Homeಮುಖಪುಟಮಾಂಸಹಾರ ಸೇವಿಸಿದ್ದ ವಿಪಕ್ಷ ನಾಯಕರನ್ನು ಮೊಘಲರಿಗೆ ಹೋಲಿಸಿದ ಪ್ರಧಾನಿ; ವೈಯಕ್ತಿಕ ಟೀಕೆಗಿಳಿದ ಮೋದಿ

ಮಾಂಸಹಾರ ಸೇವಿಸಿದ್ದ ವಿಪಕ್ಷ ನಾಯಕರನ್ನು ಮೊಘಲರಿಗೆ ಹೋಲಿಸಿದ ಪ್ರಧಾನಿ; ವೈಯಕ್ತಿಕ ಟೀಕೆಗಿಳಿದ ಮೋದಿ

- Advertisement -
- Advertisement -

‘ಶ್ರಾವಣ ಮಾಸದಲ್ಲಿ ಕುರಿ ಮಾಂಸ ತಿಂದಿದ್ದಾರೆ’ ಎಂಬ ಕಾರಣಕ್ಕೆ ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿ ಮತ್ತು ಆರ್‌ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಅವರನ್ನು ಮೊಘಲರಿಗೆ ಹೋಲಿಸಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ, ವೈಯಕ್ತಿಯ ವಿಚಾರಗಳನ್ನು ಇಟ್ಟುಕೊಂಡು ಟೀಕೆ ಮಾಡುತ್ತಿದ್ದಾರೆ.

‘ಸಾಮಾಜಿಕ ನ್ಯಾಯ ಕಲ್ಪಿಸುವ ಉದ್ದೇಶದಿಂದ ದೇಶದಾದ್ಯಂತ ಜಾತಿ ಗಣತಿ ನಡೆಸುತ್ತೇವೆ’ ಎಂಬ ಕಾಂಗ್ರೆಸ್ ಭರವಸೆಯನ್ನು ಮುಸ್ಲಿಂ ಲೀಗ್‌ ಚಿಂತನೆಗಳಿಗೆ ಹೋಲಿಸಿದ್ದ ಪ್ರಧಾನಿ ಮೋದಿ, ಇದೀಗ ರಾಹುಲ್ ಮತ್ತು ಲಾಲು ಅವರ ಆಹಾರ ಸಂಸ್ಕೃತಿಯನ್ನೂ ತಮ್ಮ ಚುನಾವಣಾ ಪ್ರಚಾರದ ವೇದಿಕೆಗಳಲ್ಲಿ ಟೀಕಿಸಿದ್ದಾರೆ.

‘ಶ್ರಾವಣ ಮಾಸದಲ್ಲಿ ಕುರಿ ಮಾಂಸ ತಿಂದಿದ್ದಾರೆ; ಅವರು  ಬಹುಸಂಖ್ಯಾತರ ಭಾವನೆಗಳ ಬಗ್ಗೆ ತಲೆಕೆಡಿಸಿಕೊಳ್ಳುವುದಿಲ್ಲ’ ಎಂದು ಇಬ್ಬರು ನಾಯಕರ ಹೆಸರನ್ನು ನೇರವಾಗಿ ಹೇಳದೆ ಟೀಕೆ ಮಾಡಿರುವ ಮೋದಿ, ಇಬ್ಬರನ್ನೂ ಮೊಘಲರೊಂದಿಗೆ ಹೋಲಿಸಿದ್ದಾರೆ.

ಕಳೆದ ವರ್ಷ ಸೆಪ್ಟೆಂಬರ್‌ನಲ್ಲಿ ಬಿಡುಗಡೆಯಾದ, ರಾಹುಲ್ ಮತ್ತು ಲಾಲು ಅವರು ಅಡುಗೆ ಮಾಡುವ ವೀಡಿಯೊ ಸಾಕಷ್ಟು ವೈರಲ್ ಆಗಿತ್ತು.

“ಕಾಂಗ್ರೆಸ್ ಮತ್ತು ಇಂಡಿಯಾ ಮುಖಂಡರು ದೇಶದ ಬಹುಪಾಲು ಜನರ ಭಾವನೆಗಳ ಬಗ್ಗೆ ಕಾಳಜಿ ವಹಿಸುವುದಿಲ್ಲ. ಅವರು ಜನರ ಭಾವನೆಗಳೊಂದಿಗೆ ಆಟವಾಡುವುದನ್ನು ಆನಂದಿಸುತ್ತಾರೆ. ನ್ಯಾಯಾಲಯದಿಂದ ಶಿಕ್ಷೆಗೆ ಒಳಗಾದ ಮತ್ತು ಜಾಮೀನಿನ ಮೇಲೆ ಇರುವ ವ್ಯಕ್ತಿ ಅವರು, ಅಂತಹ ಅಪರಾಧಿಯ ಮನೆಗೆ ಭೇಟಿ ನೀಡುತ್ತಾರೆ ಮತ್ತು ಶ್ರಾವಣ ಮಾಸದಲ್ಲಿ ಕುರಿ ಮಾಂಸವನ್ನು ಬೇಯಿಸುತ್ತಾರೆ. ದೇಶದ ಜನರನ್ನು ಕೀಟಲೆ ಮಾಡಲು ಅವರು ಅದನ್ನು ವೀಡಿಯೊ ಮಾಡುತ್ತಾರೆ” ಎಂದು ಜಮ್ಮು ಮತ್ತು ಕಾಶ್ಮೀರದ ಉಧಂಪುರದಲ್ಲಿ ನಡೆದ ಚುನಾವಣಾ ರ್ಯಾಲಿಯಲ್ಲಿ ಪ್ರಧಾನಿ ಮೋದಿ ಹೇಳಿದರು.

“ಈ ಜನರ ಉದ್ದೇಶಗಳು ದೇಶದ ಜನರನ್ನು ಮೊಘಲರಂತೆಯೇ ಕೀಟಲೆ ಮಾಡುವುದು. ಕಾನೂನು ಯಾರನ್ನೂ ತಿನ್ನುವುದನ್ನು ತಡೆಯುವುದಿಲ್ಲ. ಆದರೆ, ಈ ಜನರ ಉದ್ದೇಶಗಳು ಬೇರೇನೋ, ಮೊಘಲರು ಇಲ್ಲಿ ದಾಳಿ ಮಾಡಿದಾಗ, ಅವರು ದೇವಾಲಯಗಳನ್ನು ಕೆಡವುವವರೆಗೂ ಅವರು ತೃಪ್ತಿ ಹೊಂದಲಿಲ್ಲ, ಅವರು ಮೊಘಲರಂತೆಯೇ, ಶ್ರಾವಣ ಮಾಸದಲ್ಲಿ ವೀಡಿಯೋ ತೋರಿಸುವ ಮೂಲಕ ದೇಶದ ಜನರನ್ನು ಲೇವಡಿ ಮಾಡಲು ಬಯಸುತ್ತಾರೆ” ಎಂದು ಟೀಕಿಸಿದ್ದಾರೆ.

ಅಯೋಧ್ಯೆ ರಾಮನ ಮಂದಿರದ ವಿಚಾರವಾಗಿಯೂ ಪ್ರಧಾನಿ ಮೋದಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು. “ಬಿಜೆಪಿಗೆ ರಾಮಮಂದಿರ ಚುನಾವಣಾ ವಿಷಯ ಎಂದು ಕಾಂಗ್ರೆಸ್ ಹೇಳುತ್ತಿದೆ, ರಾಮಮಂದಿರ ಎಂದಿಗೂ ಚುನಾವಣಾ ವಿಷಯವಾಗಿರಲಿಲ್ಲ. ಚುನಾವಣಾ ವಿಷಯವೂ ಆಗುವುದಿಲ್ಲ ಎಂದು ನಾನು ಹೇಳಬಯಸುತ್ತೇನೆ. ಬಿಜೆಪಿ ಹುಟ್ಟುವ ಮೊದಲೇ ರಾಮಮಂದಿರಕ್ಕಾಗಿ ಹೋರಾಟ ನಡೆಯುತ್ತಿತ್ತು. ವಿದೇಶಿ ಆಕ್ರಮಣಕಾರರು ನಮ್ಮ ದೇವಾಲಯಗಳನ್ನು ನಾಶಪಡಿಸಿದಾಗ, ಭಾರತದ ಜನರು ತಮ್ಮ ಧಾರ್ಮಿಕ ಸ್ಥಳಗಳನ್ನು ಉಳಿಸಲು ಹೋರಾಡಿದರು. ಕಾಂಗ್ರೆಸ್ ಮತ್ತು ಅದರ ಮಿತ್ರಪಕ್ಷಗಳ ನಾಯಕರು ದೊಡ್ಡ ಬಂಗಲೆಗಳಲ್ಲಿ ವಾಸಿಸುತ್ತಿದ್ದರು. ಆದರೆ, ರಾಮ್ ಲಲ್ಲಾನ ಡೇರೆಯನ್ನು ಬದಲಾಯಿಸುವ ವಿಷಯ ಬಂದಾಗ ಅವರು ಬೆನ್ನು ತಿರುಗಿಸುತ್ತಿದ್ದರು” ಎಂದು ಹೇಳಿದರು.

ಜಮ್ಮು ಮತ್ತು ಕಾಶ್ಮೀರಕ್ಕೆ ರಾಜ್ಯ ಸ್ಥಾನಮಾನವನ್ನು ಮರಳಿ ನೀಡಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ ಭರವಸೆ ನೀಡಿ, ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ನಡಡೆಯುವ ದಿನಗಳು ದೂರವಿಲ್ಲ ಎಂದರು.

ಇದನ್ನೂ ಓದಿ; ‘ದೆಹಲಿಯಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರಲು ಕೇಂದ್ರ ಪ್ರಯತ್ನಿಸುತ್ತಿದೆ..’; ಆತಂಕ ವ್ಯಕ್ತಪಡಿಸಿದ ಎಎಪಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಇದು ಟ್ರಂಪ್ ವಾಗ್ದಾನ ಮಾಡಿದ ರಕ್ಷಣೆ’: 165 ಮಕ್ಕಳ ಸಾಮೂಹಿಕ ಸಮಾಧಿಯ ಫೋಟೋ ಹಂಚಿಕೊಂಡ ಇರಾನ್; ಮರುಗಿದ ಮಾನವ ಜಗತ್ತು

ದಕ್ಷಿಣ ಇರಾನ್‌ನ ಮಿನಾಬ್ ನಗರದ ಬಾಲಕಿಯರ ಶಾಲೆಯೊಂದರ ಮೇಲೆ ಶನಿವಾರ (ಫೆ.28) ಅಮೆರಿಕ-ಇಸ್ರೇಲ್ ನಡೆಸಿದ ಜಂಟಿ ದಾಳಿಯಲ್ಲಿ ಸಾವನ್ನಪ್ಪಿದ 165 ವಿದ್ಯಾರ್ಥಿನಿಯರು ಮತ್ತು ಸಿಬ್ಬಂದಿಯ ಬೃಹತ್ ಅಂತಿಮ ಸಂಸ್ಕಾರ ಮೆರವಣಿಗೆ ಮಂಗಳವಾರ (ಮಾ.3)...

ಖಮೇನಿ ಪುತ್ರ ಮೊಜ್ತಬಾ ಅವರನ್ನು ಸರ್ವೋಚ್ಚ ನಾಯಕನನ್ನಾಗಿ ಹೆಸರಿಸಿದ ಇರಾನ್ ತಜ್ಞರ ಸಭೆ?

ದಿವಂಗತ ಅಯತೊಲ್ಲಾ ಅಲಿ ಖಮೇನಿಯವರ ಪುತ್ರ 56 ವರ್ಷದ ಮೊಜ್ತಬಾ ಖಮೇನಿ ಅವರನ್ನು ತಜ್ಞರ ಸಭೆಯು ಇರಾನ್‌ನ ಹೊಸ ಸರ್ವೋಚ್ಚ ನಾಯಕನನ್ನಾಗಿ ಆಯ್ಕೆ ಮಾಡಿದೆ ಎಂದು ಬಲ್ಲ ಮೂಲಗಳನ್ನು ಉಲ್ಲೇಖಿಸಿ ಇರಾನ್ ಅಂತಾರಾಷ್ಟ್ರೀಯ...

ಲೋಕಸಭೆ ಹಕ್ಕುಬಾಧ್ಯತಾ ಸಮಿತಿಗೆ 15 ಸದಸ್ಯರ ಆಯ್ಕೆ; ರವಿಶಂಕರ್ ಪ್ರಸಾದ್ ನೇತೃತ್ವ

ಹದಿನೆಂಟನೇ ಲೋಕಸಭೆ ರಚನೆಯಾಗಿ ಸುಮಾರು ಎರಡು ವರ್ಷಗಳ ನಂತರ, ಸ್ಪೀಕರ್ ಓಂ ಬಿರ್ಲಾ ಅವರು ಮಂಗಳವಾರ (ಮಾ.3) ಹಕ್ಕುಬಾಧ್ಯತಾ ಸಮಿತಿಗೆ 15 ಸದಸ್ಯರನ್ನು ನಾಮನಿರ್ದೇಶನ ಮಾಡಿದ್ದಾರೆ. ಸದನ ಮತ್ತು ಅದರ ಸದಸ್ಯರ ಹಕ್ಕುಚ್ಯುತಿಗೆ...

ಪಶ್ಚಿಮ ಬಂಗಾಳ : ಚುನಾವಣೆ ಹೊಸ್ತಿಲಲ್ಲಿ ತ್ವರಿತಗೊಂಡ ಸಿಎಎ ಜಾರಿ ಪ್ರಕ್ರಿಯೆ

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆ ಹತ್ತಿರವಾಗುತ್ತಿದ್ದಂತೆ ರಾಜ್ಯದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ಜಾರಿ ಪ್ರಕ್ರಿಯೆಯು ಅತ್ಯಂತ ವೇಗ ಪಡೆದುಕೊಂಡಿದೆ. ಇತ್ತೀಚಿನ ಬೆಳವಣಿಗೆಗಳು ರಾಜ್ಯದ ರಾಜಕೀಯ ಸಮೀಕರಣಗಳನ್ನು ಬದಲಿಸುವ ಮುನ್ಸೂಚನೆ ನೀಡುತ್ತಿವೆ. ಕೇಂದ್ರ ಗೃಹ ಸಚಿವಾಲಯವು...

ರಾಜಸ್ಥಾನದ ಭಿವಾಡಿಯಲ್ಲಿ ಗೋ ಕಳ್ಳಸಾಗಣೆದಾರರು ಮತ್ತು ಗೋರಕ್ಷಕರ ನಡುವೆ ಘರ್ಷಣೆ: ಯುವಕ ಸಾವು

ಜೈಪುರ: ರಾಜಸ್ಥಾನದ ಭಿವಾಡಿಯಲ್ಲಿ ಸೋಮವಾರ ಬೆಳಗಿನ ಜಾವ ಗೋ ಕಳ್ಳಸಾಗಣೆದಾರರು ಮತ್ತು ಗೋರಕ್ಷಕರ ನಡುವೆ ನಡೆದ ಘರ್ಷಣೆಯಲ್ಲಿ ಯುವಕನೊಬ್ಬ ಸಾವನ್ನಪ್ಪಿದ್ದಾನೆ. ಈ ಘಟನೆಯಿಂದಾಗಿ ಮೃತನ ಕುಟುಂಬ ಪ್ರತಿಭಟನೆ ನಡೆಸಿದ್ದು, ಆತನನ್ನು ಗುಂಡಿಕ್ಕಿ ಕೊಲ್ಲಲಾಗಿದೆ ಎಂದು...

ಖಮೇನಿ ಹತ್ಯೆ ಬಗ್ಗೆ ಪ್ರಧಾನಿ ಮೋದಿ ತಮ್ಮ ನಿಲುವು ತಿಳಿಸಬೇಕು: ರಾಹುಲ್ ಗಾಂಧಿ ಒತ್ತಾಯ

ಇರಾನ್‌ನ ಪರಮೋಚ್ಚ ನಾಯಕ ಆಯತೊಲ್ಲಾ ಅಲಿ ಖಮೇನಿ ಹತ್ಯೆಯ ಬಗ್ಗೆ ತಮ್ಮ ನಿಲುವನ್ನು ಸ್ಪಷ್ಟವಾಗಿ ತಿಳಿಸುವಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮಂಗಳವಾರ ಪ್ರಧಾನಿ ನರೇಂದ್ರ ಮೋದಿ ಅವರನ್ನು ಕೇಳಿದ್ದಾರೆ. ಅಮೆರಿಕ ಮತ್ತು...

ಇರಾನ್‌ ಮೇಲೆ ಇಸ್ರೇಲ್ ದಾಳಿ: ಟೆಹ್ರಾನ್‌ನಿಂದ 200ಕ್ಕೂ ಹೆಚ್ಚು ಭಾರತೀಯ ವಿದ್ಯಾರ್ಥಿಗಳು ಕೋಮ್‌ಗೆ ಸ್ಥಳಾಂತರ

ನವದೆಹಲಿ: ಇರಾನ್ ಮೇಲೆ ಅಮೆರಿಕ-ಇಸ್ರೇಲ್ ದಾಳಿಗಳು ತೀವ್ರಗೊಳ್ಳುತ್ತಿರುವ ಮಧ್ಯೆ, ಟೆಹ್ರಾನ್‌ನಿಂದ ಸ್ಥಳಾಂತರಿಸಲ್ಪಟ್ಟ ಭಾರತೀಯ ವಿದ್ಯಾರ್ಥಿಗಳನ್ನು ಕೋಮ್‌ಗೆ ಸುರಕ್ಷಿತವಾಗಿ ಸ್ಥಳಾಂತರಿಸಲಾಗಿದೆ, ಆದರೆ ಭಾರತೀಯ ರಾಯಭಾರ ಕಚೇರಿಯು ಮುನ್ನೆಚ್ಚರಿಕೆ ಕ್ರಮವಾಗಿ ತನ್ನ ಪ್ರಜೆಗಳನ್ನು ಮನೆಯೊಳಗೆ ಇರುವಂತೆ...

‘ಪಿಟಿಸಿಎಲ್‌ ಕಾಯ್ದೆ’ ಸಮರ್ಪಕ ಜಾರಿಗೆ ಆಗ್ರಹಿಸಿ ಆಹೋರಾತ್ರಿ ಧರಣಿ ಸತ್ಯಾಗ್ರಹ

'ಪಿಟಿಸಿಎಲ್‌ (PTCL) ಕಾಯ್ದೆ' ಸಮರ್ಪಕ ಜಾರಿಗೆ ಆಗ್ರಹಿಸಿ ಆಹೋರಾತ್ರಿ ಧರಣಿ ಸತ್ಯಾಗ್ರಹ ನಡೆಸಲಾಗುವುದು ಎಂದು 'ಪಿಟಿಸಿಎಲ್‌ ಕಾಯ್ದೆ ಭೂಮಿ ವಂಚಿತರ ಹೋರಾಟ ಸಮಿತಿ' ಮುಖಂಡರು ಘೋಷಿಸಿದರು. ಬೆಂಗಳೂರಿನ ಪ್ರೆಸ್‌ ಕ್ಲಬ್‌ನಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ...

ರಾಜಸ್ಥಾನ| ‘ನೀವು ಕೆಳಜಾತಿಯವರು, ಎಲ್‌ಎಲ್‌ಬಿ ನಿಮಗೆ ಸೂಕ್ತವಲ್ಲ..’; ದಲಿತ ವಿದ್ಯಾರ್ಥಿನಿಗೆ ಪ್ರಾಧ್ಯಾಪಕರಿಂದ ಜಾತಿ ನಿಂದನೆ

ರಾಜಸ್ಥಾನದ ಚುರುವಿನ ಸರ್ಕಾರಿ ಕಾನೂನು ಕಾಲೇಜಿನ ಮೂರನೇ ಸೆಮಿಸ್ಟರ್ ದಲಿತ ಎಲ್‌ಎಲ್‌ಬಿ ವಿದ್ಯಾರ್ಥಿನಿಯೊಬ್ಬರು, ಇಬ್ಬರು ಪ್ರಾಧ್ಯಾಪಕರಿಂದ ಜಾತಿ ಆಧಾರಿತ ನಿಂದನೆ, ಬೆದರಿಕೆ ಮತ್ತು ತಾರತಮ್ಯ ಆರೋಪದ ಮೇಲೆ ಪೊಲೀಸ್ ದೂರು ದಾಖಲಿಸಿದ್ದಾರೆ. ಎಸ್‌ಸಿ...

ಬೆಂಗಳೂರು: ಮೂರು ಅಂತಸ್ತಿನ ಕಟ್ಟಡದಲ್ಲಿ ಬೆಂಕಿ ಅವಘಡ: ಮಹಿಳೆ ಸಾವು, ಮೂವರ ರಕ್ಷಣೆ

ಬೆಂಗಳೂರು: ಸೋಮವಾರ ರಾತ್ರಿ ಉತ್ತರ ಬೆಂಗಳೂರಿನಲ್ಲಿರುವ ಮನೆಯೊಂದರಲ್ಲಿ ಸಂಭವಿಸಿದ ಬೆಂಕಿ ಅವಘಡದಲ್ಲಿ ಮಹಿಳೆಯೊಬ್ಬರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ. ಮೃತರನ್ನು 55 ವರ್ಷದ ಸವಿತಾ ಎಂದು ಗುರುತಿಸಲಾಗಿದೆ. ಅವರ ಪತಿ ಗುತ್ತಿಗೆದಾರ ರಮೇಶ್...