Homeಅಂತರಾಷ್ಟ್ರೀಯಲೆಬನಾನ್‌ ಮೇಲೆ ಇಸ್ರೇಲ್‌ನಿಂದ ವೈಮಾನಿಕ ದಾಳಿ: ಹೆಚ್ಚಿದ ಪ್ರಾದೇಶಿಕ ಸಂಘರ್ಷದ ಭೀತಿ

ಲೆಬನಾನ್‌ ಮೇಲೆ ಇಸ್ರೇಲ್‌ನಿಂದ ವೈಮಾನಿಕ ದಾಳಿ: ಹೆಚ್ಚಿದ ಪ್ರಾದೇಶಿಕ ಸಂಘರ್ಷದ ಭೀತಿ

- Advertisement -
- Advertisement -

ಇಸ್ರೇಲ್‌- ಲೆಬನಾನ್‌ ಮೇಲೆ ರಾತ್ರೋ ರಾತ್ರಿ ವೈಮಾನಿಕ ದಾಳಿಯನ್ನು ನಡೆಸಿದೆ. ದಾಳಿಯಲ್ಲಿ ಹೆಜ್ಬೊಲ್ಲಾ ಕಮಾಂಡರ್‌ನ್ನು ಹತ್ಯೆ ಮಾಡಿರುವುದಾಗಿ ಹೇಳಿಕೊಂಡಿದ್ದು, ವಿಶ್ವಸಂಸ್ಥೆಯು ಯುದ್ಧ ವ್ಯಾಪಿಸುತ್ತಿರುವ ಬಗ್ಗೆ ಎಚ್ಚರಿಕೆಯನ್ನು ನೀಡಿದೆ. ಗಾಝಾ ನಡುವಿನ ಯುದ್ಧದ ಮಧ್ಯೆ ಇಸ್ರೇಲ್‌ ಇರಾನ್‌ ಮತ್ತು ಲೆಬನಾನ್‌ ಮೇಲೆ ದಾಳಿ ನಡೆಸುತ್ತಿದ್ದು, ಪ್ರಾದೇಶಿಕ ಸಂಘರ್ಷದ ಭೀತಿಯನ್ನು ಹೆಚ್ಚಿಸಿದೆ.

ದಕ್ಷಿಣ ಲೆಬನಾನ್‍ನ ಅಸ್-ಸುಲ್ತಾನಿಯಾ ಪ್ರದೇಶದಲ್ಲಿ ಇಸ್ರೇಲ್‍ ನಡೆಸಿದ ವೈಮಾನಿಕ ದಾಳಿಯಲ್ಲಿ ಹಿಜ್ಬುಲ್ಲಾದ  `ರದ್ವಾನ್ ಪಡೆ’ಯ ಕಮಾಂಡರ್ ಅಲಿ ಅಹ್ಮದ್ ಹುಸೈನ್ ಮೃತಪಟ್ಟಿದ್ದಾರೆ. ದಾಳಿಯಲ್ಲಿ ಇತರ ಮೂವರು ಹಿಜ್ಬುಲ್ಲಾ ಗುಂಪಿನ ಸದಸ್ಯರು ಸಾವನ್ನಪ್ಪಿದ್ದಾರೆ ಎಂದು ಹೇಳಲಾಗಿದೆ.

ಈ ಮಧ್ಯೆ, ಲೆಬನಾನ್‍ನಿಂದ ಇಸ್ರೇಲ್ ಆಕ್ರಮಿತ ಗೊಲಾನ್ ಹೈಟ್ಸ್‍ಗೆ 10ಕ್ಕೂ ಅಧಿಕ ಕ್ಷಿಪಣಿ ದಾಳಿ ನಡೆದಿದೆ ಎಂದು ಮೂಲಗಳನ್ನು ಉಲ್ಲೇಖಿಸಿ ಅಲ್‍ಜಝೀರಾ ವರದಿ ಮಾಡಿದೆ. ಈ ಪ್ರದೇಶದಲ್ಲಿ ಸೇನಾ ನೆಲೆ ಮತ್ತು ವಾಯು ರಕ್ಷಣಾ ಪೋಸ್ಟ್‌ಗಳನ್ನು ಗುರಿಯಾಗಿಸಿಕೊಂಡಿರುವುದಾಗಿ ಹಿಜ್ಬುಲ್ಲಾ ಹೋರಾಟಗಾರರು ತಿಳಿಸಿದ್ದಾರೆ.

ಹಿಜ್ಬುಲ್ಲಾ ಮತ್ತು ಇಸ್ರೇಲ್‌ ಮಿಲಿಟರಿಯು ಲೆಬನಾನ್‌ನ ದಕ್ಷಿಣ ಗಡಿಯಲ್ಲಿ ಗಾಝಾ ಯುದ್ಧದ ಮಧ್ಯೆ  ದಾಳಿಯನ್ನು ನಡೆಸುತ್ತಿದೆ. ಇದು ವಿಶಾಲವಾದ ಪ್ರಾದೇಶಿಕ ಸಂಘರ್ಷದ ಭಯವನ್ನು ಹೆಚ್ಚಿಸಿದೆ.

ಇಸ್ರೇಲ್‌ ದಾಳಿಗೆ ಕಳೆದ ಆರು ತಿಂಗಳಲ್ಲಿ ಸುಮಾರು 270 ಹೆಜ್ಬೊಲ್ಲಾ ಹೋರಾಟಗಾರರು ಬಲಿಯಾಗಿದ್ದಾರೆ. ಮಕ್ಕಳು, ವೈದ್ಯರು ಮತ್ತು ಪತ್ರಕರ್ತರು ಸೇರಿದಂತೆ ಸುಮಾರು 50 ನಾಗರಿಕರ ಹತ್ಯೆ ಕೂಡ ನಡೆದಿದೆ. ಹಿಜ್ಬುಲ್ಲಾದ ರಾಕೆಟ್ ದಾಳಿಗೆ 12 ಮಂದಿ ಇಸ್ರೇಲ್‌ ಸೈನಿಕರು ಮತ್ತು 6 ಮಂದಿ ನಾಗರಿಕರು ಹತ್ಯೆಯಾಗಿದ್ದಾರೆ. ಶೆಲ್ ದಾಳಿಯು ಗಡಿಯಲ್ಲಿ ಒಂದು ಲಕ್ಷಕ್ಕೂ ಹೆಚ್ಚು ಜನರನ್ನು ಸ್ಥಳಾಂತರಕ್ಕೆ ಕಾರಣವಾಗಿದೆ ಮತ್ತು ದಕ್ಷಿಣ ಲೆಬನಾನ್‌ನಲ್ಲಿ ಕೃಷಿ ಆರ್ಥಿಕತೆಯ ಮೇಲೆ ತೀವ್ರವಾಗಿ ಪರಿಣಾಮ ಬೀರಿದೆ.

ಇತ್ತೀಚೆಗೆ ಇರಾನ್‌ನಲ್ಲಿ ರಾಯಭಾರಿ ಕಚೇರಿಯ ಮೇಲೆ ಇಸ್ರೇಲ್‌ ವೈಮಾನಿಕ ದಾಳಿ ನಡೆಸಿತ್ತು. ದಾಳಿಯಲ್ಲಿ ಐಆರ್‌ಜಿಸಿಯ ಎಲೈಟ್ ಕುಡ್ಸ್ ಫೋರ್ಸ್‌ನ ಹಿರಿಯ ಕಮಾಂಡರ್ ಬ್ರಿಗೇಡಿಯರ್ ಜನರಲ್ ಮೊಹಮ್ಮದ್ ರೆಜಾ ಜಹೇದಿ ಮತ್ತು ಉಪ ಜನರಲ್ ಮೊಹಮ್ಮದ್ ಹಾದಿ ಹಜ್ರಿಯಾಹಿಮಿ ಅವರು ಸಾವನ್ನಪ್ಪಿದ್ದರು. ಇಸ್ರೇಲ್‌ನ ಈ ಭಯೋತ್ಪಾದಕ ದಾಳಿಯನ್ನು ಇರಾನ್‌ನ ವಿದೇಶಾಂಗ ಸಚಿವ ಹುಸೇನ್ ಅಮೀರ್-ಅಬ್ದೊಲ್ಲಾಹಿಯಾನ್, ವಿದೇಶಾಂಗ ಸಚಿವಾಲಯದ ವಕ್ತಾರ ನಾಸರ್ ಕನಾನಿ, ಸಿರಿಯಾದ ವಿದೇಶಾಂಗ ಸಚಿವ ಫೈಸಲ್ ಮೆಕ್ದಾದ್ ಸೇರಿ ಹಲವುರು ಖಂಡಿಸಿದ್ದರು. ಇಸ್ರೇಲ್‌ ವಿರುದ್ಧ ಪ್ರತಿಕಾರ ತೀರಿಸುವುದಾಗಿ ಹೇಳಿದ್ದರು.

ಇಬ್ಬರು ಉನ್ನತ ಕಮಾಂಡರ್‌ಗಳ ಹತ್ಯೆಯಿಂದ ಆಕ್ರೋಶಗೊಂಡಿರುವ ಇರಾನ್‌, ಇಸ್ರೇಲ್‍ನ ಯಾವುದೇ ರಾಯಭಾರಿ ಕಚೇರಿಗಳು ಇನ್ನು ಮುಂದೆ ಸುರಕ್ಷಿತವಾಗಿರುವುದಿಲ್ಲ ಎಂದು ಹೇಳಿದೆ. ಇರಾನ್‌ ಮೇಲಿನ ದಾಳಿಯಲ್ಲಿ ಇಸ್ರೇಲ್ ನೇರವಾಗಿ ತನ್ನ ಒಳಗೊಳ್ಳುವಿಕೆಯನ್ನು ಒಪ್ಪಿಕೊಂಡಿಲ್ಲ. ಇಸ್ರೇಲ್ ಯಾವುದೇ ಪ್ರತಿಕ್ರಿಯೆಗೆ ಸಿದ್ಧವಾಗಿದೆ ಎಂದು ನೆತನ್ಯಾಹು ಹೇಳಿದ್ದಾರೆ. ಕಳೆದ 6 ತಿಂಗಳಿನಿಂದ ಗಾಝಾದಲ್ಲಿ ಹತ್ಯಾಕಾಂಡವನ್ನು ನಡೆಸುತ್ತಿರುವ ಇಸ್ರೇಲ್‌ 33,000ಕ್ಕೂ ಅಧಿಕ ಮಂದಿಯನ್ನು ಹತ್ಯೆ ಮಾಡಿತ್ತು. ಆದರೂ ಯುದ್ಧ ದಾಹವನ್ನು ಮುಂದುವರಿಸಿರುವ ಇಸ್ರೇಲ್‌ ದೇಶವು ಇರಾನ್‌, ಲೆಬನಾನ್‌ ಮೇಲೆ ದಾಳಿಯನ್ನು ನಡೆಸುತ್ತಿದ್ದು, ಪ್ರತಿದಾಳಿ, ಪ್ರತಿರೋಧಗಳು ಕೂಡ ನಡೆಯುತ್ತಿದೆ. ಇದು ಇಸ್ರೇಲ್‌-ಗಾಝಾ ಯುದ್ಧದ ಮಧ್ಯೆ ಪ್ರಾದೇಶಿಕ ಸಂಘರ್ಷದ ಭೀತಿಯನ್ನು ಮತ್ತಷ್ಟು ಹೆಚ್ಚಿಸಿದೆ.

ಇದನ್ನು ಓದಿ:  ಬಿಜೆಪಿ ಕೊಟ್ಟ ಪಟ್ಟಿಯಂತೆ ಟಿಎಂಸಿ ನಾಯಕರನ್ನು ಟಾರ್ಗೆಟ್ ಮಾಡುತ್ತಿರುವ ಎನ್‌ಐಎ: ಸಾಕೇತ್ ಗೋಖಲೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಡರಂಗದಲ್ಲಿ ಎಡಪಂಥೀಯರೇ ಇಲ್ಲ; ದ್ವೇಷ ಹರಡುವ ಜನರೊಂದಿಗೆ ಪಿಣರಾಯಿ ಪಾಲುದಾರಿಕೆ ಹೊಂದಿದ್ದಾರೆ: ರಾಹುಲ್ ಗಾಂಧಿ

ಕೇರಳ ವಿಧಾನಸಭಾ ಚುನಾವಣೆ ಪ್ರಚಾರವು ಅಂತಿಮ ಹಂತಕ್ಕೆ ತಲುಪುತ್ತಿದ್ದಂತೆ ತೀಕ್ಷ್ಣವಾದ ರಾಜಕೀಯ ದಾಳಿಯನ್ನು ಆರಂಭಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, "ಸಿಪಿಐ-ಎಂ ನೇತೃತ್ವದ ಎಡಪಕ್ಷವು ತನ್ನ ಸೈದ್ಧಾಂತಿಕ ತಿರುಳನ್ನು ಕಳೆದುಕೊಳ್ಳುತ್ತಿದೆ" ಎಂದು ಆರೋಪಿಸಿದ್ದಾರೆ. "ಎಲ್‌ಡಿಎಫ್...

ಬಿಜೆಪಿ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಅಂದಿದ್ದೆ : ಅಣ್ಣಾಮಲೈ

"ವಿಧಾನಸಭಾ ಚುನಾವಣೆಗೆ ಬಿಜೆಪಿ ನನಗೆ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಎಂದು ಮುಂಚಿತವಾಗಿ ಹೈಕಮಾಂಡ್‌ಗೆ ತಿಳಿಸಿದ್ದೆ" ಎಂದು ತಮಿಳುನಾಡು ಬಿಜೆಪಿಯ ಮಾಜಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಹೇಳಿದ್ದಾರೆ. ಚೆನ್ನೈ ವಿಮಾನ ನಿಲ್ದಾಣದಲ್ಲಿ ಶನಿವಾರ...

ಸುರಕ್ಷಿತವಾಗಿ ಹಾರ್ಮುಜ್ ದಾಟಿದ 7ನೇ ಎಲ್‌ಪಿಜಿ ಹಡಗು; ಸರದಿಯಲ್ಲಿ ಕಾಯುತ್ತಿವೆ ಭಾರತದ 17 ಟ್ಯಾಂಕರ್‌ಗಳು

ಭಾರತದ ಧ್ವಜ ಹೊಂದಿದ್ದ ಮತ್ತೊಂದು ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಟ್ಯಾಂಕರ್, ಗ್ರೀನ್ ಸಾನ್ವಿ ಹೆಸರಿನ ಹಡಗು ಹಾರ್ಮುಜ್ ಜಲಸಂಧಿಯ ಪೂರ್ವಕ್ಕೆ ಯಶಸ್ವಿಯಾಗಿ ತಲುಪಿದೆ. ಹಡಗು ಟ್ರ್ಯಾಕಿಂಗ್ ದತ್ತಾಂಶದ ಪ್ರಕಾರ, ನಡೆಯುತ್ತಿರುವ ಪಶ್ಚಿಮ...

ಸಿಬಿಎಸ್‌ಇ ಹಿಂದಿ ಹೇರಿಕೆಯು ತ್ರಿಭಾಷಾ ಸೂತ್ರ ಜಾರಿಯ ‘ರಹಸ್ಯ ಕಾರ್ಯವಿಧಾನ’: ಸ್ಟಾಲಿನ್ ಆರೋಪ

ಸಿಬಿಎಸ್‌ಇ ಇತ್ತೀಚೆಗೆ ಅನಾವರಣಗೊಳಿಸಿದ ಪಠ್ಯಕ್ರಮ ಚೌಕಟ್ಟಿನ ಕುರಿತು ಮಾತನಾಡಿದ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್, "ಮೂರು ಭಾಷಾ ಸೂತ್ರ ಎಂದು ಕರೆಯಲ್ಪಡುವುದು ವಾಸ್ತವದಲ್ಲಿ ಹಿಂದಿ ಮಾತನಾಡದ ಪ್ರದೇಶಗಳಿಗೆ ಹಿಂದಿ ವಿಸ್ತರಿಸುವ ರಹಸ್ಯ ಕಾರ್ಯವಿಧಾನವಾಗಿದೆ"...

‘ತಿಂದ ಮನೆಗೆ ಕನ್ನ ಹಾಕುವುದು ತರವಲ್ಲ, ನಿಮ್ಮ ಅಧಿಕ ಪ್ರಸಂಗ ಕರ್ನಾಟಕದ ಜನತೆ ಒಪ್ಪುವುದಿಲ್ಲ’ : ರಾಜ್ಯಪಾಲರ ವಿರುದ್ಧ ಕರವೇ ಕಿಡಿ

ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ತೃತೀಯ ಭಾಷೆಗೆ ಗ್ರೇಡಿಂಗ್ ನೀಡುವ ಸರ್ಕಾರದ ನಿರ್ಧಾರವನ್ನು ಮರುಪರಿಶೀಲಿಸುವಂತೆ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ರಾಜ್ಯಾಧ್ಯಕ್ಷ...

‘ತಪ್ಪಾಗಿದೆ’ : ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್‌ ವಿಧೇಯಕದ ಕುರಿತ ಟೀಕೆಗಳನ್ನು ಕೈಬಿಟ್ಟ ರಾಜಸ್ಥಾನ ಹೈಕೋರ್ಟ್

ಟ್ರಾನ್ಸ್‌ಜೆಂಡರ್ ಕಾಯ್ದೆ, 2019ರಲ್ಲಿ ಬದಲಾವಣೆಗಳನ್ನು ತರಲಿರುವ ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ವಿಧೇಯ, 2026ರ ಕುರಿತು ಈ ಹಿಂದೆ ಮಾಡಿದ್ದ ವಿಮರ್ಶಾತ್ಮಕ ಟಿಪ್ಪಣಿಗಳನ್ನು ರಾಜಸ್ಥಾನ ಹೈಕೋರ್ಟ್ ತೆಗೆದುಹಾಕಿದೆ ಎಂದು...

ಯುಸಿಸಿ ಜಾರಿ ನಂತರ ‘ಜನಸಂಖ್ಯಾ ನಿಯಂತ್ರಣ’ ಕಾನೂನಿಗೆ ಮುಂದಾದ ಉತ್ತರಾಖಂಡ ಬಿಜೆಪಿ ಸರ್ಕಾರ

ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತಂದ ನಂತರ, ಉತ್ತರಾಖಂಡ ಸರ್ಕಾರ ಈಗ ಜನಸಂಖ್ಯಾ ನಿಯಂತ್ರಣ ಕಾನೂನನ್ನು ತರುವ ಬಗ್ಗೆ ಯೋಚಿಸುತ್ತಿದೆ ಎಂದು ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಶುಕ್ರವಾರ ಸೂಚಿಸಿದ್ದಾರೆ. ಪ್ರಸ್ತಾವಿತ ಕ್ರಮದ...

ಪಶ್ಚಿಮ ಬಂಗಾಳ| ಟಿಎಂಸಿ ನಾಯಕರ ಭದ್ರತೆಗೆ ಭಾರೀ ಪೊಲೀಸ್ ನಿಯೋಜನೆ; ಇಸಿಐ ಆಕ್ಷೇಪ

ರಾಜ್ಯದ ವಿವಿಧ ಹಂತಗಳಲ್ಲಿ ತೃಣಮೂಲ ಕಾಂಗ್ರೆಸ್ ನಾಯಕರಿಗೆ ವೈಯಕ್ತಿಕ ಭದ್ರತೆ ಒದಗಿಸಲು ಪಶ್ಚಿಮ ಬಂಗಾಳ ಪೊಲೀಸರು ಮತ್ತು ಕೋಲ್ಕತ್ತಾ ಪೊಲೀಸರು ನಿಯೋಜಿಸಿರುವ ಹೆಚ್ಚಿನ ಸಂಖ್ಯೆಯ ಸಿಬ್ಬಂದಿಯನ್ನು ಭಾರತೀಯ ಚುನಾವಣಾ ಆಯೋಗ (ಇಸಿಐ) ಗಂಭೀರವಾಗಿ...

ಅಮೆರಿಕದ ಕದನ ವಿರಾಮ ಪ್ರಸ್ತಾವನೆ ತಿರಸ್ಕರಿಸಿದ ಇರಾನ್ : ಪಶ್ಚಿಮ ಏಷ್ಯಾ ಸಂಘರ್ಷ ಉಲ್ಬಣ

ಅಲ್ಪಾವಧಿಯ ಕದನ ವಿರಾಮಕ್ಕಾಗಿ ಅಮೆರಿಕ ಮುಂದಿಟ್ಟಿದ್ದ ಪ್ರಸ್ತಾವನೆಯನ್ನು ಇರಾನ್ ತಿರಸ್ಕರಿಸಿದೆ ಎಂದು ವರದಿಯಾಗಿದೆ. ಏಪ್ರಿಲ್ 1, 2026ರ ಬುಧವಾರದಂದು ಅಮೆರಿಕವು ಅನಾಮಧೇಯ ಮಧ್ಯಸ್ಥಿಕೆ ರಾಷ್ಟ್ರದ ಮೂಲಕ ಇರಾನ್‌ಗೆ 48 ಗಂಟೆಗಳ ತಾತ್ಕಾಲಿಕ ಕದನ ವಿರಾಮದ ಆಫರ್...

ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನರಿಗೆ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿ

ಹಿರಿಯ ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನ ಹಿರಿಯ ಸಾಧಕರು 2026ನೇ ಸಾಲಿನ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರಾಯಚೂರು ಜಿಲ್ಲೆಯ ಹಿರಿಯ ದಲಿತ ಹೋರಾಟಗಾರ...