Homeಮುಖಪುಟಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ನನ್ನ ಮಗ ಅನಿಲ್ ಆ್ಯಂಟನಿ ಚುನಾವಣೆಯಲ್ಲಿ ಸೋಲಬೇಕು: ಎ.ಕೆ ಆ್ಯಂಟನಿ

ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ನನ್ನ ಮಗ ಅನಿಲ್ ಆ್ಯಂಟನಿ ಚುನಾವಣೆಯಲ್ಲಿ ಸೋಲಬೇಕು: ಎ.ಕೆ ಆ್ಯಂಟನಿ

- Advertisement -
- Advertisement -

ಕೇರಳದ ಪತ್ತನಂತಿಟ್ಟ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ತನ್ನ ಪುತ್ರ ಅನಿಲ್ ಕೆ ಆ್ಯಂಟನಿ ಚುನಾವಣೆಯಲ್ಲಿ ಸೋಲಬೇಕು ಎಂದು ಕಾಂಗ್ರೆಸ್ ಹಿರಿಯ ನಾಯಕ ಎ.ಕೆ ಆ್ಯಂಟನಿ ಮಂಗಳವಾರ (ಏ. 9) ಹೇಳಿದ್ದಾರೆ.

ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಎ.ಕೆ ಆ್ಯಂಟನಿ, “ನನ್ನ ಮಗನ ಪಕ್ಷ ಸೋಲಬೇಕು, ಆತನ ಪ್ರತಿಸ್ಪರ್ಧಿ ಕಾಂಗ್ರೆಸ್ ಅಭ್ಯರ್ಥಿ ಆಂಟೊ ಆ್ಯಂಟನಿ ಗೆಲ್ಲಬೇಕು” ಎಂದಿದ್ದಾರೆ.

“ಅವರು (ಅನಿಲ್ ಕೆ ಆ್ಯಂಟನಿ) ಚುನಾವಣೆಯಲ್ಲಿ ಸೋಲುತ್ತಾರೆ. ಆಂಟೊ ವಿಜಯಿಯಾಗಲಿದ್ದಾರೆ. ನಾನು ಯುಡಿಎಫ್ ಅಭ್ಯರ್ಥಿ ಪರ ಪ್ರಚಾರಕ್ಕೆ ಪತ್ತನಂತಿಟ್ಟಕ್ಕೆ ಹೋಗುತ್ತಿಲ್ಲ. ನನಗೆ ಆರೋಗ್ಯ ಸಮಸ್ಯೆಗಳಿವೆ ಮತ್ತು ಅಷ್ಟು ದೂರ ಪ್ರಯಾಣಿಸಲು ಸಾಧ್ಯವಿಲ್ಲ” ಎಂದು ಎ.ಕೆ ಆ್ಯಂಟನಿ ತಿಳಿಸಿದ್ದಾರೆ.

ಕಾಂಗ್ರೆಸ್ ನಾಯಕರ ಮಕ್ಕಳು ಬಿಜೆಪಿಗೆ ಸೇರ್ಪಡೆಯಾಗಿರುವುದು ತಪ್ಪು ಎಂದಿರುವ ಆ್ಯಂಟನಿ, ಮಗನ ರಾಜಕೀಯ ನಡೆಯ ಬಗ್ಗೆ ಪತ್ರಕರ್ತರು ಪದೇ ಪದೇ ಕೇಳಿದ ಪ್ರಶ್ನೆಗೆ ” ಕಾಂಗ್ರೆಸ್ ನನ್ನ ಧರ್ಮ” ಎಂದಷ್ಟೇ ಉತ್ತರಿಸಿದ್ದಾರೆ.

ಅಪ್ಪನ ವಿರುದ್ದ ಅನಿಲ್ ಆ್ಯಂಟನಿ ವಾಗ್ದಾಳಿ :

ಎ.ಕೆ ಆ್ಯಂಟನಿ ಹೇಳಿಕೆಗೆ ಪ್ರತಿಕ್ರಿಯಿಸಿದ ಅನಿಲ್ ಆ್ಯಂಟನಿ, “ಪಾಕಿಸ್ತಾನಕ್ಕೆ ಕ್ಲೀನ್ ಚಿಟ್ ನೀಡಲು ಪ್ರಯತ್ನಿಸಿದ ವ್ಯಕ್ತಿಯ ಪರ ಪ್ರಚಾರ ಮಾಡುತ್ತಿರುವ ತನ್ನ ತಂದೆ ಆ್ಯಂಟನಿ ಬಗ್ಗೆ ನನಗೆ ವಿಷಾದವಿದೆ ಎಂದು ಪುಲ್ವಾಮಾ ದಾಳಿಯ ಕುರಿತು ಆಂಟೊ ಆ್ಯಂಟನಿ ಅವರ ಹೇಳಿಕೆಯನ್ನು ಉಲ್ಲೇಖಿಸಿ ವಾಗ್ದಾಳಿ ನಡೆಸಿದ್ದಾರೆ.

“ಅವರು (ಎ.ಕೆ ಆ್ಯಂಟನಿ) ಭಾರತದ ಮಾಜಿ ರಕ್ಷಣಾ ಸಚಿವರಾಗಿದ್ದರು. ಪಾಕಿಸ್ತಾನಕ್ಕೆ ಕ್ಲೀನ್ ಚಿಟ್ ನೀಡಲು ಪ್ರಯತ್ನಿಸಿದ ವ್ಯಕ್ತಿಯನ್ನು ಅವರು ಬೆಂಬಲಿಸಿದ್ದರು. ಆಂಟೊ ಆಂಟೋನಿ ಈ ಚುನಾವಣೆಯಲ್ಲಿ ಸೋಲುತ್ತಾರೆ” ಎಂದು ಅನಿಲ್ ಹೇಳಿದ್ದಾರೆ.

ಪತ್ತನಂತಿಟ್ಟದಲ್ಲಿ, ಅನಿಲ್ ಆ್ಯಂಟನಿ ಅವರು ಹಾಲಿ ಕಾಂಗ್ರೆಸ್ ಸಂಸದ ಆಂಟೋ ಆ್ಯಂಟನಿ ಮತ್ತು ಸಿಪಿಐ(ಎಂ) ಕೇಂದ್ರ ಸಮಿತಿ ಸದಸ್ಯ ಮತ್ತು ಖ್ಯಾತ ಅರ್ಥಶಾಸ್ತ್ರಜ್ಞ ಮತ್ತು ಮಾಜಿ ರಾಜ್ಯ ಹಣಕಾಸು ಸಚಿವ ಡಾ. ಟಿಎಂ ಥಾಮಸ್ ಐಸಾಕ್ ಅವರನ್ನು ಎದುರಿಸಲಿದ್ದಾರೆ.

ಪ್ರಸಿದ್ದ ಧಾರ್ಮಿಕ ಕೇಂದ್ರ ಶಬರಿಮಲೆ ಅಯ್ಯಪ್ಪ ದೇವಸ್ಥಾನ ಇದೇ ಪತ್ತನಂತಿಟ್ಟ ಕ್ಷೇತ್ರ ವ್ಯಾಪ್ತಿಯಲ್ಲಿ ಬರುತ್ತದೆ. ಈ ಹಿಂದೆ ಸುಪ್ರೀಂ ಕೋರ್ಟ್ ಅಯ್ಯಪ್ಪ ದೇವಸ್ಥಾನಕ್ಕೆ ಮಹಿಳೆಯರ ಪ್ರವೇಶಕ್ಕೆ ಅನುಮತಿ ಕಲ್ಪಿಸಿದ್ದ ವೇಳೆ, ಹಿಂದುತ್ವ ಸಂಘಟನೆಗಳು ಮತ್ತು ಬಿಜೆಪಿ ದೊಡ್ಡ ಮಟ್ಟದ ಪ್ರತಿಭಟನೆ ನಡೆಸಿತ್ತು.

ಮಾರ್ಚ್ 15ರಂದು ಪ್ರಧಾನಿ ನರೇಂದ್ರ ಮೋದಿ ಅವರು ಪತ್ತನಂತಿಟ್ಟದಲ್ಲಿ ಅನಿಲ್ ಪರ ಮತ ಯಾಚಿಸಲಿದ್ದಾರೆ. ಕೇರಳದಲ್ಲಿ ಏಪ್ರಿಲ್ 26 ರಂದು ಲೋಕಸಭೆ ಚುನಾವಣೆ ನಡೆಯಲಿದ್ದು, ಜೂನ್ 4 ರಂದು ಫಲಿತಾಂಶ ಪ್ರಕಟವಾಗಲಿದೆ.

ಇದನ್ನೂ ಓದಿ : ಮಹಾರಾಷ್ಟ್ರ: ಸೀಟು ಹಂಚಿಕೆ ಅಂತಿಮಗೊಳಿಸಿದ ಮಹಾ ವಿಕಾಸ್ ಅಘಾಡಿ ಮೈತ್ರಿಕೂಟ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...

ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ : ಮೊದಲ ಬೀದಿ ಹೋರಾಟಕ್ಕೆ ಸಜ್ಜಾದ ಕಾಕ್ರೋಚ್ ಜನತಾ ಪಾರ್ಟಿ

ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಅಲೆಯನ್ನು ಸೃಷ್ಟಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ತನ್ನ ಮೊದಲ ಬೀದಿ ಹೋರಾಟಕ್ಕೆ ಸಜ್ಜಾಗಿದೆ. ಜೂನ್ 6, 2026ರಂದು ನವದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆ ಆಯೋಜಿಸಿದ್ದು, ಇದರ...

ದೆಹಲಿ: ‘ಮಾಳವೀಯ ನಗರ’ ಅಗ್ನಿ ದುರಂತಕ್ಕೆ 21 ಜನರು ಬಲಿ: ವ್ಯವಸ್ಥೆಯ ವೈಫಲ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ನಾಗರೀಕರು 

ದೆಹಲಿಯ ಅತ್ಯಂತ ಜನನಿಬಿಡ ಮತ್ತು ವಾಣಿಜ್ಯ ಪ್ರದೇಶವಾದ ಮಾಳವೀಯ ನಗರದಲ್ಲಿ 2026 ಜೂನ್ 3, ಬುಧವಾರ ನಸುಕಿನ ಜಾವ ಸಂಭವಿಸಿದ ಭೀಕರ ಅಗ್ನಿ ದುರಂತವು ಇಡೀ ದೇಶವನ್ನು ಬೆಚ್ಚಿಬೀಳಿಸಿದೆ. 'ಫ್ಲೋರಿಶ್ ಸ್ಟೇ ಬಿ...

“ವಿಷ ಕಾರದೆ ಮಾತನಾಡಿ”: ಕಲ್ಲಡ್ಕ ಪ್ರಭಾಕರ ಭಟ್‌ಗೆ ಹೈಕೋರ್ಟ್ ತಾಕೀತು

ಹೆಚ್ಚು ಮಕ್ಕಳನ್ನು ಹೆರುವ ಮುಸ್ಲಿಂ ಮಹಿಳೆಯರನ್ನು ಲೇವಡಿ ಮಾಡುವ ಮೂಲಕ ಕೋಮು ದ್ವೇಷ ಹರಡಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಹಿಂದುತ್ವ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಕಲ್ಲಡ್ಕ ಅವರಿಗೆ ತಮ್ಮ ಮುಂದಿನ ಭಾಷಣಗಳಲ್ಲಿ...