Homeಮುಖಪುಟಬಡ ಕುಟುಂಬಕ್ಕೆ ವಾರ್ಷಿಕ ₹1 ಲಕ್ಷ, 1 ಕೋಟಿ ಸರ್ಕಾರಿ ಉದ್ಯೋಗ: ಆರ್‌ಜೆಡಿ ಭರವಸೆ

ಬಡ ಕುಟುಂಬಕ್ಕೆ ವಾರ್ಷಿಕ ₹1 ಲಕ್ಷ, 1 ಕೋಟಿ ಸರ್ಕಾರಿ ಉದ್ಯೋಗ: ಆರ್‌ಜೆಡಿ ಭರವಸೆ

- Advertisement -
- Advertisement -

ಬಿಹಾರದ ಮಹಾಘಟಬಂಧನ್‌ನ ಅತಿದೊಡ್ಡ ಪಕ್ಷವಾಗಿರುವ ಆರ್‌ಜೆಡಿ ಶನಿವಾರ ಲೋಕಸಭೆ ಚುನಾವಣೆಗೆ ತನ್ನ ಚುನಾವಣಾ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದ್ದು, ರಕ್ಷಾ ಬಂಧನದಂದು ಬಡ ಕುಟುಂಬಗಳ ಸಹೋದರಿಯರಿಗೆ ವರ್ಷಕ್ಕೆ ₹1 ಲಕ್ಷ ಮತ್ತು ಪ್ರತಿ ವರ್ಷ 1 ಕೋಟಿ ಸರ್ಕಾರಿ ಉದ್ಯೋಗ ಸೃಷ್ಟಿ ಭರವಸೆ ನೀಡಿದೆ.

ಮಾಜಿ ಉಪಮುಖ್ಯಮಂತ್ರಿ ತೇಜಸ್ವಿ ಯಾದವ್, ಆರ್‌ಜೆಡಿಯ ಚುನಾವಣಾ ಪ್ರಣಾಳಿಕೆ ‘ಪರಿವರ್ತನ್ ಪತ್ರ’ವನ್ನು ಬಿಡುಗಡೆ ಮಾಡಿ, “2024ರ ಚುನಾವಣೆಗೆ ಪಕ್ಷವು 24 ‘ಜನ ವಚನ’ಗಳನ್ನು ಘೋಷಣೆ ಮಾಡುತ್ತಿದೆ; ಪಕ್ಷವು ನಮ್ಮ ಬದ್ಧತೆಯನ್ನು ಪೂರೈಸುತ್ತದೆ” ಎಂದು ಹೇಳಿದರು.

“ಇಂಡಿಯಾ ಬಣವು ಕೇಂದ್ರದಲ್ಲಿ ಅಧಿಕಾರಕ್ಕೆ ಬಂದರೆ, ಆರ್‌ಜೆಡಿ ದೇಶಾದ್ಯಂತ ನಿರುದ್ಯೋಗಿ ಯುವಕರಿಗೆ 1 ಕೋಟಿ ಸರ್ಕಾರಿ ಉದ್ಯೋಗಗಳನ್ನು ಪಡೆಯುವುದನ್ನು ಖಾತ್ರಿಪಡಿಸುತ್ತದೆ. ಈ ಪ್ರಕ್ರಿಯೆಯು ಈ ವರ್ಷದ ಸ್ವಾತಂತ್ರ್ಯ ದಿನದಂದು ಪ್ರಾರಂಭವಾಗಲಿದೆ. ಅದು ‘ಬೆರೋಜ್‌ಗಾರಿ ಸೆ ಆಜಾದಿ’ಯಂತಿರುತ್ತದೆ” ಸುದ್ದಿಗಾರರಿಗೆ ತಿಳಿಸಿದರು.

“ನಿರುದ್ಯೋಗ ನಮ್ಮ ದೊಡ್ಡ ಶತ್ರು ಆದರೆ ಬಿಜೆಪಿ ನಾಯಕರು ಅದರ ಬಗ್ಗೆ ಎಂದಿಗೂ ಮಾತನಾಡುವುದಿಲ್ಲ. ಅವರು 2 ಕೋಟಿ ಉದ್ಯೋಗಗಳ ಭರವಸೆ ನೀಡಿದ್ದರು … ಆದರೆ ನಾವು ನಮ್ಮ ಭರವಸೆಗಳನ್ನು ಈಡೇರಿಸುತ್ತೇವೆ” ಎಂದು ಅವರು ಹೇಳಿದರು.

“ಈ ವರ್ಷದ ರಕ್ಷಾ ಬಂಧನದ ಸಂದರ್ಭದಲ್ಲಿ, ನಾವು ಬಡ ಕುಟುಂಬಗಳಿಗೆ ಸೇರಿದ ನಮ್ಮ ಸಹೋದರಿಯರಿಗೆ ವಾರ್ಷಿಕವಾಗಿ 1 ಲಕ್ಷ ರೂಪಾಯಿಗಳನ್ನು ನೀಡಲು ಪ್ರಾರಂಭಿಸುತ್ತೇವೆ” ಎಂದು ಆರ್‌ಜೆಡಿ ನಾಯಕ ಹೇಳಿದರು.

ಪ್ರಣಾಳಿಕೆಯಲ್ಲಿ ಸರ್ಕಾರಿ ನೌಕರರಿಗೆ ಹಳೆಯ ಪಿಂಚಣಿ ಯೋಜನೆ ಮತ್ತು ಎಲ್‌ಪಿಜಿ ಸಿಲಿಂಡರ್‌ಗಳನ್ನು ₹500 ಕ್ಕೆ ನೀಡುವುದಾಗಿ ಭರವಸೆ ನೀಡಲಾಯಿತು.

“ಬಿಹಾರದಲ್ಲಿ ಉತ್ತಮ ಸಂಪರ್ಕಕ್ಕಾಗಿ, ನಾವು ಪೂರ್ಣಿಯಾ, ಭಾಗಲ್ಪುರ್, ಮುಜಾಫರ್‌ಪುರ, ಗೋಪಾಲ್‌ಗಂಜ್ ಮತ್ತು ರಕ್ಸಾಲ್‌ನಲ್ಲಿ ಐದು ಹೊಸ ವಿಮಾನ ನಿಲ್ದಾಣಗಳನ್ನು ನಿರ್ಮಿಸುತ್ತೇವೆ. ಜೊತೆಗೆ, ರಾಜ್ಯದ ಸಮಗ್ರ ಅಭಿವೃದ್ಧಿಗಾಗಿ ₹1.60 ಲಕ್ಷ ಕೋಟಿ ವಿಶೇಷ ಪ್ಯಾಕೇಜ್ ಅನ್ನು ಮಂಜೂರು ಮಾಡುತ್ತೇವೆ. ತಿಂಗಳಿಗೆ ಉಚಿತ ವಿದ್ಯುತ್ ನೀಡಲಾಗುವುದು, ಬಿಹಾರದ ಜನರು ಸಹ 200 ಯೂನಿಟ್ ಪಡೆಯುತ್ತಾರೆ” ಎಂದು ಹೇಳಿದರು.

ಕೇಂದ್ರದಲ್ಲಿ ಇಂಡಿಯಾ ಬಣ ಅಧಿಕಾರಕ್ಕೆ ಬಂದರೆ ಸಶಸ್ತ್ರ ಪಡೆಗಳಲ್ಲಿ ಗುತ್ತಿಗೆ ಉದ್ಯೋಗದ ಅಗ್ನಿವೀರ್ ಯೋಜನೆಯನ್ನು ಸ್ಥಗಿತಗೊಳಿಸಲಾಗುವುದು ಎಂದು ಭರಚಸೆ ನೀಡಿದ್ದಾರೆ.

ಇದನ್ನೂ ಓದಿ; ಹೇಮಂತ್ ಸೊರೆನ್ ಬಂಧನ ಖಂಡಿಸಿ ಪ್ರತಿಭಟಿಸಿದ ಆದಿವಾಸಿಗಳ ವಿರುದ್ಧ ಎಫ್‌ಐಆರ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳದ ಪ್ರವಾಸೋದ್ಯಮ ಜಾಹೀರಾತಿನಲ್ಲಿ ಐಫೆಲ್ ಟವರ್, ಈಜಿಪ್ಟ್ ಪಿರಮಿಡ್: ಆದರೆ ಬಂಗಾಳವೇ ನಾಪತ್ತೆ!

ಪಶ್ಚಿಮ ಬಂಗಾಳವನ್ನು ಜಾಗತಿಕ ಪ್ರವಾಸೋದ್ಯಮ ಭೂಪಟದಲ್ಲಿ ಮುನ್ನೆಲೆಗೆ ತರುವ ಉದ್ದೇಶದಿಂದ ಬಿಡುಗಡೆ ಮಾಡಲಾದ ರಾಜ್ಯದ ಹೊಸ ಪ್ರವಾಸೋದ್ಯಮ ಜಾಹೀರಾತು ಈಗ ತೀವ್ರ ಟೀಕೆ ಹಾಗೂ ಅಪಹಾಸ್ಯಕ್ಕೆ ಈಡಾಗಿದೆ. ಈ ಜಾಹೀರಾತನ್ನು ಒಮ್ಮೆ ಗಮನಿಸಿದರೆ...

ಅಮೆರಿಕದಲ್ಲಿ ಮೋಹನ್‌ ಭಾಗವತ್ ಸೌಹಾರ್ದತೆ ಮಾತು; ಮಹಾರಾಷ್ಟ್ರದ ಗಾರ್ಬಾ-ದಾಂಡಿಯಾ ಕಾರ್ಯಕ್ರಮಗಳಲ್ಲಿ ಮುಸ್ಲಿಮರಿಗೆ ನಿಷೇಧ ಹೇರಿದ ವಿಎಚ್‌ಪಿ

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರು ನ್ಯೂಯಾರ್ಕ್‌ನಲ್ಲಿ ಮಾಡಿದ ಭಾಷಣದಲ್ಲಿ ಧಾರ್ಮಿಕ ಸೌಹಾರ್ದತೆ, ಪರಸ್ಪರ ಗೌರವ ಮತ್ತು ಪ್ರತಿಯೊಂದು ಸಮುದಾಯದ ಗುರುತಿನ ರಕ್ಷಣೆ ಕುರಿತು ಮಾತನಾಡಿದ ಕೆಲವೇ ದಿನಗಳ...

ಸೈಬರ್ ವಂಚನೆಗೊಳಗಾದ ಸಂತ್ರಸ್ತರಿಗೆ ನೆರವು: ಕರ್ನಾಟಕದಲ್ಲಿ ಶೀಘ್ರವೇ ‘ಇ-ಶೂನ್ಯ ಎಫ್‌ಐಆರ್’ ಜಾರಿ

ಸೈಬರ್ ವಂಚನೆಗೊಳಗಾದ ಸಂತ್ರಸ್ತರು ಇನ್ನು ಮುಂದೆ ದೂರು ದಾಖಲಿಸಲು ಪೊಲೀಸ್ ಠಾಣೆಗಳಿಗೆ ಅಲೆಯಬೇಕಿಲ್ಲ. ಸೈಬರ್ ಅಪರಾಧ ಪ್ರಕರಣಗಳ ಎಫ್‌ಐಆರ್ ದಾಖಲಾತಿಯನ್ನು ಚುರುಕುಗೊಳಿಸುವ ಹಾಗೂ ಜನಸ್ನೇಹಿಯಾಗಿಸುವ ಉದ್ದೇಶದಿಂದ ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರ...

ತಲೆ ಮರೆಸಿಕೊಂಡಿದ್ದ ಸ್ವತಂತ್ರ ಭಾರದ್ವಾಜ್‌ ಅರೆಸ್ಟ್ : ಪೋಕ್ಸೋ ಅಡಿ ಮತ್ತೊಂದು ಪ್ರಕರಣ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಜುಲೈನಲ್ಲಿ ನಡೆದ ಸಿಜೆಪಿ ಪ್ರತಿಭಟನೆ ವೇಳೆ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಝಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪ ಹೊತ್ತಿರುವ ಹಿಂದುತ್ವ ಸೋಶಿಯಲ್ ಮೀಡಿಯಾ 'ಇನ್‌ಫ್ಲುಯೆನ್ಸರ್' ಸ್ವತಂತ್ರ...

ಆರ್‌ಎಸ್ಎಸ್ ಬೆಂಬಲಿತ ಗುಂಪುಗಳಿಂದ ದೇಣಿಗೆ ಸ್ವೀಕರಿಸದಿರಲು ಅಮೆರಿಕದ ರಾಜಕಾರಣಿಗಳಿಂದ ಪ್ರತಿಜ್ಞೆ

ಅಮೆರಿಕದ ಸುಮಾರು 90 ಜನಪ್ರತಿನಿಧಿಗಳು ಮತ್ತು ರಾಜಕೀಯ ಅಭ್ಯರ್ಥಿಗಳು ರಾಷ್ಟ್ರೀಯ ಸ್ವಯಂಸೇವಕ ಸಂಘಕ್ಕೆ (RSS) ಬೆಂಬಲಿತ ಗುಂಪುಗಳಿಂದ ರಾಜಕೀಯ ದೇಣಿಗೆಗಳನ್ನು ಸ್ವೀಕರಿಸುವುದಿಲ್ಲ ಎಂದು ಪ್ರತಿಜ್ಞೆ ಮಾಡಿದ್ದಾರೆ. ಹಿಂದುತ್ವ ಸಂಘಟನೆಯ ಮುಖ್ಯಸ್ಥ ಮೋಹನ್ ಭಾಗವತ್...

KPSC ಪರೀಕ್ಷಾ ಅಕ್ರಮ: ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ, ರಾಜಕೀಯ ಪಕ್ಷ ನೋಡದೆ ನಿರ್ದಾಕ್ಷಿಣ್ಯ ಕ್ರಮ – ಸಚಿವ ಪ್ರಿಯಾಂಕ್ ಖರ್ಗೆ

ಕೆಪಿಎಸ್‌ಸಿ (KPSC) ಪರೀಕ್ಷಾ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಅತ್ಯಂತ ಗಂಭೀರವಾಗಿದ್ದು, ಇದರಲ್ಲಿ ಭಾಗಿಯಾಗಿರುವ ಯಾರನ್ನೇ ಆಗಲಿ ರಕ್ಷಿಸುವ ಪ್ರಶ್ನೆಯೇ ಇಲ್ಲ. ಆರೋಪಿಗಳು ಎಷ್ಟೇ ಪ್ರಭಾವಶಾಲಿಗಳಾಗಿದ್ದರೂ ಅಥವಾ ಯಾವುದೇ ರಾಜಕೀಯ ಪಕ್ಷಕ್ಕೆ...

ಉತ್ತರ ಪ್ರದೇಶ: ಸಹಾರನ್‌ಪುರ ಕಲೆಕ್ಟರೇಟ್ ಮಸೀದಿ ಧ್ವಂಸ, ‘ಬುಲ್ಡೋಜರ್ ರಾಜಕಾರಣ’ಕ್ಕೆ ವಿಪಕ್ಷಗಳಿಂದ ಖಂಡನೆ!

ಸಹಾರನ್‌ಪುರ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಸಹಾರನ್‌ಪುರ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿದ್ದ ಮಸೀದಿಯನ್ನು ಶನಿವಾರ (ಸೆಪ್ಟೆಂಬರ್ 5) ಮುಂಜಾನೆ ಭಾರಿ ಪೊಲೀಸ್ ಭದ್ರತೆಯೊಂದಿಗೆ ಬುಲ್ಡೋಜರ್ ಬಳಸಿ ಧ್ವಂಸಗೊಳಿಸಲಾಗಿದೆ. ಈ ಕಾರ್ಯಾಚರಣೆಗೆ ವ್ಯಾಪಕ ಆಕ್ರೋಶ...

ಗೌರಿ ಹತ್ಯೆಯಾಗಿ 9 ವರ್ಷ : ಹೋರಾಟಗಾರರು-ಒಡನಾಡಿಗಳಿಂದ ಗೌರವ ನಮನ

ದಿಟ್ಟ ಪತ್ರಕರ್ತೆ, ಹೋರಾಟಗಾರ್ತಿ ಗೌರಿ ಲಂಕೇಶ್‌ ಅವರ 9ನೇ ವರ್ಷದ ಹುತಾತ್ಮ ದಿನದ ಅಂಗವಾಗಿ ಇಂದು (ಸೆ.5) ಬೆಳಿಗ್ಗೆ ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಅವರ ಸಮಾಧಿ ಬಳಿ ‘ಗೌರಿ ನಮನ ಕಾರ್ಯಕ್ರಮ‘ ನಡೆಯಿತು. ಗೌರಿ ಅವರ...

ರಾಯಚೂರಿನಲ್ಲಿ ದಲಿತರ ಸರಣಿ ಕೊಲೆ: ಸಂತ್ರಸ್ತರ ಮನೆಗೆ ಸಚಿವ ಕೆ.ಎಚ್. ಮುನಿಯಪ್ಪ ಭೇಟಿ

ರಾಯಚೂರು ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದ ದಲಿತರ ಮೇಲಿನ ಸರಣಿ ದೌರ್ಜನ್ಯ ಮತ್ತು ಕೊಲೆ ಪ್ರಕರಣಗಳು ಜನಾಕ್ರೋಶಕ್ಕೆ ಕಾರಣವಾಗಿವೆ. ಈ ಹಿನ್ನೆಲೆಯಲ್ಲಿ ಸಮಾಜ ಕಲ್ಯಾಣ ಸಚಿವ ಕೆ.ಎಚ್. ಮುನಿಯಪ್ಪ ಅವರು ಜಿಲ್ಲೆಯ ವಿವಿಧ ಗ್ರಾಮಗಳಲ್ಲಿ...

ಪೆಂಗ್ವಿನ್ ಇಂಡಿಯಾ ಹಿಂದೆ ಸರಿದ ನಂತರ ಸೋನಿಯಾ ಗಾಂಧಿ ಅವರ ಆತ್ಮಚರಿತ್ರೆ ‘ಬಿಲಾಂಗಿಂಗ್’ ಅನ್ನು ಪ್ರಕಟಿಸಲಿರುವ ‘ಹಾರ್ಪರ್‌ಕಾಲಿನ್ಸ್’ 

ನವದೆಹಲಿ: ಕಾಂಗ್ರೆಸ್‌ನ ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರ ಬಹುನಿರೀಕ್ಷಿತ ಆತ್ಮಚರಿತ್ರೆ ‘ಬಿಲಾಂಗಿಂಗ್: ಎ ಜರ್ನಿ ಆಫ್ ಲವ್’ ಇದೀಗ ಭಾರತದಲ್ಲಿ ಹಾರ್ಪರ್‌ಕಾಲಿನ್ಸ್ ಇಂಡಿಯಾ ಮೂಲಕ ಪ್ರಕಟವಾಗಲಿದೆ. ಪೆಂಗ್ವಿನ್ ರ‍್ಯಾಂಡಮ್ ಹೌಸ್ ಇಂಡಿಯಾ...