Homeಮುಖಪುಟಸ್ಟಾಲಿನ್‌ಗಾಗಿ ಸಿಹಿ ಖರೀದಿಸಿದ ರಾಹುಲ್ ಗಾಂಧಿ; ಸಂತಸ ವ್ಯಕ್ತಪಡಿಸಿದ ತಮಿಳುನಾಡು ಸಿಎಂ

ಸ್ಟಾಲಿನ್‌ಗಾಗಿ ಸಿಹಿ ಖರೀದಿಸಿದ ರಾಹುಲ್ ಗಾಂಧಿ; ಸಂತಸ ವ್ಯಕ್ತಪಡಿಸಿದ ತಮಿಳುನಾಡು ಸಿಎಂ

- Advertisement -
- Advertisement -

ಲೋಕಸಭೆ ಚುನಾವಣೆ ಪ್ರಚಾರದಲ್ಲಿ ತೊಡಗಿಸಿಕೊಂಡಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶುಕ್ರವಾರ ರಾತ್ರಿ ತಮಿಳುನಾಡಿನ ಸಿಂಗಾನಲ್ಲೂರಿನ ಅಂಗಡಿಯೊಂದರಲ್ಲಿ ದಕ್ಷಿಣ ಭಾರತದ ಪ್ರಸಿದ್ಧ ಸಿಹಿ ಖಾದ್ಯ ‘ಮೈಸೂರು ಪಾಕ್’ ಅನ್ನು ಖರೀದಿಸಿ, ಅದನ್ನು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರಿಗೆ ನೀಡಿದರು.

ರಾಹುಲ್ ಗಾಂಧಿ ಬರಸ್ತೆ ಡಿವೈಡರ್ ದಾಟಿ, ಅಂಗಡಿಯಿಂದ ಮೈಸೂರು ಪಾಕ್ ಖರೀದಿಸಿರುವ ವಿಡಯೋವನ್ನು ಕಾಂಗ್ರೆಸ್ ಹಂಚಿಕೊಂಡಿದ್ದು, ಅವರು ಸಿಹಿತಿಂಡಿಗಳ ಅಂಗಡಿಗೆ ಕಾಲಿಡುತ್ತಿರುವುದನ್ನು ಮತ್ತು ಪಕ್ಷದ ಇತರ ಕಾರ್ಯಕರ್ತರೊಂದಿಗೆ ಸಿಹಿ ಹಂಚಿ ತಿನ್ನುತ್ತಿರುವುದನ್ನು ಕಾಣಬಹುದು. ಅವರು ಸಿಹಿ ಅಂಗಡಿಯ ಮಹಿಳಾ ಸಿಬ್ಬಂದಿಯೊಂದಿಗೆ ಹಸ್ತಲಾಘವ, ಸಂವಾದ ಮತ್ತು ಛಾಯಾಚಿತ್ರಗಳಿಗೆ ಪೋಸ್ ನೀಡುವುದನ್ನು ಸಹ ವಿಡಿಯೋದಲ್ಲಿ ಕಾಣಬಹುದು.

ವೀಡಿಯೊದ ಕೊನೆಯಲ್ಲಿ, ಗಾಂಧಿಯವರು ಕೊಯಮತ್ತೂರಿನಲ್ಲಿ ಎಂಕೆ ಸ್ಟಾಲಿನ್ ಅವರನ್ನು ಭೇಟಿಯಾಗಿ ಸಿಹಿತಿಂಡಿಗಳನ್ನು ನೀಡಿದ್ದಾರೆ. ಗಾಂಧಿಯವರು ಡಿಎಂಕೆ ನಾಯಕನನ್ನು ತಮ್ಮ “ಸಹೋದರ” ಎಂದು ಸಂಬೋಧಿಸಿದ್ದರಿಂದ ಉಭಯ ನಾಯಕರ ನಡುವಿನ ಬಾಂಧವ್ಯ ಮತ್ತಷ್ಟು ಸ್ಪಷ್ಟವಾಯಿತು.

“ತಮಿಳುನಾಡಿನ ಪ್ರಚಾರದ ಹಾದಿಗೆ ಸಿಹಿಯ ಸ್ಪರ್ಶವನ್ನು ಸೇರಿಸುವುದು, ನನ್ನ ಸಹೋದರ ತಿರು ಸ್ಟಾಲಿನ್‌ಗಾಗಿ ಸ್ವಲ್ಪ ಮೈಸೂರು ಪಾಕ್ ಖರೀದಿಸಿದೆ” ಎಂದು ರಾಹುಲ್ ಗಾಂಧಿ ವೀಡಿಯೋ ಶೇರ್ ಮಾಡಿದ್ದಾರೆ.

ರಾಹುಲ್ ಗಾಂದಿಗೆ ಪ್ರತಿಕ್ರಿಯಿಸಿದ ಸ್ಟಾಲಿನ್, ಜೂನ್ 4 ರಂದು ಇಂಡಿಯಾ ಮೈತ್ರಿಕೂಟವು  ‘ಗೆಲುವಿನ ಸಿಹಿ” ನೀಡಲಿದೆ ಎಂದು ಶನಿವಾರ ಹೇಳಿದ್ದಾರೆ.

ಇದೇ ವೇಳೆ, ಕಾಂಗ್ರೆಸ್ ಮುಖಂಡರ ದಿಢೀರ್ ಭೇಟಿಯಿಂದ ಆಶ್ಚರ್ಯವಾಯಿತು ಎಂದು ಅಂಗಡಿ ಮಾಲೀಕ ಬಾಬು ಹೇಳಿದ್ದಾರೆ.

“ಬಹುಶಃ ಅವರು ಕೊಯಮತ್ತೂರು ಸಭೆಗೆ ಭೇಟಿ ನೀಡುತ್ತಿದ್ದರು, ಆಗ ಅವರು ಮೈಸೂರು ಪಾಕ್ ಖರೀದಿಸಿದರು. ಅವರು ಪ್ರದರ್ಶನಕ್ಕೆ ಇಟ್ಟಿದ್ದ ಇತರ ಸಿಹಿತಿಂಡಿಗಳನ್ನು ಸಹ ರುಚಿ ನೋಡಿದರು. ಅವರು ಅಂಗಡಿಗೆ ಬಂದಿದ್ದಕ್ಕೆ ನನಗೆ ಸಂತೋಷವಾಯಿತು. ನಮ್ಮ ಸಿಬ್ಬಂದಿಯೂ ಅವನನ್ನು ನೋಡಿ ಸಂತೋಷಪಟ್ಟರು. ಅವರು 25-30 ನಿಮಿಷಗಳ ಕಾಲ ಇಲ್ಲಿದ್ದರು. ಅವರು ಇಲ್ಲಿ ವಾಹನ ನಿಲ್ಲಿಸುತ್ತಾರೆ ಎಂದು ನಮಗೆ ಯಾವುದೇ ಸುಳಿವು ಇರಲಿಲ್ಲ ಮತ್ತು ಎಲ್ಲರೂ ಆಶ್ಚರ್ಯಚಕಿತರಾದರು. ನಾವು ಹಣ ನೀಡಬೇಡಿ ಎಂದು ಕೇಳಿದೆವು. ಆದರೆ, ಅವರು ಒತ್ತಾಯಿಸಿ ಕೊಟ್ಟರು; ಸಂಪೂರ್ಣ ಮೊತ್ತವನ್ನು ಪಾವತಿಸಿದ್ದಾರೆ’ ಎಂದು ಮಾಲೀಖರು ಮಾಧ್ಯಮಗಳಿಗೆ ತಿಳಿಸಿದ್ದಾರೆ.

ರಾಹುಲ್ ಗಾಂಧಿ ಶುಕ್ರವಾರ ತಮಿಳುನಾಡಿನಲ್ಲಿ ಚುನಾವಣಾ ರ್ಯಾಲಿಗಳೊಂದಿಗೆ ತಮ್ಮ ಮೊದಲ ಪ್ರಚಾರವನ್ನು ಪ್ರಾರಂಭಿಸಿದರು. ರಾಜ್ಯದ 39 ಲೋಕಸಭಾ ಸ್ಥಾನಗಳಿಗೆ ಏಪ್ರಿಲ್ 19 ರಂದು ಮೊದಲ ಹಂತದಲ್ಲಿ ಮತದಾನ ನಡೆಯಲಿದೆ. 2019 ರ ಲೋಕಸಭೆ ಚುನಾವಣೆಯಲ್ಲಿ, ಕಾಂಗ್ರೆಸ್-ಡಿಎಂಕೆ ನೇತೃತ್ವದ ಮೈತ್ರಿ ರಾಜ್ಯದ 39 ಸ್ಥಾನಗಳಲ್ಲಿ 38 ಸ್ಥಾನಗಳನ್ನು ಗೆದ್ದರೆ, ಎಐಎಡಿಎಂಕೆ ಕೇವಲ ಏಕೈಕ ಸ್ಥಾನವನ್ನು ಮಾತ್ರ ಗೆಲ್ಲುಲು ಸಾಧ್ಯವಾಯಿತು.

ಇಂಡಿಯಾ ಗೆಲುವು ಸಿಹಿ ನೀಡಲಿದೆ: ಸಿಎಂ ಸ್ಟಾಲಿನ್

ರಾಹುಲ್ ಗಾಂಧಿ ಸಿಹಿ ನೀಡಿದ್ದರ ಬಗ್ಗೆ ಪ್ರತಿಕ್ರಿಯೆ ನೀಡಿರುವ ತಮಿಳುನಾಡು ಮುಖ್ಯಮಂತ್ರಿ, ಡಿಎಂಕೆ ಅಧ್ಯಕ್ಷ ಎಂ ಕೆ ಸ್ಟಾಲಿನ್, ‘ಜೂನ್ 4 ರಂದು ಇಂಡಿಯಾ ಮೈತ್ರಿಕೂಟವು ಗೆಲುವಿನ ಸಿಹಿ ನೀಡಲಿದೆ’ ಎಂದು ಹೇಳಿದ್ದಾರೆ.

ಶುಕ್ರವಾರ ರಾಜ್ಯಕ್ಕೆ ಭೇಟಿ ನೀಡಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಂದ ಮೈಸೂರು ಪಾಕ್ ಸ್ವೀಕರಿಸಿದ ಬಗ್ಗೆ ಆಶ್ಚರ್ಯ ವ್ಯಕ್ತಪಡಿಸಿದ ಸ್ಟಾಲಿನ್, ‘ನನ್ನ ಸಹೋದರನ ಸಿಹಿ ಸನ್ನೆ ನನ್ನನ್ನು ಸ್ಪರ್ಶಿಸಿದೆ’ ಎಂದು ಹೇಳಿದರು.

ಇದನ್ನೂ ಓದಿ; ಸಂವಿಧಾನದ ಮೇಲೆ ಆರೆಸ್ಸೆಸ್‌, ಬಿಜೆಪಿ ದಾಳಿ ನಡೆಸುತ್ತಿದೆ: ರಾಹುಲ್‌ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಿಲಯನ್ಸ್ ಇಂಡಸ್ಟ್ರೀಸ್‌ಗೆ ರೂ. 56.44 ಕೋಟಿ ಸಿಜಿಎಸ್‌ಟಿ ದಂಡ

ಮುಖೇಶ್ ಅಂಬಾನಿ ನೇತೃತ್ವದ ರಿಲಯನ್ಸ್ ಇಂಡಸ್ಟ್ರೀಸ್, ಅಹಮದಾಬಾದ್‌ನ ಸಿಜಿಎಸ್‌ಟಿ ಜಂಟಿ ಆಯುಕ್ತರಿಂದ 56.44 ಕೋಟಿ ರೂ. ದಂಡದ ಆದೇಶವನ್ನು ಸ್ವೀಕರಿಸಿದೆ ಎಂದು ಶುಕ್ರವಾರ ತಿಳಿಸಿದೆ. ನವೆಂಬರ್ 25 ರಂದು ಹೊರಡಿಸಲಾದ ಆದೇಶದಲ್ಲಿ, ಕಂಪನಿಯ ಇನ್‌ಪುಟ್...

ತಮಿಳುನಾಡು| ರಸ್ತೆ ಅಪಘಾತದಲ್ಲಿ ಇಬ್ಬರು ದಲಿತ ಯುವಕರು ಸಾವು; ಜಾತಿ ವೈಷಮ್ಯ ಆರೋಪ

ತಮಿಳುನಾಡಿನ ಧರ್ಮಪುರಿಯಲ್ಲಿ ಬುಧವಾರ ರಾತ್ರಿ ಚಿನ್ನಾರ್ಥಳ್ಳಿ ಕೂಟ್ ರಸ್ತೆಯ ಬಳಿ ಅಪರಿಚಿತ ವಾಹನವೊಂದು ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸೊನ್ನಂಪಟ್ಟಿ ಗ್ರಾಮದ ಪರಿಶಿಷ್ಟ ಜಾತಿಗೆ ಸೇರಿದ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ ಎಂದು...

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...