Homeಮುಖಪುಟಸೌದಿ ಅರೇಬಿಯಾದಲ್ಲಿ ಮರಣದಂಡನೆಗೆ ಗುರಿಯಾಗಿದ್ದ ವ್ಯಕ್ತಿ ಬಿಡುಗಡೆಗೆ 40 ದಿನಗಳಲ್ಲಿ ₹34 ಕೋಟಿ ಸಂಗ್ರಹ

ಸೌದಿ ಅರೇಬಿಯಾದಲ್ಲಿ ಮರಣದಂಡನೆಗೆ ಗುರಿಯಾಗಿದ್ದ ವ್ಯಕ್ತಿ ಬಿಡುಗಡೆಗೆ 40 ದಿನಗಳಲ್ಲಿ ₹34 ಕೋಟಿ ಸಂಗ್ರಹ

- Advertisement -
- Advertisement -

ಸೌದಿ ಅರೇಬಿಯಾದಲ್ಲಿ ಮರಣದಂಡನೆಗೆ ಗುರಿಯಾಗಿರುವ ವ್ಯಕ್ತಿಯನ್ನು ಬಿಡುಗಡೆ ಮಾಡಲು ₹34 ಕೋಟಿ ಹಣವನ್ನು 40 ದಿನಗಳಲ್ಲಿ ಸಂಗ್ರಹಿಸಲು ಕೇರಳ ಮತ್ತು ಕರ್ನಾಟಕ ಕರಾವಳಿ ಜಿಲ್ಲೆಗಳ ಧಾರ್ಮಿಕ ಮತ್ತು ರಾಜಕೀಯ ಮುಖಂಡರು ಕೈಜೋಡಿಸಿದ್ದಾರೆ. ಮಾನವೀಯತೆಗಾಗಿ ನಡೆದ ಈ ಅಭಿಯಾನವನ್ನು ‘ನೈಜ ಕೇರಳ ಸ್ಟೋರಿ’ ಎಂದು ಕರೆಯಲಾಗುತ್ತಿದೆ.

ಶುಕ್ರವಾರ ಸಂಜೆ ಹೊತ್ತಿಗೆ ಪೂರ್ಣ ಮೊತ್ತವನ್ನು ಸಂಗ್ರಹಿಸಲಾಗಿದೆ. ಸಾವನ್ನಪ್ಪಿರುವ ಬಾಲಕನ ಕುಟುಂಬಕ್ಕೆ ಸೌದಿ ರಿಯಾಲ್ 15 ಮಿಲಿಯನ್ ಮೌಲ್ಯದ ಹಣವನ್ನು ಪಾವತಿಸಲು ನ್ಯಾಯಾಲಯ ನಿಗದಿಪಡಿಸಿದ ಗಡುವನ್ನು ಪೂರೈಸಲು ಕೇವಲ ಮೂರು ದಿನಗಳು ಮಾತ್ರ ಉಳಿದಿವೆ.

41 ವರ್ಷದ ಅಬ್ದುಲ್ ರಹೀಮ್ 18 ವರ್ಷಗಳ ಹಿಂದೆ ರಿಯಾದ್‌ನ ನ್ಯಾಯಾಲಯದಿಂದ ಮರಣದಂಡನೆಗೆ ಗುರಿಯಾಗಿದ್ದರು. ಇತ್ತೀಚಿಗೆ, ದುಬೈನಲ್ಲಿ ನೆಲೆಸಿರುವ ಕೇರಳದ ವಲಸಿಗರು ಬಾಲಕನ ಕುಟುಂಬಕ್ಕೆ ದಂಡದ ಹಣ (ಅರೇಬಿಕ್‌ನಲ್ಲಿ “ದಿಯಾ”) ಪಡೆದು ಕ್ಷಮಾದಾನ ನೀಡುವಂತೆ ಮನವೊಲಿಸುವಲ್ಲಿ ಯಶಸ್ವಿಯಾಗಿದ್ದಾರೆ, ಏಪ್ರಿಲ್ 15ರ ಮೊದಲು ಹಣ ಪಾವತಿಸಲು ಗಡುವು ನೀಡಲಾಗಿದೆ.

ಸೌದಿ ಅರೇಬಿಯಾಕ್ಕೆ ತೆರಳುವ ಮೊದಲು ಕೋಝಿಕ್ಕೋಡ್‌ನ ಫಿರೋಕ್‌ನಲ್ಲಿ ಆಟೋ ಚಾಲಕನಾಗಿದ್ದ ರಹೀಂ, ದುಬೈನಲ್ಲಿ ತಾನು ಕೆಲಸ ಮಾಡುತ್ತಿದ್ದ ಮಾಲೀಕರ 15 ವರ್ಷದ ಪಾರ್ಶ್ವವಾಯು ಮಗನ ಸಾವಿಗೆ ಕಾರಣನಾದ ಎಂಬ ಆರೋಪ ಇದೆ.

ಬಾಲಕನನ್ನು ನೋಡಿಕೊಳ್ಳುವುದು ಮತ್ತು ಆತ ಹೋಗಬೇಕಾದಲ್ಲೆಲ್ಲಾ ಕಾರಿನಲ್ಲಿ ಓಡಿಸುವುದು ಅವನ ಕೆಲಸವಾಗಿತ್ತು. ಆದರೆ, ರಹೀಂ ಆಕಸ್ಮಿಕವಾಗಿ ಬಾಲಕನ ಕುತ್ತಿಗೆಗೆ ಜೋಡಿಸಲಾದ ವೈದ್ಯಕೀಯ ಸಹಾಯವನ್ನು ಬೀಳಿಸಿದ್ದು, ಬಾಲಕ ಪ್ರಜ್ಞೆ ತಪ್ಪಿ ಬಿದ್ದು ಸಾವನ್ನಪ್ಪಿದ್ದಾನೆ ಎಂಬ ಆರೋಪ ಇದೆ.

2011, 2017, 2022, 2011, 2017 ಮತ್ತು 2022 ರಲ್ಲಿ ಪ್ರತಿ ಬಾರಿ ಮೇಲ್ಮನವಿ ವಿಫಲವಾದಾಗ ವಿಚಾರಣಾ ನ್ಯಾಯಾಲಯವು ಮರಣದಂಡನೆ ಆದೇಶವನ್ನು ನವೀಕರಿಸುತ್ತಲೇ ಬಂದಿದೆ. ಶಿಕ್ಷೆ ರದ್ದುಪಡಿಸುವಂತೆ ಸಲ್ಲಿಕೆಯಾಗಿದ್ದ ಸತತ ಮೇಲ್ಮನವಿಗಳು ರಹೀಂ ಜೀವದಾನಕ್ಕೆ ಈವರೆಗೆ ಸಮಯಾವಕಾಶ ನೀಡಿತು.

ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್‌ನೊಂದಿಗೆ ಹೊಂದಿಕೊಂಡಿರುವ ಸಂಘಟನೆಯಾದ ಕೇರಳ ಮುಸ್ಲಿಂ ಕಲ್ಚರಲ್ ಸೆಂಟರ್‌ನ ಸೌದಿ ಘಟಕದ ಪ್ರಧಾನ ಕಾರ್ಯದರ್ಶಿ ವೆಂಘಾಟ್ ಇತ್ತೀಚೆಗೆ ಕೋಝಿಕ್ಕೋಡ್‌ಗೆ ಆಗಮಿಸಿ ಬಿಜೆಪಿ ಸೇರಿದಂತೆ ಎಲ್ಲ ರಾಜಕೀಯ ಪಕ್ಷಗಳ ಸಹಾಯದಿಂದ ದೇಣಿಗೆ ಅಭಿಯಾನವನ್ನು ಆರಂಭಿಸಿದರು.

“ರಹೀಂನ ಜೀವ ಉಳಿಸಲು ರಚಿಸಲಾದ ಸಮಿತಿಯಲ್ಲಿ ಹಿಂದೂ, ಮುಸ್ಲಿಮರು ಮತ್ತು ಬಿಜೆಪಿ ಸೇರಿದಂತೆ ಎಲ್ಲಾ ರಾಜಕೀಯ ಪಕ್ಷಗಳ ಸದಸ್ಯರು ಇದ್ದಾರೆ” ಎಂದು ವೆಂಘಾಟ್ ಹೇಳಿದರು.

ಸುರೇಶ್ ಎಂಬ ವ್ಯಕ್ತಿ ಕಾನೂನು ನೆರವು ಸಮಿತಿಯ ಅಧ್ಯಕ್ಷರಾಗಿದ್ದು, ಮಾರ್ಚ್ 3 ರಂದು ಕೋಝಿಕ್ಕೋಡ್‌ನಲ್ಲಿ ಸೇವ್ ಅಬ್ದುಲ್ ರಹೀಂ ಮೊಬೈಲ್ ಅಪ್ಲಿಕೇಶನ್ ಅನ್ನು ಬಿಡುಗಡೆ ಮಾಡಿದರು. ವಾಣಿಜ್ಯೋದ್ಯಮಿಗಳು ಮತ್ತು ವ್ಲಾಗರ್‌ಗಳು ಪ್ರಚಾರ ಮಾಡುವ ಮೂಲಕ ಹಣ ಸಂಗ್ರಹಣೆಯ ಅಭಿಯಾನ ವೇಗ ಪಡೆದುಕೊಂಡಿತು. ಶುಕ್ರವಾರ ಸಂಜೆ ಹೊತ್ತಿಗೆ ಅವಶ್ಯಕತೆ ಇರುವ ಹಣ ಸಂಗ್ರಹವಾದ ನಂತರ ಸಮಿತಿಯು ದೇಣಿಗೆ ಅಭಿಯಾನವನ್ನು ಮುಚ್ಚಿದೆ.

ರಹೀಂನ ತಾಯಿ ಪಾತು, ಕೇರಳದ ಜನರ ಸಹಾಯದಿಂದ ಆಕೆಯ ಪ್ರಾರ್ಥನೆಗೆ ಉತ್ತರ ದೊರೆತಾಗ ತನ್ನ ಸಂತೋಷವನ್ನು ವರ್ಣಿಸಲು ಪದಗಳಿಲ್ಲ ಎಂದು ಹೇಳಿದರು.

“ಇಲ್ಲಿನ ಜನರ ನಡುವಿನ ಕೋಮು ಸೌಹಾರ್ದತೆಯು ಇಷ್ಟು ದೊಡ್ಡ ಮೊತ್ತವನ್ನು ಶೀಘ್ರವಾಗಿ ಸಂಗ್ರಹಿಸಲು ಸಹಾಯ ಮಾಡಿತು. ನಾನು ಎಲ್ಲರಿಗೂ ಕೃತಜ್ಞತೆ ಸಲ್ಲಿಸುತ್ತೇನೆ” ಎಂದು ಅವರು ಸುದ್ದಿಗಾರರಿಗೆ ತಿಳಿಸಿದರು.

ರಿಯಾದ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿಗೆ ಹಣವನ್ನು ವರ್ಗಾಯಿಸುವ ಪ್ರಕ್ರಿಯೆಯು ಪ್ರಾರಂಭವಾಗಿದೆ, ಅದರ ಮೂಲಕ ಹಣವನ್ನು ಮೀಸಲಾದ ಮತ್ತು ನ್ಯಾಯಾಲಯದ ಮೇಲ್ವಿಚಾರಣೆಯ ಬ್ಯಾಂಕ್ ಖಾತೆಗೆ ರವಾನೆ ಮಾಡಲಾಗುವುದು ಎಂದು ವೆಂಘಾಟ್ ಹೇಳಿದರು.

“ಒಮ್ಮೆ ಆ ಪ್ರಕ್ರಿಯೆ ಮುಗಿದ ನಂತರ, ನಾವು ಅವರ ಬಿಡುಗಡೆಯನ್ನು ಸುರಕ್ಷಿತವಾಗಿರಿಸಿಕೊಳ್ಳುತ್ತೇವೆ ಎಂದು ನಿರೀಕ್ಷಿಸುತ್ತೇವೆ. ಆದರೆ, ಅದಕ್ಕೆ ಎಷ್ಟು ಸಮಯ ತೆಗೆದುಕೊಳ್ಳುತ್ತದೆ ಎಂದು ನಮಗೆ ತಿಳಿದಿಲ್ಲ” ಎಂದು ವೆಂಗಟ್ ಹೇಳಿದರು.

ಇದನ್ನೂ ಓದಿ; ಲೋಕಸಭೆ ಚುನಾವಣೆ ಪ್ರಜಾಪ್ರಭುತ್ವವನ್ನು ಉಳಿಸಲು ಭಾರತೀಯರಿಗಿರುವ ಕೊನೆಯ ಅವಕಾಶ: ಪಿ.ಚಿದಂಬರಂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳದ ಪ್ರವಾಸೋದ್ಯಮ ಜಾಹೀರಾತಿನಲ್ಲಿ ಐಫೆಲ್ ಟವರ್, ಈಜಿಪ್ಟ್ ಪಿರಮಿಡ್: ಆದರೆ ಬಂಗಾಳವೇ ನಾಪತ್ತೆ!

ಪಶ್ಚಿಮ ಬಂಗಾಳವನ್ನು ಜಾಗತಿಕ ಪ್ರವಾಸೋದ್ಯಮ ಭೂಪಟದಲ್ಲಿ ಮುನ್ನೆಲೆಗೆ ತರುವ ಉದ್ದೇಶದಿಂದ ಬಿಡುಗಡೆ ಮಾಡಲಾದ ರಾಜ್ಯದ ಹೊಸ ಪ್ರವಾಸೋದ್ಯಮ ಜಾಹೀರಾತು ಈಗ ತೀವ್ರ ಟೀಕೆ ಹಾಗೂ ಅಪಹಾಸ್ಯಕ್ಕೆ ಈಡಾಗಿದೆ. ಈ ಜಾಹೀರಾತನ್ನು ಒಮ್ಮೆ ಗಮನಿಸಿದರೆ...

ಅಮೆರಿಕದಲ್ಲಿ ಮೋಹನ್‌ ಭಾಗವತ್ ಸೌಹಾರ್ದತೆ ಮಾತು; ಮಹಾರಾಷ್ಟ್ರದ ಗಾರ್ಬಾ-ದಾಂಡಿಯಾ ಕಾರ್ಯಕ್ರಮಗಳಲ್ಲಿ ಮುಸ್ಲಿಮರಿಗೆ ನಿಷೇಧ ಹೇರಿದ ವಿಎಚ್‌ಪಿ

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರು ನ್ಯೂಯಾರ್ಕ್‌ನಲ್ಲಿ ಮಾಡಿದ ಭಾಷಣದಲ್ಲಿ ಧಾರ್ಮಿಕ ಸೌಹಾರ್ದತೆ, ಪರಸ್ಪರ ಗೌರವ ಮತ್ತು ಪ್ರತಿಯೊಂದು ಸಮುದಾಯದ ಗುರುತಿನ ರಕ್ಷಣೆ ಕುರಿತು ಮಾತನಾಡಿದ ಕೆಲವೇ ದಿನಗಳ...

ಸೈಬರ್ ವಂಚನೆಗೊಳಗಾದ ಸಂತ್ರಸ್ತರಿಗೆ ನೆರವು: ಕರ್ನಾಟಕದಲ್ಲಿ ಶೀಘ್ರವೇ ‘ಇ-ಶೂನ್ಯ ಎಫ್‌ಐಆರ್’ ಜಾರಿ

ಸೈಬರ್ ವಂಚನೆಗೊಳಗಾದ ಸಂತ್ರಸ್ತರು ಇನ್ನು ಮುಂದೆ ದೂರು ದಾಖಲಿಸಲು ಪೊಲೀಸ್ ಠಾಣೆಗಳಿಗೆ ಅಲೆಯಬೇಕಿಲ್ಲ. ಸೈಬರ್ ಅಪರಾಧ ಪ್ರಕರಣಗಳ ಎಫ್‌ಐಆರ್ ದಾಖಲಾತಿಯನ್ನು ಚುರುಕುಗೊಳಿಸುವ ಹಾಗೂ ಜನಸ್ನೇಹಿಯಾಗಿಸುವ ಉದ್ದೇಶದಿಂದ ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರ...

ತಲೆ ಮರೆಸಿಕೊಂಡಿದ್ದ ಸ್ವತಂತ್ರ ಭಾರದ್ವಾಜ್‌ ಅರೆಸ್ಟ್ : ಪೋಕ್ಸೋ ಅಡಿ ಮತ್ತೊಂದು ಪ್ರಕರಣ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಜುಲೈನಲ್ಲಿ ನಡೆದ ಸಿಜೆಪಿ ಪ್ರತಿಭಟನೆ ವೇಳೆ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಝಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪ ಹೊತ್ತಿರುವ ಹಿಂದುತ್ವ ಸೋಶಿಯಲ್ ಮೀಡಿಯಾ 'ಇನ್‌ಫ್ಲುಯೆನ್ಸರ್' ಸ್ವತಂತ್ರ...

ಆರ್‌ಎಸ್ಎಸ್ ಬೆಂಬಲಿತ ಗುಂಪುಗಳಿಂದ ದೇಣಿಗೆ ಸ್ವೀಕರಿಸದಿರಲು ಅಮೆರಿಕದ ರಾಜಕಾರಣಿಗಳಿಂದ ಪ್ರತಿಜ್ಞೆ

ಅಮೆರಿಕದ ಸುಮಾರು 90 ಜನಪ್ರತಿನಿಧಿಗಳು ಮತ್ತು ರಾಜಕೀಯ ಅಭ್ಯರ್ಥಿಗಳು ರಾಷ್ಟ್ರೀಯ ಸ್ವಯಂಸೇವಕ ಸಂಘಕ್ಕೆ (RSS) ಬೆಂಬಲಿತ ಗುಂಪುಗಳಿಂದ ರಾಜಕೀಯ ದೇಣಿಗೆಗಳನ್ನು ಸ್ವೀಕರಿಸುವುದಿಲ್ಲ ಎಂದು ಪ್ರತಿಜ್ಞೆ ಮಾಡಿದ್ದಾರೆ. ಹಿಂದುತ್ವ ಸಂಘಟನೆಯ ಮುಖ್ಯಸ್ಥ ಮೋಹನ್ ಭಾಗವತ್...

KPSC ಪರೀಕ್ಷಾ ಅಕ್ರಮ: ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ, ರಾಜಕೀಯ ಪಕ್ಷ ನೋಡದೆ ನಿರ್ದಾಕ್ಷಿಣ್ಯ ಕ್ರಮ – ಸಚಿವ ಪ್ರಿಯಾಂಕ್ ಖರ್ಗೆ

ಕೆಪಿಎಸ್‌ಸಿ (KPSC) ಪರೀಕ್ಷಾ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಅತ್ಯಂತ ಗಂಭೀರವಾಗಿದ್ದು, ಇದರಲ್ಲಿ ಭಾಗಿಯಾಗಿರುವ ಯಾರನ್ನೇ ಆಗಲಿ ರಕ್ಷಿಸುವ ಪ್ರಶ್ನೆಯೇ ಇಲ್ಲ. ಆರೋಪಿಗಳು ಎಷ್ಟೇ ಪ್ರಭಾವಶಾಲಿಗಳಾಗಿದ್ದರೂ ಅಥವಾ ಯಾವುದೇ ರಾಜಕೀಯ ಪಕ್ಷಕ್ಕೆ...

ಉತ್ತರ ಪ್ರದೇಶ: ಸಹಾರನ್‌ಪುರ ಕಲೆಕ್ಟರೇಟ್ ಮಸೀದಿ ಧ್ವಂಸ, ‘ಬುಲ್ಡೋಜರ್ ರಾಜಕಾರಣ’ಕ್ಕೆ ವಿಪಕ್ಷಗಳಿಂದ ಖಂಡನೆ!

ಸಹಾರನ್‌ಪುರ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಸಹಾರನ್‌ಪುರ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿದ್ದ ಮಸೀದಿಯನ್ನು ಶನಿವಾರ (ಸೆಪ್ಟೆಂಬರ್ 5) ಮುಂಜಾನೆ ಭಾರಿ ಪೊಲೀಸ್ ಭದ್ರತೆಯೊಂದಿಗೆ ಬುಲ್ಡೋಜರ್ ಬಳಸಿ ಧ್ವಂಸಗೊಳಿಸಲಾಗಿದೆ. ಈ ಕಾರ್ಯಾಚರಣೆಗೆ ವ್ಯಾಪಕ ಆಕ್ರೋಶ...

ಗೌರಿ ಹತ್ಯೆಯಾಗಿ 9 ವರ್ಷ : ಹೋರಾಟಗಾರರು-ಒಡನಾಡಿಗಳಿಂದ ಗೌರವ ನಮನ

ದಿಟ್ಟ ಪತ್ರಕರ್ತೆ, ಹೋರಾಟಗಾರ್ತಿ ಗೌರಿ ಲಂಕೇಶ್‌ ಅವರ 9ನೇ ವರ್ಷದ ಹುತಾತ್ಮ ದಿನದ ಅಂಗವಾಗಿ ಇಂದು (ಸೆ.5) ಬೆಳಿಗ್ಗೆ ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಅವರ ಸಮಾಧಿ ಬಳಿ ‘ಗೌರಿ ನಮನ ಕಾರ್ಯಕ್ರಮ‘ ನಡೆಯಿತು. ಗೌರಿ ಅವರ...

ರಾಯಚೂರಿನಲ್ಲಿ ದಲಿತರ ಸರಣಿ ಕೊಲೆ: ಸಂತ್ರಸ್ತರ ಮನೆಗೆ ಸಚಿವ ಕೆ.ಎಚ್. ಮುನಿಯಪ್ಪ ಭೇಟಿ

ರಾಯಚೂರು ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದ ದಲಿತರ ಮೇಲಿನ ಸರಣಿ ದೌರ್ಜನ್ಯ ಮತ್ತು ಕೊಲೆ ಪ್ರಕರಣಗಳು ಜನಾಕ್ರೋಶಕ್ಕೆ ಕಾರಣವಾಗಿವೆ. ಈ ಹಿನ್ನೆಲೆಯಲ್ಲಿ ಸಮಾಜ ಕಲ್ಯಾಣ ಸಚಿವ ಕೆ.ಎಚ್. ಮುನಿಯಪ್ಪ ಅವರು ಜಿಲ್ಲೆಯ ವಿವಿಧ ಗ್ರಾಮಗಳಲ್ಲಿ...

ಪೆಂಗ್ವಿನ್ ಇಂಡಿಯಾ ಹಿಂದೆ ಸರಿದ ನಂತರ ಸೋನಿಯಾ ಗಾಂಧಿ ಅವರ ಆತ್ಮಚರಿತ್ರೆ ‘ಬಿಲಾಂಗಿಂಗ್’ ಅನ್ನು ಪ್ರಕಟಿಸಲಿರುವ ‘ಹಾರ್ಪರ್‌ಕಾಲಿನ್ಸ್’ 

ನವದೆಹಲಿ: ಕಾಂಗ್ರೆಸ್‌ನ ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರ ಬಹುನಿರೀಕ್ಷಿತ ಆತ್ಮಚರಿತ್ರೆ ‘ಬಿಲಾಂಗಿಂಗ್: ಎ ಜರ್ನಿ ಆಫ್ ಲವ್’ ಇದೀಗ ಭಾರತದಲ್ಲಿ ಹಾರ್ಪರ್‌ಕಾಲಿನ್ಸ್ ಇಂಡಿಯಾ ಮೂಲಕ ಪ್ರಕಟವಾಗಲಿದೆ. ಪೆಂಗ್ವಿನ್ ರ‍್ಯಾಂಡಮ್ ಹೌಸ್ ಇಂಡಿಯಾ...