Homeಮುಖಪುಟಎಡಪಕ್ಷಗಳು ಬಿಜೆಪಿ ವಿರೋಧಿ ಮತಗಳನ್ನು ವಿಭಜಿಸುತ್ತಿವೆ: ಶಶಿ ತರೂರ್

ಎಡಪಕ್ಷಗಳು ಬಿಜೆಪಿ ವಿರೋಧಿ ಮತಗಳನ್ನು ವಿಭಜಿಸುತ್ತಿವೆ: ಶಶಿ ತರೂರ್

- Advertisement -
- Advertisement -

ತಿರುವನಂತಪುರಂ ಲೋಕಸಭಾ ಕ್ಷೇತ್ರದಲ್ಲಿ ಎಡಪಕ್ಷಗಳು ಬಿಜೆಪಿ ವಿರೋಧಿ ಮತಗಳನ್ನು ವಿಭಜಿಸುತ್ತಿವೆ ಎಂದು ಆರೋಪಿಸಿದ ಕಾಂಗ್ರೆಸ್ ನಾಯಕ ಶಶಿ ತರೂರ್, ‘ಎಡಪಕ್ಷಗಳು ವಿರೋಧ ಪಕ್ಷಗಳ ಒಗ್ಗಟ್ಟಿನ ಬಗ್ಗೆ ತುಂಬಾ ಕಾಳಜಿ ವಹಿಸುತ್ತವೆ ಎಂದು ಹೇಳಿಕೊಂಡರೂ, ತನ್ನ ಹೆಚ್ಚಿನ ಶಕ್ತಿಯನ್ನು ಬಿಜೆಪಿಯ ದುರಾಡಳಿತದ ಬಗ್ಗೆ ಕೇಂದ್ರೀಕರಿಸುವ ಬದಲು, ದುರ್ಬಲಗೊಳಿಸಲು ಏಕೆ ವಿನಿಯೋಗಿಸುತ್ತಿದೆ ಎಂಬುದನ್ನು ತಿಳಿಸಲು ವಿಫಲವಾಗಿದೆ’ ಎಂದು ಹೇಳಿದ್ದಾರೆ.

ಕೇರಳದ ತಿರುವನಂತಪುರದಲ್ಲಿ ಬಿಜೆಪಿ ನಾಯಕ, ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ಮತ್ತು ಸಿಪಿಐನ ಪನ್ಯನ್ ರವೀಂದ್ರನ್ ಅವರೊಂದಿಗೆ ತ್ರಿಕೋನ ಸ್ಪರ್ಧೆಯಲ್ಲಿ ಸಿಲುಕಿರುವ ತರೂರ್, ಸಂಸತ್ತಿನ ಸ್ಥಾನದಲ್ಲಿ ಬಿಜೆಪಿ ವಿರೋಧಿ ಮತಗಳನ್ನು ವಿಭಜಿಸಲು ಎಡಪಕ್ಷಗಳು ಪ್ರಯತ್ನಿಸುತ್ತಿರುವುದು ವಿಪರ್ಯಾಸ ಎಂದು ಹೇಳಿದರು.

ಖಾಸಗಿ ಮಾಧ್ಯಮವೊಂದಕ್ಕೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಮಾಜಿ ಕೇಂದ್ರ ಸಚಿವರು, ‘ನನ್ನ ವಿರುದ್ಧ ಅಭ್ಯರ್ಥಿಯನ್ನು ಹಾಕುವುದನ್ನು ಎಡಪಕ್ಷವು ಪ್ರತಿ ಬಾರಿಯೂ ಮಾಡುತ್ತದೆ; ಅದಕ್ಕಾಗಿ ಅವರನ್ನು ಟೀಕಿಸಲು ಸಾಧ್ಯವಿಲ್ಲ. ಏಕೆಂದರೆ, ನಾನು 2009 ರಲ್ಲಿ ಮೊದಲ ಸಲ ಅವರಿಂದ ಸ್ಥಾನ ಪಡೆದುಕೊಂಡೆ’ ಎಂದು ಹೇಳಿದ್ದಾರೆ.

“ಎಡ ಕ್ಷವು ಅವರ ಸಂಪೂರ್ಣ ಅಭಿಯಾನವನ್ನು ನನ್ನ ಮೇಲೆ ದಾಳಿ ಮಾಡಲು ಮೀಸಲಿಡುವುದು ಬಿಜೆಪಿಗೆ ಸಹಾಯ ಮಾಡುವ ತಂತ್ರವಾಗಿದೆ. ಎಡಪಕ್ಷಗಳು ವಿರೋಧ ಪಕ್ಷದ ಒಗ್ಗಟ್ಟಿನ ಬಗ್ಗೆ ಹೆಚ್ಚು ಕಾಳಜಿ ವಹಿಸುತ್ತವೆ ಎಂದು ಹೇಳಿಕೊಳ್ಳುತ್ತವೆ. ಆದರೆ, ಬಿಜೆಪಿಯ ದುರಾಡಳಿತದ ಮೇಲೆ ಕೇಂದ್ರೀಕರಿಸುವ ಬದಲು ಏಕೆ ಎಂದು ತಿಳಿಸಲು ವಿಫಲವಾಗಿದೆ. ಅವರು ತಮ್ಮ ಹೆಚ್ಚಿನ ಶಕ್ತಿಯನ್ನು ನನ್ನನ್ನು ದುರ್ಬಲಗೊಳಿಸಲು ವಿನಿಯೋಗಿಸುತ್ತಿದ್ದಾರೆ” ಎಂದು ತರೂರ್ ಹೇಳಿದರು.

“ಉದ್ದೇಶಪೂರ್ವಕವಾಗಿ ಅಥವಾ ಬೇರೆ ರೀತಿಯಲ್ಲಿ, ಅವರ ಪ್ರಚಾರವು ಸಂಪೂರ್ಣವಾಗಿ ನನ್ನ ವಿರುದ್ಧವಾಗಿದೆ. ಉದಾಹರಣೆಗೆ, ಪ್ಯಾಲೆಸ್ತೀನ್ ವಿರೋಧಿ ಮತ್ತು ಮುಸ್ಲಿಂ ವಿರೋಧಿ ಎಂದು ಆರೋಪಿಸಿ, ಇದು ಸಂಪೂರ್ಣ ಅಸಂಬದ್ಧವಾಗಿದೆ. ವಿಪರ್ಯಾಸವೆಂದರೆ, ಅವರು ಇಲ್ಲಿ ಬಿಜೆಪಿ ವಿರೋಧಿ ಮತಗಳನ್ನು ವಿಭಜಿಸಲು ಮತ್ತು ಬೋಧಿಸಲು ಪ್ರಯತ್ನಿಸುತ್ತಿದ್ದಾರೆ” ಎಂದು ಹೇಳಿದರು.

ಕ್ಷೇತ್ರದಲ್ಲಿರುವ ತನ್ನ ಪ್ರತಿಸ್ಪರ್ಧಿಗಳೊಂದಿಗೆ ನಾನು ಚರ್ಚೆಯನ್ನು ಬಯಸುತ್ತಿದ್ದೇನೆ. ಆದರೆ, ಅವರ ಕಡೆಯಿಂದ ತೊಡಗಿಸಿಕೊಳ್ಳಲು “ಇಷ್ಟವಿಲ್ಲ” ಎಂದು ತೋರುತ್ತಿದೆ. ಅವರು ವಿವಿಧ ಸಂಘಟನೆಗಳಿಂದ ಚರ್ಚೆಗೆ ಅನೇಕ ಆಹ್ವಾನಗಳನ್ನು ತಿರಸ್ಕರಿಸಿದ್ದಾರೆ ಎಂದು ತರೂರ್ ಹೇಳಿದರು.

“ಅವರಿಗೆ ಹಿಂಜರಿಕೆ ಎಲ್ಲಿಂದ ಬರುತ್ತದೆ ಎಂದು ನನಗೆ ತಿಳಿದಿಲ್ಲ. ನಾನು ನನಗಾಗಿ ಮಾತ್ರ ಮಾತನಾಡಬಲ್ಲೆ: ಯಾವುದೇ ಚರ್ಚೆಯಲ್ಲಿ ನನ್ನದೇ ಆದದನ್ನು ಹಿಡಿದಿಟ್ಟುಕೊಳ್ಳುವ ನನ್ನ ವಿಶ್ವಾಸವು ನನ್ನ ಮತದಾರರಿಗಾಗಿ ನಾನು ಮಾಡಿದ ಕೆಲಸ ಮತ್ತು ರಾಷ್ಟ್ರೀಯ, ಜಾಗತಿಕ ಸಮಸ್ಯೆಗಳ ಬಗ್ಗೆ ನಾನು ತೆಗೆದುಕೊಂಡಿರುವ ನಿಲುವುಗಳಿಂದ ಉಂಟಾಗುತ್ತದೆ” ಎಂದು ತಿಳಿಸಿದರು.

“ರಾಜಕೀಯ ಮತ್ತು ಅಭಿವೃದ್ಧಿಯ ಬಗ್ಗೆ ಚರ್ಚೆ ಮಾಡೋಣ. ಬೆಲೆ ಏರಿಕೆ, ನಿರುದ್ಯೋಗ, ಭ್ರಷ್ಟಾಚಾರ, ಕೋಮುವಾದ ಮತ್ತು ಬಿಜೆಪಿಯ 10 ವರ್ಷಗಳ ದ್ವೇಷದ ರಾಜಕಾರಣದ ಬಗ್ಗೆ ಚರ್ಚೆ ಮಾಡೋಣ. ತಿರುವನಂತಪುರಂನ ಅಭಿವೃದ್ಧಿ ಮತ್ತು ಕಳೆದ 15 ರಲ್ಲಿ ನಾವು ಮಾಡಿದ ಗೋಚರ ಪ್ರಗತಿಯ ಬಗ್ಗೆಯೂ ಚರ್ಚಿಸೋಣ” ಎಂದರು.

ಇದನ್ನೂ ಓದಿ; ಮಾಂಸಹಾರ ಸೇವಿಸಿದ್ದ ವಿಪಕ್ಷ ನಾಯಕರನ್ನು ಮೊಘಲರಿಗೆ ಹೋಲಿಸಿದ ಪ್ರಧಾನಿ; ವೈಯಕ್ತಿಕ ಟೀಕೆಗಿಳಿದ ಮೋದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿಜಯಪುರ : ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ

ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯಲಿರುವ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾಗೆ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ (ಜೂ.13) ಸಂಜೆ ಚಾಲನೆ ದೊರೆಯಿತು. ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಅಹಿಂದ ಮುಖಂಡ ಎಸ್ ಎಂ ಪಾಟೀಲ...

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...

ಪ್ರಜಾಪ್ರಭುತ್ವದ ರಕ್ಷಣೆಗೆ ಎಸ್‌ಐಆರ್ (SIR) ವಿರುದ್ಧ ಜನಜಾಗೃತಿ ಜಾಥಾಕ್ಕೆ ಶಿವಮೊಗ್ಗದಲ್ಲಿ ಚಾಲನೆ

ಕೇಂದ್ರ ಸರ್ಕಾರದ ಎಸ್‌ಐಆರ್ (SIR) ನೀತಿಯ ವಿರುದ್ಧ ರಾಜ್ಯಾದ್ಯಂತ ಜನವಿರೋಧಿ ಅಲೆ ಎದ್ದಿದೆ. "ಸಂತ-ಶರಣರ ಈ ನಾಡಿನಲ್ಲಿ ಯಾವುದೇ ರೀತಿಯ ದುಷ್ಟ ಆಟ, ಮೋಸ, ವಂಚನೆಗೆ ಅವಕಾಶವಿಲ್ಲ" ಎಂಬ ದೃಢ ಸಂಕಲ್ಪದೊಂದಿಗೆ 'ಎಸ್‌ಐಆರ್...

ಜೂನ್ 13 ರಿಂದ ಕರ್ನಾಟಕದಲ್ಲಿ ‘SIR ವಿರೋಧಿ’ ಜನಜಾಗೃತಿ ಜಾಥ

ರಾಜ್ಯ ಚುನಾವಣಾ ಆಯೋಗವು ಎಸ್‌ಐಆರ್ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ನಾಗರಿಕರ ಆಕ್ಷೇಪಣೆಗಳಿಗೆ ಸ್ಪಂದಿಸದಿರುವ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಾಗೂ ‘ಎದ್ದೇಳು ಕರ್ನಾಟಕ’ ಸಂಘಟನೆಯ ವತಿಯಿಂದ ಜೂನ್ 13 ರಿಂದ...

‘ಕಾನೂನು ಪ್ರಕ್ರಿಯೆಯದುರುಪಯೋಗ’: ನ್ಯೂಸ್‌ಕ್ಲಿಕ್ ವಿರುದ್ಧದ ದೆಹಲಿ ಪೊಲೀಸ್, ಇಡಿ ಪ್ರಕರಣಗಳನ್ನು ರದ್ದುಗೊಳಿಸಿದ ಹೈಕೋರ್ಟ್

ವಿದೇಶಿ ನೇರ ಹೂಡಿಕೆ (ಎಫ್‌ಡಿಐ) ನಿಯಮಗಳ ಉಲ್ಲಂಘನೆ ಆರೋಪಕ್ಕೆ ಸಂಬಂಧಿಸಿದಂತೆ ನ್ಯೂಸ್‌ಕ್ಲಿಕ್ ಸುದ್ದಿ ಸಂಸ್ಥೆ ಮತ್ತು ಅದರ ಮುಖ್ಯ ಸಂಪಾದಕ ಪ್ರಬೀರ್ ಪುರಕಾಯಸ್ಥ ವಿರುದ್ಧ ದೆಹಲಿ ಪೊಲೀಸರು ಹಾಗೂ ಜಾರಿ ನಿರ್ದೇಶನಾಲಯ (ಇಡಿ) ದಾಖಲಿಸಿದ್ದ ಪ್ರಕರಣಗಳನ್ನು ದೆಹಲಿ...

ಕಾಂಗ್ರೆಸ್ ಜೊತೆ ವಿಲೀನ? ಅದೆಲ್ಲ ಬರೀ ಸುಳ್ಳು ಎಂದ ಟಿಎಂಸಿ

ಕಾಂಗ್ರೆಸ್ ಪಕ್ಷದೊಂದಿಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ವಿಲೀನವಾಗಬಹುದು ಎಂಬ ವರದಿಗಳನ್ನು ಟಿಎಂಸಿ ಉನ್ನತ ಮೂಲಗಳು ಬುಧವಾರ (ಇಂದು) ಸಂಪೂರ್ಣವಾಗಿ ತಳ್ಳಿಹಾಕಿವೆ. "ನಮ್ಮ ಪಕ್ಷಕ್ಕೆ ಈ ಬಗ್ಗೆ ಯಾವುದೇ ಮಾಹಿತಿ ಇಲ್ಲ ಮತ್ತು ವಿಲೀನಕ್ಕೆ...

ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕಾರ : ಬಿಜೆಪಿಯ ಸೀಟ್ ಚೋರಿ?

ರಾಜ್ಯಸಭಾ ಚುನಾವಣೆಗೆ ಮಧ್ಯಪ್ರದೇಶದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿದ್ದ ಮೀನಾಕ್ಷಿ ನಟರಾಜನ್ ಅವರ ನಾಮಪತ್ರವನ್ನು ಚುನಾವಣಾ ಆಯೋಗ ತಿರಸ್ಕರಿಸಿರುವುದು ದೇಶದಲ್ಲಿ ದೊಡ್ಡ ರಾಜಕೀಯ ಜಟಾಪಟಿಗೆ ಕಾರಣವಾಗಿದೆ. ಕಾಂಗ್ರೆಸ್ ಈ ವಿಚಾರವನ್ನು ಬಹಳ ಗಂಭೀರವಾಗಿ ಪರಿಗಣಿಸಿ ಬುಧವಾರ (ಜೂ. 10)...