Homeಅಂತರಾಷ್ಟ್ರೀಯಗಾಜಾದಲ್ಲಿ ಮಾನವೀಯತೆಯು ನೈತಿಕ ದಿಕ್ಸೂಚಿ ಕಳೆದುಕೊಂಡಿದೆ: ಯುಎನ್ ಅಧಿಕಾರಿ

ಗಾಜಾದಲ್ಲಿ ಮಾನವೀಯತೆಯು ನೈತಿಕ ದಿಕ್ಸೂಚಿ ಕಳೆದುಕೊಂಡಿದೆ: ಯುಎನ್ ಅಧಿಕಾರಿ

- Advertisement -
- Advertisement -

‘ಯುದ್ಧದಿಂದ ಧ್ವಂಸಗೊಂಡ ಗಾಜಾದ ಮೇಲೆ ಅಂತರರಾಷ್ಟ್ರೀಯ ಸಮುದಾಯವು ತನ್ನ “ನೈತಿಕ ದಿಕ್ಸೂಚಿ” ಕಳೆದುಕೊಂಡಿದೆ’ ಎಂದು ವಿಶ್ವಸಂಸ್ಥೆಯ ಉಪ ಪ್ರಧಾನ ಕಾರ್ಯದರ್ಶಿ ಅಮಿನಾ ಮೊಹಮ್ಮದ್ ಮಂಗಳವಾರ ಹೇಳಿದ್ದಾರೆ.

“ನಾವು ಮಾನವೀಯತೆಯಾಗಿ, ಅಂತರಾಷ್ಟ್ರೀಯ ಸಮುದಾಯವಾಗಿ ಗಾಜಾದ ಮೇಲೆ ನಮ್ಮ ನೈತಿಕ ದಿಕ್ಸೂಚಿಯನ್ನು ಕಳೆದುಕೊಂಡಿದ್ದೇವೆ ಎಂಬುದು ಬಹಳ ಕಳವಳಕಾರಿಯಾಗಿದೆ” ಎಂದು ಮೊಹಮ್ಮದ್ ಸುದ್ದಿಗೋಷ್ಠಿಯಲ್ಲಿ ಹೇಳಿದರು.

“ನಾವು ಆ ವೇಗದ ಬಗ್ಗೆ ಏನಾದರೂ ಮಾಡಬೇಕಾಗಿದೆ, ನಾವು ತುಂಬಾ ತಡ ಮಾಡಿದ್ದೇವೆ. ಸಾವಿರಾರು ಮಕ್ಕಳು ತಮ್ಮ ಜೀವವನ್ನು ಕಳೆದುಕೊಳ್ಳುತ್ತಲೇ ಇದ್ದಾರೆ, ಅಂಗಚ್ಛೇದಿತರಾಗಿ ಬದುಕುತ್ತಿದ್ದಾರೆ. ನೂರಾರು ಮಂದಿ ಒತ್ತೆಯಾಳುಗಳು ತಮ್ಮ ಮನೆಗೆ ತೆರಳಲು ಕಾಯುತ್ತಿದ್ದಾರೆ” ಎಂದು ಹೇಳಿದರು.

ಅಧಿಕೃತ ಇಸ್ರೇಲಿ ಅಂಕಿಅಂಶಗಳ ಆಧಾರದ ಮೇಲೆ ಎಎಫ್‌ಪಿ ಲೆಕ್ಕಾಚಾರದ ಪ್ರಕಾರ, ಹಮಾಸ್ ಕಾರ್ಯಕರ್ತರು ಅಕ್ಟೋಬರ್ 7 ರಂದು ಇಸ್ರೇಲ್ ವಿರುದ್ಧ ನಡೆಸಿದ ದಾಳಿಯಿಂದ ಗಾಜಾ ಯುದ್ಧವು 1,170 ಜನರ ಸಾವಿಗೆ ಕಾರಣವಾಯಿತು, ಸತ್ತವರಲ್ಲಿ ಹೆಚ್ಚಿನ ಮಂದಿ ಸಾಮಾನ್ಯ ನಾಗರಿಕರು.

ಜಮಾಸ್ ಕಾರ್ಯಕರ್ತರು 250ಕ್ಕೂ ಹೆಚ್ಚು ಇಸ್ರೇಲಿ ಮತ್ತು ವಿದೇಶಿಯರನ್ನು ಒತ್ತೆಯಾಳುಗಳನ್ನಾಗಿ ಮಾಡಿದ್ದು, ಅವರಲ್ಲಿ 129 ಮಂದಿ ಗಾಜಾದಲ್ಲಿ ಉಳಿದಿದ್ದಾರೆ. ಇದರಲ್ಲಿ 34 ಮಂದಿ ಸತ್ತಿದ್ದಾರೆ ಎಂದು ಇಸ್ರೇಲಿ ಸೇನೆ ಹೇಳಿದೆ.

ಅಂದಿನಿಂದ ಆರು ತಿಂಗಳುಗಳಲ್ಲಿ, ಇಸ್ರೇಲ್‌ನ ಪ್ರತೀಕಾರದ ಬಾಂಬ್ ದಾಳಿ ಮತ್ತು ಆಕ್ರಮಣವು ಗಾಜಾದಲ್ಲಿ ಕನಿಷ್ಠ 33,175 ಜನರನ್ನು ಕೊಂದಿದೆ. ಅವರಲ್ಲಿ ಹೆಚ್ಚಿನವರು ಮಹಿಳೆಯರು ಮತ್ತು ಮಕ್ಕಳು ಎಂದು ಮುತ್ತಿಗೆ ಹಾಕಿದ ಪ್ಯಾಲೇಸ್ಟಿನಿಯನ್ ಪ್ರದೇಶದಲ್ಲಿ ಹಮಾಸ್ ನಡೆಸುತ್ತಿರುವ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.

ಮೊಹಮ್ಮದ್ ಅವರು ತಾವು ಕರೆ ನೀಡುತ್ತಿರುವ ನಿರ್ದಿಷ್ಟ ಕ್ರಮಗಳ ಕುರಿತು ವಿವರಿಸಲಿಲ್ಲ. ಆದರೆ, ಯುಎನ್ ಮುಖ್ಯಸ್ಥ ಆಂಟೋನಿಯೊ ಗುಟೆರೆಸ್ ಮಾನವೀಯ ಕದನ ವಿರಾಮ ಮತ್ತು ಹಮಾಸ್ ಹಿಡಿದಿರುವ ಒತ್ತೆಯಾಳುಗಳ ಬಿಡುಗಡೆಗೆ ಒತ್ತಾಯಿಸಿದ್ದಾರೆ.

ಇದನ್ನೂ ಓದಿ; ‘ಬ್ರಿಟಿಷರೊಂದಿಗೆ ಮೈತ್ರಿ ಮಾಡಿಕೊಂಡಿದ್ದವರು ಯಾರು..?’; ಪ್ರಧಾನಿ ಮೋದಿಯ ‘ಮುಸ್ಲಿಂ ಲೀಗ್’ ಟೀಕೆಗೆ ರಾಹುಲ್ ತಿರುಗೇಟು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...