Homeಮುಖಪುಟಸಂವಿಧಾನದ ಮೇಲೆ ಆರೆಸ್ಸೆಸ್‌, ಬಿಜೆಪಿ ದಾಳಿ ನಡೆಸುತ್ತಿದೆ: ರಾಹುಲ್‌ ಗಾಂಧಿ

ಸಂವಿಧಾನದ ಮೇಲೆ ಆರೆಸ್ಸೆಸ್‌, ಬಿಜೆಪಿ ದಾಳಿ ನಡೆಸುತ್ತಿದೆ: ರಾಹುಲ್‌ ಗಾಂಧಿ

- Advertisement -
- Advertisement -

ನರೇಂದ್ರ ಮೋದಿ ಸರಕಾರ ಅದಾನಿ ಸರಕಾರ, ಸಂವಿಧಾನವು ಭಾರತದ ಆತ್ಮ, ಈ ಆತ್ಮ ಮತ್ತು ಧ್ವನಿಯ ಮೇಲೆ ಪ್ರಧಾನಿ ಮತ್ತು ಆರೆಸ್ಸೆಸ್ ದಾಳಿ ನಡೆಸುತ್ತಿದೆ, ಲೋಕಸಭೆ ಚುನಾವಣೆಯಲ್ಲಿ ಇಂಡಿಯಾ ಬಣವನ್ನು ಗೆಲ್ಲಿಸುವ ಮೂಲಕ ಕೇಂದ್ರದಲ್ಲಿ ಬಿಜೆಪಿ ಆಡಳಿತವನ್ನು ಪತನಗೊಳಿಸಲಾಗುವುದು ಎಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಹೇಳಿದ್ದಾರೆ.

ತಮಿಳುನಾಡಿನ ಕೊಯಮತ್ತೂರಿನಲ್ಲಿ ಚುನಾವಣಾ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ರಾಹುಲ್ ಗಾಂಧಿ, ನರೇಂದ್ರ ಮೋದಿ ಮತ್ತು ಅದಾನಿ ನೀತಿಗಳು ಎರಡು ಭಾರತಗಳನ್ನು ಸೃಷ್ಟಿಸಿವೆ. ಒಂದು ಕೋಟ್ಯಾಧಿಪತಿಗಳ ಭಾರತ ಮತ್ತು ಇನ್ನೊಂದು ಬಡವರ ಭಾರತ. ಸ್ಟಾಲಿನ್ ರಾಹುಲ್ ಅವರನ್ನು ಪ್ರೀತಿಯ ಸಹೋದರ ಎಂದು ಸ್ವಾಗತಿಸುವ ಮೂಲಕ ಕಾಂಗ್ರೆಸ್ ಮತ್ತು ಆಡಳಿತಾರೂಢ ಡಿಎಂಕೆ ನಡುವಿನ ಬಾಂಧವ್ಯ ಚೆನ್ನಾಗಿದೆ ಎಂದು ಸಂದೇಶವನ್ನು ಸಾರಿದ್ದಾರೆ. ರಾಹುಲ್‌ ಗಾಂಧಿ, ಸ್ಟಾಲಿನ್ ಅವರನ್ನು ಹಿರಿಯ ಸಹೋದರ ಎಂದು ಕರೆದಿದ್ದು, ಎಂದಿಗೂ ನಾನು ಯಾವುದೇ ರಾಜಕಾರಣಿಯನ್ನು ತಮ್ಮ ಸಹೋದರ ಎಂದು ಕರೆದಿಲ್ಲ ಎಂದು ಹೇಳಿದ್ದಾರೆ.

ಸ್ಟಾಲಿನ್‌ ಅವರು ಕಾಂಗ್ರೆಸ್ ಪಕ್ಷದ ಪ್ರಣಾಳಿಕೆಯನ್ನು ಚುನಾವಣಾ ಹೀರೋ ಎಂದು ಬಣ್ಣಿಸಿದ್ದು, ರಾಹುಲ್ ಅವರನ್ನು ಶ್ಲಾಘಿಸಿದ್ದಾರೆ. ಭಾರತ್‌ ಜೋಡೋ ಯಾತ್ರೆಯ ಮೂಲಕ ಜನರ ಸಮಸ್ಯೆಗಳನ್ನು ತಿಳಿದುಕೊಂಡು ಆ ಮೂಲಕ ಪ್ರಣಾಳಿಕೆಯನ್ನು ರಚಿಸಿದ್ದಾರೆ. ಕಾಂಗ್ರೆಸ್ ಪ್ರಣಾಳಿಕೆಯು ಡಿಎಂಕೆಯ ಸಾಮಾಜಿಕ ನ್ಯಾಯವನ್ನು ಪ್ರತಿಬಿಂಬಿಸುತ್ತದೆ ಎಂದು ಅವರು ಹೇಳಿದರು.

ಬಿರುಗಾಳಿ ಬರಲಿದೆ, ನರೇಂದ್ರ ಮೋದಿಯನ್ನು ಅಧಿಕಾರದಿಂದ ಕಿತ್ತೊಗೆಯಲಿದ್ದಾರೆ. ಮೋದಿ ಸರ್ಕಾರ ವಾಸ್ತವವಾಗಿ ಅದಾನಿ ಸರ್ಕಾರ, ಇದನ್ನು ಅದಾನಿ ಸರ್ಕಾರ ಎಂದು ಕರೆಯಬೇಕು ಮತ್ತು ನರೇಂದ್ರ ಮೋದಿ ಸರ್ಕಾರವಲ್ಲ ಎಂದು ರಾಹುಲ್  ಗಾಂಧಿ ಹೇಳಿದರು. ವಿಮಾನ ನಿಲ್ದಾಣವಾಗಲಿ, ಹೆದ್ದಾರಿಯಾಗಲಿ, ಯಾವುದೇ ಮೂಲಭೂತ ಯೋಜನೆಯಾಗಲಿ, ಎಲ್ಲವನ್ನು ಭಾರತ ಸರ್ಕಾರವು ಅದಾನಿಗೆ ನೀಡುತ್ತದೆ.

ಅದಾನಿ ಮುಂಬೈ ವಿಮಾನ ನಿಲ್ದಾಣವನ್ನು ಬಯಸಿದ್ದರು. ವಿಮಾನ ನಿಲ್ದಾಣದ ಮಾಲೀಕರು ಸಿಬಿಐ ವಿಚಾರಣೆಯನ್ನು ಎದುರಿಸಿದರು. ಕೆಲವು ವಾರಗಳ ನಂತರ ಅವರು ವಿಮಾನ ನಿಲ್ದಾಣವನ್ನು ಅದಾನಿಗೆ ಹಸ್ತಾಂತರಿಸಿದರು ಮತ್ತು ಕೇಂದ್ರೀಯ ಸಂಸ್ಥೆಯ ವಿಚಾರಣೆ ಕಣ್ಮರೆಯಾಯಿತು. ಅದಾನಿ ಏನು ಬಯಸುತ್ತಾನೋ ಅವನು ಅದನ್ನು ಪಡೆಯುತ್ತಾನೆ ಎಂದು ರಾಹುಲ್‌ ಗಾಂಧಿ ಹೇಳಿದ್ದಾರೆ.

ಸಂಸತ್ತಿನಲ್ಲಿ ಅದಾನಿ ವಿಷಯವನ್ನು ಪ್ರಸ್ತಾಪಿಸಿದ ನಂತರ ಲೋಕಸಭಾ ಸದಸ್ಯತ್ವವನ್ನು ಕಸಿದುಕೊಳ್ಳಲಾಯಿತು ಮತ್ತು ದೆಹಲಿಯ ಮನೆಯಿಂದ ಹೊರಹಾಕಲಾಯಿತು. ಮತ ಹಾಕಿದರೆ, ಇಂಡಿಯಾ ಮೈತ್ರಿ ಸರಕಾರವು ಐತಿಹಾಸಿಕ ಕ್ರಮಗಳನ್ನು ತೆಗೆದುಕೊಳ್ಳಲು ನಿರ್ಧರಿಸುತ್ತದೆ ಎಂದು ರಾಹುಲ್ ಗಾಂಧಿ ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಯನ್ನು ಒಳಗೊಂಡಿರುವ ಕಾಂಗ್ರೆಸ್ ಪ್ರಣಾಳಿಕೆಯ ವೈಶಿಷ್ಟ್ಯಗಳನ್ನು ವಿವರಿಸಿದರು.

ಚುನಾವಣೆಯು ಸೈದ್ಧಾಂತಿಕ ಹೋರಾಟವಾಗಿದೆ ಮತ್ತು ಇನ್ನು ಮುಂದೆ ಸಾಮಾನ್ಯ ಚುನಾವಣೆಯಲ್ಲ. ದೇಶದ ಎಲ್ಲಾ ಜನರ ಹಕ್ಕುಗಳು, ಅವರ ಇತಿಹಾಸಗಳು, ಭಾಷೆಗಳು ಮತ್ತು ಅವರ ಜೀವನ ವಿಧಾನವನ್ನು ಸಂವಿಧಾನವು ರಕ್ಷಿಸಿದೆ. ಸಂವಿಧಾನವು ಸಾಮಾನ್ಯ ಪುಸ್ತಕವಲ್ಲ, ಅದು ಆತ್ಮ, ಇದು ಭಾರತದ ಜನರ ಧ್ವನಿ. ಆ ಆತ್ಮ ಮತ್ತು ಆ ಧ್ವನಿಯ ಮೇಲೆ ಪ್ರಧಾನಿ ಮತ್ತು ಆರೆಸ್ಸೆಸ್ ದಾಳಿ ನಡೆಸುತ್ತಿದೆ. ಕೇಂದ್ರದಲ್ಲಿ ಅಧಿಕಾರ ಉಳಿಸಿಕೊಂಡರೆ ಸಂವಿಧಾನ ಬದಲಿಸುತ್ತೇವೆ ಎಂದು ಬಿಜೆಪಿ ಸಂಸದರು ಬಹಿರಂಗವಾಗಿ ಹೇಳಿದ್ದಾರೆ ಎಂದು ರಾಹುಲ್ ಹೇಳಿದರು.

ಭಾರತದ ಸಂಸ್ಥೆಗಳು ಅದರ ಎಲ್ಲಾ ಜನರಿಗೆ ಸೇರಿವೆ ಮತ್ತು ಅವರು ಆರ್‌ಎಸ್‌ಎಸ್‌ಗೆ ಸೇರಿಲ್ಲ. ವಿಶ್ವವಿದ್ಯಾನಿಲಯಗಳ ಹೆಚ್ಚಿನ ಉಪಕುಲಪತಿಗಳು ಆರೆಸ್ಸೆಸ್‌ನಿಂದ ಬಂದವರು ಮತ್ತು ಕಾನೂನು ಇಲಾಖೆಗಳಲ್ಲಿ ಆರೆಸ್ಸೆಸ್‌ ನುಸುಳಿದೆ, ಇದು ನಮ್ಮ ರಾಷ್ಟ್ರದ ಕಲ್ಪನೆಯ ಮೇಲಿನ ದಾಳಿಯಾಗಿದೆ ಎಂದು ರಾಹುಲ್‌ ಗಾಂಧಿ ಹೇಳಿದ್ದಾರೆ.

ಇದನ್ನು ಓದಿ: ಮುಸ್ಲಿಂ ಲೀಗ್ ಟೀಕೆ: ‘ಬಿಜೆಪಿ ನಾಯಕರು ತಮ್ಮ ಪಕ್ಷದ ಇತಿಹಾಸವನ್ನು ಮೊದಲು ಓದಬೇಕು..’ ಎಂದ ಖರ್ಗೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಮಿಳುನಾಡು| ರಸ್ತೆ ಅಪಘಾತದಲ್ಲಿ ಇಬ್ಬರು ದಲಿತ ಯುವಕರು ಸಾವು; ಜಾತಿ ವೈಷಮ್ಯ ಆರೋಪ

ತಮಿಳುನಾಡಿನ ಧರ್ಮಪುರಿಯಲ್ಲಿ ಬುಧವಾರ ರಾತ್ರಿ ಚಿನ್ನಾರ್ಥಳ್ಳಿ ಕೂಟ್ ರಸ್ತೆಯ ಬಳಿ ಅಪರಿಚಿತ ವಾಹನವೊಂದು ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸೊನ್ನಂಪಟ್ಟಿ ಗ್ರಾಮದ ಪರಿಶಿಷ್ಟ ಜಾತಿಗೆ ಸೇರಿದ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ ಎಂದು...

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...