Homeಮುಖಪುಟಸ್ಟಾಲಿನ್‌ಗಾಗಿ ಸಿಹಿ ಖರೀದಿಸಿದ ರಾಹುಲ್ ಗಾಂಧಿ; ಸಂತಸ ವ್ಯಕ್ತಪಡಿಸಿದ ತಮಿಳುನಾಡು ಸಿಎಂ

ಸ್ಟಾಲಿನ್‌ಗಾಗಿ ಸಿಹಿ ಖರೀದಿಸಿದ ರಾಹುಲ್ ಗಾಂಧಿ; ಸಂತಸ ವ್ಯಕ್ತಪಡಿಸಿದ ತಮಿಳುನಾಡು ಸಿಎಂ

- Advertisement -
- Advertisement -

ಲೋಕಸಭೆ ಚುನಾವಣೆ ಪ್ರಚಾರದಲ್ಲಿ ತೊಡಗಿಸಿಕೊಂಡಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶುಕ್ರವಾರ ರಾತ್ರಿ ತಮಿಳುನಾಡಿನ ಸಿಂಗಾನಲ್ಲೂರಿನ ಅಂಗಡಿಯೊಂದರಲ್ಲಿ ದಕ್ಷಿಣ ಭಾರತದ ಪ್ರಸಿದ್ಧ ಸಿಹಿ ಖಾದ್ಯ ‘ಮೈಸೂರು ಪಾಕ್’ ಅನ್ನು ಖರೀದಿಸಿ, ಅದನ್ನು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರಿಗೆ ನೀಡಿದರು.

ರಾಹುಲ್ ಗಾಂಧಿ ಬರಸ್ತೆ ಡಿವೈಡರ್ ದಾಟಿ, ಅಂಗಡಿಯಿಂದ ಮೈಸೂರು ಪಾಕ್ ಖರೀದಿಸಿರುವ ವಿಡಯೋವನ್ನು ಕಾಂಗ್ರೆಸ್ ಹಂಚಿಕೊಂಡಿದ್ದು, ಅವರು ಸಿಹಿತಿಂಡಿಗಳ ಅಂಗಡಿಗೆ ಕಾಲಿಡುತ್ತಿರುವುದನ್ನು ಮತ್ತು ಪಕ್ಷದ ಇತರ ಕಾರ್ಯಕರ್ತರೊಂದಿಗೆ ಸಿಹಿ ಹಂಚಿ ತಿನ್ನುತ್ತಿರುವುದನ್ನು ಕಾಣಬಹುದು. ಅವರು ಸಿಹಿ ಅಂಗಡಿಯ ಮಹಿಳಾ ಸಿಬ್ಬಂದಿಯೊಂದಿಗೆ ಹಸ್ತಲಾಘವ, ಸಂವಾದ ಮತ್ತು ಛಾಯಾಚಿತ್ರಗಳಿಗೆ ಪೋಸ್ ನೀಡುವುದನ್ನು ಸಹ ವಿಡಿಯೋದಲ್ಲಿ ಕಾಣಬಹುದು.

ವೀಡಿಯೊದ ಕೊನೆಯಲ್ಲಿ, ಗಾಂಧಿಯವರು ಕೊಯಮತ್ತೂರಿನಲ್ಲಿ ಎಂಕೆ ಸ್ಟಾಲಿನ್ ಅವರನ್ನು ಭೇಟಿಯಾಗಿ ಸಿಹಿತಿಂಡಿಗಳನ್ನು ನೀಡಿದ್ದಾರೆ. ಗಾಂಧಿಯವರು ಡಿಎಂಕೆ ನಾಯಕನನ್ನು ತಮ್ಮ “ಸಹೋದರ” ಎಂದು ಸಂಬೋಧಿಸಿದ್ದರಿಂದ ಉಭಯ ನಾಯಕರ ನಡುವಿನ ಬಾಂಧವ್ಯ ಮತ್ತಷ್ಟು ಸ್ಪಷ್ಟವಾಯಿತು.

“ತಮಿಳುನಾಡಿನ ಪ್ರಚಾರದ ಹಾದಿಗೆ ಸಿಹಿಯ ಸ್ಪರ್ಶವನ್ನು ಸೇರಿಸುವುದು, ನನ್ನ ಸಹೋದರ ತಿರು ಸ್ಟಾಲಿನ್‌ಗಾಗಿ ಸ್ವಲ್ಪ ಮೈಸೂರು ಪಾಕ್ ಖರೀದಿಸಿದೆ” ಎಂದು ರಾಹುಲ್ ಗಾಂಧಿ ವೀಡಿಯೋ ಶೇರ್ ಮಾಡಿದ್ದಾರೆ.

ರಾಹುಲ್ ಗಾಂದಿಗೆ ಪ್ರತಿಕ್ರಿಯಿಸಿದ ಸ್ಟಾಲಿನ್, ಜೂನ್ 4 ರಂದು ಇಂಡಿಯಾ ಮೈತ್ರಿಕೂಟವು  ‘ಗೆಲುವಿನ ಸಿಹಿ” ನೀಡಲಿದೆ ಎಂದು ಶನಿವಾರ ಹೇಳಿದ್ದಾರೆ.

ಇದೇ ವೇಳೆ, ಕಾಂಗ್ರೆಸ್ ಮುಖಂಡರ ದಿಢೀರ್ ಭೇಟಿಯಿಂದ ಆಶ್ಚರ್ಯವಾಯಿತು ಎಂದು ಅಂಗಡಿ ಮಾಲೀಕ ಬಾಬು ಹೇಳಿದ್ದಾರೆ.

“ಬಹುಶಃ ಅವರು ಕೊಯಮತ್ತೂರು ಸಭೆಗೆ ಭೇಟಿ ನೀಡುತ್ತಿದ್ದರು, ಆಗ ಅವರು ಮೈಸೂರು ಪಾಕ್ ಖರೀದಿಸಿದರು. ಅವರು ಪ್ರದರ್ಶನಕ್ಕೆ ಇಟ್ಟಿದ್ದ ಇತರ ಸಿಹಿತಿಂಡಿಗಳನ್ನು ಸಹ ರುಚಿ ನೋಡಿದರು. ಅವರು ಅಂಗಡಿಗೆ ಬಂದಿದ್ದಕ್ಕೆ ನನಗೆ ಸಂತೋಷವಾಯಿತು. ನಮ್ಮ ಸಿಬ್ಬಂದಿಯೂ ಅವನನ್ನು ನೋಡಿ ಸಂತೋಷಪಟ್ಟರು. ಅವರು 25-30 ನಿಮಿಷಗಳ ಕಾಲ ಇಲ್ಲಿದ್ದರು. ಅವರು ಇಲ್ಲಿ ವಾಹನ ನಿಲ್ಲಿಸುತ್ತಾರೆ ಎಂದು ನಮಗೆ ಯಾವುದೇ ಸುಳಿವು ಇರಲಿಲ್ಲ ಮತ್ತು ಎಲ್ಲರೂ ಆಶ್ಚರ್ಯಚಕಿತರಾದರು. ನಾವು ಹಣ ನೀಡಬೇಡಿ ಎಂದು ಕೇಳಿದೆವು. ಆದರೆ, ಅವರು ಒತ್ತಾಯಿಸಿ ಕೊಟ್ಟರು; ಸಂಪೂರ್ಣ ಮೊತ್ತವನ್ನು ಪಾವತಿಸಿದ್ದಾರೆ’ ಎಂದು ಮಾಲೀಖರು ಮಾಧ್ಯಮಗಳಿಗೆ ತಿಳಿಸಿದ್ದಾರೆ.

ರಾಹುಲ್ ಗಾಂಧಿ ಶುಕ್ರವಾರ ತಮಿಳುನಾಡಿನಲ್ಲಿ ಚುನಾವಣಾ ರ್ಯಾಲಿಗಳೊಂದಿಗೆ ತಮ್ಮ ಮೊದಲ ಪ್ರಚಾರವನ್ನು ಪ್ರಾರಂಭಿಸಿದರು. ರಾಜ್ಯದ 39 ಲೋಕಸಭಾ ಸ್ಥಾನಗಳಿಗೆ ಏಪ್ರಿಲ್ 19 ರಂದು ಮೊದಲ ಹಂತದಲ್ಲಿ ಮತದಾನ ನಡೆಯಲಿದೆ. 2019 ರ ಲೋಕಸಭೆ ಚುನಾವಣೆಯಲ್ಲಿ, ಕಾಂಗ್ರೆಸ್-ಡಿಎಂಕೆ ನೇತೃತ್ವದ ಮೈತ್ರಿ ರಾಜ್ಯದ 39 ಸ್ಥಾನಗಳಲ್ಲಿ 38 ಸ್ಥಾನಗಳನ್ನು ಗೆದ್ದರೆ, ಎಐಎಡಿಎಂಕೆ ಕೇವಲ ಏಕೈಕ ಸ್ಥಾನವನ್ನು ಮಾತ್ರ ಗೆಲ್ಲುಲು ಸಾಧ್ಯವಾಯಿತು.

ಇಂಡಿಯಾ ಗೆಲುವು ಸಿಹಿ ನೀಡಲಿದೆ: ಸಿಎಂ ಸ್ಟಾಲಿನ್

ರಾಹುಲ್ ಗಾಂಧಿ ಸಿಹಿ ನೀಡಿದ್ದರ ಬಗ್ಗೆ ಪ್ರತಿಕ್ರಿಯೆ ನೀಡಿರುವ ತಮಿಳುನಾಡು ಮುಖ್ಯಮಂತ್ರಿ, ಡಿಎಂಕೆ ಅಧ್ಯಕ್ಷ ಎಂ ಕೆ ಸ್ಟಾಲಿನ್, ‘ಜೂನ್ 4 ರಂದು ಇಂಡಿಯಾ ಮೈತ್ರಿಕೂಟವು ಗೆಲುವಿನ ಸಿಹಿ ನೀಡಲಿದೆ’ ಎಂದು ಹೇಳಿದ್ದಾರೆ.

ಶುಕ್ರವಾರ ರಾಜ್ಯಕ್ಕೆ ಭೇಟಿ ನೀಡಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಂದ ಮೈಸೂರು ಪಾಕ್ ಸ್ವೀಕರಿಸಿದ ಬಗ್ಗೆ ಆಶ್ಚರ್ಯ ವ್ಯಕ್ತಪಡಿಸಿದ ಸ್ಟಾಲಿನ್, ‘ನನ್ನ ಸಹೋದರನ ಸಿಹಿ ಸನ್ನೆ ನನ್ನನ್ನು ಸ್ಪರ್ಶಿಸಿದೆ’ ಎಂದು ಹೇಳಿದರು.

ಇದನ್ನೂ ಓದಿ; ಸಂವಿಧಾನದ ಮೇಲೆ ಆರೆಸ್ಸೆಸ್‌, ಬಿಜೆಪಿ ದಾಳಿ ನಡೆಸುತ್ತಿದೆ: ರಾಹುಲ್‌ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗ್ರಾಮೀಣ ಭಾಗದ ಶಾಲಾ ಮಕ್ಕಳಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ 7.5% ಮೀಸಲಾತಿ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಗ್ರಾಮೀಣ ಹಾಗೂ ಬಡ ವಿದ್ಯಾರ್ಥಿಗಳ ಉನ್ನತ ಶಿಕ್ಷಣದ ಕನಸಿಗೆ ಬಲ ತುಂಬುವ ನಿಟ್ಟಿನಲ್ಲಿ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಶಿಕ್ಷಣ ಹಾಗೂ ಉದ್ಯೋಗದಲ್ಲಿ ಶೇಕಡಾ 7.5 ರಷ್ಟು ಮೀಸಲಾತಿ ಕಲ್ಪಿಸುವುದಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ಪಶ್ಚಿಮ ಬಂಗಾಳದ ಪ್ರವಾಸೋದ್ಯಮ ಜಾಹೀರಾತಿನಲ್ಲಿ ಐಫೆಲ್ ಟವರ್, ಈಜಿಪ್ಟ್ ಪಿರಮಿಡ್: ಆದರೆ ಬಂಗಾಳವೇ ನಾಪತ್ತೆ!

ಪಶ್ಚಿಮ ಬಂಗಾಳವನ್ನು ಜಾಗತಿಕ ಪ್ರವಾಸೋದ್ಯಮ ಭೂಪಟದಲ್ಲಿ ಮುನ್ನೆಲೆಗೆ ತರುವ ಉದ್ದೇಶದಿಂದ ಬಿಡುಗಡೆ ಮಾಡಲಾದ ರಾಜ್ಯದ ಹೊಸ ಪ್ರವಾಸೋದ್ಯಮ ಜಾಹೀರಾತು ಈಗ ತೀವ್ರ ಟೀಕೆ ಹಾಗೂ ಅಪಹಾಸ್ಯಕ್ಕೆ ಈಡಾಗಿದೆ. ಈ ಜಾಹೀರಾತನ್ನು ಒಮ್ಮೆ ಗಮನಿಸಿದರೆ...

ಅಮೆರಿಕದಲ್ಲಿ ಮೋಹನ್‌ ಭಾಗವತ್ ಸೌಹಾರ್ದತೆ ಮಾತು; ಮಹಾರಾಷ್ಟ್ರದ ಗಾರ್ಬಾ-ದಾಂಡಿಯಾ ಕಾರ್ಯಕ್ರಮಗಳಲ್ಲಿ ಮುಸ್ಲಿಮರಿಗೆ ನಿಷೇಧ ಹೇರಿದ ವಿಎಚ್‌ಪಿ

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರು ನ್ಯೂಯಾರ್ಕ್‌ನಲ್ಲಿ ಮಾಡಿದ ಭಾಷಣದಲ್ಲಿ ಧಾರ್ಮಿಕ ಸೌಹಾರ್ದತೆ, ಪರಸ್ಪರ ಗೌರವ ಮತ್ತು ಪ್ರತಿಯೊಂದು ಸಮುದಾಯದ ಗುರುತಿನ ರಕ್ಷಣೆ ಕುರಿತು ಮಾತನಾಡಿದ ಕೆಲವೇ ದಿನಗಳ...

ಸೈಬರ್ ವಂಚನೆಗೊಳಗಾದ ಸಂತ್ರಸ್ತರಿಗೆ ನೆರವು: ಕರ್ನಾಟಕದಲ್ಲಿ ಶೀಘ್ರವೇ ‘ಇ-ಶೂನ್ಯ ಎಫ್‌ಐಆರ್’ ಜಾರಿ

ಸೈಬರ್ ವಂಚನೆಗೊಳಗಾದ ಸಂತ್ರಸ್ತರು ಇನ್ನು ಮುಂದೆ ದೂರು ದಾಖಲಿಸಲು ಪೊಲೀಸ್ ಠಾಣೆಗಳಿಗೆ ಅಲೆಯಬೇಕಿಲ್ಲ. ಸೈಬರ್ ಅಪರಾಧ ಪ್ರಕರಣಗಳ ಎಫ್‌ಐಆರ್ ದಾಖಲಾತಿಯನ್ನು ಚುರುಕುಗೊಳಿಸುವ ಹಾಗೂ ಜನಸ್ನೇಹಿಯಾಗಿಸುವ ಉದ್ದೇಶದಿಂದ ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರ...

ತಲೆ ಮರೆಸಿಕೊಂಡಿದ್ದ ಸ್ವತಂತ್ರ ಭಾರದ್ವಾಜ್‌ ಅರೆಸ್ಟ್ : ಪೋಕ್ಸೋ ಅಡಿ ಮತ್ತೊಂದು ಪ್ರಕರಣ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಜುಲೈನಲ್ಲಿ ನಡೆದ ಸಿಜೆಪಿ ಪ್ರತಿಭಟನೆ ವೇಳೆ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಝಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪ ಹೊತ್ತಿರುವ ಹಿಂದುತ್ವ ಸೋಶಿಯಲ್ ಮೀಡಿಯಾ 'ಇನ್‌ಫ್ಲುಯೆನ್ಸರ್' ಸ್ವತಂತ್ರ...

ಆರ್‌ಎಸ್ಎಸ್ ಬೆಂಬಲಿತ ಗುಂಪುಗಳಿಂದ ದೇಣಿಗೆ ಸ್ವೀಕರಿಸದಿರಲು ಅಮೆರಿಕದ ರಾಜಕಾರಣಿಗಳಿಂದ ಪ್ರತಿಜ್ಞೆ

ಅಮೆರಿಕದ ಸುಮಾರು 90 ಜನಪ್ರತಿನಿಧಿಗಳು ಮತ್ತು ರಾಜಕೀಯ ಅಭ್ಯರ್ಥಿಗಳು ರಾಷ್ಟ್ರೀಯ ಸ್ವಯಂಸೇವಕ ಸಂಘಕ್ಕೆ (RSS) ಬೆಂಬಲಿತ ಗುಂಪುಗಳಿಂದ ರಾಜಕೀಯ ದೇಣಿಗೆಗಳನ್ನು ಸ್ವೀಕರಿಸುವುದಿಲ್ಲ ಎಂದು ಪ್ರತಿಜ್ಞೆ ಮಾಡಿದ್ದಾರೆ. ಹಿಂದುತ್ವ ಸಂಘಟನೆಯ ಮುಖ್ಯಸ್ಥ ಮೋಹನ್ ಭಾಗವತ್...

KPSC ಪರೀಕ್ಷಾ ಅಕ್ರಮ: ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ, ರಾಜಕೀಯ ಪಕ್ಷ ನೋಡದೆ ನಿರ್ದಾಕ್ಷಿಣ್ಯ ಕ್ರಮ – ಸಚಿವ ಪ್ರಿಯಾಂಕ್ ಖರ್ಗೆ

ಕೆಪಿಎಸ್‌ಸಿ (KPSC) ಪರೀಕ್ಷಾ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಅತ್ಯಂತ ಗಂಭೀರವಾಗಿದ್ದು, ಇದರಲ್ಲಿ ಭಾಗಿಯಾಗಿರುವ ಯಾರನ್ನೇ ಆಗಲಿ ರಕ್ಷಿಸುವ ಪ್ರಶ್ನೆಯೇ ಇಲ್ಲ. ಆರೋಪಿಗಳು ಎಷ್ಟೇ ಪ್ರಭಾವಶಾಲಿಗಳಾಗಿದ್ದರೂ ಅಥವಾ ಯಾವುದೇ ರಾಜಕೀಯ ಪಕ್ಷಕ್ಕೆ...

ಉತ್ತರ ಪ್ರದೇಶ: ಸಹಾರನ್‌ಪುರ ಕಲೆಕ್ಟರೇಟ್ ಮಸೀದಿ ಧ್ವಂಸ, ‘ಬುಲ್ಡೋಜರ್ ರಾಜಕಾರಣ’ಕ್ಕೆ ವಿಪಕ್ಷಗಳಿಂದ ಖಂಡನೆ!

ಸಹಾರನ್‌ಪುರ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಸಹಾರನ್‌ಪುರ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿದ್ದ ಮಸೀದಿಯನ್ನು ಶನಿವಾರ (ಸೆಪ್ಟೆಂಬರ್ 5) ಮುಂಜಾನೆ ಭಾರಿ ಪೊಲೀಸ್ ಭದ್ರತೆಯೊಂದಿಗೆ ಬುಲ್ಡೋಜರ್ ಬಳಸಿ ಧ್ವಂಸಗೊಳಿಸಲಾಗಿದೆ. ಈ ಕಾರ್ಯಾಚರಣೆಗೆ ವ್ಯಾಪಕ ಆಕ್ರೋಶ...

ಗೌರಿ ಹತ್ಯೆಯಾಗಿ 9 ವರ್ಷ : ಹೋರಾಟಗಾರರು-ಒಡನಾಡಿಗಳಿಂದ ಗೌರವ ನಮನ

ದಿಟ್ಟ ಪತ್ರಕರ್ತೆ, ಹೋರಾಟಗಾರ್ತಿ ಗೌರಿ ಲಂಕೇಶ್‌ ಅವರ 9ನೇ ವರ್ಷದ ಹುತಾತ್ಮ ದಿನದ ಅಂಗವಾಗಿ ಇಂದು (ಸೆ.5) ಬೆಳಿಗ್ಗೆ ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಅವರ ಸಮಾಧಿ ಬಳಿ ‘ಗೌರಿ ನಮನ ಕಾರ್ಯಕ್ರಮ‘ ನಡೆಯಿತು. ಗೌರಿ ಅವರ...

ರಾಯಚೂರಿನಲ್ಲಿ ದಲಿತರ ಸರಣಿ ಕೊಲೆ: ಸಂತ್ರಸ್ತರ ಮನೆಗೆ ಸಚಿವ ಕೆ.ಎಚ್. ಮುನಿಯಪ್ಪ ಭೇಟಿ

ರಾಯಚೂರು ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದ ದಲಿತರ ಮೇಲಿನ ಸರಣಿ ದೌರ್ಜನ್ಯ ಮತ್ತು ಕೊಲೆ ಪ್ರಕರಣಗಳು ಜನಾಕ್ರೋಶಕ್ಕೆ ಕಾರಣವಾಗಿವೆ. ಈ ಹಿನ್ನೆಲೆಯಲ್ಲಿ ಸಮಾಜ ಕಲ್ಯಾಣ ಸಚಿವ ಕೆ.ಎಚ್. ಮುನಿಯಪ್ಪ ಅವರು ಜಿಲ್ಲೆಯ ವಿವಿಧ ಗ್ರಾಮಗಳಲ್ಲಿ...