Homeಮುಖಪುಟಹೇಮಂತ್ ಸೊರೆನ್ ಬಂಧನ ಖಂಡಿಸಿ ಪ್ರತಿಭಟಿಸಿದ ಆದಿವಾಸಿಗಳ ವಿರುದ್ಧ ಎಫ್‌ಐಆರ್‌

ಹೇಮಂತ್ ಸೊರೆನ್ ಬಂಧನ ಖಂಡಿಸಿ ಪ್ರತಿಭಟಿಸಿದ ಆದಿವಾಸಿಗಳ ವಿರುದ್ಧ ಎಫ್‌ಐಆರ್‌

- Advertisement -
- Advertisement -

ಆದಿವಾಸಿಗಳ ಸರಹುಲ್ ಹಬ್ಬದ ಆಚರಣೆಯ ವೇಳೆ ಮಾಜಿ ಮುಖ್ಯಮಂತ್ರಿ ಹೇಮಂತ್ ಸೊರೆನ್ ಅವರ ಬಂಧನ ಖಂಡಿಸಿ ಪ್ರತಿಭಟಿಸದ ಆದಿವಾಸಿಗಳ ಮೇಲೆ ಮಾದರಿ ನೀತಿ ಸಂಹಿತೆ ಉಲ್ಲಂಘನೆಯ ಪ್ರಕರಣವನ್ನು ದಾಖಲಿಸಲಾಗಿದೆ.

ಶುಕ್ರವಾರ ಈ ಕುರಿತು ಎಫ್‌ಐಆರ್‌ ದಾಖಲಾಗಿದೆ. ರಾಜ್ಯದಲ್ಲಿನ ಅಧಿಕಾರಿಗಳು ಆಡಳಿತಾರೂಢ ಸರ್ಕಾರದ ವಿರುದ್ಧ ಚುನಾವಣಾ ಆಯೋಗದ ಸೂಚನೆಯಂತೆ ಕೆಲಸ ಮಾಡುತ್ತಿದ್ದಾರೆ ಎಂದು ಜೆಎಂಎಂ ಆರೋಪಿಸಿದೆ.

ವರದಿಗಳ ಪ್ರಕಾರ, ಸರ್ಹುಲ್ ಮೆರವಣಿಗೆಗೆ ಮ್ಯಾಜಿಸ್ಟ್ರೇಟ್ ಆಗಿ ನಿಯೋಜಿಸಲಾದ ರಾಂಚಿ ಜಿಲ್ಲಾ ಶಿಕ್ಷಣಾಧಿಕಾರಿ ವಿನಯ್ ಕುಮಾರ್ ಅವರು ಮಾದರಿ ನೀತಿ ಸಂಹಿತೆ ಉಲ್ಲಂಘನೆಗಾಗಿ 24 ಮಂದಿ ವಿರುದ್ಧ ಕೊತ್ವಾಲಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಿದ್ದಾರೆ.

ಪೋಸ್ಟರ್‌ನಲ್ಲಿ ಹೇಮಂತ್ ಸೊರೇನ್‌, ಜಾರಿ ನಿರ್ದೇಶನಾಲಯ ಮತ್ತು ಸಿಬಿಐ ಅಧಿಕಾರಿಗಳು ಹಿಂದಿ ಭಾಷೆಯಲ್ಲಿ ಸಂದೇಶವನ್ನು ತೋರಿಸುವ ಟ್ಯಾಬ್ಲೋ ಚಿತ್ರಗಳನ್ನು ಹೊಂದಿತ್ತು. ಜೈಲು ಬೀಗ ಮುರಿಯಲಾಗುವುದು, ಹೇಮಂತ್ ಸೊರೆನ್ ಅವರನ್ನು ಬಿಡುಗಡೆ ಮಾಡಲಾಗುವುದು ಎಂದು ಪೋಸ್ಟರ್‌ನಲ್ಲಿ ಬರೆಯಲಾಗಿತ್ತು.

ರಾಜಕೀಯ ಹಿತಾಸಕ್ತಿಗಳನ್ನು ಪೂರೈಸಲು ಧಾರ್ಮಿಕ ಸಂದರ್ಭವನ್ನು ಬಳಸಿಕೊಂಡ ಆರೋಪದಲ್ಲಿ ಕೇಂದ್ರ ಸರ್ನಾ ಸಮಿತಿಯ ಅಧ್ಯಕ್ಷ ಫೂಲ್‌ಚಂದ್ ಟಿರ್ಕಿ ಮತ್ತು ಇತರರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ಟ್ಯಾಬ್ಲೋಗೆ ಸಂಬಂಧಿಸಿದ ವಿಡಿಯೋವನ್ನು ಕೂಡ ರೆಕಾರ್ಡ್ ಮಾಡಲಾಗಿದೆ ಎಂದು ಎಫ್‌ಐಆರ್‌ ಸೂಚಿಸುತ್ತದೆ.

ವಿನಯ್ ಕುಮಾರ್ ದೂರಿನ ಮೇರೆಗೆ ಮೆರವಣಿಗೆ ನಡೆಸಿದ ಕೇಂದ್ರ ಸರನಾ ಸಮಿತಿಯ ವಿರುದ್ಧ ಅರಗೋರಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ರ್ಯಾಲಿಯ ಆಯೋಜಕರು ರಾಜಕೀಯ ವಿಷಯಗಳನ್ನು ಮುನ್ನೆಲೆಗೆ ತರಲು ಧಾರ್ಮಿಕ ಸಂದರ್ಭವನ್ನು ಬಳಸಿದ್ದರಿಂದ ನಾವು ದೂರು ನೀಡಲು ನಿರ್ಧರಿಸಿದ್ದೇವೆ, ಇದು ಮಾದರಿ ನೀತಿ ಸಂಹಿತೆಯ ಉಲ್ಲಂಘನೆಯಾಗಿದೆ ಎಂದು ವಿನಯ್ ಕುಮಾರ್ ಮಾಧ್ಯಮಗಳಿಗೆ ತಿಳಿಸಿದ್ದಾರೆ

ಈ ಕುರಿತು ಪ್ರತಿಕ್ರಿಯಿಸಿರುವ ಸರ್ನಾ ಸಮಿತಿಯ ನಾಯಕ ಅಜಯ್ ಟಿರ್ಕಿ, ಇದು ಕಲ್ಪಿತ ಭೂ ಹಗರಣದ ಪ್ರಕರಣದಲ್ಲಿ ಹೇಮಂತ್ ಸೊರೆನ್ ಅವರನ್ನು ಇಡಿ ಬಂಧಿಸಿರುವುದರ ವಿರುದ್ಧ ಬಹುಪಾಲು ಆದಿವಾಸಿಗಳ ಪ್ರತಿಭಟನೆಯಾಗಿತ್ತು. ರ್ಯಾಲಿಯಲ್ಲಿ ಪಕ್ಷದ ಧ್ವಜ ಅಥವಾ ಯಾವುದೇ ರಾಜಕೀಯ ಪಕ್ಷದ ಹೆಸರುಗಳನ್ನು ಬಳಸಿರಲಿಲ್ಲ. ಪ್ರಜಾಪ್ರಭುತ್ವದಲ್ಲಿ ನಮ್ಮ ಭಾವನೆಗಳನ್ನು ತೋರಿಸುವುದು ಕಾನೂನುಬಾಹಿರವೇ? ಮಾದರಿ ನೀತಿ ಸಂಹಿತೆಯ ಅಡಿಯಲ್ಲಿ ಪ್ರಕರಣ ಬರುವುದಿಲ್ಲ ಎಂದು ಸರ್ನಾ ಸಮಿತಿಯ ಬುಡಕಟ್ಟು ನಾಯಕ ಅಜಯ್ ಟಿರ್ಕಿ ಹೇಳಿದ್ದಾರೆ.

ಇದನ್ನು ಓದಿ: ಚುನಾವಣೆ ಪ್ರಚಾರದ ವೇಳೆ ಜಿಎಸ್‌ಟಿ ಬಗ್ಗೆ ಪ್ರಶ್ನಿಸಿದ ಮಹಿಳೆಗೆ ಥಳಿಸಿದ ಬಿಜೆಪಿ ಕಾರ್ಯಕರ್ತರು

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೋದಿ ಸರ್ಕಾರಕ್ಕೆ 12 ವರ್ಷ : 12 ರಿಂದ 4ಕ್ಕೆ ಇಳಿದ ಉಜ್ವಲ ಯೋಜನೆ ಸಿಲಿಂಡರ್

ಪ್ರಧಾನ ಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರದ ಎನ್‌ಡಿಎ ಸರ್ಕಾರ 12 ವರ್ಷಗಳ ಆಡಳಿತಾವಧಿಯನ್ನು ಪೂರ್ಣಗೊಳಿಸಿದೆ ಅಥವಾ ಮೋದಿ ಅವರು ಮೂರನೇ ಅವಧಿಗೆ ಪ್ರಧಾನಿಯಾಗಿ 2026ರ ಜೂನ್ 9ಕ್ಕೆ ಎರಡು ವರ್ಷಗಳು ಪೂರ್ಣಗೊಂಡಿವೆ....

ಬಿರ್ಸಾ ಮುಂಡಾ 150ನೇ ಜಯಂತಿ ಹೆಸರಿನಲ್ಲಿ ಆದಿವಾಸಿ ಹಕ್ಕುಗಳ ಮೇಲೆ ಸಂಘ ಪರಿವಾರದ ಕಣ್ಣು?

ಮೇ 24 ರಂದು ನವದೆಹಲಿಯ ಕೆಂಪುಕೋಟೆಯಲ್ಲಿ (Red Fort) ಭಾರತದಾದ್ಯಂತದ ಲಕ್ಷಾಂತರ ಪರಿಶಿಷ್ಟ ಪಂಗಡದ (ST) ಸಮುದಾಯಗಳ ಜನರು ಒಟ್ಟಿಗೆ ಸೇರಿದ್ದರು. ‘ಜಂಜಾತಿ ಸುರಕ್ಷಾ ಮಂಚ್’ (ಬುಡಕಟ್ಟು ರಕ್ಷಣಾ ವೇದಿಕೆ) ಆಯೋಜಿಸಿದ್ದ ಈ...

ಆಪರೇಷನ್ ಕಮಲ ಭೀತಿ: ರಾಜ್ಯಸಭಾ ಚುನಾವಣೆಗೂ ಮುನ್ನ ಮಧ್ಯಪ್ರದೇಶದ ಕಾಂಗ್ರೆಸ್ ಶಾಸಕರು ಕರ್ನಾಟಕಕ್ಕೆ ಶಿಫ್ಟ್‌?

ಜೂನ್ 18 ರ ರಾಜ್ಯಸಭಾ ಚುನಾವಣೆಗೆ ಮುನ್ನ ಬಿಜೆಪಿಯಿಂದ ಅಕ್ರಮವಾಗಿ ಹಣ ವರ್ಗಾವಣೆ ಪ್ರಯತ್ನಗಳು ನಡೆಯುತ್ತಿವೆ ಎಂದು ಮಧ್ಯಪ್ರದೇಶ ಕಾಂಗ್ರೆಸ್ ನಾಯಕರು ಆರೋಪಿಸಿದ್ದಾರೆ. ಅಡ್ಡ ಮತದಾನ ತಡೆಗಟ್ಟುವ ಜೊತೆಗೆ ತನ್ನ ಶಿಬಿರದ ಒಗ್ಗಟ್ಟು...

ವೀರಪ್ಪನ್ ಹೇಳಿದ ಕಥೆಗೆ 30 ವರ್ಷಗಳ ಬಳಿಕ ಕ್ಲೈಮ್ಯಾಕ್ಸ್ : ಸನ್ ಟಿವಿ ವಿರುದ್ಧ ಕಾನೂನು ಸಮರದಲ್ಲಿ ಗೆದ್ದ ನಟಿ ಸುಕನ್ಯಾ​

ತೊಂಬತ್ತರ ದಶಕದಲ್ಲಿ ತಮಿಳು ಮತ್ತು ಮಲಯಾಳಂ ಚಿತ್ರರಂಗದಲ್ಲಿ ಪ್ರಮುಖ ನಟರೊಂದಿಗೆ ನಟಿಸಿ, ಅಪಾರ ಜನಪ್ರಿಯತೆ ಗಳಿಸಿದ್ದ ನಟಿ ಸುಕನ್ಯಾ ರಮೇಶ್, ಪ್ರಸ್ತುತ ಕೆಲವು ಅಪರೂಪದ ಪಾತ್ರಗಳನ್ನು ಹೊರತುಪಡಿಸಿದರೆ ಚಿತ್ರರಂಗದಲ್ಲಿ ಅಷ್ಟಾಗಿ ಸಕ್ರಿಯರಾಗಿಲ್ಲ. ಈ ನಡುವೆ 2024ರಲ್ಲಿ...

“ರಾಜೀನಾಮೆ ನೀಡಿ, ಬಿಜೆಪಿ ಟಿಕೆಟ್‌ನಲ್ಲಿ ಸ್ಪರ್ಧಿಸಿ”: ಟಿಎಂಸಿ ಬಂಡುಕೋರರಿಗೆ ಮಹುವಾ ಮೊಯಿತ್ರಾ ನೇರ ಸವಾಲು

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (TMC) ಪಕ್ಷದೊಳಗೆ ತೀವ್ರ ಭಿನ್ನಾಭಿಪ್ರಾಯ ಸ್ಫೋಟಗೊಂಡಿದೆ. ಕೇಂದ್ರದ ಬಿಜೆಪಿ ನೇತೃತ್ವದ ಎನ್‌ಡಿಎ (NDA) ಮೈತ್ರಿಕೂಟಕ್ಕೆ ಬೆಂಬಲ ನೀಡಲು ಮುಂದಾಗಿರುವ ಸ್ವಪಕ್ಷದ ಬಂಡಾಯ ಸಂಸದರ ವಿರುದ್ಧ ಟಿಎಂಸಿ ಸಂಸದೆ...

ಪಶ್ಚಿಮ ಬಂಗಾಳದ ಸೋಲಿನ ಬಳಿಕ ‘ಇಂಡಿಯಾದ ಆಸರೆ’ ಬಯಸಿದ ಮಮತಾ

2026ರ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಸೋಲಿನ ನಂತರ ಮಮತಾ ಬ್ಯಾನರ್ಜಿ ಅವರು ಇದ್ದಕ್ಕಿದ್ದಂತೆ ‘ಇಂಡಿಯಾ’ (INDIA) ಒಕ್ಕೂಟ ಮತ್ತು ರಾಷ್ಟ್ರೀಯ ಮಟ್ಟದ ವಿರೋಧ ಪಕ್ಷಗಳ ಒಗ್ಗಟ್ಟಿಗೆ ಇಷ್ಟೊಂದು ಪ್ರಾಮುಖ್ಯತೆ ನೀಡುತ್ತಿರುವುದು ಏಕೆ? ದೀರ್ಘಕಾಲದವರೆಗೆ...

ಪಶ್ಚಿಮ ಬಂಗಾಳ| ಮತದಾರರ ಪಟ್ಟಿಯಿಂದ ಡಿಲೀಟ್‌ ಆದವರಿಗೆ ಪಡಿತರ ಪ್ರಯೋಜನಗಳಿಲ್ಲ

ಚುನಾವಣಾ ಆಯೋಗದ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಯಿಂದಾಗಿ ಪಶ್ಚಿಮ ಬಂಗಾಳದ ಚುನಾವಣಾ ಪ್ರಕ್ರಿಯೆಯಿಂದ ಹೊರಗುಳಿದವರಿಗೆ ಈಗ ಎರಡು ಹೊಡೆತ ಎದುರಾಗಿದೆ. ರಾಜ್ಯ ಸರ್ಕಾರವು ಈಗ ಅವರ ಪಡಿತರ ಚೀಟಿಗಳನ್ನು ಸಹ ನಿಷ್ಕ್ರಿಯಗೊಳಿಸಲು...

ಇಂಡಿಯಾ ಮೈತ್ರಿಕೂಟದ ಸಭೆ: ಎಸ್‌ಐಆರ್, ಬೆಲೆ ಏರಿಕೆ, ನಿರುದ್ಯೋಗದ ಕುರಿತು ಖರ್ಗೆ ಕಳವಳ; ಒಗ್ಗಟ್ಟಿನ ಹೋರಾಟಕ್ಕೆ ಕರೆ

ರಾಜಕೀಯ, ಆರ್ಥಿಕ, ಸಾಮಾಜಿಕ ಮತ್ತು ವಿದೇಶಾಂಗ ನೀತಿ ರಂಗಗಳಲ್ಲಿ ಮೋದಿ ಸರ್ಕಾರದ ವೈಫಲ್ಯಗಳನ್ನು ಎದುರಿಸಲು ತನ್ನ ಒಗ್ಗಟ್ಟನ್ನು ಬಲಪಡಿಸಿಕೊಳ್ಳುವಂತೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸೋಮವಾರ (ಜೂ.8) ಇಂಡಿಯಾ ಮೈತ್ರಿಕೂಟಕ್ಕೆ ಕರೆ...

ಟೆಹ್ರಾನ್ ಮೇಲಿನ ದಾಳಿಗೆ ಪ್ರತೀಕಾರ: ಇಸ್ರೇಲ್ ಮೇಲೆ ಕ್ಷಿಪಣಿ ಹಾರಿಸಿದ ಇರಾನ್

ಟೆಹ್ರಾನ್, ತಬ್ರಿಜ್ ಮತ್ತು ಇಸ್ಫಹಾನ್‌ ಮೇಲಿನ ದಾಲಿಗಳಿಗೆ ಪ್ರತೀಕಾರವಾಗಿ, ಇರಾನ್ ಸೇನೆಯು ಇಸ್ರೇಲ್‌ ಮೇಲೆ ಎರಡನೇ ತರಂಗದ ಕ್ಷಿಪಣಿಗಳನ್ನು ಹಾರಿಸಿದೆ. ದೇಶಾದ್ಯಂತ ಸೈರನ್‌ಗಳು ಮೊಳಗುತ್ತಿವೆ ಎಂದು ಇಸ್ರೇಲ್ ಮಿಲಿಟರಿ ಹೇಳಿದೆ ಎಂದು ಅಂತರಾಷ್ಟ್ರೀಯ...

ಭಾರತದಲ್ಲಿ ಬೆಂಕಿ ದುರಂತ ‘ದಿನವೊಂದಕ್ಕೆ ಬಲಿಯಾಗುತ್ತಿವೆ 16 ಜೀವಗಳು’ NCRB ವರದಿ

ಇತ್ತೀಚೆಗೆ ದೆಹಲಿಯ ಮಾಳವೀಯ ನಗರದ ಹೋಟೆಲ್‌ ಒಂದರಲ್ಲಿ ನಡೆದ ಭೀಕರ ಬೆಂಕಿ ದುರಂತ (ಇದರಲ್ಲಿ 22 ಜನರು ಸಜೀವ ದಹನವಾಗಿದ್ದರು) ಇಡೀ ದೇಶವನ್ನೇ ನಡುಗಿಸಿದೆ. ಈ ದುರಂತದ ಬೆನ್ನಲ್ಲೇ ಕರ್ನಾಟಕದಲ್ಲೂ ವಾಣಿಜ್ಯ ಮತ್ತು...