Homeಮುಖಪುಟಇಡಿ ಬಂಧನ ಪ್ರಶ್ನಿಸಿದ್ದ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್: ಸುಪ್ರೀಂ ಮೊರೆ ಹೋಗಲು ಮುಂದಾದ ಕೇಜ್ರಿವಾಲ್

ಇಡಿ ಬಂಧನ ಪ್ರಶ್ನಿಸಿದ್ದ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್: ಸುಪ್ರೀಂ ಮೊರೆ ಹೋಗಲು ಮುಂದಾದ ಕೇಜ್ರಿವಾಲ್

- Advertisement -
- Advertisement -

ಆಪಾದಿತ ಮದ್ಯ ನೀತಿ ಹಗರಣದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ (ಇಡಿ) ತನ್ನನ್ನು ಬಂಧಿಸಿರುವುದನ್ನು ಪ್ರಶ್ನಿಸಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಸಲ್ಲಿಸಿದ್ದ ಅರ್ಜಿಯನ್ನು ದೆಹಲಿ ಹೈಕೋರ್ಟ್ ಮಂಗಳವಾರ ತಿರಸ್ಕರಿಸಿದೆ. ಹೈಕೋರ್ಟ್ ಆದೇಶದ ವಿರುದ್ಧ ಕೇಜ್ರಿವಾಲ್ ಸುಪ್ರೀಂ ಕೋರ್ಟ್ ಮೆಟ್ಟಿಲೇರಲಿದ್ದಾರೆ ಎಂದು ಎಎಪಿ ಮೂಲಗಳು ತಿಳಿಸಿವೆ.

ಕೇಜ್ರಿವಾಲ್ ಅರ್ಜಿ ವಿಚಾರಣೆ ನಡೆಸಿದ್ದ ನ್ಯಾಯಮೂರ್ತಿ ಸ್ವರಣಾ ಕಾಂತ ಶರ್ಮಾ ಅವರು, ಏಪ್ರಿಲ್ 3 ರಂದು ತೀರ್ಪನ್ನು ಕಾಯ್ದಿರಿಸಿದರು.

ಕೇಜ್ರಿವಾಲ್ ಅವರನ್ನು ನ್ಯಾಯಾಂಗ ಬಂಧನಕ್ಕೆ ಕಳುಹಿಸಿದ ಆದೇಶ ಸೇರಿದಂತೆ ವಿಚಾರಣಾ ನ್ಯಾಯಾಲಯದ ನಂತರದ ರಿಮಾಂಡ್ ಆದೇಶಗಳನ್ನು ನ್ಯಾಯಾಲಯ ಎತ್ತಿಹಿಡಿದಿದೆ.

ಬಿಜೆಪಿಯ ನಿಯಂತ್ರಣದಲ್ಲಿರುವ ಕೇಂದ್ರ ಸರ್ಕಾರವು ರಾಜಕೀಯ ವಿರೋಧಿಗಳನ್ನು ಹತ್ತಿಕ್ಕಲು ಜಾರಿ ನಿರ್ದೇಶನಾಲಯವನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂಬ ಕೇಜ್ರಿವಾಲ್ ಅವರ ವಾದವನ್ನು ಒಪ್ಪಿಕೊಳ್ಳಲು ನ್ಯಾಯಾಧೀಶರು ನಿರಾಕರಿಸಿದ್ದಾರೆ.

“ನ್ಯಾಯಾಧೀಶರು ಕಾನೂನಿಗೆ ಬದ್ಧರಾಗಿರುತ್ತಾರೆಯೇ ವಿನಃ, ರಾಜಕೀಯಕ್ಕಲ್ಲ. ಕಾನೂನು ತತ್ವಗಳ ಮೇಲೆ ತೀರ್ಪುಗಳನ್ನು ನೀಡಲಾಗುತ್ತದೆಯೇ ಹೊರತು, ರಾಜಕೀಯ ಪರಿಗಣನೆಗಳಿಗೆ ಅಲ್ಲ. ರಾಜಕೀಯ ಪರಿಗಣನೆಗಳು ಸಂಬಂಧವಿಲ್ಲದ ಕಾರಣ ನ್ಯಾಯಾಲಯದ ಮುಂದೆ ತರಲು ಸಾಧ್ಯವಿಲ್ಲ,” ಎಂದು ನ್ಯಾಯಾಧೀಶರು ಹೇಳಿದ್ದಾರೆ. ಇಡಿಯನ್ನು ಬಿಜೆಪಿಯ ಸಂಸ್ಥೆಯಾಗಿ ನೋಡಲು ಸಾಧ್ಯವಿಲ್ಲ ಎಂದಿದ್ದಾರೆ.

“ಪ್ರಸ್ತುತ ಪ್ರಕರಣವು ಕೇಂದ್ರ ಸರ್ಕಾರ ಮತ್ತು ಕೇಜ್ರಿವಾಲ್ ನಡುವಿನ ಪ್ರಕರಣವಲ್ಲ. ಕೇಜ್ರಿವಾಲ್ ಮತ್ತು ಇಡಿ ನಡುವಿನ ಪ್ರಕರಣವಾಗಿದೆ. ಯಾವುದೇ ಬಾಹ್ಯ ಅಂಶಗಳಿಂದ ಪ್ರಭಾವಿತವಾಗದಂತೆ ನ್ಯಾಯಾಲಯವು ಜಾಗರೂಕವಾಗಿರಬೇಕು” ಎಂದು ನ್ಯಾಯಾಧೀಶರು ಹೇಳಿದ್ದಾರೆ.

ಅನುಮೋದಕರಾದ ರಾಘವ್ ಮಾಗುಂಟಾ ಮತ್ತು ಶರತ್ ರೆಡ್ಡಿ ಅವರ ಹೇಳಿಕೆಗಳನ್ನು ನ್ಯಾಯಾಲಯದ ಮುಂದೆ ದಾಖಲಿಸಲಾಗಿದೆ ಎಂದು ನ್ಯಾಯಾಲಯವು ಗಮನಿಸಿದೆ. ಅವು ವಿಶ್ವಾಸಾರ್ಹವಲ್ಲ ಎಂಬ ಕೇಜ್ರಿವಾಲ್ ಅವರ ವಾದವನ್ನು ತಳ್ಳಿ ಹಾಕಿದೆ.

ಹೇಳಿಕೆಗಳು ವಿಶ್ವಾಸಾರ್ಹವಾಗಿವೆಯೇ? ಮೇಲಿನ ವ್ಯಕ್ತಿಗಳು ತಮ್ಮ ನಿಲುವನ್ನು ಏಕೆ ಬದಲಾಯಿಸುತ್ತಿದ್ದಾರೆ? ಎಂಬುದು ಈ ಹಂತದಲ್ಲಿ ಹೈಕೋರ್ಟ್‌ನಲ್ಲಿ ಪರಿಶೀಲಿಸಬಹುದಾದ ವಿಷಯವಲ್ಲ. ಇದನ್ನು ವಿಚಾರಣಾ ನ್ಯಾಯಾಲಯವು ನಿರ್ಧರಿಸುತ್ತದೆ ಎಂದು ನ್ಯಾಯಾಲಯ ಹೇಳಿದೆ.

ನ್ಯಾಯಾಲಯವು ಸಾಮಾನ್ಯ ವ್ಯಕ್ತಿಗಳಿಗೆ ಪ್ರತ್ಯೇಕ ಕಾನೂನು ಮತ್ತು ಉನ್ನತ ವ್ಯಕ್ತಿಗಳಿಗೆ ಮತ್ತೊಂದು ಕಾನೂನುಗಳನ್ನು ರೂಪಿಸಲು ಸಾಧ್ಯವಿಲ್ಲ ಎಂದಿದೆ.

ಹೈಕೋರ್ಟ್ ಆದೇಶದ ವಿರುದ್ದ ಆಮ್ ಆದ್ಮಿ ಪಕ್ಷ ಶೀಘ್ರದಲ್ಲೇ ಸುಪ್ರೀಂ ಕೋರ್ಟ್ ಮೆಟ್ಟಿಲೇರಲಿದೆ ಎಂದು ತಿಳಿದು ಬಂದಿದೆ.

2021-22ರ ದೆಹಲಿ ಅಬಕಾರಿ ನೀತಿ ಒಳಗೊಂದ 600 ಕೋಟಿ ರೂಪಾಯಿ ಹಗರಣಕ್ಕೆ ಸಂಬಂಧಿಸಿದಂತೆ ಕೇಜ್ರಿವಾಲ್ ಅವರನ್ನು ಮಾರ್ಚ್ 21 ರಂದು ಇಡಿ ಬಂಧಿಸಿತ್ತು.

ಇದನ್ನೂ ಓದಿ : ರಾಜೀವ್ ಚಂದ್ರಶೇಖರ್ ಅಫಿಡವಿಟ್ ಪರಿಶೀಲಿಸುವಂತೆ ತೆರಿಗೆ ಮಂಡಳಿಗೆ ಸೂಚಿಸಿದ ಚು. ಆಯೋಗ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...

ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ : ಮೊದಲ ಬೀದಿ ಹೋರಾಟಕ್ಕೆ ಸಜ್ಜಾದ ಕಾಕ್ರೋಚ್ ಜನತಾ ಪಾರ್ಟಿ

ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಅಲೆಯನ್ನು ಸೃಷ್ಟಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ತನ್ನ ಮೊದಲ ಬೀದಿ ಹೋರಾಟಕ್ಕೆ ಸಜ್ಜಾಗಿದೆ. ಜೂನ್ 6, 2026ರಂದು ನವದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆ ಆಯೋಜಿಸಿದ್ದು, ಇದರ...