Homeಮುಖಪುಟಎಡಪಕ್ಷಗಳು ಬಿಜೆಪಿ ವಿರೋಧಿ ಮತಗಳನ್ನು ವಿಭಜಿಸುತ್ತಿವೆ: ಶಶಿ ತರೂರ್

ಎಡಪಕ್ಷಗಳು ಬಿಜೆಪಿ ವಿರೋಧಿ ಮತಗಳನ್ನು ವಿಭಜಿಸುತ್ತಿವೆ: ಶಶಿ ತರೂರ್

- Advertisement -
- Advertisement -

ತಿರುವನಂತಪುರಂ ಲೋಕಸಭಾ ಕ್ಷೇತ್ರದಲ್ಲಿ ಎಡಪಕ್ಷಗಳು ಬಿಜೆಪಿ ವಿರೋಧಿ ಮತಗಳನ್ನು ವಿಭಜಿಸುತ್ತಿವೆ ಎಂದು ಆರೋಪಿಸಿದ ಕಾಂಗ್ರೆಸ್ ನಾಯಕ ಶಶಿ ತರೂರ್, ‘ಎಡಪಕ್ಷಗಳು ವಿರೋಧ ಪಕ್ಷಗಳ ಒಗ್ಗಟ್ಟಿನ ಬಗ್ಗೆ ತುಂಬಾ ಕಾಳಜಿ ವಹಿಸುತ್ತವೆ ಎಂದು ಹೇಳಿಕೊಂಡರೂ, ತನ್ನ ಹೆಚ್ಚಿನ ಶಕ್ತಿಯನ್ನು ಬಿಜೆಪಿಯ ದುರಾಡಳಿತದ ಬಗ್ಗೆ ಕೇಂದ್ರೀಕರಿಸುವ ಬದಲು, ದುರ್ಬಲಗೊಳಿಸಲು ಏಕೆ ವಿನಿಯೋಗಿಸುತ್ತಿದೆ ಎಂಬುದನ್ನು ತಿಳಿಸಲು ವಿಫಲವಾಗಿದೆ’ ಎಂದು ಹೇಳಿದ್ದಾರೆ.

ಕೇರಳದ ತಿರುವನಂತಪುರದಲ್ಲಿ ಬಿಜೆಪಿ ನಾಯಕ, ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ಮತ್ತು ಸಿಪಿಐನ ಪನ್ಯನ್ ರವೀಂದ್ರನ್ ಅವರೊಂದಿಗೆ ತ್ರಿಕೋನ ಸ್ಪರ್ಧೆಯಲ್ಲಿ ಸಿಲುಕಿರುವ ತರೂರ್, ಸಂಸತ್ತಿನ ಸ್ಥಾನದಲ್ಲಿ ಬಿಜೆಪಿ ವಿರೋಧಿ ಮತಗಳನ್ನು ವಿಭಜಿಸಲು ಎಡಪಕ್ಷಗಳು ಪ್ರಯತ್ನಿಸುತ್ತಿರುವುದು ವಿಪರ್ಯಾಸ ಎಂದು ಹೇಳಿದರು.

ಖಾಸಗಿ ಮಾಧ್ಯಮವೊಂದಕ್ಕೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಮಾಜಿ ಕೇಂದ್ರ ಸಚಿವರು, ‘ನನ್ನ ವಿರುದ್ಧ ಅಭ್ಯರ್ಥಿಯನ್ನು ಹಾಕುವುದನ್ನು ಎಡಪಕ್ಷವು ಪ್ರತಿ ಬಾರಿಯೂ ಮಾಡುತ್ತದೆ; ಅದಕ್ಕಾಗಿ ಅವರನ್ನು ಟೀಕಿಸಲು ಸಾಧ್ಯವಿಲ್ಲ. ಏಕೆಂದರೆ, ನಾನು 2009 ರಲ್ಲಿ ಮೊದಲ ಸಲ ಅವರಿಂದ ಸ್ಥಾನ ಪಡೆದುಕೊಂಡೆ’ ಎಂದು ಹೇಳಿದ್ದಾರೆ.

“ಎಡ ಕ್ಷವು ಅವರ ಸಂಪೂರ್ಣ ಅಭಿಯಾನವನ್ನು ನನ್ನ ಮೇಲೆ ದಾಳಿ ಮಾಡಲು ಮೀಸಲಿಡುವುದು ಬಿಜೆಪಿಗೆ ಸಹಾಯ ಮಾಡುವ ತಂತ್ರವಾಗಿದೆ. ಎಡಪಕ್ಷಗಳು ವಿರೋಧ ಪಕ್ಷದ ಒಗ್ಗಟ್ಟಿನ ಬಗ್ಗೆ ಹೆಚ್ಚು ಕಾಳಜಿ ವಹಿಸುತ್ತವೆ ಎಂದು ಹೇಳಿಕೊಳ್ಳುತ್ತವೆ. ಆದರೆ, ಬಿಜೆಪಿಯ ದುರಾಡಳಿತದ ಮೇಲೆ ಕೇಂದ್ರೀಕರಿಸುವ ಬದಲು ಏಕೆ ಎಂದು ತಿಳಿಸಲು ವಿಫಲವಾಗಿದೆ. ಅವರು ತಮ್ಮ ಹೆಚ್ಚಿನ ಶಕ್ತಿಯನ್ನು ನನ್ನನ್ನು ದುರ್ಬಲಗೊಳಿಸಲು ವಿನಿಯೋಗಿಸುತ್ತಿದ್ದಾರೆ” ಎಂದು ತರೂರ್ ಹೇಳಿದರು.

“ಉದ್ದೇಶಪೂರ್ವಕವಾಗಿ ಅಥವಾ ಬೇರೆ ರೀತಿಯಲ್ಲಿ, ಅವರ ಪ್ರಚಾರವು ಸಂಪೂರ್ಣವಾಗಿ ನನ್ನ ವಿರುದ್ಧವಾಗಿದೆ. ಉದಾಹರಣೆಗೆ, ಪ್ಯಾಲೆಸ್ತೀನ್ ವಿರೋಧಿ ಮತ್ತು ಮುಸ್ಲಿಂ ವಿರೋಧಿ ಎಂದು ಆರೋಪಿಸಿ, ಇದು ಸಂಪೂರ್ಣ ಅಸಂಬದ್ಧವಾಗಿದೆ. ವಿಪರ್ಯಾಸವೆಂದರೆ, ಅವರು ಇಲ್ಲಿ ಬಿಜೆಪಿ ವಿರೋಧಿ ಮತಗಳನ್ನು ವಿಭಜಿಸಲು ಮತ್ತು ಬೋಧಿಸಲು ಪ್ರಯತ್ನಿಸುತ್ತಿದ್ದಾರೆ” ಎಂದು ಹೇಳಿದರು.

ಕ್ಷೇತ್ರದಲ್ಲಿರುವ ತನ್ನ ಪ್ರತಿಸ್ಪರ್ಧಿಗಳೊಂದಿಗೆ ನಾನು ಚರ್ಚೆಯನ್ನು ಬಯಸುತ್ತಿದ್ದೇನೆ. ಆದರೆ, ಅವರ ಕಡೆಯಿಂದ ತೊಡಗಿಸಿಕೊಳ್ಳಲು “ಇಷ್ಟವಿಲ್ಲ” ಎಂದು ತೋರುತ್ತಿದೆ. ಅವರು ವಿವಿಧ ಸಂಘಟನೆಗಳಿಂದ ಚರ್ಚೆಗೆ ಅನೇಕ ಆಹ್ವಾನಗಳನ್ನು ತಿರಸ್ಕರಿಸಿದ್ದಾರೆ ಎಂದು ತರೂರ್ ಹೇಳಿದರು.

“ಅವರಿಗೆ ಹಿಂಜರಿಕೆ ಎಲ್ಲಿಂದ ಬರುತ್ತದೆ ಎಂದು ನನಗೆ ತಿಳಿದಿಲ್ಲ. ನಾನು ನನಗಾಗಿ ಮಾತ್ರ ಮಾತನಾಡಬಲ್ಲೆ: ಯಾವುದೇ ಚರ್ಚೆಯಲ್ಲಿ ನನ್ನದೇ ಆದದನ್ನು ಹಿಡಿದಿಟ್ಟುಕೊಳ್ಳುವ ನನ್ನ ವಿಶ್ವಾಸವು ನನ್ನ ಮತದಾರರಿಗಾಗಿ ನಾನು ಮಾಡಿದ ಕೆಲಸ ಮತ್ತು ರಾಷ್ಟ್ರೀಯ, ಜಾಗತಿಕ ಸಮಸ್ಯೆಗಳ ಬಗ್ಗೆ ನಾನು ತೆಗೆದುಕೊಂಡಿರುವ ನಿಲುವುಗಳಿಂದ ಉಂಟಾಗುತ್ತದೆ” ಎಂದು ತಿಳಿಸಿದರು.

“ರಾಜಕೀಯ ಮತ್ತು ಅಭಿವೃದ್ಧಿಯ ಬಗ್ಗೆ ಚರ್ಚೆ ಮಾಡೋಣ. ಬೆಲೆ ಏರಿಕೆ, ನಿರುದ್ಯೋಗ, ಭ್ರಷ್ಟಾಚಾರ, ಕೋಮುವಾದ ಮತ್ತು ಬಿಜೆಪಿಯ 10 ವರ್ಷಗಳ ದ್ವೇಷದ ರಾಜಕಾರಣದ ಬಗ್ಗೆ ಚರ್ಚೆ ಮಾಡೋಣ. ತಿರುವನಂತಪುರಂನ ಅಭಿವೃದ್ಧಿ ಮತ್ತು ಕಳೆದ 15 ರಲ್ಲಿ ನಾವು ಮಾಡಿದ ಗೋಚರ ಪ್ರಗತಿಯ ಬಗ್ಗೆಯೂ ಚರ್ಚಿಸೋಣ” ಎಂದರು.

ಇದನ್ನೂ ಓದಿ; ಮಾಂಸಹಾರ ಸೇವಿಸಿದ್ದ ವಿಪಕ್ಷ ನಾಯಕರನ್ನು ಮೊಘಲರಿಗೆ ಹೋಲಿಸಿದ ಪ್ರಧಾನಿ; ವೈಯಕ್ತಿಕ ಟೀಕೆಗಿಳಿದ ಮೋದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಾವರ್ಕರ್ ಮಾನನಷ್ಟ ಮೊಕದ್ದಮೆ ಪ್ರಕರಣ: ಯೂಟ್ಯೂಬ್‌ನಿಂದ ರಾಹುಲ್ ಗಾಂಧಿ ಭಾಷಣ ಪ್ರದರ್ಶನದ ಮನವಿ ತಿರಸ್ಕರಿಸಿದ ಪುಣೆ ನ್ಯಾಯಾಲಯ

ಲಂಡನ್‌ನಲ್ಲಿ ನಡೆದ ಭಾಷಣದಲ್ಲಿ ಬಲಪಂಥೀಯ ನಾಯಕ ವಿನಾಯಕ ಸಾವರ್ಕರ್ ಅವರನ್ನು ಮಾನನಷ್ಟ ಮಾಡಿದ್ದಾರೆ ಎಂಬ ಆರೋಪದ ಮೇಲೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ನಡೆಯುತ್ತಿರುವ ಮಾನನಷ್ಟ ಮೊಕದ್ದಮೆಯ ಕುತೂಹಲಕಾರಿ ಬೆಳವಣಿಗೆಯೊಂದರಲ್ಲಿ, ಯೂಟ್ಯೂಬ್...

ಆನ್‌ಲೈನ್ ರೈಲು ಬುಕಿಂಗ್‌ಗಳಿಗೆ ಮಾತ್ರ ಅಪಘಾತ ವಿಮೆ ಏಕೆ: ಸುಪ್ರೀಂ ಕೋರ್ಟ್ ಪ್ರಶ್ನೆ

ಆನ್‌ಲೈನ್‌ನಲ್ಲಿ ಟಿಕೆಟ್ ಖರೀದಿಸುವ ಪ್ರಯಾಣಿಕರಿಗೆ ಮಾತ್ರ ಅಪಘಾತ ವಿಮಾ ರಕ್ಷಣೆಯನ್ನು ಏಕೆ ಒದಗಿಸಲಾಗುತ್ತಿದೆ? ಆಫ್‌ಲೈನ್ ಟಿಕೆಟ್ ಖರೀದಿಸುವವರಿಗೆ ಏಕೆ ವಿಸ್ತರಿಸುತ್ತಿಲ್ಲ ಎಂಬುದರ ಕುರಿತು ಸುಪ್ರೀಂ ಕೋರ್ಟ್ ಭಾರತೀಯ ರೈಲ್ವೆಯಿಂದ ವಿವರಣೆ ಕೇಳಿದೆ. ರೈಲ್ವೆ ವ್ಯವಸ್ಥೆ...

ಇಸ್ರೇಲ್ ಆಕ್ರಮಿತ ಪ್ಯಾಲೆಸ್ತೀನ್ ಪ್ರದೇಶ ಕುರಿತ ವಿಶ್ವಸಂಸ್ಥೆಯ ವಿಚಾರಣಾ ಆಯೋಗದ ಅಧ್ಯಕ್ಷರಾಗಿ ಎಸ್. ಮುರಳೀಧರ್

ಪೂರ್ವ ಜೆರುಸಲೆಮ್ ಮತ್ತು ಇಸ್ರೇಲ್ ಸೇರಿದಂತೆ ಆಕ್ರಮಿತ ಪ್ಯಾಲೆಸ್ತೀನ್ ಪ್ರದೇಶದ ಕುರಿತಾದ ವಿಶ್ವಸಂಸ್ಥೆಯ ಸ್ವತಂತ್ರ ಅಂತರರಾಷ್ಟ್ರೀಯ ವಿಚಾರಣಾ ಆಯೋಗದ ಅಧ್ಯಕ್ಷರನ್ನಾಗಿ ಹಿರಿಯ ವಕೀಲ ಮತ್ತು ಒರಿಸ್ಸಾ ಹೈಕೋರ್ಟ್ ಮಾಜಿ ಮುಖ್ಯ ನ್ಯಾಯಮೂರ್ತಿ ಎಸ್....

ಲೈಂಗಿಕ ದೌರ್ಜನ್ಯ: ಪಾಲಕ್ಕಾಡ್ ಶಾಸಕ ರಾಹುಲ್ ಮಾಂಕೂಟತ್ತಿಲ್ ವಿರುದ್ಧ ದೂರು ದಾಖಲು

ಪಾಲಕ್ಕಾಡ್ ಶಾಸಕ ರಾಹುಲ್ ಮಾಂಕೂಟತ್ತಿಲ್ ವಿರುದ್ಧ ಮಹಿಳೆಯೊಬ್ಬರು ಲೈಂಗಿಕ ದೌರ್ಜನ್ಯ ಎಸಗಿ ಗರ್ಭಪಾತ ಮಾಡಿಸಲು ಒತ್ತಾಯಿಸಿದ್ದಾರೆ ಎಂದು ಆರೋಪಿಸಿದ ನಂತರ ಕೇರಳ ಪೊಲೀಸರು ಶುಕ್ರವಾರ ಪ್ರಕರಣ ದಾಖಲಿಸಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ವರದಿ...

ಉತ್ತರ ಪ್ರದೇಶ-ಮಹಾರಾಷ್ಟ್ರದಲ್ಲಿ ಜನನ ಪ್ರಮಾಣಪತ್ರಕ್ಕೆ ಆಧಾರ್ ಮಾನ್ಯವಲ್ಲ: ಹೊಸ ಮಾರ್ಗಸೂಚಿ

ಜನನ ಪ್ರಮಾಣಪತ್ರಗಳನ್ನು ನೀಡಲು ಆಧಾರ್ ಕಾರ್ಡ್‌ಗಳನ್ನು ಇನ್ನು ಮುಂದೆ ಮಾನ್ಯ ಪುರಾವೆಯಾಗಿ ಅಥವಾ ಜನ್ಮ ದಿನಾಂಕದ ಪುರಾವೆಯಾಗಿ ಸ್ವೀಕರಿಸಲಾಗುವುದಿಲ್ಲ ಎಂದು ಉತ್ತರ ಪ್ರದೇಶ ಮತ್ತು ಮಹಾರಾಷ್ಟ್ರ ಘೋಷಿಸಿವೆ. ಈ ಉದ್ದೇಶಕ್ಕಾಗಿ ಆಧಾರ್ ಬಳಸುವುದನ್ನು...

ಉತ್ತರಾಖಂಡ| 150 ವರ್ಷಗಳ ಜಾತಿ ತಡೆಗೋಡೆ ಮುರಿದು ತಮ್ಮದೇ ಮುಖ್ಯಸ್ಥರ ಆಯ್ಕೆ ಮಾಡಿಕೊಂಡ ದಲಿತರು

ಉತ್ತರಾಖಂಡದ ದೂರದ ಜೌನ್ಸರ್-ಬವಾರ್ ಪ್ರದೇಶದ ಬಿಜ್ನು ಬಿಜ್ನಾಡ್ ಗ್ರಾಮದ ದಲಿತ ಸಮುದಾಯವು ಸುಮಾರು 150 ವರ್ಷಗಳಲ್ಲಿ ಮೊದಲ ಬಾರಿಗೆ ತನ್ನದೇ ಆದ 'ಸೈನಾ' (ಗ್ರಾಮದ ಮುಖ್ಯಸ್ಥ) ಆಯ್ಕೆ ಮಾಡುವ ಮೂಲಕ ಐತಿಹಾಸಿಕ ಹೆಜ್ಜೆ...

ರಿಲಯನ್ಸ್ ಇಂಡಸ್ಟ್ರೀಸ್‌ಗೆ ರೂ. 56.44 ಕೋಟಿ ಸಿಜಿಎಸ್‌ಟಿ ದಂಡ

ಮುಖೇಶ್ ಅಂಬಾನಿ ನೇತೃತ್ವದ ರಿಲಯನ್ಸ್ ಇಂಡಸ್ಟ್ರೀಸ್, ಅಹಮದಾಬಾದ್‌ನ ಸಿಜಿಎಸ್‌ಟಿ ಜಂಟಿ ಆಯುಕ್ತರಿಂದ 56.44 ಕೋಟಿ ರೂ. ದಂಡದ ಆದೇಶವನ್ನು ಸ್ವೀಕರಿಸಿದೆ ಎಂದು ಶುಕ್ರವಾರ ತಿಳಿಸಿದೆ. ನವೆಂಬರ್ 25 ರಂದು ಹೊರಡಿಸಲಾದ ಆದೇಶದಲ್ಲಿ, ಕಂಪನಿಯ ಇನ್‌ಪುಟ್...

ತಮಿಳುನಾಡು| ರಸ್ತೆ ಅಪಘಾತದಲ್ಲಿ ಇಬ್ಬರು ದಲಿತ ಯುವಕರು ಸಾವು; ಜಾತಿ ವೈಷಮ್ಯ ಆರೋಪ

ತಮಿಳುನಾಡಿನ ಧರ್ಮಪುರಿಯಲ್ಲಿ ಬುಧವಾರ ರಾತ್ರಿ ಚಿನ್ನಾರ್ಥಳ್ಳಿ ಕೂಟ್ ರಸ್ತೆಯ ಬಳಿ ಅಪರಿಚಿತ ವಾಹನವೊಂದು ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸೊನ್ನಂಪಟ್ಟಿ ಗ್ರಾಮದ ಪರಿಶಿಷ್ಟ ಜಾತಿಗೆ ಸೇರಿದ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ ಎಂದು...

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...