Homeಮುಖಪುಟಎಲೆಮರೆ-2: `ಲೋಕದ ಸುಕ್ಕುಗಳ ಇಸ್ತ್ರಿ ಮಾಡುವ ಕವಿ' - ಎಚ್‌.ನಾಗೇಂದ್ರಪ್ಪ..

ಎಲೆಮರೆ-2: `ಲೋಕದ ಸುಕ್ಕುಗಳ ಇಸ್ತ್ರಿ ಮಾಡುವ ಕವಿ’ – ಎಚ್‌.ನಾಗೇಂದ್ರಪ್ಪ..

ಒಬ್ಬ ಕವಿಯಾಗಿ ನಾಗೇಂದ್ರಪ್ಪ ಲೋಕದ ಗಾಯಗಳಿಗೆ ಮುಲಾಮು ಹುಡುಕುವಾಗ ಆಯ್ಕೆ ಮಾಡಿಕೊಳ್ಳುವುದು ಬುದ್ಧ ಬಸವ ಅಂಬೇಡ್ಕರ್ ಜ್ಯೋತಿಬಾಪುಲೆ ಗಾಂಧಿ ಮೊದಲಾದವರನ್ನು...

- Advertisement -
- Advertisement -

ಚಳ್ಳಕೆರೆಯ ವಿಠ್ಠಲನಗರದಲ್ಲಿ ಇಸ್ತ್ರಿ ಮಾಡುವ ಪೆಟ್ಟಿಗೆ ಅಂಗಡಿಯಲ್ಲೇ ಪುಸ್ತಕಗಳನ್ನು ನೀಟಾಗಿ ಒತ್ತರಿಸಿಟ್ಟು ಓದುಬರಹ ಮಾಡುವ ಜನಪದ ಕವಿ ಪಗಡಲಬಂಡೆ ಹೆಚ್. ನಾಗೇಂದ್ರಪ್ಪ. ಆಶುಕವಿ, ಸ್ವರಚಿತ ಕವಿತೆಗಳನ್ನು ಹಾಡಿಕೆ ಮೂಲಕ ಜನರಿಗೆ ತಲುಪಿಸುವಾತ. ಬಿ.ಎ ಪದವಿಯಲ್ಲಿ ಕನ್ನಡ ಮೇಜರ್ ಓದಿ ಕನ್ನಡ ಎಂ.ಎ ಸ್ನಾತಕೋತ್ತರ ಪದವಿ ಕನಸಿದ್ದರೂ ಮಾಡಲಾಗದೆ ಓದನ್ನು ನಿಲ್ಲಿಸಿದರು. ನಂತರ ಖಾಸಗಿ ಸಂಸ್ಥೆಯೊಂದರಲ್ಲಿ ಸಂಬಳವಿಲ್ಲದೆ ದುಡಿದು ಕೆಟ್ಟ ಅನುಭವದೊಂದಿಗೆ ವೃತ್ತಿ ಕಸಬು ಇಸ್ತ್ರಿಯ ಕೈಹಿಡಿದು, ಕಾಯಕದ ಜತೆ ನುಡಿ ವ್ಯವಸಾಯ ನಡೆಸಿದ್ದಾರೆ. ತಾರುಣ್ಯದಲ್ಲಿ ಅತ್ಯುತ್ತಮ ಕ್ರೀಡಾಪಟು. ಕುಸ್ತಿ, ಕಬಡ್ಡಿ, ರನ್ನಿಂಗ್ ರೇಸಲ್ಲಿ ಕಾಲೇಜಿಗೆ ಹೆಸರು ತಂದಾತ. ನಂತರದ ದಿನಗಳಲ್ಲಿ ಕಲೆಯತ್ತ ಹೊರಳಿ ಭಜನೆ, ಹಾಡಿಕೆ, ತತ್ವಪದ, ಏಕಪಾತ್ರಾಭಿನಯ, ದೊಡ್ಡಾಟ ಸಣ್ಣಾಟ ಹೀಗೆ ಬಹುಮುಖ ಪ್ರತಿಭೆಯಾಗಿ ರೂಪುಗೊಂಡರು.

ನಾಗೇಂದ್ರಪ್ಪ ಒಬ್ಬ ಜನಪದ ಕವಿ. ಹಾಗಾಗಿ ಇವರನ್ನು ಇತರೆ ಶಿಷ್ಟಕವಿಗಳ ಜತೆ ಹೋಲಿಸಲಾಗದು. ಅವರ ಕವಿತೆಗಳಲ್ಲಿ ತೀವ್ರವಾದ ರೂಪಕಗಳಾಗಲಿ, ಗಂಭೀರ ಶೋಧವಾಗಲಿ ಕಾಣುವುದಿಲ್ಲ. ಬದಲಾಗಿ ತನ್ನ ಸುತ್ತಮುತ್ತಣ ಯಕಶ್ಚಿತ್ ಎನ್ನುವಂತಹ ಸಂಗತಿಗಳನ್ನು ಆಯ್ದು ಅವುಗಳನ್ನು ಜನÀಪರವಾದ ಕೋರಿಕೆ, ದುಃಖ, ಅಸಹಾಯಕತೆ, ಪ್ರೀತಿ, ಸ್ನೇಹ, ಮೆಚ್ಚುಗೆ, ಬಂಧುತ್ವದಂತಹ ಭಾವನೆಗಳ ಜತೆ ಕಟ್ಟಿದ್ದಾರೆ. ಹೀಗೆ ದಿನದಿನದ ವಿದ್ಯಮಾನಗಳೇ ನಾಗೇಂದ್ರಪ್ಪನ ಕವಿತ್ವದಲ್ಲಿ ಹಾಡುಗಳಾಗಿವೆ. ಈ ಕಾರಣಕ್ಕೆ ಕವಿ ಬೇಂದ್ರೆ ನನಗೆ ಇಷ್ಟ ಎನ್ನುತ್ತಾರೆ.

ಚಳ್ಳಕೆರೆ ಭಾಗ ಕರ್ನಾಟಕದಲ್ಲಿಯೇ ಅತಿ ಕಡಿಮೆ ಮಳೆಬೀಳುವ ಪ್ರದೇಶ. ಹಾಗಾಗಿ ಮಳೆಯನ್ನು ನಂಬಿ ಬಿತ್ತನೆ ಮಾಡಿದ ರೈತರು ಹೆಚ್ಚಾಗಿ ಕೈಸುಟ್ಟುಕೊಳ್ಳುವುದೇ ಹೆಚ್ಚು. ಈ ಸಂಗತಿಯು ಕವಿಯನ್ನು ಬಹುವಾಗಿ ಕಾಡಿದೆ. ಈ ಕವಿತೆಗಳಲ್ಲಿ ರೈತ ಹೊಲ ಮಳೆ ಮೋಡ ಕುರಿತ ರೂಪಕಗಳು ಮತ್ತೆ ಮತ್ತೆ ಮರುಕಳಿಸಿವೆ. ಅಂತೆಯೇ ಮಳೆ ಕರೆಯುವ ಮೂರ್ನಾಲ್ಕು ಪದ್ಯಗಳಿವೆ. `ಮುನಿದೆ ಏಕೋ ಮಳೆರಾಯ’ ಎನ್ನುವ ಪದ್ಯದಲ್ಲಿ `ಉತ್ತಿದರು ಬಿತ್ತಿದರು ಕತ್ತೆತ್ತಿ ನೋಡಿ/ ಗೋಗರೆದರೂ ಕರಗಲಿಲ್ಲ/ ವರುಣ ದೇವನೆದೆ’ ಎನ್ನುತ್ತಾರೆ.

`ಲೋಕದ ಸುಕ್ಕುಗಳ ಇಸ್ತ್ರಿ ಮಾಡುವ ಕಾಯಕದಲಿ’ ಕವಿತೆ ಗಮನ ಸೆಳೆವ ಪದ್ಯ. ನಾಗೇಂದ್ರಪ್ಪ ಸ್ವತಃ ಮಡಿವಾಳ ಸಮುದಾಯಕ್ಕೆ ಸೇರಿದಾತ. ಜಗದ ಬಟ್ಟೆಗಳ ಮಡಿಮಾಡಿಕೊಡುವ ಕುಲಕಸಬನ್ನು ಮಾಡಿದಾತ. ಈಗಲೂ ಇಸ್ತ್ರಿ ಅಂಗಡಿಯಲ್ಲಿ ಲೋಕದ ಬಟ್ಟೆಗಳ ಗರಿಗರಿಯಾಗಿಸುವಾತ. ಇಂತಹ ಸಮುದಾಯದ ಅನುಭವಗಳನ್ನು ನಾಗೇಂದ್ರಪ್ಪ ತುಂಬಾ ಸೂಕ್ಷ್ಮವಾಗಿ ಹಿಡಿದಿದ್ದಾರೆ. `ಇದ್ದಿಲು ನಿಗಿನಿಗಿ ಹೊಳೆದು/ಹೊಟ್ಟೆ ಬಟ್ಟೆ ತೊಡಿಸಿ/ಸ್ಫೂರ್ತಿ ನೀಡಿತು/ಬೂದಿಮುಚ್ಚಿದ ಕೆಂಡವಿದ್ದು/ ಬದುಕಿನ ನೆರವಿನ ತಂಗಾಳಿ ಬೀಸಿದಾಗ ಮತ್ತೆ ಪ್ರಜ್ವಲಿಸಿತು/ ಅಗುಳಿನ ಗಳಿಗೆಯ ಚೀಲ ತುಂಬಿ ನಿದ್ರಿಸಿತು’ ಎನ್ನುತ್ತಾರೆ. ಅಂತೆಯೇ ಉಳ್ಳವರ ಬಟ್ಟೆಗಳನ್ನು ಇಸ್ತ್ರಿ ಮಾಡುವಾಗ ಕವಿ ಸಿರಿವಂತಿಕೆಯ ಮೇಲಿನ ಸಿಟ್ಟನ್ನು ತನ್ನ ಕಾಯಕದಲ್ಲಿ ದಾಟಿಸಿ ಹಗುರಾಗುವಂತಿದೆ. ಹಾಗಾಗಿಯೇ `ಜುಬ್ಬದ ದಿಬ್ಬ ನಿದ್ದೆಯ ಕೆಡಿಸಿ/ಸೊಕ್ಕಿದ ಸುಕ್ಕು ಕೊಬ್ಬನು ಕರಗಿಸಿ/ ಹಾಸಿಗೆ ಹಿಡಿಸಿತು/ ಆಶ್ರಯ ತಪ್ಪಿದ ಪ್ರತಿಭೆ/ತರಗೆಲೆಯಾಗಿ/ಕಮರಿ ಧೂಳಾಯಿತು’ ಎನ್ನುತ್ತಾರೆ. ಮುಂದುವರಿದು `ಲೋಕದ ಸುಕ್ಕುಗಳ/ಇಸ್ತ್ರಿ ಮಾಡುವ ಕಾಯಕದಲಿ/ ನಾನು ನನ್ನವರು/ ಸುಟ್ಟುಕೊಳ್ಳುತ್ತಲೇ/ ಗಟ್ಟಿಯಾಗುತ್ತಿದ್ದೇವೆ/ ಬದುಕೆಂಬ ಇಟ್ಟಿಗೆ ಭಟ್ಟಿಯಲಿ’ ಎಂದು ಬದುಕಿಗೆ ಚೈತನ್ಯ ಪಡೆಯುತ್ತಾರೆ.

ನಾಗೇಂದ್ರಪ್ಪ ಜನಪದ ಕವಿಯಾಗಿಯೂ ಆಧುನಿಕ ವೈಚಾರಿಕತೆ ಇವರ ಕವಿತೆಗಳಲ್ಲಿ ಹೆಣೆದುಕೊಂಡಿದೆ. ಈ ಕಾರಣಕ್ಕೆ ಇಲ್ಲಿ ಜನರ ಕಷ್ಟನಷ್ಟಗಳನ್ನು ಕವಿತೆಯನ್ನಾಗಿಸುತ್ತಲೇ ಇವುಗಳಿಂದ ಹೊರಬರಬಹುದಾದ ದಾರಿಗಳ ಬಗ್ಗೆಯೂ ಜಾಗೃತರಾಗಿದ್ದಾರೆ. ಈ ಸಂಕಲನದ `ಕ್ರಾಂತಿಗೀತೆ’ ಎನ್ನುವ ಕವಿತೆ ಗಮನ ಸೆಳೆಯುವಂತಿದೆ. `ನೆಲ ಅಗೆದರು ಮರ ಕಡಿದರು/ ಅದಿರು ತೆಗೆದರು ಮರಳು ಮಾರಿದರು/ಕನ್ನಡಮ್ಮನ ಬಂಜೆ ಮಾಡಿದರು/ಖಜಾನೆ ಲೂಟಿ ಹೊಡೆದರು’ ಎಂದು ವಾಸ್ತವದ ಕನ್ನಡಮ್ಮನ ನೆನೆಯುತ್ತಾರೆ. ಅಂತೆಯೇ `ಕ್ರಾಂತಿ ಕಹಳೆ ಮೊಳಗಲಿ/ಶಾಂತಿ ಬೀಡು ಆಗಲಿ/ಏಳಿರಿ ಸಿಡಿದೇಳಿರಿ’ ಎಂದು ಕರೆಕೊಡುತ್ತಾರೆ. ಇಷ್ಟರಮಟ್ಟಿಗೆ ಕವಿ ವರ್ತಮಾನವನ್ನು ಎಚ್ಚರದ ಕಣ್ಣಿಂದ ಗಮನಿಸಿದ್ದಾರೆ.

ಒಬ್ಬ ಕವಿಯಾಗಿ ನಾಗೇಂದ್ರಪ್ಪ ಲೋಕದ ಗಾಯಗಳಿಗೆ ಮುಲಾಮು ಹುಡುಕುವಾಗ ಆಯ್ಕೆ ಮಾಡಿಕೊಳ್ಳುವುದು ಬುದ್ಧ ಬಸವ ಅಂಬೇಡ್ಕರ್ ಜ್ಯೋತಿಬಾಪುಲೆ ಗಾಂಧಿ ಮೊದಲಾದವರನ್ನು ಎನ್ನುವುದು ಗಮನ ಸೆಳೆಯುತ್ತದೆ. ಹಾಗಾಗಿ ಇಲ್ಲಿ ಕವಿತೆಗಳನ್ನು ಕಟ್ಟುವಲ್ಲಿ ವಾಚ್ಯವಾದರೂ ಈ ಕವಿಗೆ ಕವಿತೆಯಲ್ಲಿ ತಾನು ಹೇಳಬೇಕಿರುವುದು ಏನನ್ನು ಮತ್ತು ಯಾರ ಧ್ವನಿಯನ್ನು ಎನ್ನುವ ಸ್ಪಷ್ಟತೆ ಇದೆ. ಹಾಗಾಗಿಯೇ ನೇಪಾಳದ ಭೂಕಂಪಕ್ಕೆ ಕಣ್ಣೀರಾಗುತ್ತಾರೆ. ರೈತರ ಬವಣೆಗೆ ಕರಗುತ್ತಾರೆ. ನಾಗೇಂದ್ರಪ್ಪ ಶಾಲೆಗಳಿಗೆ ತೆರಳಿ ಕವಿತೆಗಳನ್ನು ಹಾಡಿ ಮಕ್ಕಳನ್ನು ಖುಷಿಗೊಳಿಸುತ್ತಾರೆ. ಆ ಸಂದರ್ಭಗಳಲ್ಲಿ ಬಯಲಾಟ, ಏಕಪಾತ್ರಾಭಿನಯ ಮೊದಲಾದ ಕಲಾರೂಪಗಳಲ್ಲಿಯೂ ಅಭಿನಯಿಸಿ, ಕವಿತೆಯನ್ನು ವಾಚಿಸಿ ಕಾವ್ಯದ ಹಲವು ಸಾಧ್ಯತೆಗಳನ್ನು ಪ್ರಯೋಗಿಸಿದ್ದಾರೆ. ಹೀಗೆ ಜೀವಪರವಾಗಿ ತುಡಿಯುವ ಕವಿ ಇನ್ನಷ್ಟು ಗಟ್ಟಿಯಾಗಿ ಕವಿತೆಗಳನ್ನು ಕಟ್ಟಲಿ ಎಂದು ಆಶಿಸುವೆ..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...