Homeಕರ್ನಾಟಕಸಿದ್ದರಾಮಯ್ಯ ಕುರಿತು ನಕಲಿ ಪತ್ರಿಕಾ ತುಣುಕು ಹರಿಬಿಟ್ಟ ಕಿಡಿಗೇಡಿಗಳು; ಸ್ಪಷ್ಟನೆ

ಸಿದ್ದರಾಮಯ್ಯ ಕುರಿತು ನಕಲಿ ಪತ್ರಿಕಾ ತುಣುಕು ಹರಿಬಿಟ್ಟ ಕಿಡಿಗೇಡಿಗಳು; ಸ್ಪಷ್ಟನೆ

- Advertisement -
- Advertisement -

‘ಹಿಂದೂಗಳ ಅಗತ್ಯ ನಮಗೆ ಬೇಡ, ಮುಸ್ಲಿಮರ ಓಟು ಸಾಕು’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ ಎಂಬ ತಲೆಬರಹ ಇರುವ ನಕಲಿ ಪೇಪರ್ ಕಟಿಂಗ್ ಒಂದು ಜಾಲತಾಣದಲ್ಲಿ ವೈರಲ್ ಆಗಿದ್ದು, ‘ಬಿಜೆಪಿ–ಜೆಡಿಎಸ್‌ ಮಿತ್ರಮಂಡಳಿ ಕೃಪಾಪೋಷಿತ ಕಿಡಿಗೇಡಿಗಳು ಸುಳ್ಳು ಸುದ್ದಿಯ ತುಣುಕೊಂದನ್ನು ಸೃಷ್ಟಿಸಿ, ಕೋಮುಭಾವನೆ ಕೆರಳಿಸುವ ಸುದ್ದಿಯನ್ನು ತುಂಬಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದಾರೆ’ ಸುಳ್ಳು ಸುದ್ದಿಯ ತುಣುಕೊಂದನ್ನು ಸೃಷ್ಟಿಸಿ, ಕೋಮುಭಾವನೆ ಕೆರಳಿಸುವ ಸುದ್ದಿಯನ್ನು ತುಂಬಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದಾರೆ’ ಎಂದು ಸ್ವತಃ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೆ ಸ್ಪಷ್ಟನೆ ನೀಡಿದ್ದಾರೆಎಂದು ಸ್ವತಃ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೆ ಸ್ಪಷ್ಟನೆ ನೀಡಿದ್ದಾರೆ.

ಈ ಕುರಿತು ಹೇಳಿಕೆ ಬಿಡುಗಡೆ ಮಾಡಿರುವ ಅವರು, ‘ಬಿಜೆಪಿ–ಜೆಡಿಎಸ್‌ ಮಿತ್ರಮಂಡಳಿ ಕೃಪಾಪೋಷಿತ ಕಿಡಿಗೇಡಿಗಳು ವಾರ್ತಾಪತ್ರಿಕೆಯನ್ನು ಹೋಲುವ ಸುಳ್ಳು ಸುದ್ದಿಯ ತುಣುಕೊಂದನ್ನು ಸೃಷ್ಟಿಸಿ, ಅದರಲ್ಲಿ ಜನರ ಕೋಮುಭಾವನೆ ಕೆರಳಿಸುವ ಸುದ್ದಿಯನ್ನು ತುಂಬಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದಾರೆ. ಈ ಬಗ್ಗೆ ಈಗಾಗಲೇ ನಾನು ಪೊಲೀಸ್‌ ಇಲಾಖೆಗೆ ದೂರು ನೀಡಿದ್ದೇನೆ. ಇದರ ಹಿಂದಿರುವ ದುಷ್ಟ ಶಕ್ತಿ ಯಾರು ಎಂಬ ಬಗ್ಗೆ ನಮಗೆ ಮಾಹಿತಿ ಇದ್ದು, ಆದಷ್ಟು ಬೇಗನೆ ಅವರನ್ನು ನ್ಯಾಯದ ಕೈಗಳಿಗೆ ಒಪ್ಪಿಸಲಾಗುವುದು’ ಎಂದು ಹೇಳಿದ್ದಾರೆ.

‘ರಾಜಕೀಯ ವಿರೋಧಿಗಳನ್ನು ನ್ಯಾಯಸಮ್ಮತ ರೀತಿಯಲ್ಲಿ ಎದುರಿಸಲಾಗದೆ ಇಂತಹ ಅಡ್ಡದಾರಿ ಮೂಲಕ ಚುನಾವಣೆ ಗೆಲ್ಲಲು ಹೊರಟಿರುವುದು ಬಿಜೆಪಿ ಮತ್ತು ಜೆಡಿಎಸ್‌ನ ಬೌದ್ಧಿಕ ದಿವಾಳಿತನವನ್ನು ತೋರಿಸುತ್ತದೆ. ಹತ್ತು ವರ್ಷಗಳ ಕಾಲ ದೇಶದ ಆಡಳಿತ ನಡೆಸಿದ ಪಕ್ಷವೊಂದು ಚುನಾವಣೆ ಗೆಲ್ಲಲು ಸುಳ್ಳು ಸುದ್ದಿಯ ಮೊರೆ ಹೋಗುವಂತಹ ಹೀನಾಯ ಸ್ಥಿತಿಗೆ ತಲುಪಬಾರದಿತ್ತು” ಎಂದು ಮೈತ್ರಿ ಪಕ್ಚಗಳ ವಿರುದ್ಧ ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

‘ಸುಳ್ಳು ಸುದ್ದಿಗಳನ್ನು ನಂಬಿ ಶೇರ್‌ ಮಾಡುವ ಮುನ್ನ ಎಚ್ಚರಿಕೆ ವಹಿಸಿ….!! ಸುಳ್ಳು ಸುದ್ದಿಯ ಸೃಷ್ಟಿಕರ್ತರು, ಅವರ ಬೆನ್ನ ಹಿಂದೆ ಬೆಂಬಲಕ್ಕೆ ನಿಂತಿರುವವರು ಹೀಗೆ ಫೇಕ್‌ ಫ್ಯಾಕ್ಟರಿಯನ್ನು ಕಾನೂನಿನ ಮೂಲಕ ಬೇರು ಸಹಿತ ಕಿತ್ತೆಸೆಯುತ್ತೇವೆ’ ಎಂದು ಅವರು ಹೇಳಿದ್ದಾರೆ.

ನಕಲಿ ಪತ್ರಿಕಾ ತುಣುಕಿನಲ್ಲಿ ಏನಿದೆ?

‘ಹಿಂದೂಗಳ ಅಗತ್ಯ ನಮಗೆ ಬೇಡ, ಮುಸ್ಲಿಮರ ಓಟು ಸಾಕು. ಮುಂದಿನ ಜನ್ಮದಲ್ಲಿ ಮುಸ್ಲಿಂ ಆಗಿ ಹುಟ್ಟಲು ಬಯಸುತ್ತೇನೆ. ಮಿಸ್ಲಿಮರ ಓಲೈಕೆ ಕುರಿತು ಬಿಜೆಪಿಗರ ಟೀಕೆಗೆ ತಲೆ ಕೆಡಿಸಕೊಳ್ಳಬೇಡಿ’ ಎಂಬ ತಲೆ ಬರಹ ಇರುವ ನಕಲಿ ಪತ್ರಿಕಾ ತುಣುಕಿನಲ್ಲಿ, ‘ಕಾಂಗ್ರೆಸ್‌ ನಂಬಿಕೆ ಇಟ್ಟಿರುವುದು. ಮುಸ್ಲಿಂ ಓಟುಗಳನ್ನು, ಕಾಂಗ್ರೆಸ್‌ ಪಕ್ಷವು ಹಿಂದೂಗಳ ಓಟನ್ನು ನಂಬಿಕೊಂಡಿಲ್ಲ. ಪಕ್ಷದ ಚಿನ್ಹೆಯನ್ನು ಹಿ೦ದಿನ ಕಾಂಗ್ರೆಸ್‌ ನಾಯಕರು ಬದಲಾಯಿಸಿದ್ದಾರೆ. ಪಕ್ಷ ಕಟ್ಟಿರುವುದು ಮುಸ್ಲಿಂ ಆಧಾರದ ಮೇಲೆ ಹೊರತು ಹಿಂದೂಗಳ ಓಟುಗಳ ಮೇಲೆ ಅಲ್ಲ. ಕಾರ್ಯಕರ್ತರು ಹಿಂದುತ್ವದ ಮೇಲೆ ನಂಬಿಕೆ ಇಡಬಾರದು. ಹಿಂದುಗಳು ಯಾವುದೋ ಮೋದಿ ಎಂಬ ವ್ಯಕ್ತಿಯನ್ನು
ನಂಬಬಾರದು ಎಂದು ಶ್ರೀ ಸಿದ್ದರಾಮಯ್ಯ ಅವರು ಹೇಳಿದರು’ ಎಂದು ಬರೆಯಲಾಗಿದೆ.

ಅಸಲಿ ವಿಚಾರ ಏನು?

2023ರ ಜೂನ್ 02 ರಂದು ಸಂಪುಟ ಸಭೆಗೂ ಮುನ್ನ, ಉನ್ನತ ಅಧಿಕಾರಿಗಳೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಭೆ ನಡೆಸಿದ್ದರು. ಇದನ್ನು ಪಬ್ಲಿಕ್ ಟಿವಿ, ವಾರ್ತಾಭಾರತಿ ಸೇರಿದಂತೆ ಹಲವು ಮಾಧ್ಯಮಗಳು ವರದಿ ಮಾಡಿದ್ದವು. ಅದೇ ಫೋಟೊ ತೆಗೆದುಕೊಂಡು, ಚುನಾವಣಾ ಸಮಯದಲ್ಲಿ ಕೆಲ ಕಿಡಿಗೇಡಿಗಳು ಸುಳ್ಳು ಸುದ್ದಿ ಸೃಷ್ಠಿಸಿ ಹರಿಬಿಟ್ಟಿದ್ದಾರೆ.

ಇದನ್ನೂ ಓದಿ; ಪುರಾವೆ ಸಹಿತ ಬಿಜೆಪಿ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರುತ್ತೇನೆ: ಅಭಿಷೇಕ್ ಬ್ಯಾನರ್ಜಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...