಾಳದಲ್ಲಿ ಟಿಎಂಸಿ ನಾಯಕರನ್ನು ಗುರಿಯಾಗಿಸಲು ಬಿಜೆಪಿಯೊಂದಿಗೆ ಎನ್‌ಐಎ ಪಿತೂರಿ ನಡೆಸುತ್ತಿರುವುದು ಶೋಚನೀಯವಾಗಿದೆ ಮಾತ್ರವಲ್ಲದೆ ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆಗಳು ಸಾಧ್ಯವೇ ಎಂಬ ಮೂಲಭೂತ ಪ್ರಶ್ನೆಗಳನ್ನು ಎತ್ತಿವೆ ಎಂದು ಸಾಕೇತ್ ಗೋಖಲೆ ಹೇಳಿದ್ದಾರೆ.

ಇಂದು(ಏ.8) ಸಂಜೆ 6 ಗಂಟೆಯ ಹೊತ್ತಿಗೆ ಟಿಎಂಸಿಯ ಐವರು ಹಾಲಿ ಮತ್ತು ನಾಲ್ವರು ಮಾಜಿ ಸಂಸದರು ದೆಹಲಿ ಪೊಲೀಸರು ಅಪಹರಿಸಿದ್ದಾರೆ ಎಂದು ಸಾಕೇತ್ ಗೋಖಲೆ ಎಕ್ಸ್‌ನಲ್ಲಿ ಪೋಸ್ಟ್ ಹಾಕಿದ್ದರು. “ನಾವು ದೆಹಲಿಯ ಚುನಾವಣಾ ಆಯೋಗದ ಕಚೇರಿ ಬಳಿ ಪ್ರತಿಭಟನೆ ನಡೆಸುತ್ತಿದ್ದೆವು. ಪೊಲೀಸರು ನಮ್ಮನ್ನು ಮಂದಿರ್ ಮಾರ್ಗ್‌ ಪೊಲೀಸ್ ಠಾಣೆಗೆ ಕರೆದೊಯ್ಯಲಾಗುವುದು ಎಂದು ಹೇಳಿ ಕರೆ ತಂದಿದ್ದಾರೆ. ಆದರೆ, ಮಾರ್ಗ ಮಧ್ಯೆ ಬಸ್ ತಿರುಗಿಸಿ ಅಜ್ಞಾತ ಸ್ಥಳಕ್ಕೆ ಕರೆದೊಯ್ಯುತ್ತಿದ್ದಾರೆ. ಗಮನಿಸಿ..ನಮ್ಮಲ್ಲಿ ಐವರು ಹಾಲಿ ಮತ್ತು ನಾಲ್ವರು ಮಾಜಿ ಸಂಸದರಿದ್ದಾರೆ. ನಮ್ಮ ಮೇಲೆ ಹಲ್ಲೆ ನಡೆಸಿ, ಅಕ್ರಮವಾಗಿ ಬಂಧಿಸಿ, ಈಗ ಎಲ್ಲೋ ಅಜ್ಞಾತ ಸ್ಥಳಕ್ಕೆ ಕರೆದೊಯ್ಯುತ್ತಿದ್ದಾರೆ” ಎಂದು ಸಾಕೇತ್ ಗೋಖಲೆ ಹೇಳಿದ್ದರು.

ಇದನ್ನೂ ಓದಿ : ಪ್ರಧಾನಿ ಮೋದಿ ಸೇರಿದಂತೆ ಹಲವರ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿದ ಕಾಂಗ್ರೆಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...

ಪೆಟ್ರೋಲ್‌ನಲ್ಲಿ ಎಥನಾಲ್ ಪ್ರಮಾಣ ಬಹಿರಂಗಪಡಿಸುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪೆಟ್ರೋಲ್‌ನಲ್ಲಿ ಬೆರೆಸಲಾಗುವ ಎಥನಾಲ್ ಪ್ರಮಾಣವನ್ನು ಕಡ್ಡಾಯವಾಗಿ ನಮೂದಿಸಬೇಕು ಮತ್ತು ವಾಹನಗಳಿಗೆ ಎಥನಾಲ್ ಮಿಶ್ರಿತ ಇಂಧನದ ಹೊಂದಾಣಿಕೆಯ ಬಗ್ಗೆ ಹೆಚ್ಚಿನ ಪಾರದರ್ಶಕತೆ ತರಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆ...

ದೆಹಲಿ| ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಿದ ಎಂಸಿಡಿ

ದೆಹಲಿ ಹೈಕೋರ್ಟ್ ನಿರ್ದೇಶನದಂತೆ, ಮೊಘಲರ ಕಾಲದ ಐತಿಹಾಸಿಕ ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ನಿರ್ಮಾಣಗಳನ್ನು ಸಮೀಕ್ಷೆ ಮಾಡಿ, ಒತ್ತುವರಿಯನ್ನು ತೆರವುಗೊಳಿಸುವ ಬೃಹತ್ ಕಾರ್ಯಾಚರಣೆಯನ್ನು ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಸೋಮವಾರ (ಆ.31) ಪ್ರಾರಂಭಿಸಿದೆ...

ವೆನೆಜುವೆಲಾ ಮತ್ತೆ ಎದ್ದು ನಿಲ್ಲಲಿದೆ: ಬಂಧನದಲ್ಲಿರುವ ವೆನೆಜುವೆಲಾ ಮಾಜಿ ಅಧ್ಯಕ್ಷ ಮಡುರೊ ಮೊದಲ ಫೋಟೋ ಹಂಚಿಕೆ

ಜನವರಿಯಲ್ಲಿ ಅಮೆರಿಕ ಪಡೆಗಳಿಂದ ಬಂಧನಕ್ಕೊಳಗಾಗಿದ್ದ ವೆನೆಜುವೆಲಾದ ಮಾಜಿ ಅಧ್ಯಕ್ಷ ನಿಕೋಲಸ್ ಮಡುರೊ, ಅಮೆರಿಕದ ಬಂಧನ ಕೇಂದ್ರದಿಂದ ತಮ್ಮ ಎರಡು ಛಾಯಾಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಬಂಧನದ ಬಳಿಕ ಮಡುರೊ ಅವರ ಫೋಟೋಗಳು ಹೊರಬಂದಿರುವುದು...

‘ಮಹಿಳೆಯರು ಆಭರಣದಂತೆ ಮನೆಯಲ್ಲೇ ಇರಬೇಕು’ ಮುಸ್ಲಿಂ ಧರ್ಮಗುರು ವಿವಾದಾತ್ಮಕ ಹೇಳಿಕೆ

ಮಹಿಳೆಯರು ಮನೆಯಲ್ಲೇ ಇರಬೇಕು ಮತ್ತು ಸಾರ್ವಜನಿಕ ಕ್ಷೇತ್ರಕ್ಕೆ ಪ್ರವೇಶಿಸಬಾರದು ಎಂದು ಕೇರಳದ ಪ್ರಭಾವಿ ಮುಸ್ಲಿಂ ಧರ್ಮಗುರು ಶೇಖ್ ಅಬೂಬಕರ್ ಅಹ್ಮದ್ ನೀಡಿದ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ...

ಹಲ್ದ್ವಾನಿ ‘ಶುದ್ಧೀಕರಣ’ ವಿವಾದ : ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್

ಉತ್ತರಾಖಂಡದ ಹಲ್ದ್ವಾನಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ರ್‍ಯಾಲಿ ನಡೆದ ಸ್ಥಳದಲ್ಲಿ ಬಿಜೆಪಿ ಬೆಂಬಲಿಗರು 'ಶುದ್ಧೀಕರಣ' ನಡೆಸಿದ ವಿವಾದ ಹೊಸ ರಾಜಕೀಯ ಮತ್ತು ಕಾನೂನು ತಿರುವು ಪಡೆದುಕೊಂಡಿದೆ. ಜಾತಿ ನಿಂದನೆಗೆ ಸಂಬಂಧಿಸಿದಂತೆ...

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...