Homeಮುಖಪುಟಸೌದಿ ಅರೇಬಿಯಾದಲ್ಲಿ ಮರಣದಂಡನೆಗೆ ಗುರಿಯಾಗಿದ್ದ ವ್ಯಕ್ತಿ ಬಿಡುಗಡೆಗೆ 40 ದಿನಗಳಲ್ಲಿ ₹34 ಕೋಟಿ ಸಂಗ್ರಹ

ಸೌದಿ ಅರೇಬಿಯಾದಲ್ಲಿ ಮರಣದಂಡನೆಗೆ ಗುರಿಯಾಗಿದ್ದ ವ್ಯಕ್ತಿ ಬಿಡುಗಡೆಗೆ 40 ದಿನಗಳಲ್ಲಿ ₹34 ಕೋಟಿ ಸಂಗ್ರಹ

- Advertisement -
- Advertisement -

ಸೌದಿ ಅರೇಬಿಯಾದಲ್ಲಿ ಮರಣದಂಡನೆಗೆ ಗುರಿಯಾಗಿರುವ ವ್ಯಕ್ತಿಯನ್ನು ಬಿಡುಗಡೆ ಮಾಡಲು ₹34 ಕೋಟಿ ಹಣವನ್ನು 40 ದಿನಗಳಲ್ಲಿ ಸಂಗ್ರಹಿಸಲು ಕೇರಳ ಮತ್ತು ಕರ್ನಾಟಕ ಕರಾವಳಿ ಜಿಲ್ಲೆಗಳ ಧಾರ್ಮಿಕ ಮತ್ತು ರಾಜಕೀಯ ಮುಖಂಡರು ಕೈಜೋಡಿಸಿದ್ದಾರೆ. ಮಾನವೀಯತೆಗಾಗಿ ನಡೆದ ಈ ಅಭಿಯಾನವನ್ನು ‘ನೈಜ ಕೇರಳ ಸ್ಟೋರಿ’ ಎಂದು ಕರೆಯಲಾಗುತ್ತಿದೆ.

ಶುಕ್ರವಾರ ಸಂಜೆ ಹೊತ್ತಿಗೆ ಪೂರ್ಣ ಮೊತ್ತವನ್ನು ಸಂಗ್ರಹಿಸಲಾಗಿದೆ. ಸಾವನ್ನಪ್ಪಿರುವ ಬಾಲಕನ ಕುಟುಂಬಕ್ಕೆ ಸೌದಿ ರಿಯಾಲ್ 15 ಮಿಲಿಯನ್ ಮೌಲ್ಯದ ಹಣವನ್ನು ಪಾವತಿಸಲು ನ್ಯಾಯಾಲಯ ನಿಗದಿಪಡಿಸಿದ ಗಡುವನ್ನು ಪೂರೈಸಲು ಕೇವಲ ಮೂರು ದಿನಗಳು ಮಾತ್ರ ಉಳಿದಿವೆ.

41 ವರ್ಷದ ಅಬ್ದುಲ್ ರಹೀಮ್ 18 ವರ್ಷಗಳ ಹಿಂದೆ ರಿಯಾದ್‌ನ ನ್ಯಾಯಾಲಯದಿಂದ ಮರಣದಂಡನೆಗೆ ಗುರಿಯಾಗಿದ್ದರು. ಇತ್ತೀಚಿಗೆ, ದುಬೈನಲ್ಲಿ ನೆಲೆಸಿರುವ ಕೇರಳದ ವಲಸಿಗರು ಬಾಲಕನ ಕುಟುಂಬಕ್ಕೆ ದಂಡದ ಹಣ (ಅರೇಬಿಕ್‌ನಲ್ಲಿ “ದಿಯಾ”) ಪಡೆದು ಕ್ಷಮಾದಾನ ನೀಡುವಂತೆ ಮನವೊಲಿಸುವಲ್ಲಿ ಯಶಸ್ವಿಯಾಗಿದ್ದಾರೆ, ಏಪ್ರಿಲ್ 15ರ ಮೊದಲು ಹಣ ಪಾವತಿಸಲು ಗಡುವು ನೀಡಲಾಗಿದೆ.

ಸೌದಿ ಅರೇಬಿಯಾಕ್ಕೆ ತೆರಳುವ ಮೊದಲು ಕೋಝಿಕ್ಕೋಡ್‌ನ ಫಿರೋಕ್‌ನಲ್ಲಿ ಆಟೋ ಚಾಲಕನಾಗಿದ್ದ ರಹೀಂ, ದುಬೈನಲ್ಲಿ ತಾನು ಕೆಲಸ ಮಾಡುತ್ತಿದ್ದ ಮಾಲೀಕರ 15 ವರ್ಷದ ಪಾರ್ಶ್ವವಾಯು ಮಗನ ಸಾವಿಗೆ ಕಾರಣನಾದ ಎಂಬ ಆರೋಪ ಇದೆ.

ಬಾಲಕನನ್ನು ನೋಡಿಕೊಳ್ಳುವುದು ಮತ್ತು ಆತ ಹೋಗಬೇಕಾದಲ್ಲೆಲ್ಲಾ ಕಾರಿನಲ್ಲಿ ಓಡಿಸುವುದು ಅವನ ಕೆಲಸವಾಗಿತ್ತು. ಆದರೆ, ರಹೀಂ ಆಕಸ್ಮಿಕವಾಗಿ ಬಾಲಕನ ಕುತ್ತಿಗೆಗೆ ಜೋಡಿಸಲಾದ ವೈದ್ಯಕೀಯ ಸಹಾಯವನ್ನು ಬೀಳಿಸಿದ್ದು, ಬಾಲಕ ಪ್ರಜ್ಞೆ ತಪ್ಪಿ ಬಿದ್ದು ಸಾವನ್ನಪ್ಪಿದ್ದಾನೆ ಎಂಬ ಆರೋಪ ಇದೆ.

2011, 2017, 2022, 2011, 2017 ಮತ್ತು 2022 ರಲ್ಲಿ ಪ್ರತಿ ಬಾರಿ ಮೇಲ್ಮನವಿ ವಿಫಲವಾದಾಗ ವಿಚಾರಣಾ ನ್ಯಾಯಾಲಯವು ಮರಣದಂಡನೆ ಆದೇಶವನ್ನು ನವೀಕರಿಸುತ್ತಲೇ ಬಂದಿದೆ. ಶಿಕ್ಷೆ ರದ್ದುಪಡಿಸುವಂತೆ ಸಲ್ಲಿಕೆಯಾಗಿದ್ದ ಸತತ ಮೇಲ್ಮನವಿಗಳು ರಹೀಂ ಜೀವದಾನಕ್ಕೆ ಈವರೆಗೆ ಸಮಯಾವಕಾಶ ನೀಡಿತು.

ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್‌ನೊಂದಿಗೆ ಹೊಂದಿಕೊಂಡಿರುವ ಸಂಘಟನೆಯಾದ ಕೇರಳ ಮುಸ್ಲಿಂ ಕಲ್ಚರಲ್ ಸೆಂಟರ್‌ನ ಸೌದಿ ಘಟಕದ ಪ್ರಧಾನ ಕಾರ್ಯದರ್ಶಿ ವೆಂಘಾಟ್ ಇತ್ತೀಚೆಗೆ ಕೋಝಿಕ್ಕೋಡ್‌ಗೆ ಆಗಮಿಸಿ ಬಿಜೆಪಿ ಸೇರಿದಂತೆ ಎಲ್ಲ ರಾಜಕೀಯ ಪಕ್ಷಗಳ ಸಹಾಯದಿಂದ ದೇಣಿಗೆ ಅಭಿಯಾನವನ್ನು ಆರಂಭಿಸಿದರು.

“ರಹೀಂನ ಜೀವ ಉಳಿಸಲು ರಚಿಸಲಾದ ಸಮಿತಿಯಲ್ಲಿ ಹಿಂದೂ, ಮುಸ್ಲಿಮರು ಮತ್ತು ಬಿಜೆಪಿ ಸೇರಿದಂತೆ ಎಲ್ಲಾ ರಾಜಕೀಯ ಪಕ್ಷಗಳ ಸದಸ್ಯರು ಇದ್ದಾರೆ” ಎಂದು ವೆಂಘಾಟ್ ಹೇಳಿದರು.

ಸುರೇಶ್ ಎಂಬ ವ್ಯಕ್ತಿ ಕಾನೂನು ನೆರವು ಸಮಿತಿಯ ಅಧ್ಯಕ್ಷರಾಗಿದ್ದು, ಮಾರ್ಚ್ 3 ರಂದು ಕೋಝಿಕ್ಕೋಡ್‌ನಲ್ಲಿ ಸೇವ್ ಅಬ್ದುಲ್ ರಹೀಂ ಮೊಬೈಲ್ ಅಪ್ಲಿಕೇಶನ್ ಅನ್ನು ಬಿಡುಗಡೆ ಮಾಡಿದರು. ವಾಣಿಜ್ಯೋದ್ಯಮಿಗಳು ಮತ್ತು ವ್ಲಾಗರ್‌ಗಳು ಪ್ರಚಾರ ಮಾಡುವ ಮೂಲಕ ಹಣ ಸಂಗ್ರಹಣೆಯ ಅಭಿಯಾನ ವೇಗ ಪಡೆದುಕೊಂಡಿತು. ಶುಕ್ರವಾರ ಸಂಜೆ ಹೊತ್ತಿಗೆ ಅವಶ್ಯಕತೆ ಇರುವ ಹಣ ಸಂಗ್ರಹವಾದ ನಂತರ ಸಮಿತಿಯು ದೇಣಿಗೆ ಅಭಿಯಾನವನ್ನು ಮುಚ್ಚಿದೆ.

ರಹೀಂನ ತಾಯಿ ಪಾತು, ಕೇರಳದ ಜನರ ಸಹಾಯದಿಂದ ಆಕೆಯ ಪ್ರಾರ್ಥನೆಗೆ ಉತ್ತರ ದೊರೆತಾಗ ತನ್ನ ಸಂತೋಷವನ್ನು ವರ್ಣಿಸಲು ಪದಗಳಿಲ್ಲ ಎಂದು ಹೇಳಿದರು.

“ಇಲ್ಲಿನ ಜನರ ನಡುವಿನ ಕೋಮು ಸೌಹಾರ್ದತೆಯು ಇಷ್ಟು ದೊಡ್ಡ ಮೊತ್ತವನ್ನು ಶೀಘ್ರವಾಗಿ ಸಂಗ್ರಹಿಸಲು ಸಹಾಯ ಮಾಡಿತು. ನಾನು ಎಲ್ಲರಿಗೂ ಕೃತಜ್ಞತೆ ಸಲ್ಲಿಸುತ್ತೇನೆ” ಎಂದು ಅವರು ಸುದ್ದಿಗಾರರಿಗೆ ತಿಳಿಸಿದರು.

ರಿಯಾದ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿಗೆ ಹಣವನ್ನು ವರ್ಗಾಯಿಸುವ ಪ್ರಕ್ರಿಯೆಯು ಪ್ರಾರಂಭವಾಗಿದೆ, ಅದರ ಮೂಲಕ ಹಣವನ್ನು ಮೀಸಲಾದ ಮತ್ತು ನ್ಯಾಯಾಲಯದ ಮೇಲ್ವಿಚಾರಣೆಯ ಬ್ಯಾಂಕ್ ಖಾತೆಗೆ ರವಾನೆ ಮಾಡಲಾಗುವುದು ಎಂದು ವೆಂಘಾಟ್ ಹೇಳಿದರು.

“ಒಮ್ಮೆ ಆ ಪ್ರಕ್ರಿಯೆ ಮುಗಿದ ನಂತರ, ನಾವು ಅವರ ಬಿಡುಗಡೆಯನ್ನು ಸುರಕ್ಷಿತವಾಗಿರಿಸಿಕೊಳ್ಳುತ್ತೇವೆ ಎಂದು ನಿರೀಕ್ಷಿಸುತ್ತೇವೆ. ಆದರೆ, ಅದಕ್ಕೆ ಎಷ್ಟು ಸಮಯ ತೆಗೆದುಕೊಳ್ಳುತ್ತದೆ ಎಂದು ನಮಗೆ ತಿಳಿದಿಲ್ಲ” ಎಂದು ವೆಂಗಟ್ ಹೇಳಿದರು.

ಇದನ್ನೂ ಓದಿ; ಲೋಕಸಭೆ ಚುನಾವಣೆ ಪ್ರಜಾಪ್ರಭುತ್ವವನ್ನು ಉಳಿಸಲು ಭಾರತೀಯರಿಗಿರುವ ಕೊನೆಯ ಅವಕಾಶ: ಪಿ.ಚಿದಂಬರಂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪೊಲೀಸ್ ತುರ್ತು ವಾಹನದ ಚಾಲಕ ಸೇರಿ ಐವರಿಂದ ಯುವತಿ ಮೇಲೆ ಅತ್ಯಾಚಾರ!

ಪೊಲೀಸ್ ತುರ್ತು ಸೇವೆ (112) ವಾಹನದ ಚಾಲಕ ಸೇರಿದಂತೆ ಐವರು ಪುರುಷರು 19 ವರ್ಷದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಛತ್ತೀಸ್‌ಗಢದ ಕೋರ್ಬಾ ಜಿಲ್ಲೆಯ ಬಂಕಿಮೊಂಗ್ರ ಪ್ರದೇಶದಲ್ಲಿ ನಡೆದಿದೆ. ಜನವರಿ...

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...